![](https://aksharanews.in/wp-content/uploads/2023/06/F9541555-B852-4386-8E35-06758923AA27.jpeg)
ಮೊಡಂಕಾಪು: ಕಾರ್ಮೆಲ್ ಸಂಯುಕ್ತ ಪದವಿ ಪೂರ್ವ ಕಾಲೇಜು ಮೋಡಂಕಾಪು ಇದರ 2023-24 ನೇ ಸಾಲಿನ ವಿದ್ಯಾರ್ಥಿ ಸಂಘವನ್ನು ಸಂಸ್ಥೆಯ ಹಳೆ ವಿದ್ಯಾರ್ಥಿನಿ ಜೋಶ್ನ ವಾಸ್ ಉದ್ಘಾಟಿಸಿದರು. ಅವರು ಮಾತನಾಡಿ ವಿದ್ಯಾರ್ಥಿಗಳು ನಾಯಕತ್ವದ ಗುಣಗಳನ್ನು ಚಿಕ್ಕಂದಿನಿಂದಲೇ ಬೆಳೆಸಿಕೊಂಡು ಬರಬೇಕು ಎಂದು ಅಭಿಪ್ರಾಯಪಟ್ಟರು.
![](https://aksharanews.in/wp-content/uploads/2023/05/akshara-longad.jpg)
![](https://aksharanews.in/wp-content/uploads/2023/02/F4D88BC3-69F8-4A07-A227-5EEB8E2DD1DE-1024x1024.jpeg)
![](https://aksharanews.in/wp-content/uploads/2023/05/D4611538-B39D-4E5E-9556-CB5EB83F682B-798x1024.jpeg)
ಕಾಲೇಜಿನ ಪ್ರಾಂಶುಪಾಲರಾದ ಭಗಿನಿ ನವೀನ ಎ.ಸಿ ಪ್ರತಿಜ್ಞಾ ವಿಧಿ ಬೋಧಿಸಿದರು.
ವಿದ್ಯಾರ್ಥಿ ಸಂಘದ ಸಲಹೆಗಾರರಾದ ಭಗಿನಿ
ಫೆಲ್ಸಿಟ ಎ.ಸಿ, ಶ್ರೀ ವಿದ್ಯಾ ಹಾಗೂ ಸುರೇಶ್ ನಂದೊಟ್ಟು ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷ ರಾನ್ಸ್ ಸನ್ ಸ್ವಾಗತಿಸಿ, ಕಾರ್ಯದರ್ಶಿ ಕೃಪಾ ವಂದಿಸಿದರು.
![](https://aksharanews.in/wp-content/uploads/2024/01/aksharanews-ad.jpg)