Breaking news
Author: admin
ಬಂಟ್ವಾಳ: ಜೆಸಿಐ ಬಂಟ್ವಾಳದ 2024 ರ ಸಾಲಿನ ಅಧ್ಯಕ್ಷರಾಗಿ ರಶ್ಮಿ ಶೆಟ್ಟಿ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಶ್ರೀನಿವಾಸ್ ಅರ್ಬಿಗುಡ್ಡೆ, ಕೋಶಾಧಿಕಾರಿಯಾಗಿ ಮನೋಜ್ ಕನಪಾಡಿ, ವಿವಿಧ ವಿಭಾಗಗಳ ಉಪಾಧ್ಯಕ್ಷರಾಗಿ ಕಿಶೋರ್ ಆಚಾರ್ಯ ಯೋಗೀಶ್, ಉಮೇಶ್ ಪೂಜಾರಿ, ಶಿವರಾಮ್ ಮರ್ತಾಜೆ, ನಾರಾಯಣ ಸಿ. ಪೆರ್ನೆ, ಲೇಡಿ ಜೇಸಿ ಸಂಯೋಜಕರಾಗಿ ಆಶಾಮಣಿ ಡಿ. ರೈ, ಜೂನಿಯರ್ ಜೇಸಿ ಸಂಯೋಜಕರಾಗಿ ರೋಶನ್ ರೈ, ಗೋಗ್ರೀನ್ ನಿರ್ದೇಶಕರಾಗಿ ವಚನ್ ಶೆಟ್ಟಿ, ಬ್ಲಡ್ ಡೊನೇಷನ್ ನಿರ್ದೇಶಕರಾಗಿ ರೋಷನ್, ಸೆಲ್ಯೂಟ್ ಟು ಸೈಲೆಂಟ್ ವರ್ಕರ್ ನಿರ್ದೇಶಕರಾಗಿ ಕಿರಣ್, ಸಾಂಸ್ಕೃತಿಕ ನಿರ್ದೇಶಕರಾಗಿ ನಾಗೇಶ್, ದಾನ್ ಕಾರ್ಯಕ್ರಮ ನಿರ್ದೇಶಕರಾಗಿ ವೆಂಕಟೇಶ್ ಕೃಷ್ಣಾಪುರ ಆಯ್ಕೆಯಾಗಿದ್ದಾರೆ.
ಬಂಟ್ವಾಳ: ತಾಲೂಕು ಕುಲಾಲ ಸುಧಾರಕ ಸಂಘದ ಆಶ್ರಯದಲ್ಲಿ ಕುಲಾಲ ಗುರು ಸಮ್ಮಿಲನ, ಗುರು ವಂದನೆ ಮತ್ತು ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ ಅ.1 ರಂದು ಭಾನುವಾರ ಬಿ.ಸಿ.ರೋಡಿನ ಪೊಸಳ್ಳಿಯ ಕುಲಾಲ ಸಮುದಾಯ ಭವನದಲ್ಲಿ ಬೆಳಿಗ್ಗೆ 9 ರಿಂದ ನಡೆಯಲಿದೆ.ಕುಲಾಲ ಶಿಕ್ಷಕ ಬಳಗವನ್ನು ಜತೆಯಾಗಿಸಿ, ಸಂಭ್ರಮಿಸಿ ಬೆಸೆಯುವ ಮೊದಲ ಪ್ರಯತ್ನ ಇದಾಗಿದ್ದು ಒಂದೇ ವೇದಿಕೆಯಲ್ಲಿ ಬಂಟ್ವಾಳ ತಾಲೂಕಿನ ಪ್ರಾಥಮಿಕ, ಪ್ರೌಢ, ಪದವಿ ಪೂರ್ವ, ಪದವಿ ಇನ್ನಿತರ ಶಿಕ್ಷಕರ ಸಮಾಗಮ ನಡೆಯಲಿದೆ. ಶಿಕ್ಷಕರ ಕಲಾ ಪ್ರಾಕರಗಳಿಗೆ ವೇದಿಕೆಯೊದಗಿಸುವ ಆಶಯ ಹೊಂದಿಲಾಗಿದೆ. ಇದೇ ವೇಳೆ ಗುರು ವಿದ್ಯಾರ್ಥಿಗಳೊಂದಿಗೆ ಸಂವಾದವೂ ನಡೆಯಲಿದ್ದು ಮನೆ ಶಾಲೆಯ ಒತ್ತಡದಿಂದ ಮನೋಲ್ಲಾಸ ನೀಡುವ ವಿಶಿಷ್ಠ ಹಾಗೂ ವಿನೂತನ ಕಾರ್ಯಕ್ರಮವಾಗಿ ಮೂಡಿ ಬರಲಿದೆ. ಶಿಕ್ಷಕರಿಗೆ ವೈವಿಧ್ಯಮಯ, ಆಕರ್ಷಕ ಸ್ಪರ್ಧೆ ಗಳು ನಡೆಯಲಿದೆ. ಇದೇ ವೇಳೆ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿ ವೇತನ ವಿತರಣ ಕಾರ್ಯಕ್ರಮ ನಡೆಯಲಿದೆ. Advertisement ಮಧ್ಯಾಹ್ನ 12.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು ಬಂಟ್ವಾಳ ತಾಲೂಕು…
ಬಂಟ್ವಾಳ: ಮಾಣಿಲ ಶ್ರೀಧಾಮದ ಶ್ರೀ ದುರ್ಗಾಮಹಾಲಕ್ಷ್ಮಿ ಕ್ಷೇತ್ರದಲ್ಲಿ ನಡೆದ ಬೆಳ್ಳಿಹಬ್ಬ ಮಹೋತ್ಸವದ ಶ್ರೀ ವರಮಹಾಲಕ್ಮ್ಮಿ ವ್ರತಾಚರಣೆ ಯಶಸ್ವಿಯಾಗಿ ನಡೆದ ಬಗ್ಗೆ ಶ್ರೀ ಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮಿಗಳ ಉಪಸ್ಥಿತಿಯಲ್ಲಿ ಕೃತಜ್ಞತಾ ಸಮರ್ಪಣಾ ಸಭೆ ಮತ್ತು ಅ. 15ರಿಂದ ಅ. 25 ತನಕ ನಡೆಯುವ ಬೆಳ್ಳಿ ಹಬ್ಬ ಮಹೋತ್ಸವದ ಬೆಳ್ಳಿಹಬ್ಬ ಮಹೋತ್ಸವದ ಶರನ್ನವರಾತ್ರಿ ಉತ್ಸವದ ಪೂರ್ವ ಭಾವಿ ವಿಶೇಷ ಸಭೆಯು ಶ್ರೀ ರಕ್ತೇಶ್ವರಿ ದೇವಸ್ಥಾನ ಬಿ.ಸಿ.ರೋಡಿನಲ್ಲಿ ಬೆಳ್ಳಿ ಹಬ್ಬ ಸಮಿತಿಯ ಸದಸ್ಯರು ಟ್ರಸ್ಟಿಗಳ ಸಮ್ಮುಖದಲ್ಲಿ ನಡೆಯಿತು. Advertisement ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮ ಹಂಸ ಸ್ವಾಮೀಜಿ ಆಶೀರ್ವಚನ ನೀಡಿ ಮಾಣಿಲ ನಂಬುಗೆಯ ಆಧಾರದಲ್ಲಿ ನಿಂತ ನೆಲ. ನಿತ್ಯಾನಂದರು ಸಂತನಾಗಿ ಎಲ್ಲರೊಂದಿಗೆ ಆನಂದ ನೀಡಿದ ದಿವ್ಯ ಪುರುಷ. ಮಹಾಲಕ್ಷ್ಮಿ ದೇವಿಯ ಸೇವೆಯಿಂದ ನಂಬಿದ ಭಕ್ತರಿಗೆ ಪ್ರಾಪ್ತಿ ಫಲ. ಮಾಣಿಲ ಸರ್ವ ಜಾತಿ ಜನಾಂಗವನ್ನು ಎಂದಿಗೂ ಸ್ವಾಗತಿಸುವ ಕರುಣಾಳು ಸ್ಥಳ. ನಾನು ಸಂತ ಮಾತ್ರ ನೀವು ಕ್ಷೇತ್ರ ಅಭಿವ್ರದ್ದಿಯ ಸೂತ್ರ ಎಂದರು.…
ಬಂಟ್ವಾಳ: ವಿಶ್ವ ಹಿಂದೂ ಪರಿಷದ್, ಭಜರಂಗದಳ, ಮಾತೃ ಮಂಡಳಿ ದುರ್ಗಾವಾಹಿನಿ , ಛತ್ರಪತಿ ಶಿವಾಜಿ ಶಾಖೆ ಕುಮ್ದೇಲ್ ಘಟಕದ ವತಿಯಿಂದ ಆಯೋಜಿಸಲ್ಪಟ್ಟ ಕೆಸರ್ಡ್ ಒಂಜಿ ದಿನ ಕಾರ್ಯಕ್ರಮ ಭಜರಂಗದಳ ಪುತ್ತೂರು ಜಿಲ್ಲಾ ಸಂಚಾಲಕ ಭರತ್ ಕುಮ್ದೇಲ್ ಮುಂದಾಳತ್ವದಲ್ಲಿ ಕಡೆಗೋಳಿ ನಾಣ್ಯ ಗದ್ದೆಯಲ್ಲಿ ನಡೆಯಿತು. Advertisement ಹಿಂದೂ ಧಾರ್ಮಿಕ ಆಚಾರ ವಿಚಾರ ಧರ್ಮ ಶಿಕ್ಷಣ ನೀಡುವ ಸಲುವಾಗಿ ಪಂದ್ಯಾಟದಲ್ಲಿ ವಿಜೇತರಾದ ಸುಮಾರು 200 ಜನರಿಗೆ ಭಗವದ್ಗೀತೆ ಹಾಗೂ ಮಹಾಭಾರತ ಗ್ರಂಥ ಗಳನ್ನು ನೀಡಲಾಯಿತು. ಊರಿನ ಗಣ್ಯರು ಭಾಗವಹಿಸಿದ್ದರು.
ಹಿಂದಿ ಶಿಕ್ಷಕ ರತ್ನ ರಾಜ್ಯ ಪ್ರಶಸ್ತಿಗೆ ದಡ್ಡಲಕಾಡು ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕ ರಮಾನಂದ ಆಯ್ಕೆ ಬಂಟ್ವಾಳ: ಹಿಂದಿ ಶಿಕ್ಷಕರಿಗೆ ಕೊಡುವ ರಾಜ್ಯ ಹಿಂದಿ ಶಿಕ್ಷಕ ರತ್ನ ಪ್ರಶಸ್ತಿಗೆ ಸರಕಾರಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ದಡ್ಡಲ ಕಾಡು ಇಲ್ಲಿನ ಹಿಂದಿ ಭಾಷಾ ಶಿಕ್ಷಕ ರಮಾನಂದ ಇವರು ಆಯ್ಕೆಯಾಗಿರುತ್ತಾರೆ. ಹಿಂದಿ ವಿಷಯದ ರಾಜ್ಯ ಸಂಪನ್ಮೂಲ ವ್ಯಕ್ತಿಯಾಗಿ, ತಾಲೂಕು ಹಾಗೂ ಜಿಲ್ಲಾ ಸಂಘದ ಪದಾಧಿಕಾರಿಗಳಾಗಿ, ಹಿಂದಿ ಸಂಪನ್ಮೂಲ ಕ್ರೋಡಿಕರಣ ಹಾಗೂ ಪುಸ್ತಕ ರಚನಾ ಕಾರ್ಯದಲ್ಲಿ ತೊಡಗಿಸಿಕೊಂಡು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆ ಪ್ರಮಾಣಿಕ ಪ್ರಯತ್ನ ಹಾಗೂ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರಿಗೆ ಸಂದ ಪ್ರಾಮಾಣಿಕ ಗೌರವವಾಗಿದೆ. 2021 – 22 ರಲ್ಲಿ ಇವರಿಗೆಸ್ವಸ್ತಿಶ್ರೀ ಪ್ರಶಸ್ತಿ,ಶ್ಯಾಮರಾವ್ ಮೆಮೋರಿಯಲ್ ಉತ್ತಮ ಶಿಕ್ಷಕ ಪ್ರಶಸ್ತಿ,ಗುರು ಶ್ರೇಷ್ಠ ರಾಜ್ಯ ಪ್ರಶಸ್ತಿ ಬಂದಿರುತ್ತದೆ. ಸೆ.29ರಂದು ವಿಜಯಪುರದಲ್ಲಿ ನಡೆಯು ವ ರಾಜ್ಯ ಹಿಂದಿ ಶಿಕ್ಷಕರ ಸಮ್ಮೇಳನ ಹಾಗೂ ಕಾರ್ಯಾಗಾರದಲ್ಲಿ ಇಲಾಖಾ ಉನ್ನತ ಅಧಿಕಾರಿಗಳು ಹಾಗೂ ರಾಜ್ಯ ಸರ್ಕಾರದ ಸಚಿವರ ಮತ್ತು ಶಾಸಕರ ಗಣ್ಯ…
ಬಂಟ್ವಾಳ:ಜೆಸಿಐ ಬಂಟ್ವಾಳ ದ 2023 ರ ಜೇಸಿ ಸಪ್ತಾಹ ಸಮಾರೋಪ ಸಮಾರಂಭ ಸ್ಪರ್ಶ ಕಲಾಮಂದಿರದಲ್ಲಿ ನಡೆಯಿತು.ಸಾಧಕ ವ್ಯಕ್ತಿ ಗಳ ಸನ್ಮಾನ ಕಾರ್ಯಕ್ರಮದಲ್ಲಿ ಹಸಿರು ದಳದ ಸಂಯೋಜಕ ನಾಗರಾಜ್ ಅಂಚನ್ ಬಜಾಲ್, ಎಸ್ ಕೆ ಡಿಪಿ ಬಂಟ್ವಾಳ ವಲಯಾಧ್ಯಕ್ಷ ಕಿಶೋರ್ ಬಿ.ಸಿ. ರೋಡ್, ಕನ್ನಡ ಮಾಧ್ಯಮದಲ್ಲಿ ಎಎಸ್ ಎಸ್ ಎಲ್ ಸಿ ಯಲ್ಲಿ ಕನ್ನಡ ಮಾಧ್ಯಮದಲ್ಲಿ ಅತ್ಯಧಿಕ ಅಂಕ ಪಡೆದ ಪ್ರಥಮ್ ಹಾಗೂ ಬಾಲ ಪ್ರತಿಭೆ ಆದ್ಯ ಬಾಳೆಹಿತ್ಲು ರವರನ್ನು ಸನ್ಮಾನಿಸಲಾಯಿತು. Advertisement ಈ ಸಂದರ್ಭ ವೇದಿಕೆಯಲ್ಲಿ ವಲಯ ಉಪಾಧ್ಯಕ್ಷ ಅಜಿತ್ ಕುಮಾರ್, ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋ ಶಿಯೇಷನ್ ಅಧ್ಯಕ್ಷ ಕಿಶೋರ್ ಕುಮಾರ್, ವರ್ತಕರ ವಿವಿದ್ದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸುಭಾಷ್ ಚಂದ್ರ ಜೈನ್, ನಿಕಟ ಪೂರ್ವಧ್ಯಕ್ಷ ರೋಷನ್ ರೈ, ಪೂರ್ವಧ್ಯಕ್ಷರಾದ ಲೋಕೇಶ್ ಸುವರ್ಣ, ಜೇಸಿ ಸಪ್ತಾಹದ ನಿರ್ದೇಶಕರಾದ ಸಂತೋಷ್ ಜೈನ್, ಕಾರ್ಯಕ್ರಮ ಸಂಯೋಜಕ ಸದಾನಂದ ಬಂಗೇರ, ಕಾರ್ಯದರ್ಶಿ ರಶ್ಮಿ ಶೆಟ್ಟಿ, ಕೋಶಾಧಿಕಾರಿ ಶ್ರೀನಿವಾಸ್ ಉಪಸ್ಥಿತರಿದ್ದರು. ಬಂಟ್ವಾಳ ಜೇಸಿ ಯ ಎಲ್ಲಾ…
ಬಂಟ್ವಾಳ: 75 ವರ್ಷಗಳ ಹಿಂದೆ ಬಿ.ಕೃಷ್ಣ ರೈ ಅಧ್ಯಕ್ಷತೆಯಲ್ಲಿ ಆರಂಭಗೊಂಡ ಸಿದ್ಧಕಟ್ಟೆ ಸಹಕಾರಿ ವ್ಯವಸಾಯಿಕ ಸಂಘ ಪ್ರಗತಿಯ ಪಥದಲ್ಲಿದ್ದು, ಎಂಟು ಗ್ರಾಮಗಳಲ್ಲಿ ತೃಪ್ತಿಕರ ಸೇವೆ ನೀಡುತ್ತಿದೆ. 2022-23ನೇ ಸಾಲಿನ ವರ್ಷಾಂತ್ಯಕ್ಕೆ 46.04 ಕೋಟಿ ರೂ ಠೇವಣಿ ಇದ್ದು, ಸಾಲ ಹೊರಬಾಕಿ 81.74 ಕೋಟಿ ರೂ, ದುಡಿಯುವ ಬಂಡವಾಳ 173.35 ಕೋಟಿ ರೂ, ಹೂಡಿಕೆ 14.12 ಕೋಟಿ ರೂ, ಸಂಘದ ಒಟ್ಟು ವ್ಯವಹಾರ 376.85 ಕೋಟಿ ರೂ ಆಗಿದ್ದು, 1.5 ಕೋಟಿ ರೂ ನಿವ್ವಳ ಲಾಭ ಗಳಿಸಿದೆ, ಶೇ.99ರಷ್ಟು ಸಾಲ ವಸೂಲಾತಿ ಮಾಡಲಾಗಿದೆ ಎಂದು ಅಧ್ಯಕ್ಷ ಪ್ರಭಾಕರ ಪ್ರಭು ತಿಳಿಸಿದ್ದಾರೆ. ಸಂಘದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ , ಅವರು ಹವಾಮಾನ ಆಧರಿತ ಬೆಳೆ ವಿಮೆ ಸಾಲ 1166 ರೈತರ 1551 ಎಕರೆ 40 ಲಕ್ಷಕ್ಕೂ ಹೆಚ್ಚು ಪ್ರೀಮಿಯಂ ಪಾವತಿಸಲಾಗಿದೆ. 23ರಂದು ಶನಿವಾರ ಮಹಾಸಭೆ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿಯುಸಿ ಸಾಧಕ ಮಕ್ಕಳ ಪುರಸ್ಕಾರ ನಡೆಯಲಿದೆ. 486 ಕುಟುಂಬಗಳು ಯಶಸ್ವಿನಿ ಯೋಜನೆಗೆ ನೋಂದಣಿಯಾಗಿದೆ ಎಂದರು. ಶನಿವಾರ…
ಬಂಟ್ವಾಳ: ವಿಜಯಪುರ ಜಿಲ್ಲಾ ಥಾಂಗ ತಾ ಸಂಸ್ಥೆಯ ಆಶ್ರಯದಲ್ಲಿ ನಡೆಯುತ್ತಿರುವ ನಾಲ್ಕನೆಯ ರಾಜ್ಯಮಟ್ಟದ ಥಾಂಗ ತಾ (ಮಣಿಪುರ ಕಳರಿ ಫೈಟ್) ಕ್ರೀಡಾ ಕೂಟದಲ್ಲಿ ಕಲ್ಲಡ್ಕ ಶ್ರೀರಾಮ ವಿದ್ಯಾ ಸಂಸ್ಥೆ ಹಾಗೂ ಪೊಳಲಿ ರಾಮಕೃಷ್ಣ ತಪೋವನದಲ್ಲಿ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿ ಪದಕ ಗೆದ್ದುಕೊಂಡಿದ್ದಾರೆ Advertisement ಪೊಳಲಿ ರಾಮಕೃಷ್ಣ ತಪೋವನದಲ್ಲಿ ತರಬೇತಿ ಪಡೆಯುತ್ತಿರುವ ಗೀತಾ, ಕಲ್ಲಡ್ಕ ಶ್ರೀ ರಾಮ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಾ ಶಶಿರಾಜ್, ಹಾಗೂ ಯತೀಶ್ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಗೆದ್ದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶೀರಾಮ ವಿದ್ಯಾ ಸಂಸ್ಥೆಯಲ್ಲಿ ತರಬೇತಿ ಪಡೆಯುತ್ತಿರುವ ಆಶಿಶ್, ಪೊಳಲಿ ರಾಮಕೃಷ್ಣ ತಪೋವನದಲ್ಲಿ ತರಬೇತಿ ಪಡೆಯುತ್ತಿರುವ ಪೊಳಲಿ ಸರಕಾರಿ ಪ್ರೌಢ ಶಾಲೆಯ ಸಂದೀಪ್, ಸಾತ್ವಿಕ, ಜತೀನ್, ಚೇತನ್, ವಿದ್ಯಾವಿಲಾಸ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಅಭಿರಾಮಕಷ್ಣ ರಾವ್, ಆಳ್ವಾಸ್ ತನ್ಮಯ್ ತೃತೀಯ ಸ್ಥಾನದೊಂದಿಗೆ ಕಂಚಿನ ಪದಕ ಗೆದ್ದು ಕೊಂಡಿದ್ದಾರೆ. ಇವರಿಗೆ ಮಾರ್ಷಲ್ ಆರ್ಟ್ ತರಬೇತುದಾರ ರಾಜೇಶ್ ಬ್ರಹ್ಮರಕೂಟ್ಲು ತರಬೇತಿ ನೀಡುತ್ತಿದ್ದು ರಾಷ್ಟಮಟ್ಟದ ಸ್ಪರ್ಧೆ ಜಾರ್ಕಾಂಡ್…
ದಲಿತ ವಿರೋಧಿ ಸಚಿವ ಡಿ.ಸುಧಾಕರ್ ರಾಜೀನಾಮೆ ನೀಡಲಿ: ದಿನೇಶ್ ಅಮ್ಟೂರು ಬಂಟ್ವಾಳ: ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟದಲ್ಲಿರುವ ಸಚಿವ ಡಿ ಸುಧಾಕರ್ ರವರಿಂದ ದಲಿತ ಕುಟುಂಬ ಪ್ರಾಣಭಯದಿಂದ ಬದುಕುತ್ತಿದೆ. ಇದು ಇಡೀ ರಾಜ್ಯದಲ್ಲಿ ಇಂದಿನ ದಲಿತರ ಸ್ಥಿತಿಯ ಚಿತ್ರಣವಾಗಿದೆ. ಡಿ ಸುಧಾಕರ್ ರವರ ವಿರುದ್ಧ ದಲಿತರ ಮೇಲೆ ದೌರ್ಜನ್ಯ ಮತ್ತು ಜಾತಿ ನಿಂದನೆ ಪ್ರಕರಣದಡಿ ಎಫ್ಐಆರ್ ದಾಖಲಾಗಿದ್ದರೂ ಇದುವರೆಗೂ ಅವರ ರಾಜೀನಾಮೆ ಪಡೆಯದೆ ಇರುವುದು ಸರ್ಕಾರದ ಇಬ್ಬಂದಿ ನೀತಿಯನ್ನು ತೋರುತ್ತದೆ. ಮತ್ತು ಈ ಸರ್ಕಾರದಲ್ಲಿ ದಲಿತರ ಪ್ರಾಣ, ಮಾನಗಳಿಗೆ ಬೆಲೆ ಇಲ್ಲವೆಂಬುದು ಖಚಿತವಾಗಿದೆ. ಎಂದು ಬಂಟ್ವಾಳ ತಾಲೂಕು ಪಂಚಾಯತಿ ಮಾಜಿ ಉಪಾಧ್ಯಕ್ಷ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ದಿನೇಶ್ ಅಮ್ಟೂರು ಹೇಳಿದ್ದಾರೆ.ಸೆವೆನ್ ಹಿಲ್ಸ್ ಕಂಪನಿಯ ಪಾಲುದಾರರಾದ ಡಿ ಸುಧಾಕರ್ ರವರು ಮೋಸದಿಂದ ಯಲಹಂಕ ಗ್ರಾಮದ ಸುಬ್ಬಮ್ಮ ರವರಿಗೆ ಸೇರಿದ 108/1 ಸರ್ವೆ ನಂಬರ್ ಜಮೀನನ್ನು ಕಬಳಿಕೆ ಮಾಡಿರುವುದು ಸ್ಪಷ್ಟವಾಗಿ ದಾಖಲೆ ಸಮೇತ ತಿಳಿಯುತ್ತಿದೆ. ಈ ಜಮೀನಿನ ವಿವಾದವು ನ್ಯಾಯಾಲಯದಲ್ಲಿ ಇರುವಾಗಲೇ ಡಿ.…
ಬಂಟ್ವಾಳ: ಸನಾತನ ಹಿಂದೂ ಜಾತ್ರಾ ವ್ಯಾಪಾರಸ್ಥರ ದಕ್ಷಿಣ ಕನ್ನಡ ಜಿಲ್ಲಾ ಸಂಘಟನೆಯ ವತಿಯಿಂದ ಕರ್ನಾಟಕ ರಾಜ್ಯ ಸರಕಾರದ ಧಾರ್ಮಿಕ ದತ್ತಿ ಇಲಾಖೆಯ ಅಡಿಯಲ್ಲಿ ಬರುವಂತ ದೈವಸ್ಥಾನಗಳು ದೇವಸ್ಥಾನಗಳು ಧಾರ್ಮಿಕ ಶ್ರದ್ಧಾ ಕೇಂದ್ರಗಳಲ್ಲಿ ಹಾಗೂ ವರ್ಷಂಪ್ರತಿ ನಡೆಯುತ್ತಿರುವಂತ ಜಾತ್ರಾ ಮಹೋತ್ಸವಗಳು ಬ್ರಹ್ಮಕಲಶೋತ್ಸವಗಳು ನೇಮೋತ್ಸವಗಳು ಹಾಗೂ ಸನಾತನ ಹಿಂದೂ ಧರ್ಮದ ಯಾವುದೇ ಉತ್ಸವದ ಕಾರ್ಯಕ್ರಮಗಳಲ್ಲಿ ಅನ್ಯಧರ್ಮಿಯರಿಗೆ ಅವಕಾಶ ನೀಡದೆ ಸನಾತನ ಹಿಂದೂ ಜಾತ್ರಾ ವ್ಯಾಪಾರಸ್ಥರ ಸಂಘದ ಎಲ್ಲಾ ಬಡ ವ್ಯಾಪಾರಸ್ಥರಿಗೆ ಬೀದಿ ವ್ಯಾಪಾರಸ್ಥರಿಗೆ ಅವಕಾಶ ಮಾಡಿಕೊಡಬೇಕಾಗಿ ವಿನಂತಿಸಿ ಅದಲ್ಲದೆ ಹರಾಜು ಪ್ರಕ್ರಿಯೆ ಸಂದರ್ಭದಲ್ಲಿ ಮಧ್ಯವರ್ತಿಗಳನ್ನ ಬಳಸಿಕೊಳ್ಳದೆ ನೇರ ಆಡಳಿತ ಮಂಡಳಿಯವರು ಹಾಗೂ ಧಾರ್ಮಿಕ ಇಲಾಖೆಯ ಅಧಿಕಾರಿಗಳು ಯಾರಿಗೂ ತೊಂದರೆಯಾಗದ ರೀತಿಯಲ್ಲಿ ಕಡಿಮೆ ದರದಲ್ಲಿ ಸನಾತನ ಹಿಂದೂ ಜಾತ್ರಾ ಬಡ ವ್ಯಾಪಾರಸ್ಥರಿಗೆ ಅವಕಾಶ ಮಾಡಿಕೊಡಬೇಕೆಂದು ವಿನಂತಿಸಿ ಹಾಗು ಕಾರ್ಯಕ್ರಮಗಳು ಮುಗಿದ ನಂತರ ಶುಚಿತ್ವವನ್ನು ಕಾಪಾಡುವಂತ ದೃಷ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿಜಿಯವರ ಆಶಯದಂತೆ ಸ್ವಚ್ಛ ಭಾರತ್ ಕಲ್ಪನೆಯೊಂದಿಗೆ ಸನಾತನ ಹಿಂದೂ ಜಾತ್ರಾ ವ್ಯಾಪಾರಸ್ಥರ ಸಂಘದ ಸದಸ್ಯರೆಲ್ಲರೂ ಈ…