ಬಂಟ್ವಾಳ: ತಾಲೂಕಿನ ಗ್ರಾಮೀಣ ಪ್ರದೇಶವಾದ ಕಡೇಶ್ವಾಲ್ಯ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಯೊಬ್ಬನ ವಿಜ್ಞಾನ ಮಾದರಿಯು ಇದೀಗ ದಕ್ಷಿಣ ಭಾರತ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನಕ್ಕೆ ಆಯ್ಕೆಯಾಗಿದ್ದು, ಸರಕಾರಿ ಶಾಲೆಯ ವಿದ್ಯಾರ್ಥಿಯ ಈ ಸಾಧನೆ ಪ್ರಶಂಸೆಗೆ ಪಾತ್ರವಾಗಿದೆ.
![](https://aksharanews.in/wp-content/uploads/2023/05/ak-1.jpg)
![](http://bh-in-9.hostgator.tempwebhost.net/~blueinfo/demo/aksharanews/wp-content/uploads/2023/01/5BAC1473-033A-4BFD-AD17-873EA89A9887-1024x768-1.jpeg)
ಕಡೇಶ್ವಾಲ್ಯ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಯಶವಂತ ಸಾಧಕ ವಿದ್ಯಾರ್ಥಿಯಾಗಿದ್ದು, ಆತನ ಬಹು ಉಪಯೋಗಿ ಕೃಷಿ ಯಂತ್ರದ ಅನ್ವೇಷಣೆಯು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಧಾರವಾಡದ ರಾಯಪುರದಲ್ಲಿ ನಡೆಸಿದ ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಬಹುಮಾನ ಪಡೆದು ಕೇರಳದ ತ್ರಿಶೂರ್ನಲ್ಲಿ ಜ. ೨೭ರಿಂದ ೩೧ರವರೆಗೆ ನಡೆಯುವ ದಕ್ಷಿಣ ಭಾರತ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನಕ್ಕೆ ಆಯ್ಕೆಯಾಗಿದೆ.
ರಾಜ್ಯದಿಂದ ದಕ್ಷಿಣ ಭಾರತ ಮಟ್ಟಕ್ಕೆ ಒಟ್ಟು ೨೦ ಮಾದರಿಗಳು ಆಯ್ಕೆಯಾಗಿದ್ದು, ವೈಯಕ್ತಿಕ ವಿಭಾಗದಲ್ಲಿ ದ.ಕ.ಜಿಲ್ಲೆಯಿಂದ ಈ ವಿದ್ಯಾರ್ಥಿಯ ಮಾದರಿ ಮಾತ್ರ ಆಯ್ಕೆಯಾಗಿದೆ. ಕಡೇಶ್ವಾಲ್ಯ ಕೆಮ್ಮಾನು ನಿವಾಸಿ ಲೋಕೇಶ- ಪವಿತ್ರ ದಂಪತಿಯ ಪುತ್ರನಾಗಿರುವ ಯಶವಂತನಿಗೆ ಶಾಲೆಯ ಗಣಿತ ಶಿಕ್ಷಕಿ ಗೀತಾಕುಮಾರಿ ಮಾರ್ಗದರ್ಶನ ನೀಡಿದ್ದರು. ಈ ವಿದ್ಯಾರ್ಥಿಯ ಮಾದರಿಯು ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಪ್ರಥಮ, ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿತ್ತು.
![](http://bh-in-9.hostgator.tempwebhost.net/~blueinfo/demo/aksharanews/wp-content/uploads/2023/01/5445E282-1CFB-4EC8-B623-B8E1921D47B1-1024x953-1.jpeg)
![](https://aksharanews.in/wp-content/uploads/2024/01/aksharanews-ad.jpg)