ಬಂಟ್ವಾಳ: ಇಲ್ಲಿನ ವಿಧಾನ ಸಭಾ ಕ್ಷೇತ್ರದ ಬಂಟ್ವಾಳ ಬ್ಲಾಕ್ ಕಾಂಗ್ರೇಸ್ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಗ್ರಾಮ ಪಂಚಾಯತ್ ಚುನಾವಣೆಯ ಪೂರ್ವ ಸಿದ್ದತೆ ಸಭೆ ಮಾಜಿ ಸಚಿವ ಬಿ. ರಮಾನಾಥ ರೈಯವರ ಅಧ್ಯಕ್ಷತೆಯಲ್ಲಿ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.
ಅವರು ಮಾತನಾಡಿ ಪಂಚಾಯತ್ ಚುನಾವಣೆಯನ್ನು ಅತೀ ಗಂಭೀರವಾಗಿ ಪರಿಗಣಿಸುವಂತೆ ಹಾಗೂ ಸೂಕ್ಷ್ಮತೆಯಿಂದ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಂತೆ ಕಾರ್ಯಕರ್ತರಿಗೆ ತಿಳಿಸಿದರು. ಜಿಲ್ಲಾ ಉಸ್ತುವಾರಿಗಳಾದ ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಮಹಾನಗರ ಪಾಲಿಕೆಯ ವಿರೋಧಪಕ್ಷದ ನಾಯಕ ಅಬ್ದುಲ್ ರವೂಫ್,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಜಿಲ್ಲಾಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಎಂ ಎಸ್ ಮಹಮ್ಮದ್, ಮಂಜುಳಾ ಮಾವೆ, ತಾಲೂಕ್ ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಆಲಿ,ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ವಿ ಶೆಟ್ಟಿ, ಮಹಿಳಾ ಅಧ್ಯಕ್ಷೆ ಜಯಂತಿ ವಿ. ಪೂಜಾರಿ, ಬಂಟ್ವಾಳ ಪುರಸಭಾ ಸದಸ್ಯರು, ಗ್ರಾಮ ಪಂಚಾಯತ್ ಚುನಾವಣೆಯ ಉಸ್ತುವಾರಿಗಳು, ವಲಯ ಕಾಂಗ್ರೆಸ್ ಅಧ್ಯಕ್ಷರುಗಳು, ವಿವಿಧ ಮುಂಚೂಣಿ ಘಟಕದ ಅದ್ಯಕ್ಷರು ಉಪಸ್ಥಿತರಿದ್ದರು.