![](https://aksharanews.in/wp-content/uploads/2023/12/16E089F3-159C-4227-8C0D-645DF4B740F7-1024x463.jpeg)
ಬಂಟ್ವಾಳ: ತಾಲೂಕು ಕುಲಾಲ ಸುಧಾರಕ ಸಂಘದ ಆಶ್ರಯದಲ್ಲಿ ನಡೆಯಲಿರುವ ಕಲಾವಳಿ-2024 ಕಾರ್ಯಕ್ರಮದ ಲಾಂಛನ ಬಿಡುಗಡೆ ಕಾರ್ಯಕ್ರಮ ಇತ್ತೀಚಿಗೆ ದ.ಕ.ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ವಾರ್ಷಿಕ ಮಹಾ ಸಭೆ ಕಾರ್ಯಕ್ರಮದಲ್ಲಿ ನಡೆಯಿತು.
![](https://aksharanews.in/wp-content/uploads/2023/05/ak-1.jpg)
![](https://aksharanews.in/wp-content/uploads/2023/02/F4D88BC3-69F8-4A07-A227-5EEB8E2DD1DE-1024x1024.jpeg)
ಜಿಲ್ಲಾ ಸಂಘದ ಅಧ್ಯಕ್ಷ ಮಯೂರ್ ಉಳ್ಳಾಲ್ ಮತ್ತು ಜಿಲ್ಲಾ ಸಂಘದ ಪದಾಧಿಕಾರಿಗಳು ಲಾಛಂನ ಬಿಡುಗಡೆ ಗೊಳಿಸಿದರು. ಬಂಟ್ವಾಳ ಕುಲಾಲ ಸುಧಾರಕ ಸಂಘದ ಅಧ್ಯಕ್ಷ ರಾಧಾಕೃಷ್ಣ ಬಂಟ್ವಾಳ, ಉಪಾಧ್ಯಕ್ಷ ಸುಕುಮಾರ್ ಬಂಟ್ವಾಳ, ಕೋಶಾಧಿಕಾರಿ ರಮೇಶ್ ಸಾಲಿಯಾನ್ , ಸಮಿತಿ ಸದಸ್ಯರಾದ ಮಚೇಂದ್ರ ಸಾಲಿಯಾನ್, ಸುರೇಶ ಕುಲಾಲ್, ರಮೇಶ್ ಸಾಲಿಯಾನ್ ಸಂಚಯಗಿರಿ, ನಾರಾಯಣ ಸಿ.ಪೆರ್ನೆ, ಆಶಾ , ಜಲಜಾಕ್ಷಿ ಕುಲಾಲ್ ಹಾಗೂ ಜಿಲ್ಲೆಯ ಪ್ರಮುಖ ಕುಲಾಲ ಸಂಘದ ಅಧ್ಯಕ್ಷರುಗಳು, ಸಮುದಾಯದ ಪ್ರಮುಖರು ಉಪಸ್ಥಿತರಿದ್ದರು
![](https://aksharanews.in/wp-content/uploads/2024/01/aksharanews-ad.jpg)