ಬಂಟ್ವಾಳ: ಬ್ರಿಟಿಷರ ಕಾಲದಲ್ಲಿ ನಿರ್ಮಾಣಗೊಂಡಿರುವ ಪಾಣೆಮಂಗಳೂರಿನ ಹಳೆ ಉಕ್ಕಿನ ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿದೆ.
![](https://aksharanews.in/wp-content/uploads/2023/05/akshara-longad.jpg)
![](https://aksharanews.in/wp-content/uploads/2023/10/CF69E899-4ECA-44B3-AF3C-F68B46938FEF-1024x485.jpeg)
ಸ್ಥಳೀಯರೊಬ್ಬರು ಭಾನುವಾರ ರಾತ್ರಿ ಸೇತುವೆಯಲ್ಲಿ ಬಿರುಕನ್ನು ಗಮನಿಸಿ ಕಂದಾಯ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ತಕ್ಷಣ ಕಂದಾಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಘನ ವಾಹನಗಳು ಸೇತುವೆಯಲ್ಲಿ ಸಂಚರಿಸದಂತೆ ನಿರ್ಭಂದ ವಿಧಿಸಲು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
![](https://aksharanews.in/wp-content/uploads/2023/02/F4D88BC3-69F8-4A07-A227-5EEB8E2DD1DE-1024x1024.jpeg)
ಪಾಣೆಮಂಗಳೂರಿನ ಹಳೆಯ ಉಕ್ಕಿನಸೇತುವೆ 1914 ರಲ್ಲಿ ನಿರ್ಮಾಣಗೊಂಡಿದ್ದು ಶತಮಾನ ಪೂರೈಸಿದೆ. ಅವಿಭಜಿತ ದ.ಕ. ಜಿಲ್ಲೆಯ ಮೊದಲ ಸಂಪರ್ಕ ಕೊಂಡಿ ಎನ್ನುವ ಹೆಗ್ಗಲಿಕೆಯೂ ಈ ಸೇತುವೆಗಿದೆ.
![](https://aksharanews.in/wp-content/uploads/2024/01/aksharanews-ad.jpg)