
ಬಂಟ್ವಾಳ: ಶ್ರೀ ಕುಪ್ಪೆಟ್ಟು ಪಂಜುರ್ಲಿಯ ಮೂಲಸ್ಥಾನ ಕುಪ್ಪೆಟ್ಟು ಬರ್ಕೆಯಲ್ಲಿ ಪುನರ್ ಪ್ರತಿಷ್ಠಾ ಮಹೋತ್ಸವ ಮತ್ತು ನೇಮೋತ್ಸವ ಫೆ. 18ರಿಂದ ಫೆ.22 ಶನಿವಾರದವರೆಗೆ ವಿಜ್ರಂಭಣೆಯಿಂದ ನಡೆಯಲಿದೆ ಎಂದು ಪ್ರತಿಷ್ಠಾ ಮಹೋತ್ಸವ ಸಮಿತಿ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ತಿಳಿಸಿದರು.

ಅವರು ಬಿ.ಸಿ.ರೋಡಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ ಶ್ರೀ ಕೊಡಮಣಿತ್ತಾಯ, ಲೆಕ್ಕೆಸಿರಿ, ಮೈಸಂದಾಯ, ಹಿರಿಯಜ್ಜ, ಕುಪ್ಪೆಟ್ಟು ಕಲ್ಲುಟಿ ಪಂಜುರ್ಲಿ, ಮಂತ್ರ ಜಾವದೆ, ಬಂಟ ಪಂಜುರ್ಲಿ ಮತ್ತು ಗಡುಪಾಡಿ ಜಾಗದ ಕಲ್ಲುರ್ಟಿ ಪಂಜುರ್ಲಿ ದೈವಗಳ ಪುನರ್ ಪ್ರತಿಷ್ಠೆ ಹಾಗೂ ನೇಮೋತ್ಸವ ನಡೆಯಲಿದೆ ಎಂದು ತಿಳಿಸಿದರು. ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ದಿನೇಶ್ ಸುವರ್ಣ ರಾಯಿ ಮಾಹಿತಿ ನೀಡಿ ನೀಡಿ ಫೆ. ೧6ರಂದು ಸಂಗಬೆಟ್ಟು ಶ್ರೀ ವೀರಭದ್ರ ಮಹಮ್ಮಾಯಿ ದೇವಸ್ಥಾನದಿಂದ ಹೊರೆಕಾಣಿಕೆ ಮೆರವಣಿಗೆಗೆ ಶ್ರೀ ಕ್ಷೇತ್ರ ಪೂಂಜದ ಕೃಷ್ಣಪ್ರಸಾದ್ ಆಸ್ರಣ್ಣ ಚಾಲನೆ ನೀಡಲಿದ್ದಾರೆ, ಫೆ. 18ರಂದು ಬೆಳಗ್ಗೆ ಸಾನಿಧ್ಯದಲ್ಲಿ ಆಶ್ಲೇಷಾ ಪೂಜೆಯೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಳ್ಳುತ್ತವೆ. ಫೆ.19 ಮತ್ತು ಫೆ. 20ರಂದು ಧಾರ್ಮಿಕ ಕಾರ್ಯಕ್ರಮಗಳು ಇರಲಿದ್ದು, ಫೆ.21ರಂದು ಸಂಜೆ ಶ್ರೀ ಹಿರಿಯಜ್ಜ ದೈವದ ಕೋಲೋತ್ಸವ, ಶ್ರೀ ಕಲ್ಲುರ್ಟಿ ಮಂತ್ರಜಾವದೆ ದೈವಗಳ ಕೋಲೋತ್ಸವ, ಮೂಲಸ್ಥಾನದ ಧರ್ಮಚಾವಡಿಯಲ್ಲಿ ರಾತ್ರಿ 11ರಿಂದ ಶ್ರೀ ಕುಪ್ಪೆಟ್ಟು ಪಂಜುರ್ಲಿ ದೈವದ ನೇಮೋತ್ಸವ ನಡೆಯಲಿದೆ. ಫೆ.19, 20ರಂದು ಧಾರ್ಮಿಕ ಸಭೆ ನಡೆಯಲಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪ್ರಭಾಕರ ಪ್ರಭು ಕರ್ಪೆ, ಟ್ರಸ್ಟ್ ಅಧ್ಯಕ್ಷ ಹರೀಶ್ ಸನಿಲ್ ಕುಪ್ಪೆಟ್ಟು, ಪ್ರತಿಷ್ಠಾ ಮಹೋತ್ಸವ ಸಮಿತಿ ಕಾರ್ಯದರ್ಶಿ ರತ್ನಾಕರ ಪೂಜಾರಿ ಮದಂಗೋಡಿ ಉಪಸ್ಥಿತರಿದ್ದರು.
