![](https://aksharanews.in/wp-content/uploads/2023/07/9147B87B-6C1B-4492-89DB-5707213EE15C-768x1024.jpeg)
ಬಂಟ್ವಾಳ: ತಾಲೂಕು ಬಿಲ್ಲವ ಮಹಿಳಾ ಸಮಿತಿಯ ನೂತನ ಅಧ್ಯಕ್ಷರಾಗಿ, ನ್ಯಾಯವಾದಿ ಶೈಲಜಾ ರಾಜೇಶ್ ಆಯ್ಕೆಯಾಗಿದ್ದಾರೆ. ಬಿ.ಸಿ.ರೋಡಿನ ಗಾಣದಪಡ್ಪುವಿನಲ್ಲಿರವ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ಭಾನುವಾರ ನಡೆದ ಮಹಾಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಮಹಿಳಾ ಸಮಿತಿಯ ಅಧ್ಯಕ್ಷೆ ರೇವತಿ ಬಡಗಬೆಳ್ಳೂರು ಅಧ್ಯಕ್ಷತೆ ವಹಿಸಿದ್ದರು.
![](https://aksharanews.in/wp-content/uploads/2023/05/akshara-longad.jpg)
![](https://aksharanews.in/wp-content/uploads/2023/05/D4611538-B39D-4E5E-9556-CB5EB83F682B-798x1024.jpeg)
![](https://aksharanews.in/wp-content/uploads/2023/02/F4D88BC3-69F8-4A07-A227-5EEB8E2DD1DE-1024x1024.jpeg)
ಉಪಾಧ್ಯಕ್ಷರಾಗಿ ರಾಗಿಣಿ, ಕಾರ್ಯದರ್ಶಿಯಾಗಿ ರಶ್ಮಿ ಸತೀಶ್
ಜತೆ ಕಾರ್ಯದರ್ಶಿಯಾಗಿ ಸರೋಜಿನಿ ಖಜಾಂಚಿಯಾಗಿ ಸುಜಾತಾ ದಿನೇಶ್ ಇವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭ ಮಾಜಿ ಅಧ್ಯಕ್ಷರಾದ ನಯನ, ಮಾಲತಿ, ಭಾರತಿ ಕುಂದರ್, ಜಯಲಕ್ಷ್ಮಿ ಸೇರಿದಂತೆ ಬಿಲ್ಲವ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಭವಾನಿ ಸ್ವಾಗತಿಸಿದರು, ಕಾರ್ಯದರ್ಶಿ ಲಲಿತಾ ವಂದಿಸಿದರು.
![](https://aksharanews.in/wp-content/uploads/2024/01/aksharanews-ad.jpg)