![](https://aksharanews.in/wp-content/uploads/2023/07/A043E0D9-CC91-45C3-BACA-B7DB7E181D57-1024x682.jpeg)
ಬಂಟ್ವಾಳ: ತುಳುನಾಡಿನ ಸಂಪ್ರದಾಯದ ಆಚರಣೆಯಲ್ಲಿ ಆರೋಗ್ಯದ ಭಾಗ್ಯವೂ ಇದೆ ಎಂದು ತುಳುಕೂಟ ಬಂಟ್ವಾಳ ಇದರ ಅಧ್ಯಕ್ಷ ಸುದರ್ಶನ್ ಜೈನ್ ಹೇಳಿದರು.
![](https://aksharanews.in/wp-content/uploads/2023/04/WhatsApp-Image-2023-02-08-at-9.24.55-AM-1024x362-1.jpeg)
![](https://aksharanews.in/wp-content/uploads/2023/02/F4D88BC3-69F8-4A07-A227-5EEB8E2DD1DE-1024x1024.jpeg)
ಅವರು ತುಳುಕೂಟ ಬಂಟ್ವಾಳದ ಆಶ್ರಯದಲ್ಲಿ ಶ್ರೀ ರಕ್ತೇಶ್ವರಿ ದೇವಸ್ಥಾನ ಬಿ.ಸಿ.ರೋಡ್ ಇದರ ಆಡಳಿತ ಮಂಡಳಿಯ ಸಹಕಾರದಲ್ಲಿ ಶ್ರೀ ರಕ್ತೇಶ್ವರೀ ದೇವಸ್ಥಾನದಲ್ಲಿ ಆಟಿ ಅಮವಾಸ್ಯೆಯ ಪ್ರಯುಕ್ತ ನಡೆದ ಸಾರ್ವಜನಿಕ ಪಾಲೆಯ ಕೆತ್ತೆ ಕಷಾಯ ವಿತರಣಾ ಸಮಾರಂಭದಲ್ಲಿ ಮಾತನಾಡಿದರು. ಸಾರ್ವಜನಿಕರಿಗೆ ಕಷಾಯ ನೀಡಿ ಆಟಿ ಅಮಾವಾಸ್ಯೆಯ ಶುಭಾಶಯ ಕೋರಿದರು.
![](https://aksharanews.in/wp-content/uploads/2023/07/6D274505-0A0B-412D-9765-06C775E38FF9-1024x682.jpeg)
![](https://aksharanews.in/wp-content/uploads/2023/05/D4611538-B39D-4E5E-9556-CB5EB83F682B-798x1024.jpeg)
ಈ ಸಂಧರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಬಿ.ವಿಶ್ವನಾಥ್, ಪ್ರಧಾನ ಕಾರ್ಯದರ್ಶಿ ಎನ್. ಶಿವಶಂಕರ್, ಮಾಜಿ ಅಧ್ಯಕ್ಷ ರಾಜೇಶ್.ಎಲ್.ನಾಯಕ್, ತುಳುಕೂಟದ ಕೋಶಾಧಿಕಾರಿ ಸುಭಾಶ್ಚಂದ್ರ ಜೈನ್, ಹಿರಿಯರಾದ ಕಾಂತಾಡಿ ಸೀತಾರಾಮ ಶೆಟ್ಟಿ, ಪರಮೇಶ್ವರ ಮೂಲ್ಯ, ನಾರಾಯಣ ಸಿ. ಪೆರ್ನೆ, ಸದಾಶಿವ ಪುತ್ರನ್, ಟಿ. ಶೇಷಪ್ಪ ಮಾಸ್ಟರ್, ಸುಕುಮಾರ್ ಬಂಟ್ವಾಳ್, ದಾಮೋದರ ಮಾಸ್ಟರ್ ಏರ್ಯ, ನಿತೇಶ್ ಕುಲಾಲ್ ಪಲ್ಲಿಕಂಡ, ಪ್ರಕಾಶ್ ಶೆಟ್ಟಿ ಶ್ರೀ ಶೈಲ. ಸತೀಶ್ ಕುಮಾರ್ ಎಂ, ಹರೀಶ್ ಬಿ.ಸಿ.ರೋಡ್, ಸ್ವಜೇಶ್ ಜೈನ್,ಉಪಸ್ಥಿತರಿದ್ದರು. ಇದ್ದರು. ತುಳುಕೂಟದ ಕಾರ್ಯದರ್ಶಿ ಎಚ್ಕೆ,ನಯನಾಡು ಸ್ವಾಗತಿಸಿದರು.
![](https://aksharanews.in/wp-content/uploads/2024/01/aksharanews-ad.jpg)