![](https://aksharanews.in/wp-content/uploads/2023/08/081C587E-D596-4EA7-AC80-FA718947527B-1024x973.jpeg)
![](https://aksharanews.in/wp-content/uploads/2023/08/CF0E1B6B-FE38-40CF-82B0-8F79A8C2F36B-741x1024.jpeg)
ಬಂಟ್ವಾಳ: ಮನೆಮಂದಿಯ ಮುಂದೆಯೇ ಯುವಕನೋರ್ವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಜೀಪಮೂಡ ಗ್ರಾಮದ ಮಿತ್ತಮಜಲು ಎಂಬಲ್ಲಿ ನಡೆದಿದೆ.
ಇಲ್ಲಿನ ನಿವಾಸಿ ಜನಾರ್ದನ ಆಚಾರ್ಯ ಶಶಿಕಲಾ ಆಚಾರ್ಯ ದಂಪತಿ ಪುತ್ರ ಸಾಗರ್ ಆಚಾರ್ಯ ಆತ್ಮಹತ್ಯೆ ಮಾಡಿಕೊಂಡ ಯುವಕ.
![](https://aksharanews.in/wp-content/uploads/2023/05/akshara-longad.jpg)
![](https://aksharanews.in/wp-content/uploads/2023/02/F4D88BC3-69F8-4A07-A227-5EEB8E2DD1DE-1024x1024.jpeg)
![](https://aksharanews.in/wp-content/uploads/2023/07/B7471F87-2D08-4C18-B9B6-CD443B2D62C5.jpeg)
ಕಳೆದ ಹಲವು ಸಮಯಗಳಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಸಾಗರ್ ಗೆ ಇತ್ತಿಚೆಗೆ ಆತನ ತಂದೆಯೇ ಒಂದು ಕಿಡ್ನಿಯನ್ನು ದಾನ ಮಾಡಿದ್ದು ಶಸ್ತ್ರ ಚಿಕಿತ್ಸೆಯ ಬಳಿಕ ಆರೋಗ್ಯವಾಗಿದ್ದ. ಸೋಮವಾರ ಬೆಳಿಗ್ಗೆ ಆತನ ಸಹೋದರ ಕೆಲಸಕ್ಕೆ ತೆರಳಿದ ಬಳಿಕ 8 ಗಂಟೆಯ ವೇಳೆಗೆ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಂದೆ ತಾಯಿಯ ಮನೆಯಲ್ಲಿರುವಾಗಲೇ ಘಟನೆ ನಡೆದಿದ್ದು ಅವರ ಆಕ್ರಂದನ ಮುಗಿಲು ಮುಟ್ಟಿದೆ. ಸಾಗರ್ ಅತ್ಯುತ್ತಮ ಚಿತ್ರಕಲಾವಿದನಾಗಿ ಗುರುತಿಸಿಕೊಂಡಿದ್ದ.
![](https://aksharanews.in/wp-content/uploads/2024/01/aksharanews-ad.jpg)