![](https://aksharanews.in/wp-content/uploads/2023/05/EF9BA95D-2C56-4D64-BA14-71181B40042E-1024x379.jpeg)
ಬಂಟ್ವಾಳ: ರೈತ ಪರ ನಿರ್ಧಾರ ತೆಗೆದುಕೊಳ್ಳುವ ಸಂವೇದನಾ ಶೀಲ ಸರಕಾರ ಬೇಕು ಆದ್ದರಿಂದ ಜಾತ್ಯಾತೀತ ಪಕ್ಷಗಳಿಗೆ ನಮ್ಮ ಬೆಂಬಲ ಎಂದು ರೈತ ಸಂಘದ ಬಂಟ್ವಾಳ ತಾಲೂಕು ಸಮಿತಿ ಅಧ್ಯಕ್ಷ ಪ್ರೇಮನಾಥ ಶೆಟ್ಟಿ ಹೇಳಿದರು.
![](https://aksharanews.in/wp-content/uploads/2023/04/WhatsApp-Image-2023-02-08-at-9.24.55-AM-1024x362-1.jpeg)
![](https://aksharanews.in/wp-content/uploads/2023/04/E1DF6126-69B8-425F-AC1E-A6A5F5124EC0-655x1024.jpeg)
![](https://aksharanews.in/wp-content/uploads/2023/02/F4D88BC3-69F8-4A07-A227-5EEB8E2DD1DE-1024x1024.jpeg)
ಅವರು ಬಿ.ಸಿ.ರೋಡಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಬಡವರು, ರೈತರು, ಕಾರ್ಮಿಕರ ಬೇಡಿಕೆಗಳಿಗೆ ಈ ಹಿಂದಿನ ಸರಕಾರ ಕಿವಿಗೊಡಲಿಲ್ಲ. ರೈತರ ಆದಾಯ ದುಪ್ಪಟ್ಟ ಮಾಡುವುದಾಗಿ ಹೇಳಿ ವಂಚಿಸಿದ್ದಾರೆ ಎಂದು ಆರೋಪಿಸಿದರು. ಬಿಜೆಪಿ ಸರಕಾರ ಕಿಸನ್ ಸಮ್ಮಾನ್ ಅನ್ನು ರೈತರಿಗೆ ನೀಡಿದರೆ ಇತ್ತ ರಸಗೊಬ್ಬರಗಳ ಬೆಲೆ ಏರಿಕೆ ಮಾಡಿದೆ. ಈ ಹಿಂದೆ ಅಧಿಕಾರದಲ್ಲಿದ್ದ ಕಾಂಗ್ರೆಸ್ ಹಾಗು ಜೆಡಿಎಸ್ ಸರಕಾರ ರೈತರ ಸಾಲ ಮನ್ನ ಮಾಡಿದೆ ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು. ಸುದ್ದಿಗೋಷ್ಟಿಯಲ್ಲಿ ಸಿಪಿಐಎಂಎಲ್ ಮುಖಂಡ ರಾಮಣ್ಣ ವಿಟ್ಲ, ಬಿ.ಕೆ.ಸಾಹುಲ್ ಹಮೀದ್, ತುಳಸಿದಾಸ್, ಉಪಸ್ಥಿತರಿದ್ದರು.
![](https://aksharanews.in/wp-content/uploads/2024/01/aksharanews-ad.jpg)