ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪಾಣೆಮಂಗಳೂರು ವಲಯ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ, ಸಜಿಪಮೂಡ ಇದರ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಜಿಪಮೂಡದಲ್ಲಿ ಪರಿಸರ ಮಾಹಿತಿ ಕಾರ್ಯಕ್ರಮ ಹಾಗೂ ಗಿಡ ವಿತರಣೆಯನ್ನು ನಡೆಸಲಾಯಿತು.
ಸಜೀಪಮೂಡ ಗ್ರಾಮ ಪಂಚಾಯತಿ ಅಧ್ಯಕ್ಷೆ ಶೋಭಾ ಶೆಟ್ಟಿ, ಜನಜಾಗೃತಿ ವೇದಿಕೆ ವಲಯ ಅಧ್ಯಕ್ಷ ಶ್ರೀನಿವಾಸ್ ಪೂಜಾರಿ, ಗ್ರಾಮಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಬಾಲಕೃಷ್ಣ, ಪಂಚಾಯತಿ ಮಾಜಿ ಅಧ್ಯಕ್ಷ ದೇವಿ ಪ್ರಸಾದ್ ಪೂಂಜ, ಒಕ್ಕೂಟದ ಅಧ್ಯಕ್ಷೆ ಹರಿಣಾಕ್ಷಿ, ಶಾಲೆಯ ಮುಖ್ಯೋಪಾಧ್ಯಯಿನಿ ವತ್ಸಲ ಉಪಸ್ಥಿತರಿದ್ದರು.
ಪರಿಸರ ಸಂರಕ್ಷಣೆಯ ಮಹತ್ವ ಹಾಗೂ ಪರಿಸರ ಮಾಲಿನ್ಯದಿಂದ ಉಂಟಾಗುವ ದುಷ್ಪರಿಣಾಮದ ಬಗ್ಗೆ ಮಾಹಿತಿಯನ್ನು ನೀಡಲಾಯಿತು, ಶಾಲಾ ಆವರಣದಲ್ಲಿ ಹಣ್ಣಿನ ಗಿಡ ನಾಟಿ ಮಾಡಿಸಿ, ವಿದ್ಯಾರ್ಥಿಗಳಿಗೆ ಪರಿಸರಕ್ಕೆ ಸಂಬಂಧ ಪಟ್ಟ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ನೀಡಲಾಯಿತು. ಸದಸ್ಯರಿಗೆ ಕಾಡುತ್ಪತ್ತಿ ಗಿಡಗಳನ್ನು ವಿತರಣೆ ಮಾಡಲಾಯಿತು. ಸೇವಾ ಪ್ರತಿನಿಧಿ ಬಬಿತ ಸ್ವಾಗತಿಸಿದರು, ಶಾಲಾ ಶಿಕ್ಷಕಿ ಜೆಸಿಂತಾ ಮೋರಸ್ ವಂದಿಸಿದರು,
ವಲಯದ ಮೇಲ್ವಿಚಾರಕಿ ಅಮಿತ ಕಾರ್ಯಕ್ರಮ ನಿರೂಪಿಸಿದರು.