ಬಂಟ್ವಾಳ: ಜನಪ್ರತಿನಿಧಿಗಳು ಮೂಲಭೂತ ಸೌಲಭ್ಯವನ್ನು ಒದಗಿಸದೇ ಇರುವುದರಿಂದ ಆಕ್ರೋಶಗೊಂಡಿರುವ ಬಂಟ್ವಾಳ ಪುರಸಭಾ ವ್ಯಾಪ್ತಿಯ ಬೋಳಂಗಡಿ ಗ್ರಾಮಸ್ಥರು ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಘೋಷಿಸಿದ್ದಾರೆ.
Advertisement
ಮೆಲ್ಕಾರ್ ಎಂ.ಎಚ್. ಮಿಲ್ ಬಳಿಯ ಅಶ್ವಸ್ಥ ಕಟ್ಟೆಯಿಂದ ಬೋಳಂಗಡಿ ಬಸ್ತುಕೋಡಿ ವರೆಗೆ ರಸ್ತೆಯು ತೀರ ಹದಗೆಟ್ಟಿದೆ. ನೀರಿನ ಅವ್ಯವಸ್ಥೆಯಿಂದ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಈ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಬಂಟ್ವಾಳ ಪುರಸಭೆಯಾಗಲಿ, ಸಂಬಂಧಪಟ್ಟ ಜನಪ್ರತಿನಿಧಿಗಳಾಗಲಿ ಯಾವುದೇ ಕ್ರಮ ಕೈಗೊಳ್ಳದೇ ಇರುವುದರಿಂದ ಗ್ರಾಮಸ್ಥರು ರೋಸಿ ಹೋಗಿ ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ತಿಳಿಸಿದ್ದಾರೆ.
Advertisement