Breaking news
Author: admin
ಪಾಣೆಮಂಗಳೂರಿನಲ್ಲಿ ರೈತ ಸಂಘದ ಸಭೆ ಬಂಟ್ವಾಳ: ಪಾಣೆಮಂಗಳೂರಿನ ಬಂಗ್ಲೆಗುಡ್ಡೆ ಶ್ರೀ ಕಲ್ಲುರ್ಟಿ- ಕಲ್ಕುಡ ದೈವಸ್ಥಾನದ ಸಭಾಂಗಣದಲ್ಲಿ ರೈತ ಸಂಘದ ಸಭೆ ಬಂಟ್ವಾಳ ತಾಲೂಕುಸಮಿತಿ ಅಧ್ಯಕ್ಷ ಎಂ. ಸುಬ್ರಹ್ಮಣ್ಯ ಭಟ್ ಅಧ್ಯಕ್ಷತೆಯಲ್ಲಿ ಜರುಗಿತು. ರೈತರ ಕುಮ್ಕಿ ಹಕ್ಕು, ರಾಜ ಕಾಲುವೆ ಒತ್ತುವರಿ ತೆರವು, ರೈತರ ಹಾಲಿನ ಪ್ರೋತ್ಸಾಹಧನ ಬಾಕಿ ಪಾವತಿ, ನಿಯಮಿತವಾಗಿ ಜಿಲ್ಲಾ ಹಾಗೂ ತಾಲೂಕ ಮಟ್ಟದಲ್ಲಿ ರೈತರ ಕುಂದು ಕೊರತೆ ಸಭೆ ಈ ಎಲ್ಲ ವಿಚಾರಗಳ ಬಗ್ಗೆ ಕರ್ನಾಟಕ ವಿಧಾನಸಭಾ ಸಭಾಪತಿ ಯು.ಟಿ.ಖಾದರ್ ಅವರನ್ನು ರೈತರ ನಿಯೋಗ ಶೀಘ್ರವೇ ಭೇಟಿಯಾಗಿ ಚರ್ಚಿಸಲು ತೀರ್ಮಾನ ತೆಗೆದುಕೊಳ್ಳಲಾಯಿತು. Advertisement Advertisement ಕರ್ನಾಟಕ ರಾಜ್ಯ ರೈತ ಸಂಘ ರಾಜ್ಯ ಕಾರ್ಯದರ್ಶಿ ಮನೋಹರ ಶೆಟ್ಟಿ ನಡಿಕಂಬಳ ಗುತ್ತು, ತಾಲೂಕು ಕಾರ್ಯದರ್ಶಿ ಸುದೇಶ್ ಮಯ್ಯ, ಸದಸ್ಯರಾದ ದಿಲೀಪ್ ರೈ, ಭೋಜ, ಲಕ್ಷ್ಮ, ಸುದೇಶ ಶೆಟ್ಟಿ. ಸೋಮನಾಥ ಭಂಡಾರಿ. ಮೊದಲಾದವರು ಉಪಸ್ಥಿತರಿದ್ದರು.
ಜೂ.7: ನವೀಕೃತಗೊಂಡ ವಾತ್ಸಲ್ಯ ಮನೆ ಹಸ್ತಾಂತರ, ಗೃಹಪ್ರವೇಶ ಬಂಟ್ವಾಳ: ತಾಲೂಕಿನ ದಾಸಕೋಡಿಯ ನೆಲ್ಲಿ ಎಂಬಲ್ಲಿ ವಾಸವಿರುವ ಗೀತಾ ರವೀಂದ್ರ ಪೂಜಾರಿ ಎಂಬವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಾತ್ಸಲ್ಯ ಮನೆ ನಿರ್ಮಾಣ ಯೋಜನೆಯಡಿಯಲ್ಲಿ ಮನೆ ದುರಸ್ತಿಗೊಳಿಸಲಾಗಿದ್ದು ಸುಂದರ ಗೊಂಡಿರುವ ಮನೆಯ ಗೃಹಪ್ರವೇಶ ನಾಳೆ (ಜೂ.7) ನಡೆಯಲಿದೆ. ಜೂ.7: ನವೀಕೃತಗೊಂಡ ವಾತ್ಸಲ್ಯ ಮನೆ ಹಸ್ತಾಂತರ, ಗೃಹಪ್ರವೇಶ ಗೀತಾ ರವೀಂದ್ರ ಪೂಜಾರಿಯವರು ತಾಯಿ ಮತ್ತು ತಮ್ಮನೊಂದಿಗೆ ಬಡತನದ ಜೀವನ ನಡೆಸುತ್ತಿದ್ದು ತಾಯಿ ಮತ್ತು ತಮ್ಮನ ಮರಣ ನಂತರ ನಿರ್ವಹಣೆ ಇಲ್ಲದೆ ಜೀರ್ಣಾವಸ್ಥೆಗೆ ತಲುಪಿದ್ದ ಮನೆಯಲ್ಲಿ ವಾಸವಿರಲು ಸಾಧ್ಯವಾಗದೆ ತನ್ನ ಇಬ್ಬರು ಚಿಕ್ಕ ಮಕ್ಕಳೊಂದಿಗೆ ಹಲವಾರು ವರುಷ ಬಾಡಿಗೆ ಮನೆಯಲ್ಲಿ ಜೀವನ ಸಾಗಿಸುತ್ತಿದ್ದರು. ತನ್ನ ಕಷ್ಟ ಜೀವನದ ವಿಚಾರದೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಿಗೆ ಸಹಾಯ ಕೋರಿ ಮನವಿಯನ್ನು ಸಲ್ಲಿಸಿದರು. ಇದಕ್ಕೆ ಸ್ಪಂಧಿಸಿದ ಧರ್ಮಾಧಿಕಾರಿಗಳು ವಾತ್ಸಲ್ಯ ಮನೆ ನಿರ್ಮಾಣ ಯೋಜನೆಯಡಿಯಲ್ಲಿ ಮನೆ ದುರಸ್ತಿಗೆ ಆರ್ಥಿಕ ಸಹಕಾರ ಮಂಜೂರುಗೊಳಿಸಿದರು. Advertisement ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ…
ಶಾಂತಾ ಪುತ್ತೂರುರವರಿಗೆ ಕನ್ನಡ ಶ್ರೀ ರಾಜ್ಯ ಪ್ರಶಸ್ತಿ ಕಾಸರಗೋಡು: ಕೇರಳ ರಾಜ್ಯದ ಕಾಸರಗೋಡಿನ ನುಳ್ಳಿಪ್ಪಾಡಿಯ ಸೀತಮ್ಮ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯದ ನೇತೃತ್ವದಲ್ಲಿ ಕಥಾಬಿಂದು ಪ್ರಕಾಶನ ,ಪಾಂಗೋಡು ದುರ್ಗಾ ಪರಮೇಶ್ವರೀ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಸಾಂಸ್ಕೃತಿಕ ಘಟಕ ಮತ್ತು ಕರ್ನಾಟಕ ಇತಿಹಾಸ ಅಕಾಡೆಮಿ ಕಾಸರಗೋಡು ಜಿಲ್ಲಾಘಟಕದ ಸಹಯೋಗದಲ್ಲಿ ಕನ್ನಡ ಭವನದಲ್ಲಿ ಆಯೋಜಿಸಿದ ಕಾಸರಗೋಡು ಕನ್ನಡ ಭವನ ಕನ್ನಡ ಸಂಸ್ಕೃತಿ ಉತ್ಸವ ದಲ್ಲಿ ಬೊಳುವಾರು ನಿವಾಸಿ ಸರಕಾರಿ ಪ್ರೌಢಶಾಲೆ ಕಬಕದ ಶಿಕ್ಷಕಿ ಶಾಂತಾ ಪುತ್ತೂರುರವರನ್ನು ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ಕನ್ನಡ ಶ್ರೀ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. Space for advertisement ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಶ್ರೀಮದ್ ಎಡನೀರು ಮಹಾಸಂಸ್ಥಾನ ದವರು ಕನ್ನಡ ಭವನ ಕನ್ನಡ ಸಂಸ್ಕೃತಿ ಉತ್ಸವ ಉದ್ಘಾಟಿಸಿ ಆಶೀರ್ವಚನ ನೀಡಿದರು.ಕನ್ನಡ ಭವನದ ಸ್ಥಾಪಕಾಧ್ಯಕ್ಷರಾದ ವಾಮನರಾವ್ ಬೇಕಲ್ ಅಧ್ಯಕ್ಷ ತೆ ವಹಿಸಿದ್ದರು.ಕಥಾಬಿಂದು ಪ್ರಕಾಶನದ ಪಿ.ವಿ.ಪ್ರದೀಪ್ ಕುಮಾರ್ ಸಾಹಿತಿ ಡಾ.ರಮಾನಂದ ಬನಾರಿ ,ಜಯಾನಂದ ಪೆರಾಜೆ,ಶ್ರೀ ಕೃಷ್ಣ ಯ್ಯ ಅನಂತಪುರ,…
ವಿದ್ಯುತ್ ದರ ಏರಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ ಬಂಟ್ವಾಳ: ವಿದ್ಯುತ್ ದರವನ್ನು ರಾಜ್ಯ ಸರಕಾರಹೆಚ್ಚಿಸಿರುವು ನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿಯ ಬಂಟ್ವಾಳ ಮಂಡಲ ವತಿಯಿಂದ ಬಿ.ಸಿ.ರೋಡ್ ನ ಫ್ಲೈಓವರ್ ಬಳಿ ಸೋಮವಾರ ಬೆಳಗ್ಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಉಪಸ್ಥಿತಿಯಲ್ಲಿ ಪ್ರತಿಭಟನೆ ನಡೆಯಿತು. Advertisement ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ, ಹರಿಕೃಷ್ಣ ಬಂಟ್ವಾಳ ಮಾತನಾಡಿ ಕಾಂಗ್ರೆಸ್ ತನ್ನ ಗ್ಯಾರಂಟಿ ಘೋಷಣೆ ಮೂಲಕ ಅಧಿಕಾರಕ್ಕೆ ಬಂದಿದ್ದು, ಇದು ರಾಜ್ಯದ ಹಿತಾಸಕ್ತಿಗೆ ಮಾರಕವಾಗಿದೆ. ಇನ್ನು ಒಂದು ವರ್ಷದೊಳಗೆ ಕಾಂಗ್ರೆಸ್ ಪಕ್ಷವನ್ನೂ ಗ್ಯಾರಂಟಿ ದಿವಾಳಿ ಮಾಡುವುದರೊಂದಿಗೆ ರಾಜ್ಯವನ್ನು ಪಾಕಿಸ್ತಾನ, ವೆಜೆಜುವೆಲಾ ಮಾದರಿ ಆರ್ಥಿಕ ದಿವಾಳಿತನಕ್ಕೆ ಕೊಂಡೊಯ್ಯುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.ಬಿಜೆಪಿ ರಾಜ್ಯ ವಕ್ತಾರ ವಿಕಾಸ್ ಪುತ್ತೂರು ಮಾತನಾಡಿ, ಪಂಚ ಗ್ಯಾರಂಟಿಗಳು ಅನುಷ್ಠಾನಕ್ಕೆ ಯೋಗ್ಯವಾದುದಲ್ಲ, ವಿದ್ಯುತ್ ಉಚಿತ ಎಂದು ಒಂದೆಡೆ ಹೇಳಿ, ಮತ್ತೊಂದೆಡೆಯಿಂದ ದರ ಏರಿಕೆ ಮಾಡುತ್ತಿದೆ. ನಿರುದ್ಯೋಗಿಗಳ ಭತ್ತೆಗೆ ಈಗ ಕಂಡೀಶನ್ ಹಾಕಲಾಗುತ್ತಿದೆ, ಸರಕಾರ ಊಸರವಳ್ಳಿಯಂತೆ ಬಣ್ಣ ಬದಲಾಯಿಸುತ್ತಿದೆ…
ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನದ ಆಶ್ರಯದಲ್ಲಿ ಕೇಂದ್ರ ಸರ್ಕಾರದ ನಿಕ್ಷಯ್ ಮಿತ್ರ ಯೋಜನೆಯಡಿ ಕ್ಷಯ ರೋಗಿಗಳಿಗೆ ದವಸ ಧಾನ್ಯ ವಿತರಣಾ ಕಾರ್ಯಕ್ರಮ ಫರಂಗಿಪೇಟೆಯ ಸೇವಾಂಜಲಿ ಸಭಾಂಗಣದಲ್ಲಿ ಸೋಮವಾರ ನಡೆಯಿತು. Advertisement ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಬೋಳಾರ ಉಮಾಪರಮೇಶ್ವರಿ ಭಜನಾ ಮಂದಿರದ ಅಧ್ಯಕ್ಷ, ಉದ್ಯಮಿ ಸೀತಾರಾಮ ಎ. ಆಹಾರ ಧಾನ್ಯ ವಿತರಿಸಿ ಮಾತನಾಡಿ ಸೇವಾಂಜಲಿ ಪ್ರತಿಷ್ಠಾನದ ಮೂಲಕ ಕೃಷ್ಣಕುಮಾರ್ ಪೂಂಜ ಅವರು ಮಾಡುವ ಸೇವೆ ಅಪೂರ್ವವಾದುದು. ಶಿಕ್ಷಣ, ಆರೋಗ್ಯ ಮತ್ತಿತರ ಸೌಲಭ್ಯಗಳು ಅರ್ಹ ಜನರಿಗೆ ತಲುಪಲು ಅವರು ಅಹರ್ನಿಶಿಯಾಗಿ ದುಡಿಯುತ್ತಿದ್ದಾರೆ. ಜಾತಿ ಮತದ ಭೇದವಿಲ್ಲದೆ ಬಡವರಿಗಾಗಿ ತುಡಿಯುವ ವ್ಯಕ್ತಿತ್ವ ಕೃಷ್ಣಕುಮಾರ್ ಪೂಂಜರದ್ದು ಎಂದು ತಿಳಿಸಿದರು. ಸೇವಾಂಜಲಿ ಸಂಸ್ಥೆ ಮಾಡುವ ಸೇವಾ ಕಾರ್ಯಗಳಿಗೆ ನಾವು ಸಹಕಾರ ನೀಡಿದಾಗ ಇನ್ನಷ್ಟು ಹೆಚ್ಚಿನ ಫಲಾನುಭವಿಗಳನ್ನು ತಲುಪಲು ಸಾಧ್ಯವಿದೆ, ಪೌಷ್ಟಿಕಾಹಾರ ಸೇವೆನೆಯ ಮೂಲಕ ಕ್ಷಯ ರೋಗ ನಿರ್ಮೂಲನೆ ಸಾಧ್ಯವಿದ್ದು ಕ್ಷಯ ರೋಗಿಗಳು ಇದನ್ನು ಗಮನದಲ್ಲಿಟ್ಟುಕೊಂಡು ಬೇಗ ಗುಣಮುಖರಾಗಿ ಎಂದು ತಿಳಿಸಿದರು. Advertisement ಮನೋವೈದ್ಯ ಡಾ. ರವೀಶ್ ತುಂಗ ಮಾತನಾಡಿ ಕ್ಷಯ…
ನನ್ನ ಲೈಪ್- ನನ್ನ ಸ್ವಚ್ಛನಗರ ಕಾರ್ಯಕ್ರಮದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ ಬಂಟ್ವಾಳ: ಇಲ್ಲಿನ ಪುರಸಭೆಯ ವತಿಯಿಂದ ನನ್ನ ಲೈಪ್- ನನ್ನ ಸ್ವಚ್ಛನಗರ ಕಾರ್ಯಕ್ರಮದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ ಬಿ.ಸಿ.ರೋಡಿನ ಕೈಕಂಬ ಬಳಿಕ ಪರ್ಲಿಯಾ ಹಾಗೂ ಕೊಡಂಗೆ ಬಳಿ ನಡೆಯಿತು. ನನ್ನ ಲೈಪ್- ನನ್ನ ಸ್ವಚ್ಛನಗರ ಕಾರ್ಯಕ್ರಮದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ ಮಂಗಳೂರು ನಗರ ಯೋಜನಾ ಕೋಶದ ಯೋಜನಾ ನಿರ್ದೇಶಕ ಅಭಿದ್ ಗದ್ಯಾಲ್ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಪುರಸಭೆ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೋ, ಆರೋಗ್ಯ ನಿರೀಕ್ಷಕ ರತ್ನ ಪ್ರಸಾದ್, ಪ್ರಮುಖರಾದ ವಸಂತಿ ಗಂಗಾಧರ್, ಎ. ದಾಮೋದರ ಸಂಚಯಗಿರಿ, ಮಚ್ಚೇಂದ್ರ ಸಾಲ್ಯಾನ್, ಕಿಶೋರ್ ಆಚಾರ್ಯ ಪುರಸಭೆಯ ಸಿಬ್ಬಂದಿಗಳು, ಪೌರ ಕಾರ್ಮಿಕರು ಹಾಗೂ ಸ್ಥಳೀಯರು ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. Advertisement Advertisement
ಬಂಟ್ವಾಳ: ವರ್ತಕರ ವಿವಿಧೋದ್ದೇಶ ಸಹಕಾರಿ ಸಂಘ ನಿಯಮಿತ ಇದರ 13ನೇ ಪೆರ್ನೆ ಶಾಖೆಯ ಉದ್ಘಾಟನಾ ಸಮಾರಂಭ ಬಂಟ್ವಾಳ: ಇಲ್ಲಿನ ಬಂಟ್ವಾಳ ವರ್ತಕರ ವಿವಿಧೋದ್ದೇಶ ಸಹಕಾರಿ ಸಂಘ ನಿಯಮಿತ ಇದರ 13ನೇ ಪೆರ್ನೆ ಶಾಖೆಯ ಉದ್ಘಾಟನಾ ಸಮಾರಂಭ ಪೆರ್ನೆಯ ಚಂದ್ರ ಆರ್ಕೆಡ್ ನಲ್ಲಿ ಶುಭಾರಂಭ ಗೊಂಡಿತು. Advertisement ಮಾಜಿ ಸಚಿವ ಬಿ. ರಮಾನಾಥ ರೈ ನೂತನ ಶಾಖೆ ಉದ್ಘಾಟಿಸಿದರು. ಅವರು ಮಾತನಾಡಿ ಸಹಕಾರಿ ಕ್ಷೇತ್ರವು ಜನರಿಗೆ ಸಹಾಯ ಮಾಡಲು ವಿಪುಲವಾದ ಅವಕಾಶವಿರುವ ಕ್ಷೇತ್ರವಾಗಿದೆ ಎಂದರು. ಸಹಕಾರಿ ಕ್ಷೇತ್ರದಲ್ಲಿ ಸಾಕಷ್ಟು ಪೈಪೋಟಿ ಇದ್ದರು ಕೂಡ ಹೆಚ್ಚು ಸಾಧನೆ ಮಾಡಿದ ಸಹಕಾರಿ ಸಂಘಗಳು ಇದೆ. ಸಾಲ ಪಡೆದು ಕ್ಲಪ್ತ ಸಮಯದಲ್ಲಿ ಮರುಪಾವತಿ ಮಾಡಿದಾಗ ಸಹಕಾರಿ ಸಂಘಗಳು ಬಲಿಷ್ಠವಾಗಿ ಬೆಳೆಯಲು ಸಾಧ್ಯ ಎಂದು ತಿಳಿಸಿದರು. Advertisement ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ದೀಪ ಪ್ರಜ್ವಲಿಸಿಆಶೀರ್ವಚನ ನೀಡಿ ಮತೀಯವಾದ ಬಿಟ್ಟು ಎಲ್ಲರೂ ಸಾಮರಸ್ಯದಿಂದ ಬದುಕಬೇಕು ಎಂದರು. ಗ್ರಾಮೀಣ ಭಾಗದಲ್ಲಿ ಸಹಕಾರಿ ಸಂಘಗಳು ಜನರ ಆರ್ಥಿಕ ಸಂಕಷ್ಟಕ್ಕೆ…
ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಇದರ ಆಶ್ರಯದಲ್ಲಿ ಕೆ.ಎಸ್. ಹೆಗ್ಡೆ ಆಸ್ಪತ್ರೆ ದೇರಳಕಟ್ಟೆ ಇವರ ಸಹಕಾರದೊಂದಿಗೆಗೆ 122 ನೇ ರಕ್ತದಾನ ಶಿಬಿರ ಭಾನುವಾರ ಫರಂಗಿಪೇಟೆಯ ಸೇವಾಂಜಲಿ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕ ಎಂ. ವೈ. ಉದಯರವಿ ಭಾಗವಹಿಸಿ ಸ್ವಯಂ ರಕ್ತದಾನ ಮಾಡುವ ಮೂಲಕ ಶಿಬಿರ ಉದ್ಘಾಟಿಸಿದರು. ಅವರು ಮಾತನಾಡಿ ತುರ್ತು ಸಂದರ್ಭದಲ್ಲಿ ನಮ್ಮ ಬಂಧುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗ ರಕ್ತದ ಮಹತ್ವ ಏನು ಎನ್ನುವುದು ಎಲ್ಲರಿಗೂ ಅರಿವಾಗುತ್ತದೆ. ಆದ್ದರಿಂದ ಎಲ್ಲರೂ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ರಕ್ತದ ಕೊರತೆಯನ್ನು ನೀಗಿಸಬಹುದು ಜೊತೆಗೆ ಓರ್ವ ವ್ಯಕ್ತಿಯ ಪ್ರಾಣವನ್ನು ರಕ್ಷಿಸಬಹುದಾಗಿದೆ ಎಂದರು. ಸೇವಾಂಜಲಿ ಆರೋಗ್ಯ ಕೇಂದ್ರದ ವೈದ್ಯ ಡಾ. ಚೇತನ್ ಮಾತನಾಡಿ ರಕ್ತಕ್ಕೆ ರಕ್ತವೇ ಪರ್ಯಾಯವಾಗಿದ್ದು ಅದನ್ನು ರಕ್ತದಾನದ ಮೂಲಕವೇ ಪಡೆಯಬೇಕಾಗಿದೆ. ಆದ್ದರಿಂದ ಆರೋಗ್ಯವಂತರು ನಿಯಮಿತವಾಗಿ ರಕ್ತದಾನ ಮಾಡುವುದರಿಂದ ರೋಗಿಯ ಪ್ರಾಣ ಉಳಿಸುವುದರ ಜೊತೆಗೆ ತಮ್ಮ ಆರೋಗ್ಯವನ್ನು ವೃದ್ದಿಸಿಕೊಳ್ಳಬಹುದಾಗಿದೆ ಎಂದರು. Advertisement Advertisement ದೇರಳಕಟ್ಟೆ ಕೆ.…
ಬಂಟ್ವಾಳ : ಜಮೀಯ್ಯತುಲ್ ಫಲಾಹ್ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಬಂಟ್ವಾಳ : ಜಮೀಯ್ಯತುಲ್ ಫಲಾಹ್ ಬಂಟ್ವಾಳ ತಾಲೂಕು ಘಟಕದ ವತಿಯಿಂದ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳನ್ನು ಪಡೆದ ತಾಲೂಕಿನ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಪೈಲಟ್ ಹನಿಯಾ ಹನೀಫ್ ಬ್ಯಾರಿ ಅವರಿಗೆ ಸನ್ಮಾನ ಕಾರ್ಯಕ್ರಮವು ಮೆಲ್ಕಾರ್ ಬಿರ್ವ ಸೆಂಟರ್ ನಲ್ಲಿ ಶುಕ್ರವಾರ ನಡೆಯಿತು. Advertisement ಸನ್ಮಾನವನ್ನು ಸ್ವೀಕರಿಸಿದ ಕಮರ್ಷಿಯಲ್ ಪೈಲಟ್ ಕ್ಯಾಪ್ಟನ್ ಹನಿಯಾ ಹನೀಫ್ ಬ್ಯಾರಿ ಮಾತನಾಡಿ ವಿದ್ಯಾರ್ಥಿಗಳು ಇಚ್ಚಾಶಕ್ತಿ ಹಾಗೂ ನಿರ್ದಿಷ್ಟ ಗುರಿಯೊಂದಿಗೆ ಶಿಕ್ಷಣವನ್ನು ಮುಂದುವರಿಸಿದರೆ ಉನ್ನತ ಸ್ಥಾನವನ್ನು ಪಡೆಯಲು ಸಾಧ್ಯ ಎಂದು ಅಭಿಪ್ರಾಯ ಪಟ್ಟರು.ಘಟಕಾದ್ಯಕ್ಷ ರಶೀದ್ ವಿಟ್ಲ ಅಧ್ಯಕ್ಷತೆ ವಹಿಸಿದ್ದರು. ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಎನ್ನಾರೈ ಸದಸ್ಯ ಶೌಕತ್ ಅಲಿ ಬಂಟ್ವಾಳ, ಉದ್ಯಮಿಗಳಾದ ಉಮ್ಮರ್ ಹಾಜಿ ರಾಜ್ ಕಮಲ್, ವಿ.ಎಚ್.ಅಶ್ರಫ್ ವಿಟ್ಲ ಅತಿಥಿಗಳಾಗಿ ಭಾಗವಹಿಸಿದ್ದರು. Advertisement ಎಸ್ಸೆಸ್ಸೆಲ್ಸಿಯಲ್ಲಿ ಅತ್ಯಧಿಕ ಅಂಕಗಳನ್ನು ಪಡೆದ ತಾಲೂಕಿನ ವಿದ್ಯಾರ್ಥಿಗಳಾದ ಮುಹಮ್ಮದ್ ಮುಸ್ತಫಾ, ಫಾತಿಮತ್ ಶಮಾ, ನಫೀಸತ್ ಮುಫೀಝಾ,…
ಬಂಟ್ವಾಳ: ವಕೀಲರ ಸಂಘ (ರಿ ) ಬಂಟ್ವಾಳ ಇದರ 2023-25 ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಸ್ಪರ್ಶ ಕಲಾ ಮಂದಿರ ಬಿ.ಸಿ. ರೋಡ್ ನಲ್ಲಿ ಇಂದು ಮದ್ಯಾಹ್ನ 12.30ಕ್ಕೆ ನಡೆಯಿತು. 2023-25 ನೇ ಸಾಲಿನ ನೂತನ ಅಧ್ಯಕ್ಷರಾಗಿ ಶ್ರೀಯುತ ರಿಚರ್ಡ್ ಕೊಸ್ತಾ ಎಂ, ಉಪಾಧ್ಯಕ್ಷರಾಗಿ ರಾಜೇಶ್ ಬೊಳ್ಳುಕಲ್ಲು, ಪ್ರಧಾನ ಕಾರ್ಯದರ್ಶಿಯಾಗಿ ಚಂದ್ರಶೇಖರ ಡಿ ಬೈರಿಕಟ್ಟೆ, ಜೊತೆ ಕಾರ್ಯದರ್ಶಿಯಾಗಿ ಸುನಿತಾ ಕೆ ಕೆ, ಕೋಶಾಧಿಕಾರಿಯಾಗಿ ಶ್ರೀಮತಿ ನಿರ್ಮಲ ಶೆಟ್ಟಿಯವರು ಪ್ರಮಾಣವಚನ ಸ್ವೀಕರಿಸಿದರು. ಪದಗ್ರಹಣ ಕಾರ್ಯಕ್ರಮವನ್ನು ದೀಪಬೆಳಗಿಸುವುದರ ಮುಖಾoತರ ಅಂಕೋಲದ ಹಿರಿಯ ಸಿವಿಲ್ ನ್ಯಾಯಾಧಿಶರಾದ ಗೌರವಾನ್ವಿತ ಶ್ರೀ ಮನೋಹರ ಎಂ ಅವರು ಚಾಲನೆ ನೀಡಿ ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ನೀಡಿ ಶುಭಹಾರೈಸಿದರು. Advertisement Advertisement ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬಂಟ್ವಾಳದ ಹಿರಿಯ ಸಿವಿಲ್ ನ್ಯಾಯಾಧಿಶರಾದ ಶ್ರೀಮತಿ ಭಾಗ್ಯಮ್ಮ, ಪ್ರಧಾನ ಸಿವಿಲ್ ನ್ಯಾಯಾಧಿಶರಾದ ಚಂದ್ರಶೇಖರ ಎಲ್ಲಪ್ಪ ತಳವಾರ ಮತ್ತು ಹೆಚ್ಚುವರಿ ಸಿವಿಲ್ ನ್ಯಾಯಾಧಿಶರಾದ ಕೃಷ್ಣಮೂರ್ತಿ ಯನ್ ಅವರು ಭಾಗವಹಿಸಿದ್ದರು.ವಕೀಲರ ಸಂಘ (ರಿ) ಬಂಟ್ವಾಳದ…