
ಬಂಟ್ವಾಳ: ಸಜಿಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ (ನಿ) ಬೊಳ್ಳಾಯಿ ಇದರ 2025-26 ನೇ ಸಾಲಿನ ಮಹಾಸಭೆಯು ಸೆ.20ರಂದು ಆದಿತ್ಯವಾರ ಬೆಳಿಗ್ಗೆ ಘಂಟೆ 10.30 ಕ್ಕೆ ಸಜೀಪಮೂಡ ಸುಭಾಷ್ನಗರದಲ್ಲಿರುವ ಶ್ರೀ ಗುರು ಕಲ್ಯಾಣ ಮಂಟಪದಲ್ಲಿ ನಡೆಯಲಿದ್ದು ಸಂಘದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. 31.3.2026ರ ಒಳಗೆ ಸಂಘದಲ್ಲಿ ಸದಸ್ಯತ್ವ ಹೊಂದಿರುವ ಸದಸ್ಯರ ಮಕ್ಕಳು ಎಸ್ಎಸ್ಎಲ್ಸಿ ಯಲ್ಲಿ ಶೇ.90ಮತ್ತು ಪಿಯುಸಿಯಲ್ಲಿ ಶೇ.85 ಅಂಕ ಹಾಗೂ ಅದಕ್ಕಿಂತ ಮೇಲ್ಪಟ್ಟು ವಿದ್ಯಾಭ್ಯಾಸಕ್ಕೆ ಶೇ.75 ಅಂಕ ಗಳಿಸಿದ ವಿಧ್ಯಾರ್ಥಿಗಳು ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿವೇತನದ ಅರ್ಜಿಗಳನ್ನು ಕೇಂದ್ರ ಕಚೇರಿ ಇಲ್ಲವೇ ಶಾಖೆಗಳಲ್ಲಿ ಪಡೆದು ಹಾಗೂ ದಿನಾಂಕ 15.9.2026 ರೊಳಗೆ ತಲುಪಿಸ ಬೇಕು. ಸೆ. 20ರಂದು ನಡೆಯುವ ಮಹಾಸಭೆಯಲ್ಲಿ ವಿದ್ಯಾರ್ಥಿ ವೇತನವನ್ನು ವಿತರಿಸಲಾಗುವುದು ಎಂದು ಸಂಘದ ಅಧ್ಯಕ್ಷ ಕೆ. ಸಂಜೀವ ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement







