ಬಂಟ್ವಾಳ: ಈ ವಿಧಾನಸಭಾ ಕ್ಷೇತ್ರದಲ್ಲಿ ಶಾಂತಿ ಸೌಹಾರ್ದತೆ ನೆಲಸಬೇಕಾದರೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲ್ಲಬೇಕು ಎಂದು ಮಾಜಿ ಶಾಸಕ ಕೆ.ಎಂ.ಇಬ್ರಾಹಿಂ ಶುಂಠಿಕೊಪ್ಪ ತಿಳಿಸಿದರು. ಅವರು ಬಿ.ಸಿ.ರೋಡಿನಲ್ಲಿ ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.
![](https://aksharanews.in/wp-content/uploads/2023/05/akshara-longad.jpg)
![](https://aksharanews.in/wp-content/uploads/2023/05/5466A174-3E1B-4025-B8D8-1668C320B818-1024x484.jpeg)
ರಮನಾಥ ರೈ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ೯ನೇ ಬಾರಿಗೆ ಸ್ಪರ್ಧಿಸುತ್ತಿದ್ದಾರೆ, ಅವರು ಮಾತ್ರ ಈ ತಾಲೂಕಿನ ನಿವಾಸಿಯಾಗಿದ್ದಾರೆ ಉಳಿದ ಅಭ್ಯರ್ಥಿಗಳು ಹೊರಗಿನವರು. ಈ ಕ್ಷೇತ್ರದ ಜನರ ನಾಡಿ ಮಿಡಿತ ಅವರಿಗೆ ತಿಳಿದ್ದಿದ್ದು ಸುಮಾರು 40 ವರ್ಷಗಳಿಂದ ಜನರ ಸೇವೆ ಮಾಡುತ್ತಿದ್ದಾರೆ. ಕಳೆದ ಬಾರಿ ಯಾವುದೋ ಕಾರಣಕ್ಕೆ ಸೋತಿದ್ದರು, ಆದರೆ ಈ ಬಾರಿ ಬಹುಮತದಿಂದ ಅವರನ್ನು ಗೆಲ್ಲಿಸುವಂತೆ ಮತದಾರರಲ್ಲಿ ವಿನಂತಿಸಿದರು.
![](https://aksharanews.in/wp-content/uploads/2023/04/E1DF6126-69B8-425F-AC1E-A6A5F5124EC0-655x1024.jpeg)
![](https://aksharanews.in/wp-content/uploads/2023/02/F4D88BC3-69F8-4A07-A227-5EEB8E2DD1DE-1024x1024.jpeg)
ಸುದ್ದಿಗೋಷ್ಟಿಯಲ್ಲಿ ಕೆಪಿಸಿಸಿ ಸದಸ್ಯ ಪಿಯೂಸ್ಎಲ್.ರೋಡ್ರಿಗಸ್, ಪ್ರಮುಖರಾದ ಬಿ. ಮೋಹನ್, ಪರಮೇಶ್ವರ ಮೂಲ್ಯ, ಅಬ್ಬಾಸ್ ಅಲಿ, ಜಯಂತಿ ವಿ. ಪೂಜಾರಿ, ಲೋಲಾಕ್ಷ ಶೆಟ್ಟಿ, ನಾರಾಯಣ ನಾಯ್ಕ,
ಜೋಸ್ಪಿನ್ ಡಿಸೋಜಾ, ಜೆಸಿಂತಾ ಡಿಸೋಜಾ, ಶಬೀರ್ ಸಿದ್ದಕಟ್ಟೆ ಉಪಸ್ಥಿತರಿದ್ದರು.
![](https://aksharanews.in/wp-content/uploads/2024/01/aksharanews-ad.jpg)