ಬಂಟ್ವಾಳ: ಸಜೀಪಮೂಡ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಉಪಪ್ರಾಂಶುಪಾಲೆಯಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಶಿಕ್ಷಕಿ ಜಯಲಕ್ಷ್ಮೀ ಪಿ.ಎನ್.ಅವರಿಗೆ ಅವರ ವೃತ್ತಿ ಜೀವನದ ಸಾಧನೆಯನ್ನು ಪರಿಗಣಿಸಿ ಜೆಸಿಐ ಬಂಟ್ವಾಳದ ವತಿಯಿಂದ ಸೆಲ್ಯೂಟ್ ಟೂ ಸೈಲೆಂಟ್ ವರ್ಕರ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.
Advertisement
ಈ ಸಂದರ್ಭ ಜೆಸಿಐ ಬಂಟ್ವಾಳದ ಅಧ್ಯಕ್ಷೆ ರಶ್ಮಿ ಶೆಟ್ಟಿ, ನಿಕಟಪೂರ್ವಾಧ್ಯಕ್ಷ ರಾಜೇಂದ್ರ ಕೆ. ಪೂರ್ವಾಧ್ಯಕ್ಷರು ಹಾಗೂ ಜೆಸಿಐ ಬಂಟ್ವಾಳದ ಸದಸ್ಯರು ಭಾಗವಹಿಸಿದ್ದರು
Advertisement