

ಬಂಟ್ವಾಳ: ಬಿರುವೆರ್ ಸೇವಾ ಟ್ರಸ್ಟ್ ನರಿಕೊಂಬು ಬಂಟ್ವಾಳ ಇದರ ಆಶ್ರಯದಲ್ಲಿ ಭಾನುವಾರ ಬಿಲ್ಲವರ ಸೌಹಾರ್ದ ಕುಟುಂಬ ಮಿಲನ 2023 ಕಾರ್ಯಕ್ರಮ ನರಿಕೊಂಬುವಿನಲ್ಲಿ ನಡೆಯಿತು.


ಕಾರ್ಯಕ್ರಮವನ್ನು ಪುರೋಹಿತರಾದ ಕೇಶವ ಶಾಂತಿ ಹಾಗೂ ವೆಂಕಟೇಶ್ ಶಾಂತಿ ಉದ್ಘಾಟಿಸಿದರು. ಈ ಸಂದರ್ಭ ಶಾಸಕ ರಾಜೇಶ್ ನಾಕ್, ಮಾಜಿ ಸಚಿವ ಬಿ. ರಮಾನಾಥ ರೈ ಟ್ರಸ್ಟ್ನ ಅಧ್ಯಕ್ಷ ಸೀತಾರಾಮ ಪೂಜಾರಿ ಸಹಿತ ವಿವಿಧ ಬಿಲ್ಲವ ಸಂಘಟನೆಗಳ ಅಧ್ಯಕ್ಷರು, ಉದ್ಯಮಿಗಳು, ಟ್ರಸ್ಟ್ನ ಪದಾಧಿಕಾರಿಗಳು, ಸದಸ್ಯರು ಮತ್ತಿತರ ಗಣ್ಯರು ಪಾಲ್ಗೊಂಡಿದ್ದರು. ಕಾರ್ಯಕ್ರಮದಂಗವಾಗಿ ಕೆಸರು ಗದ್ದೆಯಲ್ಲಿ ವಿವಿಧ ಕ್ರೀಡಾಕೂಟಗಳು ನಡೆಯಿತು.

