ಬಂಟ್ವಾಳ: ಫರಂಗಿಪೇಟೆಯ ಖಾಸಗಿ ಕಟ್ಟಡದಲ್ಲಿ
ಕಾರ್ಯನಿರ್ವಹಿಸುತ್ತಿರುವ ತೃಶಾ ಸ್ಟುಡಿಯೋ ಮಾಲಕ,
ಬಿಜಪಿ ಪುದು ಶಕ್ತಿ ಕೇಂದ್ರದ ಸಾಮಾಜಿಕ ಜಾಲ ತಾಣ ಸಂಚಾಲಕ ದಿನೇಶ್ ಶೆಟ್ಟಿ
ಕೊಟ್ಟಿಂಜ ಅವರಿಗೆ ದುಷ್ಕರ್ಮಿಗಳು ತಲವಾರು ದಾಳಿ ನಡೆಸಿದ್ದಾರೆ.
ರಾತ್ರಿ ಸುಮಾರು 7.50 ರ ಸುಮಾರಿಗೆ ಕಾಂಾಾ
ಕಾಂಪ್ಲೆಕ್ಸ್ ನ ಮೊದಲ ಮಹಡಿಯಲ್ಲಿರುವ ಅವರ ಸ್ಟುಡಿಯೋ ಗೆ ನುಗ್ಗಿ ಮಾರಾಕಾಯುಧಗಳಿಂದ ದಾಳಿ ನಡಸಿದ್ದಾರೆ. ಅವರ ತಲೆ ಮತ್ತಿತರ ಭಾಗಗಳಿಗೆ ಗಂಭೀರ ಗಾಯವಾಗಿದ್ದು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ.
ದಿನೇಶ್ ಕೊಟ್ಟಿಂಜ ಅವರು ಪೊಟೋ ಗ್ರಾಫರ್ ಆಗಿರುವುದರ ಜೊತೆಗೆ ಬಿಜೆಪಿ ಪಕ್ಷದಲ್ಲಿ ಸಕ್ರಿಯರಾಗಿದ್ದುಕೊಂಡು ವಿವಿಧ ಜವಬ್ದಾರಿಗಳನ್ನು ನಿಭಾಯಿಸಿದ್ದರು. ದಿನಪತ್ರಿಕೆಯೊಂದಕ್ಕೆ ಫರಂಗಿಪೇಟಯ ವರದಿಗಾರರೂ ಆಗಿದ್ದರು. ಸಾಮಾಜಿಕ, ಧಾರ್ಮಿಕ ಚಟುವಟಿಕೆಯಲ್ಲೂ ಸಕ್ರಿಯರಾಗಿದ್ದರು. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.