ಬಂಟ್ವಾಳ: ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘವು ೨೦೨೨-೨೦೨೩ ನೇ ಸಾಲಿನಲ್ಲಿ ತನ್ನ ಕಾರ್ಯವ್ಯಾಪ್ತಿಯಲ್ಲಿ ಸಾಧಿಸಿರುವ ಉತ್ತಮ ಸೇವೆಯನ್ನು ಪರಿಗಣಿಸಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ೨೦೨೨-೨೦೨೩ ನೇ ಸಾಲಿನ ಮಹಾಸಭೆಯಲ್ಲಿ ಅಧ್ಯಕ್ಷ ಡಾ ಎಂ ಎನ್ ರಾಜೇಂದ್ರ ಕುಮಾರ್ ಇವರು ಸಂಘದ ಅಧ್ಯಕ್ಷ ಕೆ ಸಂಜೀವ ಪೂಜಾರಿ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಮಮತಾ ಜಿ ಅವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಿದರು.
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ನಿರ್ದೇಶಕ ಭಾಸ್ಕರ ಕೋಟ್ಯಾನ್, ಡಾ. ದೇವಿಪ್ರಸಾದ್ ಶೆಟ್ಟಿ, ಎಸ್.ಬಿ. ಜಯರಾಮ್ ರೈ, ಶಶಿಕುಮಾರ್ ರೈ ಬಿ. ಹೆಚ್.ಎನ್. ರಮೇಶ್ ಹಾಗೂ ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ಸುಂದರ ಪೂಜಾರಿ ನಿರ್ದೇಶಕರಾದ ಜಯಶಂಕರ್ ಕಾನ್ಸಾಲೆ, ಅಶೋಕ್ ಕುಮಾರ್ ಕೋಮಾಲಿ ಹಾಗೂ ಸಂಘದ ಎಜಿಎಂ ಶಿಲ್ಪಾ ಗಣೇಶ್ ಉಪಸ್ಥಿತರಿದ್ದರು.
Advertisement