ಬಂಟ್ವಾಳ: ಬಂಟ್ವಾಳದಲ್ಲಿ ಸ್ವಂತ ಕಟ್ಟಡದಲ್ಲಿ ಕೇಂದ್ರ ಕಛೇರಿ ಹೊಂದಿರುವ ಸಮಾಜ ಸೇವಾ ಸಹಕಾರಿ ಸಂಘವು 2023-24ನೇ ಸಾಲಿನಲ್ಲಿ ರೂ. 982.54 ಕೋಟಿ ವ್ಯವಹಾರ ನಡೆಸಿದ್ದು ಸುಮಾರು ರೂ. 5.71ಕೋಟಿ (ತಾತ್ಕಲಿಕ) ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಸುರೇಶ್ಕುಲಾಲ್ ತಿಳಿಸಿದ್ದಾರೆ.
ಅವರು ಪತ್ರಿಕಾ ಪ್ರಕಟಣೆಯಲ್ಲಿ ಈ ಮಾಹಿತಿ ನೀಡಿದ್ದು ಸ್ವಾತಂತ್ರ್ಯ ಹೋರಾಟಗಾರ ಸಮಾಜರತ್ನ ದಿ| ಡಾ| ಅಮ್ಮೆಂಬಳ ಬಾಳಪ್ಪರವರ ನೇತೃತ್ವದಲ್ಲಿ ಹಾಗೂ ಸಹಕಾರಿ ಧುರಿಣ ಬಿ. ಹೂವಯ್ಯ ಮೂಲ್ಯರವರ ಸಾರಥ್ಯದಲ್ಲಿ ಕೇವಲ 131 ಸದಸ್ಯರನ್ನೊಳಗೊಂಡು ರೂ. 22620 ಪಾಲು ಬಂಡವಾಳದೊಂದಿಗೆ ಸ್ಥಾಪಿಸಲ್ಪಟ್ಟ ಸಮಾಜ ಸೇವಾ ಸಹಕಾರಿ ಸಂಘವು ಪ್ರಸ್ತುತ16 ಶಾಖೆಗಳನ್ನು ಹೊಂದಿದ್ದು ದಕ್ಷಿಣಕನ್ನಡ ಮತ್ತುಉಡುಪಿ ಜಿಲ್ಲೆಕಾರ್ಯ ವ್ಯಾಪ್ತಿಯನ್ನು ಹೊಂದಿದೆ. ಸಂಘದ ಪುಂಜಾಲಕಟ್ಟೆ, ಮುಡಿಪು ಮತ್ತು ಉಪ್ಪಿನಂಗಡಿ ಶಾಖೆಯು ಸ್ವಂತ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದೆ ಎಂದು ತಿಳಿಸಿದ್ದಾರೆ.
ಆರ್ಥಿಕ ವರ್ಷ2023-24 ಅಂತ್ಯಕ್ಕೆ ಸಂಘದಲ್ಲಿ 8660 ಎ ತರಗತಿ, 5097ಬಿ ತರಗತಿ ಸದಸ್ಯರಿದ್ದು ರೂ. 7.87ಕೋಟಿ ಪಾಲು ಬಂಡವಾಳ ಹೊಂದಿರುತ್ತದೆ. 15.68ಕೋಟಿರೂ. ನಿಧಿಗಳು, 59.77 ಕೋಟಿ ರೂ. ವಿನಿಯೋಗಗಳು, 214.26ಕೋಟಿ ರೂ.ಠೇವಣಾತಿಗಳು ಇದ್ದು191.61 ಕೋಟಿ ರೂ. ಹೊರ ಬಾಕಿ ಸಾಲಗಳುಇರುತ್ತದೆ. ಸಂಘದ ದುಡಿಯುವ ಬಂಡವಾಳ ರೂ. ೨೩೯.೯೦ಕೋಟಿ ಆಗಿರುತ್ತದೆ. ಆಡಿಟ್ ವರ್ಗೀಕರಣದಲ್ಲಿ ಸತತವಾಗಿ ಎ ತರಗತಿ ಹೊಂದಿರುವ ಸಂಘವು ಸದಸ್ಯರ ಅನುಕೂಲಕ್ಕಾಗಿ ಬಂಟ್ವಾಳ ಬೈಪಾಸ್ ಶಾಖೆಯಲ್ಲಿ ಇ-ಸ್ಟ್ಯಾಂಪ್ ಸೌಲಭ್ಯವನ್ನು, ಕೆಲವು ಶಾಖೆಗಳಲ್ಲಿ ಸೇಪ್ ಲಾಕರ್ ಸೌಲಭ್ಯವನ್ನು, ಮಣಿಪಾಲ ಆರೋಗ್ಯಕಾರ್ಡ್ ಸೌಲಭ್ಯ, ಸದಸ್ಯರ ಮಕ್ಕಳಿಗೆ ಉನ್ನತ ವ್ಯಾಸಂಗಕ್ಕಾಗಿ ವಿದ್ಯಾರ್ಥಿ ವೇತನವನ್ನು, ಯಶಸ್ವಿನಿ ಆರೋಗ್ಯ ರಕ್ಷಣಾ ಸೌಲಭ್ಯ, ಸದಸ್ಯರ ಗಂಭೀರವಾದ ಕಾಯಿಲೆಗೆ ಆರ್ಥಿಕ ಸಹಾಯಧನ ಹೀಗೆ ಹಲವಾರು ಸೌಲಭ್ಯಗಳನ್ನು ಸದಸ್ಯರಿಗೆ ನೀಡುತ್ತ ಬಂದಿದೆ. ೨೦೨೨-೨೩ ನೇ ಸಾಲಿನಲ್ಲಿ ವ್ಯವಹಾರದಲ್ಲಿ ಸರ್ವತೋಮುಖ ಪ್ರಗತಿ ಸಾಧಿಸಿ ಹಾಗೂ ಬ್ಯಾಂಕಿನೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಕ್ಕೆ ದಕ್ಷಿಣಕನ್ನಡ ಜಿಲ್ಲಾಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತ ಮಂಗಳೂರು ಇವರಿಂದ ಸಾಧನಾ ಪ್ರಶಸ್ತಿ ಪಡೆದುಕೊಂಡಿರುತ್ತದೆ.
೨೦೨೩-೨೪ ನೇ ಸಾಲಿನಲ್ಲಿಅತ್ಯುತ್ತಮ ಸಾಧನೆಯನ್ನು ಮಾಡಲು ಸಹಕರಿಸಿದ ಸರ್ವ ಸದಸ್ಯಗ್ರಾಹಕ ಬಂಧುಗಳಿಗೆ ತುಂಬು ಹೃದಯದ ವಂದನೆಗಳನ್ನು ಸಲ್ಲಿಸುತ್ತಾಇನ್ನು ಮುಂದೆಯೂeಮ್ಮ ಸಹಕಾರವುಇದೆರೀತಿಇರಲಿ ಎಂದು ಸಂಘದ ಅಧ್ಯಕ್ಷ ಸುರೇಶ್ಕುಲಾಲ್ ಮನವಿ ಮಾಡಿದ್ದಾರೆ.