
ಬಂಟ್ವಾಳ: ಸಜೀಪಮೂಡ ಗ್ರಾಮದ ಸುಭಾಷ್ನಗರ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ನೂತನ ಅಧ್ಯಕ್ಷರಾಗಿ ರಮೇಶ್ ಅನ್ನಪ್ಪಾಡಿ ಆಯ್ಕೆಯಾದರು.

ಇತ್ತೀಚೆಗೆ ನಡೆದ ಸಮಿತಿಯ ಸಭೆಯಲ್ಲಿ ಈ ಆಯ್ಕೆ ನಡೆಯಿತು. ಗೌರವಾಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ, ಉಪಾಧ್ಯಕ್ಷರಾಗಿ ತಿಲಕರ ಪೂಜಾರಿ, ಕಾರ್ಯದರ್ಶಿಯಾಗಿ ಅಶ್ವಿನ್ ಪೂಜಾರಿ ಭಜನಾಧ್ಯಕ್ಷರಾಗಿ ಲೋಕೇಶ್ ಸುಭಾಷ್ ನಗರ, ಕೋಶಾಧಿಕಾರಿಯಾಗಿ ನಾರಾಯಣ್ ಪೂಜಾರಿ ಕೊಟ್ಟರಿಪಾಲು, ಜೊತೆ ಕಾರ್ಯದರ್ಶಿಯಾಗಿ ನಾರಾಯಣ್ ಅಮೀನ್, ಸಂಘಟನಾ ಕಾರ್ಯದರ್ಶಿಯಾಗಿ ಅಶೋಕ್ ಪೂಜಾರಿ ಕೊಮಾಲಿ, ಭಜನಾ ಉಪಾಧ್ಯಕ್ಷರಾಗಿ ಸಂತೋಷ್ ದಾಸರಗುಡ್ಡೆ, ಭಜನಾ ಕಾರ್ಯದರ್ಶಿಯಾಗಿ ನಿತಿನ್ ಮಾರ್ನಬೈಲ್ ಜೊತೆ ಕಾರ್ಯದರ್ಶಿಯಾಗಿ ಲಕ್ಷ್ಮೀಶ ಅಗರಿ ಮತ್ತು ಮಧುಸೂಧನ್ ಕರಂದಾಡಿ ಸಂಚಾಲಕರಾಗಿ ಮಹೇಶ್ ಪೂಜಾರಿ ಪಟ್ಟುಗುಡ್ಡೆ ಆಯ್ಕೆಯಾದರು.
Advertisement







