
ಬಂಟ್ವಾಳ: ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಇದರ ವೇಣೂರು ಶಾಖೆಯಲ್ಲಿ ಈ ಸ್ಟಾಂಪಿಂಗ್ ವ್ಯವಸ್ಥೆಯ ಉದ್ಘಾಟನಾ ಸಮಾರಂಭ ಬುಧವಾರ ನಡೆಯಿತು.
ವೇಣೂರು ಬಿಲ್ಲವ ಸಂಘದ ಅಧ್ಯಕ್ಷ ಹರೀಶ್ ಕುಮಾರ್ ಪೊಕ್ಕಿ ಈ ಸ್ಟಾಂಪಿಂಗ್ ವ್ಯವಸ್ಥೆ ಉದ್ಘಾಟಿಸಿ ಶುಭ ಹಾರೈಸಿದರು, ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ವೇಣೂರು ಇದರ ಪ್ರಬಂಧಕ ರಂಜಿತ್ ದೀಪ ಬೆಳಗಿಸಿದರು. ವೇಣೂರು ಜುಮ್ಮಾ ಮಸೀದಿ ಅಧ್ಯಕ್ಷ ಜಕ್ರೀಯ ಶುಭ ಹಾರೈಸಿದರು. ಸಂಘದ ಅಧ್ಯಕ್ಷ ಕೆ.ಸಂಜೀವ ಪೂಜಾರಿ ಮಾತನಾಡಿ ಇದರ ಸೇವೆಯನ್ನು ಎಲ್ಲ ಗ್ರಾಹಕರು ಪಡೆದುಕೊಂಡು ನಮ್ಮ ಸಂಘದಲ್ಲಿ ಉತ್ತಮ ರೀತಿಯಲ್ಲಿ ವ್ಯವಹರಿಸಿ ಸಂಘದ ಶ್ರೇಯೋಭಿವೃದ್ಧಿಗಾಗಿ ಸಹಕರಿಸಬೇಕಾಗಿ ವಿನಂತಿಸಿದರು. ವೇಣೂರು ಮೂರ್ತೇದರರ ಸಂಘದ ಅಧ್ಯಕ್ಷ ರಮೇಶ್ ಪೂಜಾರಿ, ವೆಂಕಟರಮಣ ಕೋ- ಆಪರೇಟಿವ್ ವೇಣೂರು ಶಾಖಾ ವ್ಯವಸ್ಥಾಪಕ ಗಾಯನ್ ಉಪಸ್ಥಿತರಿದ್ದರು. ಸಂಘದ ನಿರ್ದೇಶಕರಾದ ಸುಂದರ ಪೂಜಾರಿ, ರಮೇಶ್ ಅನ್ನಪ್ಪಾಡಿ, ಜಯಶಂಕರ ಕಾನ್ಸ್ಲೆ, ಆಶಿಶ್ ಪೂಜಾರಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಮತಾ ಜಿ, ಎಜಿಎಂ ಶಿಲ್ಪಾ ಉಪಸ್ಥಿತರಿದ್ದರು. ನಿರ್ದೇಶಕ ಅರುಣ್ ಕುಮಾರ್ ಸ್ವಾಗತಿಸಿದರು, ಶಾಖಾ ವ್ಯವಸ್ಥಾಪಕಿ ವಿಜಯ. ಕೆ ವಂದಿಸಿದರು.
