![](https://aksharanews.in/wp-content/uploads/2023/10/07661332-96D6-4C7D-B083-217F14F538F6-1024x682.jpeg)
ಬಂಟ್ವಾಳ: ಗೆಲುವು ಎನ್ನುವುದು ಎಲ್ಲರಿಂದಲೂ ಸಾಧ್ಯವಾಗದು, ಆದರೂ ಪ್ರಯತ್ನ ಬಹಳ ಮುಖ್ಯವಾಗುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಶ್ರಮ ವಹಿಸಬೇಕಾಗುವುದು ಅಗತ್ಯವಾಗಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿ ಹೇಳಿದರು.
ಅವರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಬಂಟ್ವಾಳ ಹಾಗೂ ತುಂಬೆ ಪ್ರೌಢಶಾಲೆ ಇವುಗಳ ಜಂಟಿ ಆಶ್ರಯದಲ್ಲಿ ಮಂಗಳೂರು ಮಂಗಳಾ ಸ್ಟೇಡಿಯಂನಲ್ಲಿ ಜರಗಿದಬಂಟ್ವಾಳ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.
![](https://aksharanews.in/wp-content/uploads/2023/05/akshara-longad.jpg)
![](https://aksharanews.in/wp-content/uploads/2023/02/F4D88BC3-69F8-4A07-A227-5EEB8E2DD1DE-1024x1024.jpeg)
ಬಂಟ್ವಾಳ ತಾಲೂಕಿಗೆ ಸುಸಜ್ಜಿತ ಕ್ರೀಡಾಂಗಣಕ್ಕಾಗಿ ಒಂದು ನೂರು ಕೋಟಿ ರೂಪಾಯಿಗಳ ಅನುದಾನಕ್ಕಾಗಿ ಕೇಲ್ ಇಂಡಿಯಾಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದು ಶೀಘ್ರ ಮಂಜೂರಾಗಲು ಪ್ರಯತ್ನಿಸುತ್ತಿರುವುದಾಗಿ ತಿಳಿಸಿದರು.
ಅಧ್ಯಕ್ಷತೆಯನ್ನು ವಹಿಸಿದ್ದ ಮುಹಿಯುದ್ದೀನ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಬಿ. ಅಬ್ದುಲ್ ಸಲಾಂ ಮಾತನಾಡಿ ಕ್ರೀಡೆ ಎನ್ನುವುದು ಆರೋಗ್ಯಪೂರ್ಣ ಸ್ಪರ್ಧೆಯಾಗಿದ್ದು ಶಿಸ್ತು ಮತ್ತು ಸಂಯಮವನ್ನು ಕಲಿಸಿಕೊಡುತ್ತದೆ. ಪ್ರತಿಭೆಯನ್ನು ಪ್ರದರ್ಶಿಸಲು ಒಳ್ಳೆಯ ವೇದಿಕೆಯಾಗಿ ಕ್ರೀಡಾ ಕ್ಷೇತ್ರ ಸಹಕರಿಸುತ್ತದೆಯಲ್ಲದೆ ಕ್ರೀಡಾಕೂಟವೆನ್ನುವುದು ಒಂದು ಸ್ಮರಣೀಯ ಕ್ಷಣಗಳಾಗಿ ಉಳಿಯುತ್ತದೆ ಎಂದರು.
ಬಂಟ್ವಾಳ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ್ ಧ್ವಜಾರೋಹಣಗೈದರು. ತುಂಬೆ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಗಣೀಶ್ ಸಾಲಿಯಾನ್ ಒಲಿಂಪಿಕ್ ಧ್ವಜಾರೋಹಣ ಮಾಡಿದರು. ತುಂಬೆ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಕೆ.ಎನ್. ಗಂಗಾಧರ ಆಳ್ವ ಸ್ವಾಗತಿಸಿ ಶಾಲಾ ಧ್ವಜಾರೋಹಣ ಗೈದರು.
![](https://aksharanews.in/wp-content/uploads/2023/10/2E8E3E89-4CAD-4119-8E0B-F95CA48D55ED-1024x682.jpeg)
![](https://aksharanews.in/wp-content/uploads/2023/10/D0A6134C-727D-43A3-B52D-4A1767C2905C-1024x682.jpeg)
ಬಂಟ್ವಾಳ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ವಿಷ್ಣು ನಾರಾಯಣ ಹೆಬ್ಬಾರ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ತುಂಬೆ ಗ್ರಾಮ ಪಂಚಾಯತಿನ ನಿಕಟಪೂರ್ವ ಅಧ್ಯಕ್ಷ ಪ್ರವೀಣ್ ತುಂಬೆ, ತುಂಬೆ ಪಿ. ಟಿ.ಎ. ಅಧ್ಯಕ್ಷ ನಿಸಾರ್ ಅಹಮ್ಮದ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಉಮಾನಾಥ್ ರೈ ಮೇರಾವು, ಬಿ.ಎ. ಐ.ಟಿ.ಐ ಪ್ರಾಂಶುಪಾಲ ನವೀನ್ ಕುಮಾರ್, ತಾಲೂಕು ದೈಹಿಕ ಶಿಕ್ಷಣ ಸಂಘದ ಅಧ್ಯಕ್ಷೆ ರತ್ನಾವತಿ, ಸದಾಶಿವ ಡಿ.ತುಂಬೆ ಇಬ್ರಾಹಿಂ ವಳವೂರು, ಶಿಕ್ಷಣ ಸಂಯೋಜಕಿ ಕೆ. ಸುಜಾತ ಕುಮಾರಿ, ಸುಧಾ, ಪದ್ಮಾವತಿ, ತುಂಬೆ, ಪ್ರೌಢಶಾಲಾ ಮುಖ್ಯಸ್ಥೆ ವಿದ್ಯಾ ಕೆ., ದೈಹಿಕ ಶಿಕ್ಷಣ ನಿರ್ದೇಶಕ ಸಾಯಿರಾಮ್ ಜೆ.ನಾಯಕ್, ಅಬ್ದುಲ್ ಗಫೂರ್, ದೈಹಿಕ ಶಿಕ್ಷಣ ಶಿಕ್ಷಕಿ ಮೋಲಿ ಎಡ್ನ ಗೊನ್ಸಾಲ್ವಿಸ್, ಪಿ.ಟಿ.ಎ ಉಪಾಧ್ಯಕ್ಷೆ ಮೋಹಿನಿ, ರಮೇಶ್ ನಾಯಕ್ ಮತ್ತಿತರರ ಉಪಸ್ಥಿತರಿದ್ದರು. ಸಮಾರಂಭದಲ್ಲಿ ನಿವೃತ್ತ ಮುಖ್ಯೋಪಾಧ್ಯಾಯ*
ಕಾರ್ಯಕ್ರಮದಲ್ಲಿ ಶ್ರೀನಿವಾಸ್ ಕೆದಿಲ ಹಾಗೂ ಹಿರಿಯ ದೈಹಿಕ ಶಿಕ್ಷಣ ಶಿಕ್ಷಕಿ ಲಿಲ್ಲಿ ಪಾಯಸ್ ಇವರನ್ನು ಸನ್ಮಾನಿಸಲಾಯಿತು. ತುಂಬೆ ವಿದ್ಯಾರ್ಥಿನಿಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು. ದೈಹಿಕ ಶಿಕ್ಷಣ ಶಿಕ್ಷಕ ಜಗದೀಶ್ ರೈ ಬಿ. ವಂದಿಸಿ, ಮುಹಿಯುದ್ದೀನ್ ಶಿಕ್ಷಣ ಸಂಸ್ಥೆಯ ಅಧೀಕ್ಷಕ ಅಬ್ದುಲ್ ಕಬೀರ್ ಬಿ. ನಿರೂಪಿಸಿದರು.
—
![](https://aksharanews.in/wp-content/uploads/2024/01/aksharanews-ad.jpg)