![](https://aksharanews.in/wp-content/uploads/2024/05/D4208773-D842-4FAE-A0AE-42DDC2BF714A-1024x484.jpeg)
ಬಂಟ್ವಾಳ: ನಾಗರಿಕ ಕ್ರಿಯಾ ಸಮಿತಿ ಸಂಚಯಗಿರಿ ಬಿ.ಸಿ.ರೋಡು ಇದರ ಆಶ್ರಯದಲ್ಲಿ ಟೈನಿ ಟ್ಯಾಲೆಂಟ್ ೨೦೨೪ ಪ್ರತಿಭಾನ್ವೇಷಣೆ ಕಾರ್ಯಕ್ರಮ ಸಂಚಯಗಿರಿಯ ಡಾ. ಎನ್. ನರಸಿಂಹ ಹೊಳ್ಳ ಕಲಾವೇದಿಕೆಯಲ್ಲಿ ನಡೆಯಿತು.
![](https://aksharanews.in/wp-content/uploads/2023/05/ak-1.jpg)
![](https://aksharanews.in/wp-content/uploads/2023/02/F4D88BC3-69F8-4A07-A227-5EEB8E2DD1DE-1024x1024.jpeg)
ಬಿಎಎಸ್ಎನ್ಎಲ್ ನಿವೃತ್ತ ಅಧಿಕಾರಿ ವಿಠಲ ಭಂಡಾರಿ ಕಾರ್ಯಕ್ರಮ ಉದ್ಘಾಟಿಸಿದರು. ಅವರು ಮಾತನಾಡಿ ಪುಟ್ಟ ಪ್ರತಿಭೆ ಕಾರ್ಯಕ್ರಮ ಪ್ರತಿಭಾನ್ವೇಷಣೆಯ ಮೊದಲ ಮೆಟ್ಟಿಲು, ಸಣ್ಣ ಮಕ್ಕಳು ಇಂತಹ ಅವಕಾಶವನ್ನು ಉಪಯೋಗಿಸಿಕೊಳ್ಳುವಂತೆ ಅವರು ಸಲಹೆ ನೀಡಿದರು.ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ಮಕ್ಕಳಿಗೆ ಪ್ರೋತ್ಸಾಹ ಸಿಗುತ್ತದೆ. ಅವರಲ್ಲಿ ಇನ್ನಷ್ಟು ಜೀವನೋತ್ಸಾಹ ಬರುತ್ತದೆ. ಎಂದರು.
ಸಂಚಯಗಿರಿ ನಾಗರಿಕ ಕ್ರಿಯಾ ಸಮಿತಿಯ ಅಧ್ಯಕ್ಷ ಸುರೇಶ್ ಬಂಗೇರ ಅಧ್ಯಕ್ಷತೆ ವಹಿಸಿದ್ದರು. ಅವರು ಮಾತನಾಡಿ ನಮ್ಮ ಪರಿಸರದ ಮಕ್ಕಳಿಗೆ ವೇದಿಕೆಯಲ್ಲಿ ಭಾಗವಹಿಸುವ ಅವಕಾಶ ಕಲ್ಪಿಸಿ ಅವರಲ್ಲಿರುವ ಪ್ರತಿಭೆಯನ್ನು ಹೊರ ತೆಗೆಯುವ ಹಾಗೂ ಸಭಾಕಂಪನವನ್ನು ನಿವಾರಿಸುವ ಸಲುವಾಗಿ ಈ ಕಾರ್ಯಕ್ರಮ ಪ್ರತಿ ವರ್ಷ ಹಮ್ಮಿಕೊಳ್ಳಲಾಗುತ್ತಿದೆ ಎಂದರು.
![](https://aksharanews.in/wp-content/uploads/2024/05/1BD7BCD7-4A36-4B78-898D-F63ADCDBBE0C-1024x484.jpeg)
ಗೌರವಾಧ್ಯಕ್ಷ ನರಸಿಂಹ ರಾಜ ಹೊಳ್ಳ ಉಪಾಧ್ಯಕ್ಷೆ ಪ್ರಿಯಲತಾ, ಕೋಶಾಧಿಕಾರಿ ದಾಮೋದರ ಸಂಚಯಗಿರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶೇಖರ್ ಎಂ. ಸಂಚಯಗಿರಿ ಸ್ವಾಗತಿಸಿದರು, ಸುಧಾಕರ ಸಾಲ್ಯಾನ್ ಪ್ರಾಸ್ತವಿಕವಾಗಿ ಮಾತನಾಡಿದರು, ಸತೀಶ್ ಬಂಗೇರ ಕಾರ್ಯಕ್ರಮ ನಿರೂಪಿಸಿದರು.
ಉದ್ಘಾಟನಾ ಕಾರ್ಯಕ್ರಮದ ಬಳಿಕ ಮಕ್ಕಳಿಗೆ ಚಿತ್ರಕಲೆ, ಬೆಂಕಿರಹಿತ ಅಡುಗೆ, ಸಂಗೀತ, ಆಶುಭಾಷಣ ಸ್ಪರ್ಧೆ ನಡೆಯಿತು. ಸಮಾರೋಪ ಕಾರ್ಯಕ್ರಮದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
![](https://aksharanews.in/wp-content/uploads/2024/01/aksharanews-ad.jpg)