![](https://aksharanews.in/wp-content/uploads/2023/09/BA9DBAA6-1220-48F8-9790-0D106EA15E68-1024x768.jpeg)
ಬಂಟ್ವಾಳ: ಮೂರ್ತೆದಾರರ ಸೇವಾ ಸಹಕಾರಿ ಸಂಘ ಶಂಭೂರು ಇದರ 2022-23ನೇ ಸಾಲಿನ ವಾರ್ಷಿಕ ಮಹಾಸಭೆಯು ಭಾನುವಾರ ಸಂಘದ ವಠಾರದಲ್ಲಿರುವ ಬಿರುವೆರ್ ಸೇವಾ ಟ್ರಸ್ಟ್ನ ಸಭಾಂಗಣದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಹಾಗೂ ದ.ಕ. ಜಿಲ್ಲಾ ಸಹಕಾರಿ ಯೂನಿಯನ್ನ ನಿರ್ದೇಶಕ ಪುರುಷೋತ್ತಮ ಸಾಲ್ಯಾನ್ ನರಿಕೊಂಬು ಅಧ್ಯಕ್ಷತೆ ವಹಿಸಿದ್ದರು.
![](https://aksharanews.in/wp-content/uploads/2023/04/WhatsApp-Image-2023-02-08-at-9.24.55-AM-1024x362-1.jpeg)
![](https://aksharanews.in/wp-content/uploads/2023/09/DB634BEF-ABF6-4269-AD01-A66C6616657B-1024x470.jpeg)
![](https://aksharanews.in/wp-content/uploads/2023/09/5AE489DA-A83A-406F-8030-BD51ACC940E6-1024x471.jpeg)
![](https://aksharanews.in/wp-content/uploads/2023/02/F4D88BC3-69F8-4A07-A227-5EEB8E2DD1DE-1024x1024.jpeg)
ಮುಖ್ಯ ಅತಿಥಿಗಳಾಗಿ ಬಿರುವೆರ್ ಸೇವಾ ಟ್ರಸ್ಟ್ ನರಿಕೊಂಬು ಇದರ ಅಧ್ಯಕ್ಷ ಸೀತಾರಾಮ ಪೂಜಾರಿ ಬೋಳಂತ್ತೂರು, ನರಿಕೊಂಬು ಗ್ರಾ.ಪಂ. ಅಧ್ಯಕ್ಷ ಸಂತೋಷ್ ಕುಮಾರ್, ಸದಸ್ಯ ರವಿ ಅಂಚನ್ ಅಬೆರೊಟ್ಟು, ಶಂಭೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ಮಾಧವ ಕೆ.ಕರ್ಬೆಟ್ಟು, ಬಿರುವೆರ್ ಸೇವಾ ಟ್ರಸ್ಟ್ನ ಉಪಾಧ್ಯಕ್ಷ ಹರೀಶ್ ಪೂಜಾರಿ ಮರ್ದೋಳಿ, ಕೋಶಾಧಿಕಾರಿ ಉಮೇಶ್ ನೆಲ್ಲಿಗುಡ್ಡೆ, ಪ್ರಧಾನ ಕಾರ್ಯದರ್ಶಿ ಮನೋಜ್ ನಿರ್ಮಲ್, ಮಾಜಿ ಕಾರ್ಯದರ್ಶಿ ಸಂಜೀವ ಪೂಜಾರಿ ನಾಟಿ, ನಿರ್ದೇಶಕರಾದ ಮೋನಪ್ಪ ಪೂಜಾರಿ ಬೊಂಡಾಲ, ಶ್ರೀಶ ರಾಯಸ, ಆಶೋಕ್ ಆರ್., ನಾರಾಯಣ ಪೂಜಾರಿ ಕೇದಿಗೆ, ಕೃಷ್ಣಪ್ಪ ಪೂಜಾರಿ ಬಾಳ್ತಿಲ, ಗಣೇಶ್ ಪೆಲ್ತಿಮಾರ್, ವಿಜಯ ತುಕರಾಮ, ಜಯಂತಿ ಈಶ್ವರ ಪೂಜಾರಿ, ರಾಜೇಶ್ ಶೇಡಿಗುರಿ ಉಪಸ್ಥಿತರಿದ್ದರು. ಕಾರ್ಯನಿರ್ವಾಹಣಾಧಿಕಾರಿ ಯೋಗೀಶ್ ಅಮೀನ್ ವರದಿ ಮಂಡಿಸಿ, ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷ ಮಾಧವ ಕೆ. ಸ್ವಾಗತಿಸಿದರು, ಸಿಬ್ಬಂದಿ ಕೃತಿಕ್ಷಾ ಪ್ರಾರ್ಥಿಸಿದರು. ಈ ಸಂದರ್ಭ ಮೂರ್ತೆದಾರಿಕೆ ಮಾಡುವ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಲಾಯಿತು.
![](https://aksharanews.in/wp-content/uploads/2024/01/aksharanews-ad.jpg)