![](https://aksharanews.in/wp-content/uploads/2024/05/E8130F80-3EF1-4125-9DD2-C44AD96EAC7C-768x1024.jpeg)
ಬಂಟ್ವಾಳ: ಸೀನಿಯರ್ ಚೇಂಬರ್ ಇಂಟರ್ ನ್ಯಾಶನಲ್ ಬಂಟ್ವಾಳ ನೇತ್ರಾವತಿ ಸಂಗಮದ ಅಧ್ಯಕ್ಷರಾಗಿ ಹಿರಿಯ ಜೇಸಿ , ಕೃಷಿಕ ಆದಿರಾಜ ಜೈನ್ ಕೆ. ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಉದ್ಯಮಿ, ಸಾಮಾಜಿಕ ಕಾರ್ಯಕರ್ತ ತಾರಾನಾಥ ಕೊಟ್ಟಾರಿ ಫರಂಗಿಪೇಟೆ, ಕೋಶಾಧಿಕಾರಿಯಾಗಿ ಇಂಜಿನಿಯರ್ ನಾಗೇಶ್ ಕುಲಾಲ್ ಆಯ್ಕೆಯಾಗಿದ್ದಾರೆ ಎಂದು ಲೀಜನ್ ಸ್ಥಾಪಕ ಅಧ್ಯಕ್ಷ ಜಯಾನಂದ ಪೆರಾಜೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
![](https://aksharanews.in/wp-content/uploads/2023/05/ak-1.jpg)
![](https://aksharanews.in/wp-content/uploads/2024/05/ECD13082-82D3-4029-9596-22FE57D44064.jpeg)
ನಿಕಟಪೂರ್ವ ಅಧ್ಯಕ್ಷ ಡಾ. ಆನಂದ ಬಂಜನ್, ತರಬೇತಿ ವಿಭಾಗದ ಉಪಾಧ್ಯಕ್ಷರಾಗಿ ನ್ಯಾಯವಾದಿ ಶೈಲಜಾ ರಾಜೇಶ್, ಆಡಳಿತ ವಿಭಾಗದ ಉಪಾಧ್ಯಕ್ಷರಾಗಿ ನ್ಯಾಯವಾದಿ ರವೀಂದ್ ಕುಕ್ಕಾಜೆ, ಸಾರ್ವಜನಿಕ ಸಂಪರ್ಕ ಉಪಾಧ್ಯಕ್ಷರಾಗಿ ಸತ್ಯನಾರಾಯಣ ರಾವ್ ಕೈಕುಂಜೆ , ಕಾರ್ಯದರ್ಶಿಯಾಗಿ ತಾರನಾಥ ಕೊಟ್ಟಾರಿ, ಜತೆಕಾರ್ಯದರ್ಶಿಯಾಗಿ ಪಿ.ಮಹಮ್ಮದ್ , ನಿರ್ದೇಶಕರಾಗಿ ಜಯಾನಂದ ಪೆರಾಜೆ , ರಾಮಚಂದ್ರ ರಾವ್ ಆಯ್ಕೆಯಾಗಿರುತ್ತಾರೆ. ಹದಿನೈದು ಮಂದಿ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ನೇಮಕವಾಗಿದ್ದಾರೆ.
ಮೇ 12 ರಂದು ಬಿ.ಸಿ.ರೋಡಿನ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾ ಭವನದಲ್ಲಿ ಪದಗ್ರಹಣ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾರತೀಯ ಜೈನ್ ಮಿಲನ್ನ ವಲಯ ಉಪಾಧ್ಯಕ್ಷ ಸುದರ್ಶನ್ ಜೈನ್ , ಗೌರವ ಅತಿಥಿಯಾಗಿ ಸೀನಿಯರ್ ಚೇಂಬರ್ ಇಂಟರ್ ನ್ಯಾಶನಲ್ನ ಮಾಜಿ ರಾಷ್ಟ್ರೀಯ ಅಧ್ಯಕ್ಷ ಡಾ. ಕೆ ಅರವಿಂದ ರಾವ್ , ಪದಗ್ರಹಣ ಅಧಿಕಾರಿಯಾಗಿ ರಾಷ್ಟ್ರೀಯ ಉಪಾಧ್ಯಕ್ಷ ಕಿಶೋರ್ ಫೆರ್ನಾಂಡಿಸ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
![](https://aksharanews.in/wp-content/uploads/2024/01/aksharanews-ad.jpg)