
ಬಂಟ್ವಾಳ: ಸಮಾನ ಮನಸ್ಕರು ಸೇರಿ ಸಮಾಜದ ಅಶಕ್ತರಿಗೆ ನೆರವಾಗುವ ಉದ್ದೇಶದಿಂದ ಕರುನಾಡು ಚಾರಿಟೇಬಲ್ ಟ್ರಸ್ಟ್ (ರಿ.) ಕರ್ನಾಟಕ ಎಂಬ ನೂತನ ಸಂಸ್ಥೆಯನ್ನು ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಉದ್ಘಾಟಿಸಲಾಗಿದ್ದು ನೂತನ ಟ್ರಸ್ಟ್ ನ ಸ್ಥಾಪಕ ಅಧ್ಯಕ್ಷರಾಗಿ ವಿಶ್ವನಾಥ್ ಪಿ ಅರಳ ಇವರನ್ನು ಆಯ್ಕೆ ಮಾಡಲಾಗಿದೆ. ಉಪಾಧ್ಯಕ್ಷರಾಗಿ ಭವ್ಯಶ್ರೀ ಅಂಚನ್ ಕುಪ್ಪೆಪದವು, ಕಾರ್ಯದರ್ಶಿಯಾಗಿ ಕುಶನಾಂದ ಹಾಗೂ ಕೋಶಾಧಿಕಾರಿಯಾಗಿ ವಸಂತ ಮುದಿಮರ, ಟ್ರಸ್ಟ್ ನ ಗೌರವ ಅಧ್ಯಕ್ಷರಾಗಿ ಚಂದು ಕೋಟ್ಯಾನ್ ಕುಪ್ಪೆಪದವು ಇವರನ್ನು ಆಯ್ಕೆ ಮಾಡಲಾಗಿದೆ. ಈ ಸಂದರ್ಭ ಟ್ರಸ್ಟ್ ನ ಎಲ್ಲಾ ಸೇವಾ ಮಾಣಿಕ್ಯರು ಈ ಹಾಜರಿದ್ದರು.



Advertisement







