Author: admin

ಬಂಟ್ವಾಳ: ಈ ಹಿಂದೆ ಬಂಟ್ವಾಳ ಸೇರಿದಂತೆ ಐದು ಬಾರಿ ವೈಶಿಷ್ಟ್ಯಪೂರ್ಣ ಹಲಸು ಮೇಳ ಯಶಸ್ವಿಯಾಗಿ ನೆರವೇರಿಸಿ ಜೂ. 17 ರಿಂದ 18ರತನಕ ಪುತ್ತೂರು ಜೈನ ಭವನ ದಲ್ಲಿ ಜಿಲ್ಲಾ ಮಟ್ಟದ 6 ನೇ ‘ಹಲಸು ಹಣ್ಣು ಮೇಳ’ ಆಯೋಜಿಸಲಾಗಿದೆ ಎಂದು ಪುತ್ತೂರು ನವತೇಜ ಟ್ರಸ್ಟ್ ಅಧ್ಯಕ್ಷ ಅನಂತಪ್ರಸಾದ್ ನೈತಡ್ಕ ಹೇಳಿದ್ದಾರೆ. Advertisement ಇಲ್ಲಿನ ಬಿ.ಸಿ.ರೋಡಿನಲ್ಲಿ ಬುಧವಾರ ಸಂಜೆ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಪುತ್ತೂರು ನವತೇಜ ಟ್ರಸ್ಟ್ ಸಹಿತ ಜೆಸಿಐ ಪುತ್ತೂರು ಮತ್ತು ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ ಬೆಂಗಳೂರು ಇದರ ಸಹಭಾಗಿತ್ವದಲ್ಲಿ ನಡೆಯುವ ಈ ಮೇಳದಲ್ಲಿ ಸುಮಾರು ೩೦ಕ್ಕೂ ಮಿಕ್ಕಿ ಮಳಿಗೆಗಳಲ್ಲಿ ತಾಜಾ ಹಲಸಿನ ಉತ್ಪನ್ನಗಳ ಮಾರಾಟವಿದೆ. ಯಾವುದೇ ಕೃತಕ ಬಣ್ಣ ಬಳಸದೆ ಹಲಸಿನ ಗಟ್ಟಿ, ಹಲ್ವ, ದೋಸೆ, ಮಂಚೂರಿ, ಕಬಾಬ್, ಪಾಯಸ, ಐಸ್ ಕ್ರೀಂ, ಫಿಜಾ, ಬರ್ಗರ್ ಮತ್ತಿತರ ವೈಶಿಷ್ಟ್ಯಪೂರ್ಣ ತಿಂಡಿ ತಿನಿಸು ಗ್ರಾಹಕರನ್ನು ಆಕರ್ಷಿಸಲಿದೆ ಎಂದರು. ಇದೇ ವೇಳೆ ವಿವಿಧ ಬಗೆಯ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ, ಆಹಾರ…

Read More

ಇಲ್ಲಿನ ಆಹಾರ ಇಲಾಖೆಯಲ್ಲಿ ಜೂ. 28ರಂದು ಸರ್ವರ್ ನಿರ್ವಹಣಾ ಕಾರ್ಯ ನಡೆಯಲಿದೆ. ಆದುದರಿಂದ ಅರ್ಹ ಪಡಿತರ ಚೀಟಿದಾರರು ಈ ತಿಂಗಳ ಪಡಿತರ ಸಾಮಾಗ್ರಿಗಳನ್ನು ಆಯಾಯ ನ್ಯಾಯಬೆಲೆ ಅಂಗಡಿಗಳಲ್ಲಿ ಜೂ. 27ರೊಳಗೆ ಪಡೆದುಕೊಳ್ಳಬೇಕು. ಆ ಬಳಿಕ ಪಡಿತರ ಸಾಮಾಗ್ರಿ ಪಡೆದುಕೊಳ್ಳಲು ಅವಕಾಶ ಇಲ್ಲ ಎಂದು ತಹಶೀಲ್ದಾರ್ ಕಚೇರಿ ಪ್ರಕಟಣೆ ತಿಳಿಸಿದೆ. Advertisement Advertisement

Read More

ಕಥೊಲಿಕ್ ಸಭಾ ಕೇಂದ್ರೀಯ ನೂತನ ಅಧ್ಯಕ್ಷರಾಗಿ ಆಲ್ವಿನ್ ಡಿಸೋಜ ಆಯ್ಕೆ. ಮಂಗಳೂರು: ಇಲ್ಲಿನ ಧರ್ಮಕ್ಷೇತ್ರದ ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಇದರ 2023-24 ನೇ ಸಾಲಿಗೆ ವಾರ್ಷಿಕ ಚುನಾವಣೆಯು ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರ ನಿವಾಸದಲ್ಲಿ ನಡೆಯಿತು. Advertisement Advertisement ನೂತನ ಅಧ್ಯಕ್ಷರಾಗಿ ಆಲ್ವಿನ್ ಡಿಸೋಜ ಪಾನೀರ್ ಬಹುಮತದಿಂದ ಆಯ್ಕೆಯಾಗಿರುತ್ತಾರೆ. ಕಾರ್ಯದರ್ಶಿಯಾಗಿ ವಿಲ್ಮಾ ಮೊಂತೆರೊ ದೆರೆಬೈಲ್, ಉಪಾಧ್ಯಕ್ಷರಾಗಿ ನೊರ್ಬರ್ಟ್ ಮಿಸ್ಕಿತ್ ಸುರತ್ಕಲ್ ಮತ್ತು ಲೋರೆನ್ಸ್ ಡಿಸೋಜ ಸುರತ್ಕಲ್, ಸಹ ಕಾರ್ಯದರ್ಶಿಯಾಗಿ ರೋಷನ್ ಬೊನಿಫಾಸ್ ಮಾರ್ಟಿಸ್ ಸೂರಿಕುಮೇರು, ಖಜಾಂಚಿಯಾಗಿ ಫ್ರಾನ್ಸಿಸ್ ಮೊಂತೆರೊ ತಲಪಾಡಿ, ಸಹ ಖಜಾಂಚಿಯಾಗಿ ಸಂತೋಷ್ ಡಿಸೋಜ ಬಜ್ಪೆ, ನಿಕಟ ಪೂರ್ವ ಅಧ್ಯಕ್ಷರಾಗಿ ಸ್ಟ್ಯಾನಿ ಲೋಬೊ ಹಾಗೂ ಆಧ್ಯಾತ್ಮಿಕ ನಿರ್ದೇಶಕರಾಗಿ ಅತೀ ವಂದನೀಯ ಜೆ.ಬಿ.ಸಲ್ಡಾನ್ಹಾರವರು ಆಯ್ಕೆಯಾಗಿರುತ್ತಾರೆ. ಆಯ್ಕೆಗೊಂಡ ಎಲ್ಲಾ ಪದಾಧಿಕಾರಿಗಳಿಗೆ ನಿಕಟಪೂರ್ವ ಅಧ್ಯಕ್ಷರಾದ ರೊಲ್ಫಿ ಡಿಕೋಸ್ತರವರು ಅಭಿನಂದನೆಯನ್ನು ಸಲ್ಲಿಸಿರುತ್ತಾರೆ.

Read More

ಬಂಟ್ವಾಳ: ಸಜೀಪಮೂಡ ಗ್ರಾಮದ ಪಣೋಲಿಬೈಲು ಶ್ರೀಕಲ್ಲುರ್ಟಿ ದೈವಸ್ಥಾನದಲ್ಲಿ ಜೂ.18ರಂದು ಆದಿತ್ಯವಾರ ಅಮವಾಸ್ಯೆ ಇರುವುದರಿಂದ ಅಗೇಲು ಹಾಗೂ ಕೋಲ ಸೇವೆ ಇರುವುದಿಲ್ಲ ಎಂದು ದೈವಸ್ಥಾನದ ಪ್ರಕಟಣೆ ತಿಳಿಸಿದೆ. Advertisement

Read More

ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಹಾಗೂ ಜೆಸಿಐ ಬಂಟ್ವಾಳದ ಆಶ್ರಯದಲ್ಲಿ ಕೆಎಂಸಿ ಆಸ್ಪತ್ರೆ ಮಂಗಳೂರು ಇವರ ಸಹಕಾರದೊಂದಿಗೆ 123ನೇ ರಕ್ತದಾನ ಶಿಬಿರ ಜೂ.18ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಫರಂಗಿಪೇಟೆಯ ಸೇವಾಂಜಲಿ ಸಭಾಗೃಹದಲ್ಲಿ ನಡೆಯಲಿದೆ. Advertisement Advertisement ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ಶೇಕ್ ಕಬೀರ್ ಅಹಮದ್, ಉದ್ಯಮಿ ಬಿ. ಸಂಜೀವ ಪೂಜಾರಿ ಭಾಗವಹಿಸಲಿದ್ದಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಶಿಬಿರದಲ್ಲಿ ಭಾಗವಹಿಸಿ ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡುವಂತೆ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣಕುಮಾರ್ ಪೂಂಜ ಹಾಗೂ ಜೆಸಿಐ ಬಂಟ್ವಾಳದ ಅಧ್ಯಕ್ಷ ರಾಜೇಂದ್ರ ಕೆ. ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮಧ್ಯಂತರ ಸಮ್ಮೇಳನದಲ್ಲಿ ಜೆಸಿಐ ಬಂಟ್ವಾಳದ ಮುಡಿಗೆ 9 ಪ್ರಶಸ್ತಿಗಳ ಗರಿ ಬಂಟ್ವಾಳ: ಭಾನುವಾರ ನಡೆದ ಜೆಸಿಐ ವಲಯ 15ರ ಮಧ್ಯಂತರ ಸಮ್ಮೇಳನದಲ್ಲಿ ಜೆಸಿಐ ಬಂಟ್ವಾಳ ಹಲವಾರು ಪುರಸ್ಕಾರಗಳನ್ನು ಬಾಚಿಕೊಂಡಿದೆ. ಜೆಸಿಐ ನೇತ್ರಾವತಿ ಜೋಡುಮಾರ್ಗ ಆತಿಥ್ಯದಲ್ಲಿ ಬೆಂಜನಪದವಿನ ಶುಭಾ ಆಡಿಟೋರಿಯಂನಲ್ಲಿ ನಡೆದ ಮಧ್ಯಂತರ ಸಮ್ಮೇಳನದಲ್ಲಿ ವಲಯಾಧ್ಯಕ್ಷ ಪುರುಷೋತ್ತಮ ಶೆಟ್ಟಿ ಅವರಿಂದ ಜೆಸಿಐ ಬಂಟ್ವಾಳದ ಅಧ್ಯಕ್ಷ ರಾಜೇಂದ್ರ ಕೆ. ಪ್ರಶಸ್ತಿ ಸ್ವೀಕರಿಸಿದರು. Advertisement Advertisement ಈ ವರ್ಷ ನಡೆಸಿದ ಅತ್ಯುತ್ತಮ ಚಟುವಟಿಕೆಗಳಿಗೆ ಈ ಪುರಸ್ಕಾರಗಳು ಜೆಸಿಐ ಬಂಟ್ವಾಳಕ್ಕೆ ಒಲಿದು ಬಂದಿದ್ದು, ಅತ್ಯುತ್ತಮ ಘಟಕಾಧ್ಯಕ್ಷ ರನ್ನರ್ ಅಪ್ ಪುರಸ್ಕಾರ, ಅತ್ಯುತ್ತಮ ವಿಭಿನ್ನ ಕಾರ್ಯಕ್ರಮ ರನ್ನರ್ ಅಪ್ ಪುರಸ್ಕಾರ, ಡೈಮಂಡ್ ಘಟಕ ಪುರಸ್ಕಾರ, ತರಬೇತಿ ವಿಭಾಗದ ಪುರಸ್ಕಾರ ಸೇರಿದಂತೆ ಒಟ್ಟು 9 ಪುರಸ್ಕಾರಗಳು ಜೆಸಿಐ ಬಂಟ್ವಾಳಕ್ಕೆ ಲಭಿಸಿದೆ.ಈ ಸಂದರ್ಭ ವಲಯ ಉಪಾಧ್ಯಕ್ಷ ಅಜಿತ್ ಕುಮಾರ್ ಕೆ., ಕಾರ್ಯಕ್ರಮ ವಿಭಾಗದ ನಿರ್ದೇಶಕಿ ಅಕ್ಷತಾ ಗಿರೀಶ್, ಜೆಸಿಐ ಬಂಟ್ವಾಳದ ಕಾರ್ಯದರ್ಶಿ ರಶ್ಮಿ ಶೆಟ್ಟಿ, ನಿಕಟಪೂರ್ವಾಧ್ಯಕ್ಷ ರೋಷನ್ ರೈ, ಉಪಾಧ್ಯಕ್ಷ ಕಿಶೋರ್…

Read More

ಬಂಟ್ವಾಳ: ನಾಗಶ್ರೀ ಮಿತ್ರವೃಂದ ಕಮ್ಮಾಜೆ ತೆಂಕಬೆಳ್ಳೂರು ಇದರ ನೂತನ ಅಧ್ಯಕ್ಷರಾಗಿ ಪುಷ್ಪರಾಜ್ ಕಮ್ಮಾಜೆ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ತಿಮ್ಮಪ್ಪ ಕಮ್ಮಾಜೆ ಆಯ್ಕೆಯಾಗಿದ್ದಾರೆ.ಇದರ ವಾರ್ಷಿಕ ಮಹಾಸಭೆಯು ಭಾನುವಾರ ತೆಂಕಬೆಳ್ಳೂರು ನಾಗಶ್ರೀ ವಿವೇಕ ಭವನದಲ್ಲಿ ಜರುಗಿತು. ೨೦೨೨-೨೩ ನೇ ಸಾಲಿನ ಕಾರ್ಯಕ್ರಮಗಳ ಅವಲೋಕನ ಮತ್ತು ವಾರ್ಷಿಕ ವರದಿ ಮಂಡಿಸಲಾಯಿತು. Advertisement Advertisement ನೂತನ ಪದಾಧಿಕಾರಿಗಳ ನೇಮಕ ಮಾಡಲಾಯಿತು. ಮತ್ತು ೨೦೨೩-೨೪ನೇ ಸಾಲಿನಲ್ಲಿ ಕೈಗೊಳ್ಳಬೇಕಾಗಿರುವ ಕಾರ್ಯಕ್ರಮಗಳ ಬಗ್ಗೆ ಚರ್ಚೆ ನಡೆಸಲಾಯಿತು,೨೦೨೩ -೨೪ ನೇ ಸಾಲಿನ ಗೌರವ ಅಧ್ಯಕ್ಷರಾಗಿ ಅನಂತರಾಮ್ ಹೇರಳೆ, ಗೌರವ ಮಾರ್ಗದರ್ಶಕರಾಗಿ ಶ್ರೀ ವಿವೇಕ ಚೈತನ್ಯಾನಂದ ಸ್ವಾಮೀಜಿ, ಅಧ್ಯಕ್ಷರಾಗಿ ಪುಷ್ಪರಾಜ್ ಕಮ್ಮಾಜೆ ಉಪಾಧ್ಯಕ್ಷರಾಗಿ ಸಂದೀಪ್ ಕಮ್ಮಾಜೆ ಪ್ರಧಾನ ಕಾರ್ಯದರ್ಶಿಯಾಗಿ ತಿಮ್ಮಪ್ಪ ಕಮ್ಮಾಜೆ, ಜೊತೆ ಕಾರ್ಯದರ್ಶಿಯಾಗಿ ದಿತೇಶ್ ಕಮ್ಮಾಜೆ, ಕೋಶಾಧಿಕಾರಿಯಾಗಿ ದೀಕ್ಷಿತ್ ಕಮ್ಮಾಜೆ, ಕ್ರೀಡಾ ಕಾರ್ಯದರ್ಶಿಯಾಗಿ ಯತೀಶ್ ಕಮ್ಮಾಜೆ, ಕ್ರೀಡಾ ಜೊತೆ ಕಾರ್ಯದರ್ಶಿಯಾಗಿ ಲಕ್ಷ್ಮೀಶ ಕಮ್ಮಾಜೆ, ಕಾನೂನು ಸಲಹೆಗಾರರಾಗಿ ತೀರ್ಥ ಕಮ್ಮಾಜೆ, ಸಂಘಟನಾ ಕಾರ್ಯದರ್ಶಿಗಳಾಗಿತಿರುಮಲೇಶ್ ಕಮ್ಮಜೆ, ಹರೀಶ್ ಮುಡೈಕೋಡಿ, ದಿನೇಶ್ ಕಮ್ಮಾಜೆ, ಪ್ರಜ್ವಲ್ ಕಮ್ಮಾಜೆ, ತಿಲಕ್…

Read More

ಬಂಟ್ವಾಳ: ಬಿ.ಸಿ.ರೋಡಿನ ಪೊಲೀಸ್ ಲೈನ್ ನಲ್ಲಿರುವ ಶ್ರೀ ಅನ್ನಪೂರ್ಣೇಶ್ವರಿ ದೇವಿ ದೇವಸ್ಥಾನದ ಶ್ರೀ ನಾಗದೇವರ ಸಾನಿಧ್ಯದಲ್ಲಿ ಪುನರ್ ನವೀಕರಣಗೊಳ್ಳುತ್ತಿರುವ ಮಹಾಗಣಪತಿ ಮತ್ತು ಶಾಸ್ತಾರ ದೇವರ ಗರ್ಭಗುಡಿಯೊಂದಿಗೆ ಸುತ್ತುಪೌಳಿಯ ನಿರ್ಮಾಣಕ್ಕೆ ಸೋಮವಾರ ಶಿಲಾನ್ಯಾಸ ನೆರವೇರಿಸಲಾಯಿತು. ದೇವಸ್ಥಾನದ ತಂತ್ರಿಗಳಾದ ಅರವತ್ ಪದ್ಮನಾಭ ತಂತ್ರಿಗಳ ಮಾರ್ಗದರ್ಶನದಲ್ಲಿ ದೇವಳದ ಪ್ರಧಾನ ಅರ್ಚಕರಾದ ಈಶ್ವರ ಭಟ್ ಅವರು ವಿವಿಧ ವೈಧಿಕ ವಿಧಿವಿಧಾನಗಳನ್ನು ನೆರವೇರಿಸಿದ ಬಳಿಕ ಪೊಳಲಿ ಶ್ರೀ ರಾಮಕೃಷ್ಣ ತಪೋವನದ ಶ್ರೀ ವಿವೇಕ ಚೈತನ್ಯಾನಂದ ಸ್ವಾಮೀಜಿ ಅವರು ಶಿಲಾನ್ಯಾಸ ನೆರವೇರಿಸಿ,ನಿಗದಿತ ಸಮಯದಲ್ಲಿ ದೇವಳದ ಎಲ್ಲಾ ಜೀರ್ಣೋದ್ದಾರ ಕಾರ್ಯಗಳು ಸಾಂಗವಾಗಿ‌ ನೆರವೇರಲಿ ಎಂದು ಆಶೀರ್ವದಿಸಿದರು. Advertisement ವಾಸ್ತು ಶಿಲ್ಪಿ ಮಹೇಶ್ ಭಟ್ ಮುನಿಯಂಗಳ್,ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು,ಮಾಜಿ ಸಚಿವ ರಮಾನಾಥ ರೈ,ಬಂಟ್ವಾಳ ಪೊಲೀಸ್ ಉಪವಿಭಾಗದ ಡಿವೈಎಸ್ಪಿ ಪ್ರತಾಪ್‌ ಸಿಂಗ್ ಥೋರಾಟ್,ದೇವಳದ ಆಡಳಿತ ಮಂಡಳಿ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ, ಪ್ರಧಾನ ಕಾರ್ಯದರ್ಶಿ ಜಗನ್ನಾಥ ಶೆಟ್ಟಿ, ಉಪಾಧ್ಯಕ್ಷರಾದ ಆನಂದ .ಕೆ,ಕೇಪುಗೌಡ, ಬಿ.ಸಿ.ರೋಡು ಶ್ರೀ ರಕ್ತೇಶ್ವರೀ ದೇವಿ ದೇವಸ್ಥಾನದ ಆಡಳಿತ ಸಮಿತಿ‌ ಅಧ್ಯಕ್ಷ…

Read More

ಶಕ್ತಿ ಯೋಜನೆಗೆ ಚಾಲನೆ: ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆಯನ್ನು ರಾಜ್ಯ ಸರಕಾರ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಬಂಟ್ವಾಳ ವಿಧಾನ ಸಭಾ ಕ್ಷೇತ್ರ ಕಾಂಗ್ರೆಸ್ ವತಿಯಿಂದ ರವಿವಾರ ಬಿ.ಸಿ.ರೋಡ್‌ನಲ್ಲಿ ಸಂಭ್ರಮಾರಣೆ ನಡೆಯಿತು.ಈ ವೇಳೆ ಮಾತನಾಡಿದ ಮಾಜಿ ಸಚಿವ ಬಿ.ರಮಾನಾಥ ರೈ ಅವರು, ಕಾಂಗ್ರೆಸ್ ಚುನಾವಣಾ ಪೂರ್ವದಲ್ಲಿ ಘೊಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಒಂದನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವ ಮೂಲಕ ನುಡಿದಂತೆ ನಡೆಯಲಾಗಿದೆ. ಇನ್ನು ನಾಲ್ಕು ಗ್ಯಾರಂಟಿಗಳು ಶೀಘ್ರವೇ ಜಾರಿಯಾಗಲಿದೆ. ಆ ಮೂಲಕ ದೇಶದಲ್ಲಿ ಕರ್ನಾಟಕ ಇಂದು ಮಾದರಿ ರಾಜ್ಯವಾಗಿದೆ ಎಂದರು. Advertisement Advertisement ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಸುದೀಪ ಕುಮಾರ್ ಶೆಟ್ಟಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯರಾದ ಜಯಂತಿ ವಿ.ಪೂಜಾರಿ, ಲವಿನಾ ವಿಲ್ಮಾ ಮೊರಾಸ್, ಜಿ.ಪಂ. ಮಾಜಿ ಸದಸ್ಯರಾದ ಚಂದ್ರ ಪ್ರಕಾಶ್ ಶೆಟ್ಟಿ, ಪದ್ಮಶೇಖರ್ ಜೈನ್, ಪುರಸಭೆ ಮಾಜಿ ಅಧ್ಯಕ್ಷ ಮೊಹಮ್ಮದ್ ಶರೀಫ್, ಮಾಜಿ ಉಪಾಧ್ಯಕ್ಷೆ ಜೆಸಿಂತಾ ಡಿಸೋಜಾ, ಮಾಜಿ ಸದಸ್ಯರಾದ ವಾಸು ಪೂಜಾರಿ…

Read More

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಚಾಲನೆ ಬಂಟ್ವಾಳ: ಕೆಎಸ್ಆರ್ ಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಬಿ.ಸಿ.ರೋಡ್ ಘಟಕದಲ್ಲಿ ರವಿವಾರಬಂಟ್ವಾಳ ತಹಶೀಲ್ದಾರ್ ವಿ.ಎಸ್.ಕೂಡಲಗಿ ಅವರು ಚಾಲನೆ ನೀಡಿದರು.ಬಳಿಕ ಮಾತನಾಡಿಸ ಅವರು ಯೋಜನೆಯಡಿ ಆರು ವರ್ಷದ ಹೆಣ್ಣು ಮಗುವಿನಿಂದ ಹಿಡಿದು ಹಿರಿಯ ಮಹಿಳೆಯರವರೆಗೂ ಉಚಿತ ಪ್ರಯಾಣಕ್ಕೆ ಅವಕಾಶವಿದೆ. ತಾಲೂಕಿನ ಮಹಿಳೆಯರು ಸರಕಾರದ ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.ಮುಖ್ಯ ಅತಿಥಿಯಾಗಿದ್ದ ಮಾಜಿ ಸಚಿವ ರಮಾನಾಥ ರೈ ಅವರು ಮಾತನಾಡಿ, ಶಕ್ತಿ ಯೋಜನೆ ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಮಹಿಳೆಯರ ಸಬಲೀಕರಣಕ್ಕೆ ಹೊಸ ಅವಕಾಶ ಕೊಟ್ಟಂತಾಗಿದೆ. ದೈನಂದಿನ ಪ್ರಯಾಣದಲ್ಲಿ ಈ ಯೋಜನೆ ಹೆಚ್ಚು ಪ್ರಯೋಜನಕಾರಿಯಾಗಿದೆ. ರಾಜ್ಯ ಸರಕಾರ ಘೋಷಿಸಿದ್ದ ೫ ಗ್ಯಾರಂಟಿಗಳಲ್ಲಿ ಒಂದು ಯಶಸ್ವಿಯಾಗಿ ಜಾರಿಗೆ ತರಲಾಗಿದೆ ಎಂದರು. Advertisement ಬಂಟ್ವಾಳ ಉಪವಿಭಾಗದ ಪೊಲೀಸ್ ಉಪ ಅಧೀಕ್ಷಕ ಪ್ರತಾಪ್ ಸಿಂಗ್ ಥೋರಟ್ ಅವರು ಮಾತನಾಡಿ, ವಿದ್ಯಾರ್ಥಿನಿಯರು, ಶಿಕ್ಷಕಿಯರು, ಹಿರಿಯ ಮಹಿಳೆಯರಿಗೆ ಯೋಜನೆ ಹೆಚ್ಚು ಅನುಕೂಲವಾಗಿದೆ. ಒಂದು ಉತ್ತಮ ಕಾರ್ಯಕ್ರಮವಾಗಿದ್ದು,…

Read More