
ಉಡುಪಿ : ಉಡುಪಿಯಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಕರಾಟೆ ಓಪನ್ ಚಾಂಪಿಯನ್ ಕಟ ಮತ್ತು ಕಮಿಟೆ ವಿಭಾಗದಲ್ಲಿ ತನಿಷ್ಕ ಪವನ್ ಕುಮಾರ್2 ಚಿನ್ನದ ಪದಕಗಳನ್ನು ಪಡೆದು ವಿಜಯ ಶಾಲಿಯಾಗಿದ್ದಾರೆ . ಉಡುಪಿ ಅಜ್ಜರಕಾಡು ಸೈಂಟ್ ಸಿಸಿಲಿಯ ಪ್ರೌಢಶಾಲೆಯ 7ನೇ ತರಗತಿಯ ವಿದ್ಯಾರ್ಥಿನಿ.


ಈಕೆ ಭಾರತೀಯ ರೈಲ್ವೆ ಇಲಾಖೆಯ ಪೊಲೀಸ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬಂಟ್ವಾಳ ತಾಲೂಕಿನ ಕೂರಿಯಾಳದ ಪವನ್ ಕುಮಾರ್ ಮತ್ತು ಅಕ್ಷತಾ ಪವನ್ ಕುಮಾರ್ ದಂಪತಿಯ ಸುಪುತ್ರಿ ಹಾಗೂ ಜಗದೀಶ್ ಭಂಡಾರಿ ಕುರಿಯಾಳ ಮತ್ತು ಮೋಹಿನಿ ಜಗದೀಶ್ ಭಂಡಾರಿ ಅವರ ಮೊಮ್ಮಗಳು. ಇನ್ಸ್ಟಿಟ್ಯೂಟ್ ಆಫ್ ಬುಡಕೊನ್ ಕರಾಟೆ ಮಾರ್ಷಯಲ್ ಆರ್ಟ್ ನ ಕೋಚ್ ಸಂತೋಷ್ ಕುಮಾರ್ ಶೆಟ್ಟಿ ಅವರಿಂದ ತರಬೇತಿಯನ್ನು ಪಡೆಯುತ್ತಿದ್ದಾರೆ.

Advertisement







