![](https://aksharanews.in/wp-content/uploads/2023/06/050276BA-8A5A-4581-AFD0-F000E46B1048.jpeg)
ಬಂಟ್ವಾಳ: ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಯಥಾಸ್ಥಿತಿ ಮುಂದುವರಿಸಲು ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಅವರು ತೋಟಗಾರಿಕಾ ಸಚಿವರಿಗೆ ಪತ್ರದ ಮೂಲಕ ಒತ್ತಾಯಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯು ರಾಜ್ಯ ಸರಕಾರ ದ ಪಾಲುದಾರಿಕೆಯಲ್ಲಿ ಕಳೆದ ಕೆಲವು ವರ್ಷಗಳಿಂದ ರಾಜ್ಯದಲ್ಲಿ ಯಶಸ್ವಿಯಾಗಿ ಅನುಷ್ಠಾನ ಗೊಂಡು ಹವಾಮಾನ ವೈಫಲ್ಯರೀತ್ಯಗಳಿಂದ ಬೆಳೆಗಳು ಹಾನಿಗೋಳಗಾಗಿ ನಷ್ಟ ಅನುಭವಿಸಿದಾಗ ರೈತರಿಗೆ ಸ್ವಲ್ಪ ಮಟ್ಟಿನಲ್ಲಿ ಸಂಕಷ್ಟ ಪರಿಹಾರ ಗೊಂಡು ಜೀವನಕ್ಕೆ ಒಂದಷ್ಟು ವರದಾನ ವಾಗುತ್ತಿತ್ತು. ಈ ಯೋಜನೆ ಯಿಂದ ಕರಾವಳಿಯ ಅಡಿಕೆ ಮತ್ತು ಕರಿಮೆಣಸು ಬೆಳೆಯುವ ರೈತರಿಗೆ ತುಂಬಾ ಅನುಕೂಲವಾಗುತ್ತಿತ್ತು. ಈ ಯೋಜನೆಯ ಒಟ್ಟು ಪ್ರೀಮಿಯಂ ಮೊತ್ತದ ಶೇ ೧೦ ರಷ್ಟು ಪಾಲು ರೈತ ಪಾವತಿ ಮಾಡುತ್ತಿದ್ದು, ಉಳಿದಂತೆ ಶೇ ೯೦ ರಷ್ಟು ಪಾಲನ್ನು ಕೇಂದ್ರ ಹಾಗೂ ರಾಜ್ಯ ಸರಕಾರ ಗಳ ಸಹಯೋಗದಲ್ಲಿ ಭರಿಸಿಕೊಂಡು ರೈತರ ಸಂಕಷ್ಟಕ್ಕೆ ಕೇಂದ್ರ ಮತ್ತು ರಾಜ್ಯ ಸರಕಾರಗಳು ನೆರವಾಗುತ್ತಿರುವುದು ರೈತರಿಗೆ ಖುಷಿಯನ್ನು ತರುತ್ತಿತ್ತು.
![](https://aksharanews.in/wp-content/uploads/2023/05/akshara-longad.jpg)
![](https://aksharanews.in/wp-content/uploads/2023/02/F4D88BC3-69F8-4A07-A227-5EEB8E2DD1DE-1024x1024.jpeg)
![](https://aksharanews.in/wp-content/uploads/2023/05/D4611538-B39D-4E5E-9556-CB5EB83F682B-798x1024.jpeg)
ಇತ್ತೀಚಿನ ಕೆಲವು ವರ್ಷಗಳಲ್ಲಿ ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಯಲ್ಲಿ ಮಳೆಯ ಪ್ರಮಾಣದಲ್ಲಿ ವ್ಯತ್ಯಯ ಕಂಡು ಬಂದಿರುವುದರಿಂದ ಅತಿವೃಷ್ಟಿ, ಅನಾವೃಷ್ಟಿ ಸಂಭವಿಸಿ ನಷ್ಟಕ್ಕೆ ಒಳಗಾದ ರೈತರಿಗೆ ಈ ಯೋಜನೆ ಯಿಂದ ಅತ್ಯಧಿಕವಾಗಿ ಬೆಳೆ ವಿಮೆ ಪರಿಹಾರ ಸಿಗುತ್ತಿತ್ತು. ೨೦೨೩-೨೪ನೇ ಸಾಲಿನಲ್ಲಿ ಮುಂಗಾರು ಕೈ ಕೊಟ್ಟಿದ್ದು ಮಳೆಯ ಪ್ರಮಾಣ ತೀರಾ ಕಡಿಮೆ ಯಾಗಿದ್ದು ಮಳೆಗಾಲ ಪ್ರಾರಂಭವೇ ಆಗದೇ ಇರುವುದರಿಂದ ನೀರಿನ ಸಮಸ್ಯೆಗಳಿಂದ ಜೆಲ್ಲೆಯ ಬಹುತೇಕ ಅಡಿಕೆ ಮತ್ತು ಕರಿಮೆಣಸು ಬೆಳೆಗಾರರು ಒಂದೊಂದು ಸಂಕಷ್ಟದಲ್ಲಿ ಸಿಲುಕಿ ಅಡಿಕೆ ಮರ ನಾಶವಾಗಿದ್ದಲ್ಲದೇ ಹಸಿ ಅಡಿಕೆ ಉದುರುತ್ತಿದ್ದು ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಅನ್ವಯ ಪ್ರಯೋಜನ ಪಡೆಯಲು ರೈತರು ಪ್ರತಿ ಸಹಕಾರಿ ಸಂಘಗಳಲ್ಲಿ ವಿಚಾರಿಸಿಕೊಂಡು ಪರದಾಡುತ್ತಿದ್ದಾರೆ. ಪ್ರತಿ ವರ್ಷವೂ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಗೆ ರೈತರಿಂದ ಪ್ರೀಮಿಯಂ ತುಂಬಲು ಮೇ ತಿಂಗಳು ಪ್ರಾರಂಭ ಮಾಡಿ ಜೂನ್ ಅಂತ್ಯ ಕ್ಕೆ ಅವಧಿಯಾಗಿರುತ್ತದೆ. ಇದರಂತೆ ರೈತರು ಪ್ರೀಮಿಯಂ ಮೊತ್ತವನ್ನು ಸಂಬಂಧ ಪಟ್ಟ ಪ್ರಾಥಮಿಕ ಸಹಕಾರ ಸಂಘಗಳಲ್ಲಿ ತುಂಬಿಸಿಕೊಂಡು ಆಯಾ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮುಲಕ ಸಂಬಂಧ ಪಟ್ಟ ಬೆಳೆ ವಿಮೆ ಏಜನ್ಸಿಗೆ ಸಲ್ಲಿಕೆಯಾಗುವುದು ವಾಡಿಕೆಯಾಗಿದೆ.
ಆದರೆ ೨೦೨೩-೨೪ ನೇ ಸಾಲಿಗೆ ಸಂಬಂಧಿಸಿದಂತೆ ರಾಜ್ಯ ಸರಕಾರ ಈ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಜಾರಿ ಬಗ್ಗೆ ಯಾವುದೇ ರೀತಿಯ ತೀರ್ಮಾನ ಅಥವಾ ಸುತ್ತೋಲೆ ಹೊರಡಿಸಿಲ್ಲ. ಇಷ್ಟರವರೆಗೆ ಸಹಕಾರ ಸಂಘಗಳಿಗೆ ತೋಟಗಾರಿಕೆ ಇಲಾಖೆ ಅಥವಾ ಸಹಕಾರ ಇಲಾಖೆ ಯಿಂದ ಮಾಹಿತಿ ಬಂದಿರುವುದಿಲ್ಲ. ಪ್ರಾಥಮಿಕ ಸಹಕಾರ ಸಂಘಗಳು ರೈತರಿಗೆ ಯಾವುದೇ ರೀತಿಯ ಉತ್ತರ ಕೊಡಲಾರದಸ್ಥಿತಿಯಲ್ಲಿವೆ. ರಾಜ್ಯ ಸರಕಾರದ ಈ ಕ್ರಮಕ್ಕೆ ರೈತರಿಗೆ ತುಂಬಾ ಬೇಸರ ವಾಗಿದೆ. ಆದುದರಿಂದ ೨೦೨೩-೨೪ ನೇ ಸಾಲಿಗೆ ಸಂಬಂಸಿದಂತೆ ಹವಾಮಾನ ಆಧಾರಿತ ಬೆಳೆ ಯೋಜನೆಯನ್ನು ಯಾಥಾಸ್ಥಿತಿಯಲ್ಲಿ ಮುಂದುವರಿಸುವಂತೆ ಅವರು ಪತ್ರದಲ್ಲಿ ಆಗ್ರಹಿಸಿದ್ದಾರೆ.
![](https://aksharanews.in/wp-content/uploads/2024/01/aksharanews-ad.jpg)