ಬಂಟ್ವಾಳ: ಬೆಂಕಿ ಅವಘಡಕ್ಕೆ ಸಿಕ್ಕಿ ದಂಪತಿ ಸುಟ್ಟು ಮೃತಪಟ್ಟ ಘಟನೆ ಬಂಟ್ವಾಳದ ಅಮ್ಟಾಡಿ ಗ್ರಾ.ಪಂ. ವ್ಯಾಪ್ತಿಯ ತುಂಡು ಪದವು ಎಂಬಲ್ಲಿ ನಡೆದಿದೆ.
![](https://aksharanews.in/wp-content/uploads/2023/05/akshara-longad.jpg)
![](https://aksharanews.in/wp-content/uploads/2024/01/19B7B632-C50B-4272-B85C-EA7F8E88FB94-1024x462.jpeg)
ಇಲ್ಲಿನ ನಿವಾಸಿ ಗಿಲ್ಬರ್ಟ್ ಕಾರ್ಲೋ ( 78) ಹಾಗೂ ಕ್ರಿಸ್ಟಿನಾ ಕಾರ್ಲೋ ಕಾರ್ಲೊ ( 70) ಮೃತಪಟ್ಟ ದುರ್ದೈವಿಗಳು.
ಮನೆಯ ಪಕ್ಕ ಕಸ ಕಡ್ಡಿಗೆ ಹಾಕಿದ ಬೆಂಕಿ ವ್ಯಾಪಿಸಿ ಮನೆಯ ಸಮೀಪದ ಕಾಡನ್ನು ಆವರಿಸಿದ ವೇಳೆ ಅದನ್ನು ನಂದಿಸಲು ತೆರಳಿದ ವೃದ್ದ ದಂಪತಿಗಳು ಬೆಂಕಿಗೆ ಸಿಕ್ಕಿ ಸುಟ್ಟು ಹೋಗಿದ್ದಾರೆ.
![](https://aksharanews.in/wp-content/uploads/2024/01/E9DF52C9-A699-4382-8E1C-B5DD738A1977-1024x461.jpeg)
ಮೃತರಿಗೆ 3 ಮಕ್ಕಳಿದ್ದು ಇಬ್ಬರು ವಿದೇಶದಲ್ಲಿ ಇನ್ನೊಬ್ಬಕೆ ಮಂಗಳೂರಿನಲ್ಲಿ ನೆಲೆಸಿದ್ದು ಮನೆಯಲ್ಲಿ ಇಬ್ಬರು ದಂಪತಿಗಳು ಮಾತ್ರ ವಾಸವಿದ್ದರು ಎಂದು ತಿಳಿದು ಬಂದಿದೆ. ಭಾನುವಾರ ಮಧ್ಯಾಹ್ದದ ವೇಳೆಗೆ ಘಟನೆ ನಡೆದಿದೆ.
![](https://aksharanews.in/wp-content/uploads/2023/02/F4D88BC3-69F8-4A07-A227-5EEB8E2DD1DE-1024x1024.jpeg)
![](https://aksharanews.in/wp-content/uploads/2024/01/aksharanews-ad.jpg)