![](https://aksharanews.in/wp-content/uploads/2024/01/69274C90-21B7-4602-A390-14D2D87C30DB.jpeg)
ಬಂಟ್ವಾಳ: ಸ್ವಚ್ಚತೆ ಹಾಗೂ ತ್ಯಾಜ್ಯ ವಿಲೇವಾರಿಯ ಬಗ್ಗೆ ಅರಿವು ಮೂಡಿಸುವ ಕಸ ಪ್ರಸಂಗ ವಿಶೇಷ ಜಾಗೃತಿ ಕಾರ್ಯಕ್ರಮ ಮಂಗಳವಾರ ಬಂಟ್ವಾಳ ಪುರಸಭೆಯ ಸಭಾಂಗಣದಲ್ಲಿ ನಡೆಯಿತು.
![](https://aksharanews.in/wp-content/uploads/2023/04/WhatsApp-Image-2023-02-08-at-9.24.55-AM-1024x362-1.jpeg)
![](https://aksharanews.in/wp-content/uploads/2024/01/A8A21394-56CD-4560-BACE-BF7916AB18C6-1024x461.jpeg)
ಹಸಿರುದಳ ಸಂಯೋಜಕ ನಾಗರಾಜ್ ಬಜಾಲ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಪೌರಕಾರ್ಮಿಕರಿಗೆ ತ್ಯಾಜ್ಯ ವಿಲೇವಾರಿಯ ಬಗ್ಗೆ ಅರಿವು ಹಾಗೂ ಅವರ ಜವಾಬ್ದಾರಿಯ ಬಗ್ಗೆ ತಿಳಿಸಿಕೊಟ್ಟರು. ಮುಖ್ಯಾಧಿಕಾರಿ ಲೀನಾ ಬ್ರಿಟ್ಟೋ ಅಧ್ಯಕ್ಷತೆ ವಹಿಸಿದ್ದರು. ಪತ್ರಕರ್ತ ಸಂದೀಪ್ ಸಾಲ್ಯಾನ್ ಪ್ರಾಸ್ತಾವಿಕವಾಗಿ ಮಾತನಾಡಿದರು.
![](https://aksharanews.in/wp-content/uploads/2023/02/F4D88BC3-69F8-4A07-A227-5EEB8E2DD1DE-1024x1024.jpeg)
ಆರೋಗ್ಯ ನಿರೀಕ್ಷಕ ರತ್ನಪ್ರಸಾದ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಕಿರಿಯ ಎಂಜಿನಿಯರ್ ಡೊಮೆನಿಕ್ ಡಿಮೆಲ್ಲೋ, ಸಮುದಾಯ ಸಂಘಟಕಿ ಉಮಾವತಿ, ಪುರಸಭೆಯ ಸಿಬ್ಬಂದಿಗಳು, ಪೌರಕಾರ್ಮಿಕರು ಉಪಸ್ಥಿತರಿದ್ದರು.
![](https://aksharanews.in/wp-content/uploads/2024/01/531D034B-C9B9-48F7-B0B2-A3E606E5F6B3-1024x460.jpeg)
![](https://aksharanews.in/wp-content/uploads/2024/01/13C5A146-A9CA-4418-A824-47D1A7FF74F0-1024x461.jpeg)
![](https://aksharanews.in/wp-content/uploads/2024/01/aksharanews-ad.jpg)