
ಬಂಟ್ವಾಳ: ಎಪ್ಪತ್ತೇಳನೆಯ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಸರ್ಕಾರಿ ಪದವಿ ಪೂರ್ವ ಕಾಲೇಜು ವಾಮದಪದವಿನಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ವಿಶೇಷ ಆಹ್ವಾನಿತ ಖಾಯಂ ಸದಸ್ಯ ಅಜೇಯ ಕುಮಾರ್ ಕೊಂಬರಬೈಲು ರಾಷ್ಟ್ರ ಧ್ವಜಾರೋಹಣಗೈದು ಗೌರವ ವಂದನೆ ಸ್ವೀಕರಿಸಿದರು.


ಸ್ವಾತಂತ್ರ್ಯ ದಿನದ ಮಹತ್ವದ ಕುರಿತು ಆಂಗ್ಲ ಭಾಷಾ ಉಪನ್ಯಾಸಕ ರಾಧೇಶ ತೋಳ್ಪಾಡಿ ಎಸ್ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಚಂದ್ರಶೇಖರ ಶೆಟ್ಟಿ, ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ, ಸದಸ್ಯರಾದ ನಾಗರಾಜ ಶೆಟ್ಟಿ, ಹಂಝ ಬಸ್ತಿಕೋಡಿ, ಪ್ರಭಾಕರ ಶೆಟ್ಟಿ, ರಮೇಶ್ ಶೆಟ್ಟಿ, ಗೋಪಾಲಕೃಷ್ಣ ಚೌಟ, ಪ್ರಾಂಶುಪಾಲ ಶ್ರೀಧರ್ ಎಚ್ ಜಿ, ಉಪಪ್ರಾಂಶುಪಾಲೆ ವಿದ್ಯಾ ಕುಮಾರಿ, ಬೋಧಕ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾಲೇಜು ವಿಭಾಗದಲ್ಲಿ ನಡೆದ ಆಟಿಡೊಂಜಿ ದಿನ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯೋತ್ಸವ ಪ್ರಯುಕ್ತ ನಡೆಸಲಾದ ಚಿತ್ರ ಕಲಾ ಸ್ಪರ್ಧಾ ವಿಜೇತರಿಗೆ ಅಜೇಯ ಕುಮಾರ್ ಕೊಂಬರಬೈಲು ಬಹುಮಾನ ವಿತರಿಸಿದರು
