![](https://aksharanews.in/wp-content/uploads/2024/06/AC63D17C-FEFE-4E57-B07B-A4B5DD981F14-1024x581.jpeg)
ಬಂಟ್ವಾಳ: ಪರಿಸರವು ಮನುಷ್ಯನ ಜೀವನದ ಮೇಲೆ ಪ್ರಭಾವ ಬೀರುವ ಹಾಗೂ ಆತನ ನಡವಳಿಕೆಯನ್ನು ಬಿಂಬಿಸುವ ಕೈಕನ್ನಡಿಯಂತೆ ವರ್ತಿಸುತ್ತದೆ. ಎಲ್ಲಿಯವರೆಗೆ ಮನುಷ್ಯನು ಪರಿಸರಕ್ಕೆ ಸ್ನೇಹಿತನಾಗಿರುವನೋ ಅಲ್ಲಿಯವರೆಗೆ ಪರಿಸರವು ಆತನಿಗೆ ಸ್ನೇಹಿತನಾಗಿರುತ್ತದೆ. ಆದರೆ ಮಾನವನು ತನ್ನ ಜೀವನಶೈಲಿಯನ್ನು ಬದಲಾವಣೆ ಮಾಡಿದಾಗ, ಪರಿಸರಕ್ಕೆ ವಿರುದ್ಧವಾಗಿ ಕೆಲಸ ಮಾಡಿದಾಗ ಪರಿಸರವು ಆತನ ವಿರುದ್ಧವೇ ತಿರುಗಿ ಬೀಳುತ್ತದೆ ಆಗ ವಿಕೋಪಗಳು ಸಂಭವಿಸುತ್ತವೆ ಮತ್ತು ಮನುಷ್ಯನಿಗೆ ನಷ್ಟಗಳು ಉಂಟಾಗುತ್ತವೆ. ಆದ್ದರಿಂದ ನಾವು ಪರಿಸರವನ್ನು ಪ್ರೀತಿಸಬೇಕು, ಕಾಡು ಮಾನವ ಸಂಪನ್ಮೂಲವಾಗಿ ಉತ್ತಮವಾಗಿ ಬೆಳೆದಾಗ ಮಾತ್ರ ನಮ್ಮ ಭೂಮಿಯು ಸುಂದರವಾಗಲು ಸಾಧ್ಯ ಎಂದು ಬಂಟ್ವಾಳ ಉಪವಲಯ ಅರಣ್ಯಾಧಿಕಾರಿ ರವಿರಾಜ್ ಅಭಿಪ್ರಾಯ ಪಟ್ಟರು. ಅವರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಬ ಇಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಲ್ಲಡ್ಕ ಇದರ ಸಹಯೋಗದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
![](https://aksharanews.in/wp-content/uploads/2023/05/akshara-longad.jpg)
![](https://aksharanews.in/wp-content/uploads/2024/06/4F2E3672-472D-418D-8DAF-9FF9CB2F1728-1024x542.jpeg)
ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ರವರು ಶಾಲಾ ಆವರಣದಲ್ಲಿ ಹಣ್ಣಿನ ಗಿಡವನ್ನು ನೆಟ್ಟು ಪರಿಸರ ದಿನಾಚರಣೆಗೆ ಚಾಲನೆಯನ್ನು ನೀಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿ ಮಾತನಾಡಿ ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವವಾದದ್ದು. ನಿತ್ಯ ಜೀವನದಲ್ಲಿ ಪರಿಸರವನ್ನು ಪ್ರೀತಿಸಿ, ಪೋಷಿಸುವ ಕೆಲಸ ಆಗಬೇಕು ಎಂದರು.
ಸಭಾ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಆಗಮಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ತಾಲೂಕು ಯೋಜನಾಧಿಕಾರಿ ರಮೇಶ್ ಮಾತನಾಡಿ ಪರಿಸರವು ಎಲ್ಲಾ ಜೀವಿಗಳಿಗೂ ಆಶ್ರಯ ತಾಣ. ಅದು ಯಾರಿಗೂ ಹಾನಿಯನ್ನು ಉಂಟುಮಾಡುವುದಿಲ್ಲ, ನನ್ನ ಮನೆಯ ಸುತ್ತಮುತ್ತಲು ಸ್ವಚ್ಛವಾಗಿರುವಂತೆ ತನ್ನ ಪರಿಸರವನ್ನು ಕೂಡ ಸ್ವಚ್ಛತೆಯನ್ನು ಕಾಪಾಡಿ ಪ್ರೀತಿಸಿದಾಗ ಪರಿಸರವು ಆತನಿಗೆ ಒಳ್ಳೆಯ ಮಿತ್ರನಂತೆ ಇರುತ್ತದೆ ಎಂದರು.
![](https://aksharanews.in/wp-content/uploads/2023/02/F4D88BC3-69F8-4A07-A227-5EEB8E2DD1DE-1024x1024.jpeg)
![](https://aksharanews.in/wp-content/uploads/2024/06/F39DBECE-1772-4AE1-8072-51C7960BF5F8-1024x630.jpeg)
ಪತ್ರಕರ್ತ ಸಂದೀಪ್ ಸಾಲ್ಯಾನ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ತ್ಯಾಜ್ಯ ನಿರ್ವಹಣೆಯ ಬಗ್ಗೆ ಮಾಹಿತಿ ನೀಡಿದರು.
ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಕೊರಗಪ್ಪ ನಾಯ್ಕ್ ಅಧ್ಯಕ್ಷತೆ ವಹಿಸಿದ್ದರು. ೨೦೨೨ -೨೩ನೇ ಸಾಲಿನಲ್ಲಿ ಶಾಲೆಯಲ್ಲಿ ನಡೆದ ಮನೆಗೊಂದು ಗಿಡ ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆಯಿಂದ ಶಾಲಾ ಪ್ರತಿ ಮಗುವಿಗೆ ನೀಡಿದ ಗಿಡಗಳನ್ನು ಬೆಳೆಸಿ ಪೋಷಿಸಿದ ವಿದ್ಯಾಥಿಗಳಿಗೆ ಬಹುಮಾನ ನೀಡಿ ಅಭಿನಂದಿಸಲಾಯಿತು.
![](https://aksharanews.in/wp-content/uploads/2024/06/1814F647-F906-455E-AE97-DED67A3A4E3A-1024x574.jpeg)
ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಪರಿಸರ ದಿನಾಚರಣೆ ಕುರಿತು ವಿವಿಧ ಸ್ಪರ್ಧೆಗಳನ್ನು ನಡೆಸಿ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಜಾಗೃತಿ ಯೋಜನಾಧಿಕಾರಿ ಗಣೇಶ್ ಆಚಾರ್ಯ, ಜನಜಾಗೃತಿ ವೇದಿಕೆಯ ಮೇಲ್ವಿಚಾರಕ ನಿತೇಶ್ ಕೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಲ್ಲಡ್ಕ ಇದರ ಅಧ್ಯಕ್ಷ ಮಾಧವ ಸಾಲಿಯಾನ್ ಕುದ್ರೆಬೆಟ್ಟು, ಯೋಜನೆಯ ಕಲ್ಲಡ್ಕ ವಲಯದ ಅಧ್ಯಕ್ಷೆ ತುಳಸಿ, ವೇದಿಕೆಯಲ್ಲಿ ಉಪಸ್ಥಿತರಿದ್ದರು
ಮುಖ್ಯ ಶಿಕ್ಷಕಿ ಬೆನಡಿಕ್ಟಾ ಆಗ್ನೇಸ್ ಮಂಡೋನ್ಸಾ ಸ್ವಾಗತಿಸಿ, ಗ್ರಾಮಾಭಿವೃದ್ಧಿ ಯೋಜನೆಯ ಕಲ್ಲಡ್ಕ ವಲಯ ಮೇಲ್ವಿಚಾರಕಿ ಸುಗುಣ ಶೆಟ್ಟಿ ವಂದಿಸಿದರು, ಶಿಕ್ಷಕಿ ಸಂಗೀತ ಶರ್ಮ ಪಿ.ಜಿ. ಕಾರ್ಯಕ್ರಮ ನಿರೂಪಿಸಿದರು. ಶಾಲಾ ಶಿಕ್ಷಕಿಯರು ಸಹಕರಿಸಿದರು.
![](https://aksharanews.in/wp-content/uploads/2024/01/aksharanews-ad.jpg)