![](https://aksharanews.in/wp-content/uploads/2024/03/BDE66B5E-8A5B-4AF9-88D7-EAC43442756F-1024x683.jpeg)
ಬಂಟ್ವಾಳ: ಬಿಜೆಪಿ ಮಂಗಳೂರು ಮಂಡಲ ವ್ಯಾಪ್ತಿಗೊಳಪಟ್ಟ ಪುದು ಮಹಾಶಕ್ತಿ ಕೇಂದ್ರದ ಚುನಾವಣ ಕಾರ್ಯಲಯದ ಉದ್ಘಾಟನ ಸಮಾರಂಭ ಹಾಗೂ ಕಾರ್ಯಕರ್ತರ ಸಂಪರ್ಕ ಸಭೆ ಶುಕ್ರವಾರ ಸಂಜೆ ಕಡೆಗೋಳಿಯಲ್ಲಿ ನಡೆಯಿತು.
![](https://aksharanews.in/wp-content/uploads/2023/04/WhatsApp-Image-2023-02-08-at-9.24.55-AM-1024x362-1.jpeg)
![](https://aksharanews.in/wp-content/uploads/2024/03/650EA9C2-9471-42FF-BE16-290E144B8F14-1024x683.jpeg)
![](https://aksharanews.in/wp-content/uploads/2023/02/F4D88BC3-69F8-4A07-A227-5EEB8E2DD1DE-1024x1024.jpeg)
ಕಡೆಗೋಳಿಯ ಕಾಂಪ್ಲೆಕ್ಸ್ನಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸಂತೀಶ್ ಕುಂಪಲ ಅವರು ದೀಪ ಪ್ರಜ್ವಲಿಸಿ ಚುನಾವಣಾ ಕಚೇರಿಯನ್ನು ಉದ್ಘಾಟಿಸಿದರು. ಬಳಿಕ ನಡೆದ ಕಾರ್ಯಕರ್ತರ ಸಂಪರ್ಕ ಸಭೆಯಲ್ಲಿ ಮಾತನಾಡಿ ಮಂಗಳೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿಯ ಅಭ್ಯರ್ಥಿಯನ್ನು ಗೆಲ್ಲಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲೆ ಇದೆ. ಕಾರ್ಯಕರ್ತರ ಉತ್ಸಾಹ ನೋಡಿದಾಗ ಗೆಲುವು ನಿಶ್ಚಿತವಾಗಿದೆ, ಕನಿಷ್ಠ ೪ ಲಕ್ಷ ಮತದ ಅಂತರದಲ್ಲಿ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸಿ ಪ್ರಧಾನಿ ನರೇಂದ್ರ ಮೋದಿಯ ಕೈ ಬಲಪಡಿಸೋಣ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.
ಮಂಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಜೇಶ್ ಚೌಟ ಭಾಗವಹಿಸಿ ಮಾತನಾಡಿ ಈ ಬಾರಿಯ ಚುನಾವಣೆ ವಿಶೇಷವಾಗಿದ್ದು ನಿರ್ಣಾಯಕ ಚುನಾವಣೆಯಗಲಿದೆ, ತುಳುನಾಡಿನಲ್ಲಿ ಹುಟ್ಟಿರುವುದು ನಮ್ಮ ಸೌಭಾಗ್ಯ. ಗಟ್ಟಿಯಾದ ಕೌಟುಂಬಿಕ ವ್ಯವಸ್ಥೆ ಇದ್ದರೆ ಅದು ತುಳುನಾಡಿನಲ್ಲಿ. ತುಳುನಾಡನ್ನು ಪ್ರತಿನಿಧಿಸುವ ಜವಾಬ್ದಾರಿ ನನಗೆ ಸಿಕ್ಕಿದ್ದು, ಎಲ್ಲರನ್ನೂ ಜೊತೆ ಸೇರಿಸಿಕೊಂಡು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ಮತದಾರರ ಅಪೇಕ್ಷೆ , ಆಕಾಂಕ್ಷೆಗೆ ಬದ್ದವಾಗಿ ಕೆಲಸ ಮಾಡುತ್ತೇನೆ, ಹಿಂದುತ್ವ ನನ್ನ ಬದ್ಧತೆ, ಅಭಿವೃದ್ಧಿ ನನ್ನ ಆದ್ಯತೆ ಎಂದು ತಿಳಿಸಿದರು.
![](https://aksharanews.in/wp-content/uploads/2024/03/A18BE3EC-4FC3-4404-BB0B-A2AC2634105C-1024x683.jpeg)
ಬಿಜೆಪಿ ಮಂಗಳೂರು ಮಂಡಲದ ಅಧ್ಯಕ್ಷ ಜಗದೀಶ್ ಆಳ್ವ ಅಧ್ಯಕ್ಷತೆ ವಹಿಸಿದ್ದರು. ಪುದು ಮಹಾಶಕ್ತಿ ಕೇಂದ್ರದ ಚುನಾವಣಾ ಪ್ರಭಾರಿ ಸಂತೋಷ್ ಕುಮಾರ್ ರೈ ಬೋಳಿಯಾರ್, ಪುದು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಜಗನ್ನಾಥ ಸಾಲ್ಯಾನ್, ಪಕ್ಷದ ಪ್ರಮುಖರಾದ ರವೀಂದ್ರ ಶೆಟ್ಟಿ ಉಳಿದೊಟ್ಟು, ರಾಧಕೃಷ್ಣ ರೈ ಬೂಡಿಯಾರು, ದಿನೇಶ್ ಅಮ್ಟೂರು, ಗಣೇಶ್ ಸುವರ್ಣ ತುಂಬೆ, ಮೋಹನ್ ರಾಜ್, ಸುಜಿತ್, ಯಶವಂತ ಅಮೀನ್, ದಯಾನಂದ ತೊಕ್ಕೊಟ್ಟು,
ಚಂದ್ರಹಾಸ ಪಂಡಿತ್ ಹೌಸ್, ದೇವಸ್ಯ ಪ್ರಕಾಶ್ಚಂದ್ರ ರೈ, ಜಯಶ್ರೀ ಕರ್ಕೆರ ವೇದಿಕೆಯಲ್ಲಿ ಉಪಸ್ಥಿತರಿದ್ದರು.
![](https://aksharanews.in/wp-content/uploads/2024/03/F8E4ED99-9172-4103-BCA4-8AB7051EC978-1024x683.jpeg)
![](https://aksharanews.in/wp-content/uploads/2024/03/3335222C-E93D-412B-8036-23A3CADD5A3D-1024x683.jpeg)
ಬಿಜೆಪಿ ಮಂಗಳೂರು ಮಂಡಲದ ಉಪಧ್ಯಕ್ಷ ಮನೋಜ್ ಅಚಾರ್ಯ ನಾಣ್ಯ ಸ್ವಾಗತಿಸಿದರು, ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಸುಕೇಶ್ ಶೆಟ್ಟಿ ತೇವು ವಂದಿಸಿದರು. ಪ್ರವೀಣ್ ಶೆಟ್ಟಿ ಸುಜೀರು ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಪೂರ್ವಭಾವಿಯಾಗಿ ಕಡೆಗೋಳಿ ಶ್ರೀ ಕೊರಗಜ್ಜ ಕ್ಷೇತ್ರದಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.
![](https://aksharanews.in/wp-content/uploads/2024/01/aksharanews-ad.jpg)