
ಬಂಟ್ವಾಳ: ತಾಲೂಕು ಭಾರತರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಸಮಾಜ ಸೇವಾ ಸಂಘ ಇದರ 25ನೇ ವಾರ್ಷಿಕ ಮಹಾಸಭೆಯು ಅ.8ರಂದು ಆದಿತ್ಯವಾರ ಮಧ್ಯಾಹ್ನ 2ಕ್ಕೆ ಬಿ.ಸಿ.ರೋಡಿನ ರಿಕ್ಷಾ ಭವನದಲ್ಲಿ ನಡೆಯಲಿದೆ. ತಾಲೂಕಿನ ಎಲ್ಲಾ ಪರಿಶಿಷ್ಟ ಜಾತಿ, ಪಂಗಡದ ಸಂಘ ಸಂಸ್ಥೆಗಳು, ಸಮುದಾಯದವರು, ಮತ್ತು ದಲಿತ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಸಂಘದ ಅಧ್ಯಕ್ಷ ಕೆ. ಸತೀಶ್ ಅರಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

