ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಸಮಿತಿ ಮತ್ತು ಪಾಣೆಮಂಗಳೂರು ಬ್ಲಾಕ್ ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಸಮಿತಿ ಅಶ್ರಯದಲ್ಲಿ ಅಸಂಘಟಿತ ಕಾರ್ಮಿಕರ ಉಚಿತ ನೋಂದಣಿ ಕಾರ್ಯಕ್ರಮವು ಜುಲೈ 5 ಸೋಮವಾರ ಬೆಳಿಗ್ಗೆ 10 ಗಂಟೆಗೆ ಅಮ್ಮುಂಜೆ ಯಲ್ಲಿ ನಡೆಯಲಿದೆ. ಮಾಜಿ ಸಚಿವ ಬಿ ರಮಾನಾಥ ರೈ ಯವರು ಕಾರ್ಯಕ್ರಮ ವನ್ನು ಉದ್ಘಾಟಿಸಲಿದ್ದು, ದ. ಕ.ಜಿಲ್ಲಾ ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಬ್ಬಾಸ್ ಅಲಿ,ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಚಂದ್ರ ಪ್ರಕಾಶ್ ಶೆಟ್ಟಿ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ, ವಲಯ ಕಾಂಗ್ರೆಸ್ ಅಧ್ಯಕ್ಷರು ಗಳು ಹಾಗೂ ಮುಂಚೂಣಿ ಘಟಕದ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ,
ಅಗಸರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು
ಕ್ಷೌರಿಕರು, ಭಟ್ಟಿ ಕಾರ್ಮಿಕರು, ಗೃಹ ನಿರ್ಮಾಣ ಕಾರ್ಮಿಕರು,ಕೂಲಿ ಕಾರ್ಮಿಕರು, ಕೃಷಿ ಕಾರ್ಮಿಕರು, ಟೈಲರ್ ಗಳು, ಚಿಂದಿ ಆಯುವವರು,ಹಮಾಲರು, ಮೆಕ್ಯಾನಿಕ್ ಗಳು ಮತ್ತು ಚಾಲಕರು, ನಿರ್ವಾಹಕರು ಕ್ಲೀನರ್ ಮುಂತಾದಕಾರ್ಮಿಕ ಬಂಧುಗಳು ರೇಷನ್ ಕಾರ್ಡ್, ವೋಟರ್ ಐ ಡಿ, ಆಧಾರ್ ಕಾರ್ಡ್
,ಬ್ಯಾಂಕ್ ಪಾಸ್ ಬುಕ್, ಪಾಸ್ಪೋರ್ಟ್ ಅಳತೆಯ 3 ಭಾವಚಿತ್ರ, ಆಧಾರ್ ಲಿಂಕ್ ಆಗಿರುವ ಮೊಬೈಲ್ ನಂಬರ್ ಮೊದಲಾದ ದಾಖಲೆ ಗಳೊಂದಿಗೆ ಬಂದು ಸದುಪಯೋಗ ಪಡೆಸಿಕೊಳ್ಳುವಂತೆ ಪಾಣೆಮಂಗಳೂರು ಬ್ಲಾಕ್ ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರೋಶನ್ ಕೆ. ರೈಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ