![](https://aksharanews.in/wp-content/uploads/2023/05/akshara-longad.jpg)
![](https://aksharanews.in/wp-content/uploads/2023/03/D40B804E-1813-4F26-8B61-3F5973806B3B.jpeg)
ಬಂಟ್ವಾಳ: ತಾಲೂಕಿನ ಕಾವಳ ಮೂಡೂರು ಗ್ರಾಮದ ಕಾರಿಂಜೇಶ್ವರ ಸನ್ನಿಧಿಯ ಸುತ್ತಮುತ್ತಲಿನ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆಗೆ ನಿಷೇಧ ಮಾಡುವಂತೆ ಸರಕಾರದ ಗಣಿ ಇಲಾಖೆಯ ಅಧೀನ ಕಾರ್ಯದರ್ಶಿ ಸುಮಾ ಎಸ್. ಆದೇಶ ಹೊರಡಿಸಿದ್ದಾರೆ.
ಕಾರಿಂಜ ದೇವಾಲಯದ ಸುತ್ತಮುತ್ತ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದ್ದುದರಿಂದ ದೇವಸ್ಥಾನಕ್ಕೆ ಹಾನಿಯಾಗುತ್ತಿದೆ ಎಂಬ ದೂರು ಕೇಳಿ ಬಂದಿದ್ದು ಇದರ ವಿರುದ್ಧ ಪ್ರತಿಭಟನೆ, ಹೋರಾಟಗಳು ನಡೆದಿತ್ತು. ಆದ್ದರಿಂದ ಕಾವಳಮೂಡೂರು ಗ್ರಾಮ ವ್ಯಾಪ್ತಿಯ ಶ್ರೀ ಕಾರಿಂಜೇಶ್ವರ ದೇವಸ್ಥಾನದ ೦೨ ಕಿಲೋ ಮೀಟರ್ ಸುತ್ತಳತೆಯ ಪ್ರದೇಶವನ್ನು ಧಾರ್ಮಿಕ ಚಟುವಟಿಕೆಗಳ ಉದ್ದೇಶಕ್ಕಾಗಿ ಕಾಯ್ದಿರಿಸಿ, ಸದರಿ ಸ್ಥಳದ ೦೨ ಕಿಲೋ ಮೀಟರ್ ಸುತ್ತಳತೆ ವ್ಯಾಪ್ತಿಯಲ್ಲಿ, ಎಲ್ಲಾ ರೀತಿಯ ಗಣಿಗಾರಿಕೆ ಮತ್ತು ಕಲ್ಲುಪುಡಿ (ಕ್ರಷರ್) ಚಟುವಟಿಕೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನಿಷೇಧಿಸಿರುವುದಾಗಿ ಆದೇಶ ಪತ್ರದಲ್ಲಿ ತಿಳಿಸಲಾಗಿದೆ.
![](https://aksharanews.in/wp-content/uploads/2023/02/F4D88BC3-69F8-4A07-A227-5EEB8E2DD1DE-1024x1024.jpeg)
![](https://aksharanews.in/wp-content/uploads/2024/01/aksharanews-ad.jpg)