Author: admin

ಬಂಟ್ವಾಳ: ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಇದರ 16ನೇ ವಾಮಂಜೂರು ಶಾಖೆ ವಾಮಂಜೂರಿನ ಬಾವಾ ಬಿಲ್ಡರ್ ಸ್ಮಾರ್ಟ್ ಸಿಟಿ ಕಟ್ಟಡದಲ್ಲಿ ಬುಧವಾರ ಶುಭಾರಂಭಗೊಂಡಿತು. ಮಾಜಿ ಸಚಿವ ಬಿ.ರಮಾನಾಥ ರೈ ನೂತನ ಶಾಖೆ ಉದ್ಘಾಟಿಸಿದರು. ಅವರು ಮಾತನಾಡಿ ದುರ್ಲಬವಾದ ಮನುಷ್ಯ ಜನ್ಮವನ್ನು ಒಳ್ಳೆಯ ಕಾರ್ಯದ ಮೂಲಕ ಸಾರ್ಥಕಗೊಳಿಸಬೇಕು. ವಿಶ್ವ ಮಾನವರಾಗಿ ಬದುಕುವ ಪ್ರಯತ್ನ ಮಾಡಬೇಕು ಎಂದು ತಿಳಿಸಿದರು. ಸಂಜೀವ ಪೂಜಾರಿಯವರು ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘವನ್ನು ಸ್ಥಾಪಿಸಿ, ಮೂರ್ತೆದಾರರ ಸಮುದಾಯ ಆರ್ಥಿಕವಾಗಿ ಬಲಯುತವಾಗ ಬೇಕೆನ್ನುವ ಉದ್ದೇಶದಿಂದ ಮಾಡಿದ ಕೆಲಸ ಶ್ರೇಷ್ಠವಾದುದು. ಇದರ ಎಲ್ಲಾ 16 ಶಾಖೆಗಳನ್ನು ಉದ್ಘಾಟಿಸಲು ಸಿಕ್ಕಿರುವ ಅವಕಾಶಕ್ಕಾಗಿ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು. ಭದ್ರತಾ ಕೋಶವನ್ನು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ವೈ ಭರತ್ ಶೆಟ್ಟಿ ಉದ್ಘಾಟಿಸಿದರು. ಅವರು ಮಾತನಾಡಿ ಕೆಲವು ಸಹಕಾರಿ ಬ್ಯಾಂಕ್‌ಗಳ ಲಾಭಂಶ ಕೇವಲ ಪುಸ್ತಕದಲ್ಲಿ ಮಾತ್ರ ದಾಖಲಾಗಿರುತ್ತದೆ. ಅಂತಹ ಸಂಘಗಳಿಗೆ ಹೆಚ್ಚಿನ ಶಾಖೆ ಮಾಡಲು ಸಾಧ್ಯವಾಗುವುದಿಲ್ಲ. ಆದರೆ ಸಜೀಪಮುನ್ನೂರು ಮೂರ್ತೆದಾರರ ಸಹಕಾರಿ ಸಂಘ…

Read More

ಬಂಟ್ವಾಳ: ಮಾರ್ನಬೈಲು ಅಯ್ಯಪ್ಪ ಸ್ವಾಮಿ ಮಂದಿರ ಅಭಿವೃದ್ಧಿ ಹಾಗೂ ಸಂಕಲ್ಪ ಸಿದ್ಧಿಗಾಗಿ 18 ಗುರುವಾರಗಳ ಪರ್ಯಂತ ನಡೆಯುವ ವಿಶೇಷ ಪಂಚಾರತಿ ಸೇವೆಯ ಐದನೇ ಗುರುವಾರದ ಪಂಚಾರತಿ ಸೇವೆ ನಡೆಯಿತು. ಅಭ್ಯಾಗತರಾಗಿ ಉದ್ಯಮಿ ಬಿ. ಯೋಗೀಶ್ ನಾಯಕ್, ಸುಪ್ರೀತ್ ಶೆಟ್ಟಿ, ಹರಿಯಪ್ಪ ಮೂಲ್ಯ, ಉದಯ ಕುಮಾರ್ ನಾಯಕ್ ಪ್ರಶಸ್ತಿ ಪುರಸ್ಕೃತ ಶಿಕ್ಷಕ ರಮಾನಂದ ನೂಜಿಪ್ಪಾಡಿ ಶ್ರೀ ಅಯ್ಯಪ್ಪ ದೇವರಿಗೆ ಪಂಚಾರತಿ ಬೆಳಗಿದರು. ಈ ಸಂದರ್ಭ ಶಿಕ್ಷಕ ರಮಾನಂದ ನೂಜಿಪ್ಪಾಡಿ ಮಾತನಾಡಿ ಶ್ರೀ ಅಯ್ಯಪ್ಪ ಮಂದಿರ ಈ ಭಾಗದ ಜನರ ಶ್ರದ್ಧಾ ಕೇಂದ್ರವಾಗಿ ಬೆಳೆಯುತ್ತಿದೆ. ಮಂದಿರದ ಅಭಿವೃದ್ಧಿಯ ದೃಷ್ಟಿಯಿಂದ ಹಮ್ಮಿಕೊಂಡಿರುವ ಈ ಕಾರ್ಯ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು. ಅಯ್ಯಪ್ಪ ಸ್ವಾಮಿ ಮಂದಿರದ ಅಭಿವೃದ್ಧಿ ಸಮಿತಿ ಅಧ್ಯಕ್ಷ ದಾಮೋದರ ಬಿ.ಎಂ. ಮಾರ್ನಬೈಲು ಪ್ರಸ್ತಾವನೆಗೈದರು. ಅಯ್ಯಪ್ಪ ಸ್ವಾಮಿ ಮಂದಿರದ ಆಡಳಿತ ಟ್ರಸ್ಟ್ ಗೌರವಾಧ್ಯಕ್ಷರಾದ ಸಂಜೀವ ಗುರುಸ್ವಾಮಿ, ಕೃಷ್ಣ ಗುರುಸ್ವಾಮಿ, ಅಧ್ಯಕ್ಷ ಪುರುಷೋತ್ತಮ ಪೂಜಾರಿ ನಾಗನವಳಚ್ಚಿಲು, ಅಭಿವೃದ್ಧಿ ಸಮಿತಿ ಕಾರ್ಯದರ್ಶಿ ಅಶೋಕ್ ಗಟ್ಟಿ ನಂದಾವರ, ಕೋಶಾಧಿಕಾರಿ ರಂಜಿತ್…

Read More

ಬಂಟ್ವಾಳ: ಸಹಕಾರಿ ರಂಗದಲ್ಲಿ ವಿಶಿಷ್ಠ ಛಾಪನ್ನು ಮೂಡಿಸಿರುವ ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ತನ್ನ 16ನೇ ವಾಮಂಜೂರು ಶಾಖೆಯ ಉದ್ಘಾಟನಾ ಸಮಾರಂಭದ ಸಂಭ್ರಮದಲ್ಲಿದೆ. ವಾಮಂಜೂರಿನ ಬಾವಾ ಬಿಲ್ಡರ್ ಸ್ಮಾರ್ಟ್ ಸಿಟಿ ಕಟ್ಟಡದಲ್ಲಿ ಎ.30ರಂದು ಬುಧವಾರ ಬೆಳಿಗ್ಗೆ 10.30ಕ್ಕೆ ವಾಮಂಜೂರು ಶಾಖೆ ಉದ್ಘಾಟನೆಗೊಳ್ಳಲಿದೆ. ೧೬ನೇ ವಾಮಂಜೂರು ಶಾಖೆಯನ್ನು ಮಾಜಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಲಿರುವರು. ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕೆ. ಸಂಜೀವ ಪೂಜಾರಿ ಅಧ್ಯಕ್ಷತೆ ವಹಿಸುವರು. ಭದ್ರತಾ ಕೋಶವನ್ನು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ವೈಭರತ್ ಶೆಟ್ಟಿ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ದ.ಕ. ಜಿಲ್ಲೆ ಸಹಕಾರ ಸಂಘಗಳ ಉಪನಿಬಂಧಕ ರಮೇಶ್ ಎಚ್.ಎನ್., ವಾಮಂಜೂರು ಸೈಂಟ್ ಜೋಸೆಫ್ ದಿ ವರ್ಕರ್ ಚರ್ಚ್‌ನ ಧರ್ಮಗುರುಗಳಾದ ವಂ. ಫಾ. ಜೇಮ್ಸ್ ಡಿಸೋಜಾ, ವಾಮಂಜೂರು, ಇಸ್ಲಾಹುಲ್ ಇಸ್ಲಾಂ ಮದರಸ ಮತ್ತು ಜುಮ್ಮಾ ಮಸ್ಜಿದ್ ಖತೀಬರಾದ ಅಬ್ದುಲ್ ರಹಿಮಾನ್ ಕೋಯ, ಗುರುಪುರ ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕ…

Read More

ಬಂಟ್ವಾಳ: ಕರಾವಳಿ ನಿವೃತ್ತ ಬಿಎಸ್ ಎಫ್ ಯೋಧರ ಕ್ಷೇಮಾಭಿವೃದ್ಧಿ ಸಂಘದ ರಚನಾ ಸಭೆ ಭಾನುವಾರ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಿತು. ಬಿ.ಸಿ.ರೋಡಿನ ಹಿರಿಯ ವಕೀಲ ಜಯರಾಂ ರೈ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ನಾವು ಯಾವಾಗ ಸಂಘಟಿತರಾಗುತ್ತೇವೆಯೋ ಆಗ ಬೆಲೆ‌ ಜಾಸ್ತಿ. ಸಂಘ ಕಟ್ಟುವಾಗ ಅದು ಬೇಕೇ? ಅದರಿಂದ ನಮಗೇನು ಪ್ರಯೋಜನ ಎನ್ನುವ ಮಾತುಗಳು ಸಾಮಾನ್ಯವಾಗಿ ಕೇಳಿ ಬರುತ್ತದೆ. ಅದರ ಬದಲು ನಾವು ಹೇಗೆ ಸಂಘಟನೆಯಲ್ಲಿ ತೊಡಗಿಸಿಕೊಳ್ಳುತ್ತೇವೆಯೋ ಅದು ಅತ್ಯಂತ ಮುಖ್ಯವಾಗಿರುತ್ತದೆ ಎಂದರು. ಕಷ್ಟಗಳು ಬಂದಾಗ ಎಂದಿಗೂ ಸದಸ್ಯರನ್ನು ಸಂಘ ಬಿಡವುದಿಲ್ಲ. ಅದು ನಮ್ಮ‌ಸಂಸ್ಥೆಯ ಸದಸ್ಯ ಎನ್ನುವ ಮನೋಭಾವದಿಂದ ನೆರವಾಗುತ್ತದೆ. ಸದಸ್ಯರಲ್ಲಿ ಸಕರಾತ್ಮಕ ಚಿಂತನೆ, ನಂಬಿಕೆ, ಭರವಸೆ, , ವಿಶ್ವಾಸ ಇದ್ದಾಗ ಸಂಘಟನೆ ಯಶಸ್ವಿಯಾಗಿ ಮುನ್ನಡೆಯಲು ಸಾಧ್ಯ ಎಂದರು. ನಿವೃತ್ತ ಬಿಎಸ್ ಎಫ್ ಡೆಪ್ಯೂಟಿ ಕಮಾಂಡೆಂಟ್ ಚಂದಪ್ಪ ಮೂಲ್ಯ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಪ್ರಾಸ್ತವಿಕವಾಗಿ ಮಾತನಾಡಿ ನಿವೃತ್ತ ಯೋಧರು ತಮ್ಮ ಪಿಂಚಣಿ, ಮಕ್ಕಳ ವಿದ್ಯಾಭ್ಯಾಸ, ಕುಟುಂಬ ವ್ಯವಸ್ಥೆ, ಸಮಾಜ ಸೇವೆ ಮೊದಲಾದ…

Read More

ಬಂಟ್ವಾಳ: ಜಮ್ಮು ಕಾಶ್ಮೀರದಲ್ಲಿ ನಡೆದ ಹಿಂದುಗಳ ಹತ್ಯೆಯನ್ನು ಖಂಡಿಸಿ ಭಾನುವಾರ ಅಮ್ಟೂರಿನ ಶ್ರೀಕೃಷ್ಣ ಮಂದಿರದ ಸಭಾಭವನದಲ್ಲಿ ವಿಶ್ವ ಹಿಂದು ಪರಿಷತ್, ಬಜರಂಗದಳ, ಬಿಜೆಪಿ ಅಮ್ಟೂರು ಘಟಕದ ಆಶ್ರಯದಲ್ಲಿ ಪ್ರತಿಭಟನಾ ಸಭೆ ನಡೆಯಿತು. ಪಹಲ್ಗಾಂಮ್ ನಲ್ಲಿ ನಡೆದ ಭೀಕರ ಹತ್ಯೆಯನ್ನು ಖಂಡಿಸಿ ಮತ್ತು ಈ ಹತ್ಯೆಯನ್ನು ಮಾಡಿದ ಜಿಹಾದಿ ಮನಸ್ಥಿತಿಯ ಪಾಕಿಸ್ತಾನದ ಭಯೋತ್ಪಾದಕರ ಕೃತ್ಯವನ್ನು ಖಂಡಿಸಲಾಯಿತು. ಮೃತಪಟ್ಟ ಪ್ರವಾಸಿಗ ಸಹೋದರರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ಅಮ್ಟೂರು ಶ್ರೀಕೃಷ್ಣ ಮಂದಿರದ ಅಧ್ಯಕ್ಷ ರಮೇಶ್ ಶೆಟ್ಟಿಗಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿಶ್ವ ಹಿಂದು ಪರಿಷದ್ ಬಂಟ್ವಾಳ ಘಟಕದ ಅಧ್ಯಕ್ಷ, ನ್ಯಾಯವಾದಿ ಪ್ರಸಾದ್ ಕುಮಾರ್ ರೈ ದಿಕ್ಸೂಚಿ ಭಾಷಣ ಮಾಡಿ ಕಾಶ್ಮೀರದಲ್ಲಿ ಧರ್ಮದ ಆಧಾರದಲ್ಲಿ ಪ್ರವಾಸಿಗರನ್ನು ಪ್ರತ್ಯೇಕಿಸಿ ಹತ್ಯೆ ಮಾಡಿದ ಪ್ರಕರಣವು ಆತಂಕಕಾರಿಯಾಗಿದ್ದು, ಇದರ ಕುರಿತು ಹಿಂದು ಸಮಾಜ ಜಾಗೃತರಾಗುವ ಅವಶ್ಯಕತೆ ಇದೆ. ನಮ್ಮ ದೇಶದ ಸೌಂದರ್ಯದ ಶಿಖರವನ್ನು ವೀಕ್ಷಿಸಲು ಹೋದವರು ಇಂದು ಶವವಾಗಿ ಮರಳಿದ್ದಾರೆ. ಈ ದೇಶದ ಪ್ರಕೃತಿ ರಮಣೀಯವಾದ ಪ್ರದೇಶಕ್ಕೆ ಮದುವೆಯಾಗಿ ಹೋದವರು, ಕುಟುಂಬ…

Read More

ಬಂಟ್ವಾಳ: ರೈತರ ನೀರಾವರಿ ಪಂಪ್ ಸೆಟ್ ವಿದ್ಯುತ್ ಸಂಪರ್ಕ ಅಭಿವೃದ್ದಿ ಶುಲ್ಕ ಕೈ ಬಿಡುವಂತೆ ಸಿದ್ಧಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರಭಾಕರು ಪ್ರಭು ರಾಜ್ಯ ಇಂಧನ ಸಚಿವರಿಗೆ ಮನವಿ ಮಾಡಿದ್ದಾರೆ. ರೈತರು ತಮ್ಮ ಕೃಷಿ ಜಮೀನಿನಲ್ಲಿ ಕೃಷಿ ಸಂಬಂಧಿತ ಬೆಳೆಗಳಿಗೆ ನೀರಾವರಿ ಸೌಲಭ್ಯಕ್ಕಾಗಿ ನೀರಾವರಿ ಪಂಪ್ ಸೆಟ್‌ಗಳಿಗೆ ವಿದ್ಯುತ್ ಸಂಪರ್ಕ ಪಡೆಯಲು ಶೀಘ್ರ ವಿದ್ಯುತ್ ಸಂಪರ್ಕ ಯೋಜನೆಯಡಿಯಲ್ಲಿ ವಿದ್ಯುತ್ ಸರಬರಾಜು ಕಂಪೆನಿಗಳಿಗೆ ಅರ್ಜಿ ಸಲ್ಲಿಸುವಾಗಲೇ ಠೇವಣಿಯೊಂದಿಗೆ ಅಭಿವೃದ್ದಿ ಶುಲ್ಕವಾಗಿ ರೂ.15 ಸಾವಿರ ಹೆಚ್ಚುವರಿಯಾಗಿ ಪಾವತಿಸಲು ಸರಕಾರದ ಇಂಧನ ಇಲಾಖಾ ಕಾರ್ಯದರ್ಶಿ ಆದೇಶ ಹೊರಡಿಸಿದ್ದರಿಂದ ರಾಜ್ಯದ ಕೃಷಿಕ ಕುಟುಂಬಗಳಿಗೆ ಮತ್ತು ರೈತರಿಗೆ ತುಂಬಾ ಹೊರೆಯಾಗಿದ್ದು ,ರೈತರು ಸರಕಾರದ ನಿಲುವಿನ ಬಗ್ಗೆ ಕಳವಳ ವ್ಯಕ್ತಪಡಿಸುತ್ತಿದ್ದಾರೆ . ಈಗಾಗಲೇ ರಾಜ್ಯಾದ್ಯಂತ ಲಕ್ಷಾಂತರ ರೈತರು ತಮ್ಮ ಕೃಷಿ ಚಟುವಟಿಕೆಗಳಿಗೆ ನೀರಾವರಿ ಸೌಲಭ್ಯಕ್ಕಾಗಿ ವಿದ್ಯುತ್ ಸಂಪರ್ಕ ಪಡೆಯಲು ಅರ್ಜಿ ಸಲ್ಲಿಸಿ ಕೆಲಸಕ್ಕೆ ಆದೇಶವಾಗಿದ್ದುಕೊಂಡು ವಿದ್ಯುತ್ ಸಂಪರ್ಕ ಪಡೆಯುವ ಈ ಸಂದರ್ಭದಲ್ಲಿ ಇಂತಹ ಆದೇಶಗಳು…

Read More

ಬಂಟ್ವಾಳ: ಲಯನ್ಸ್ ಕ್ಲಬ್ ಬಂಟ್ವಾಳದ ವತಿಯಿಂದ ಲೇಡಿ ಲಯನ್ಸ್ ಡೇ ಕಾರ್ಯಕ್ರಮವು ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಿತು. ಏಪ್ರಿಲ್ ತಿಂಗಳ ಮಾಸಿಕ ಸಭೆಯೊಂದಿಗೆ ಮಕ್ಕಳ , ಮಹಿಳೆಯರ ಹಾಗೂ ಲಯನ್ಸ್ ಕುಟುಂಬದ ಸದಸ್ಯರ ವಿವಿಧ ಒಳಾಂಗಣ ಆಟೋಟಗಳು, ಮನೋರಂಜನಾ ಸ್ಪರ್ಧೆಗಳೊಂದಿಗೆ ಕಾರ್ಯಕ್ರಮ ಬಹಳ ಆಕರ್ಷಕವಾಗಿ ಮೂಡಿ ಬಂತು. ಸಭಾ ಕಾರ್ಯಕ್ರಮಕ್ಕಿಂತ ಮುಂಚಿತವಾಗಿ ಸೈಬರ್ ಲಾ ಬಗ್ಗೆ ಅನಂತ ಪ್ರಭು ಸೈಬರ್ ಕಳ್ಳರಿಂದ ನಾವು ಹೇಗೆ ರಕ್ಷಿಸಿಕೊಳ್ಳಬೇಕೆಂಬ ಮುಂಜಾಗೃತೆ ಬಗ್ಗೆ ಮಾಹಿತಿ ನೀಡಿದರು. ಕ್ಲಬ್ ಅಧ್ಯಕ್ಷ ರಾಧಾಕೃಷ್ಣ ಬಂಟ್ವಾಳ ಅಧ್ಯಕ್ಷತೆಯಲ್ಲಿ ನಡೆದ ಮಹಿಳಾ ದಿನಾಚರಣೆ ಸಭಾ ಕಾರ್ಯಕ್ರಮದಲ್ಲಿ ಲಯನ್ಸ್ ಜಿಲ್ಲಾ ಸಂಪುಟ ಕಾರ್ಯದರ್ಶಿ ಗೀತಾ ರಾವ್ ಹಾಗೂ ರೇಣುಕಾ ಅನಂತಕೃಷ್ಣ ರವರು ಅತಿಥಿಗಳಾಗಿ ಭಾಗವಹಿಸಿ ಸಂಸ್ಥೆಯ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ಮಾತುಗಳನ್ನಾಡಿದರು. ಇತ್ತೀಚಿಗೆ ನಡೆದ ಜಿಲ್ಲಾ ಅಧಿವೇಶನದಲ್ಲಿ ಆಯ್ಕೆಯಾದ ಚುನಾಯಿತ ರಾಜ್ಯಪಾಲ ಕುಡ್ಪಿ ಅರವಿಂದ ಶೆಣೈ, ಚುನಾಯಿತ ದ್ವಿತೀಯ ಉಪ ರಾಜ್ಯಪಾಲ ಗೋವರ್ಧನ್ ಶೆಟ್ಟಿ , ಚುನಾವಣಾ ಪ್ರಕ್ರಿಯೆ ಅಚ್ಚುಕಟ್ಟಾಗಿ ನಡೆಸಿಕೊಟ್ಟ ಪೂರ್ವ…

Read More

ಬಂಟ್ವಾಳ: ಇಲ್ಲಿನ ಬೈಪಾಸ್‌ನಲ್ಲಿ ಸ್ವಂತ ಕಟ್ಟಡದಲಿ ಕೇಂದ್ರ ಕಛೇರಿ ಹೊಂದಿರುವ ಸಮಾಜ ಸೇವಾ ಸಹಕಾರಿ ಸಂಘವು 2024-25ನೇ ಸಾಲಿನಲ್ಲಿ ರೂ. 1159 ಕೋಟಿ ವ್ಯವಹಾರ ನಡೆಸಿದ್ದು ರೂ. 5.05 ಕೋಟಿ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಸುರೇಶ್ ಕುಲಾಲ್ ತಿಳಿಸಿದರು. ಸಂಘದ ಪ್ರಧಾನ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಅವರು ಮಾಹಿತಿ ನೀಡಿ ಆರ್ಥಿಕ ವರ್ಷ2024-25ರ ಅಂತ್ಯಕ್ಕೆ ಸಂಘದಲ್ಲಿ 9047 ‘ಎ’ ತರಗತಿ, 5556 ‘ಬಿ’ ತರಗತಿ ಸದಸ್ಯರಿದ್ದು ರೂ. 8.09 ಕೋಟಿ ಪಾಲು ಬಂಡವಾಳ ಹೊಂದಿರುತ್ತದೆ. ೧19.77 ಕೋಟಿ ರೂ. ನಿಧಿಗಳು, 55.35ಕೋಟಿ ರೂ. ವಿನಿಯೋಗಗಳು, 229.47 ಕೋಟಿ ರೂ. ಠೇವಣಾತಿಗಳು ಇದ್ದು 215.21 ಕೋಟಿ ರೂ. ಹೊರ ಬಾಕಿ ಸಾಲಗಳು ಇರುತ್ತದೆ. ಸಂಘದ ದುಡಿಯುವ ಬಂಡವಾಳ ರೂ. 259.66ಕೋಟಿ ಆಗಿರುತ್ತದೆ. ಆಡಿಟ್ ವರ್ಗೀಕರಣದಲ್ಲಿ ಸತತವಾಗಿ ಎ ತರಗತಿ ಹೊಂದಿರುವ ಸಂಘವು ಸದಸ್ಯರ ಅನುಕೂಲಕ್ಕಾಗಿ ಬಂಟ್ವಾಳ ಬೈಪಾಸ್ ಶಾಖೆಯಲ್ಲಿ ಇ-ಸ್ಟ್ಯಾಂಪ್ ಸೌಲಭ್ಯವನ್ನು, ಕೆಲವು ಶಾಖೆಗಳಲ್ಲಿ ಸೇಪ್ ಲಾಕರ್ ಸೌಲಭ್ಯವನ್ನು, ಮಣಿಪಾಲ…

Read More

ಬಂಟ್ವಾಳ: ಸೋಮವಾರ ರಾತ್ರಿ ಬಂಟ್ವಾಳ ತಾಲೂಕು ವ್ಯಾಪ್ತಿಯಲ್ಲಿ ಭಾರೀ ಗಾಳಿ ಮಳೆ ಸುರಿದಿದೆ.ಬಂಟ್ವಾಳ ಮೂಡ ಗ್ರಾಮದ ಅಲೆತ್ತೂರಿನಲ್ಲಿ ಸೋಮವಾರ ರಾತ್ರಿ ಗ್ರಾಮ ದೈವ ಪಂಜುರ್ಲಿ ದೈವದ ನೇಮೋತ್ಸವ ನಡೆದಿದ್ದು ಎಡೆಬಿಡದೆ ಸುರಿದ ಗಾಳಿ, ಮಿಂಚು, ಗುಡಿಗಿನ ಮಳೆಯನ್ನು ಲೆಕ್ಕಿಸದೆ ನೇಮೋತ್ಸವ ನಡೆದಿರುವುದು ಗಮನ ಸೆಳೆದಿದೆ. ನೇಮೋತ್ಸವ ವೀಕ್ಷಿಸಲು ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದು ಮಳೆಯಲ್ಲೂ ನಡೆದ ಪಂಜುರ್ಲಿ ದೈವದ ನೇಮೋತ್ಸವ ವೀಕ್ಷಿಸಿ ಪುನೀತರಾದರು.

Read More

ಬಂಟ್ವಾಳ: ಮಾರ್ನಬೈಲು ಶ್ರೀ ಅಯ್ಯಪ್ಪ ಮಂದಿರದ ಅಭಿವೃದ್ದಿ ಹಾಗೂ ಭೂಮಿ ಖರೀದಿಯ ಸಂಕಲ್ಪ ಸಿದ್ದಿಗಾಇ ೧೮ ಗುರುವಾರಗಳ ಕಾಲ ನಡೆಯುವ ಪಂಚಾರತಿ ಸೇವೆಯ ೪ನೇ ವಾರದ ಸೇವೆಯಲ್ಲಿ ಪಂಚ ಅಭ್ಯಾಗತರಾಗಿ ರತ್ನಾಕರ ಶೆಟ್ಟಿ ಕಲ್ಲಡ್ಕ, ಕೃಷ್ಣ ಬಿ. ಜೋಗೊಟ್ಟು ಅಮ್ಟೂರು, ಸಂಜೀವ ಬಿ. ಶೆಟ್ಟಿ ಬೋಳಂತೂರುಗುತ್ತು, ನಾಗೇಶ್ ಕುಲಾಳ್‌ನರಿಕೊಂಬು, ರಾಮಕೃಷ್ಣ ಪೂಜಾರಿ ಮಿತ್ತಮಜಲು ಶ್ರೀ ದೇವರಿಗೆ ಪಂಚಾರತಿ ಬೆಳಗಿದರು. ಅಯ್ಯಪ್ಪ ಸ್ವಾಮಿ ಮಂದಿರದ ಅಭಿವೃದ್ಧಿ ಸಮಿತಿ ಅಧ್ಯಕ್ಷ ದಾಮೋದರ ಬಿ.ಎಂ. ಮಾರ್ನಬೈಲು ಪ್ರಸ್ತಾವನೆಗೈದರು. ಅಯ್ಯಪ್ಪ ಸ್ವಾಮಿ ಮಂದಿರದ ಆಡಳಿತ ಟ್ರಸ್ಟ್ ಗೌರವಾಧ್ಯಕ್ಷ ಸಂಜೀವ ಗುರುಸ್ವಾಮಿ, ಕೃಷ್ಣ ಗುರುಸ್ವಾಮಿ, ಅಧ್ಯಕ್ಷ ಪುರುಷೋತ್ತಮ ಪೂಜಾರಿ ನಾಗನವಳಚ್ಚಿಲು, ಕಾರ್ಯದರ್ಶಿ ಯಶವಂತ ಕೆ. ಪುತ್ತೂರು, ಅಭಿವೃದ್ಧಿ ಸಮಿತಿ ಕಾರ್ಯದರ್ಶಿ ಅಶೋಕ್ ಗಟ್ಟಿ ನಂದಾವರ, ಕೋಶಾಧಿಕಾರಿ ರಂಜಿತ್ ರಾವ್ ಬಟ್ಟಡ್ಕ, ಭಜನಾ ಮಂಡಳಿ ಅಧ್ಯಕ್ಷ ಸುರೇಶ್ ಕುಲಾಲ್ ಕಲ್ಲಾಡಿಗೋಳಿ, ಪದಾಧಿಕಾರಿಗಳಾದ ನಾಗೇಶ್ ಕುಲಾಲ್ ಕೋಮಾಲಿ, ಯೋಗೀಶ್ ಗಟ್ಟಿ ನಂದಾವರ, ರಾಜೀವ ಕೊಟ್ಟಾರಿ ಕಲ್ಲಡ್ಕ, ವಿಶ್ವನಾಥ ಆಚಾರ್ಯ ಮಾರ್ನಬೈಲು, ದಯಾನಂದ…

Read More