Author: admin

ಅಲೆತ್ತೂರು ಮಂಗಳಾ ಫ್ರೆಂಡ್ಸ್ ಸರ್ಕಲ್ ಅಧ್ಯಕ್ಷರಾಗಿನಿತಿನ್ ಪೂಜಾರಿ ನಂದರಬೆಟ್ಟು ಆಯ್ಕೆ ಬಂಟ್ವಾಳ : ಅಲೆತ್ತೂರು ಮಂಗಳಾ ಫ್ರೆಂಡ್ಸ್ ಸರ್ಕಲ್ ಇದರ ‌2023-24 ನೇ ಸಾಲಿನವಾರ್ಷಿಕ ಮಹಾ ಸಭೆಯು ಭಾನುವಾರ ಅಲೆತ್ತೂರು ಮಂಗಳಾ ಭವನದಲ್ಲಿ ನೇಮಿರಾಜ ಶೆಟ್ಟಿ ಕೊಡಂಗೆ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.ನೂತನ ಅಧ್ಯಕ್ಷರಾಗಿ ನಿತಿನ್ ಪೂಜಾರಿ ನಂದರಬೆಟ್ಟು ಉಪಾದ್ಯಕ್ಷರಾಗಿ ದಿನೇಶ್ ಸುವರ್ಣ , ಕಾರ್ಯದರ್ಶಿಯಾಗಿ ಪ್ರಶಾಂತ್, ಜೊತೆ ಕಾರ್ಯದರ್ಶಿಯಾಗಿ ಪವನ್ ಕುಲಾಲ್, ಸಂಘಟನನಾ ಕಾರ್ಯದರ್ಶಿಯಾಗಿ ಪುಪ್ಪರಾಜ್ ಶೆಟ್ಟಿ, ಕ್ರೀಡಾ ಕಾರ್ಯದರ್ಶಿ ಅಕ್ಷಯ್, ಜೊತೆ ಕ್ರೀಡಾ ಕಾರ್ಯದರ್ಶಿಯಾಗಿ ಲೋಹಿತ್, ಕಾರ್ಯಕಾರಿ ಸಮಿತಿ ಸದಸ್ಯರಾಗಿ ವಿಜಯ್ ಕುಮಾರ್ ಭಾಸ್ಕರ್ ಕುಲಾಲ್, ವಾಸುದೇವ, ವಿಶ್ವನಾಥ ಪೈ ಆಯ್ಕೆಯಾದರು. Advertisement ಈ ಸಂದರ್ಭದಲ್ಲಿ ಅತಿಥಿಗಳಾಗಿ ಮೋನಪ್ಪ ಪೂಜಾರಿ ಅಲೆತ್ತೂರು, ಅಶ್ವಥ್ ಶೆಟ್ಟಿ, ಹಿಮಕರ ಪೂಜಾರಿ, ವಿಶ್ವನಾಥ ಪೂಜಾರಿ, ನಾರಾಯಣ ಪೂಜಾರಿಉಪಸ್ಥಿತರಿದ್ದರು. Advertisement

Read More

ಬಂಟ್ವಾಳ: ಸರಕಾರಿ ಪ್ರೌಢಶಾಲೆ ನಾರ್ಶ ಮೈದಾನ ಇಲ್ಲಿ ಸಮಾಜ ವಿಜ್ಞಾನ ಹಾಗೂ ಚುನಾವಣಾ ಸಾಕ್ಷರತಾ ಸಂಘದ ಆಶ್ರಯದಲ್ಲಿ ಮಾದರಿ ಚುನಾವಣೆ ಪ್ರಕ್ರಿಯೆ ಮೂಲಕ ನೂತನ ಶಾಲಾ ಸರಕಾರವನ್ನು ರಚಿಸಲಾಯಿತು. ವಿದ್ಯಾರ್ಥಿಗಳೆಲ್ಲರೂ ಆಧಾರ್ ಕಾರ್ಡ್ ಆಧಾರದಲ್ಲಿ ಮತ ಚಲಾಯಿಸಿ ಚುನಾವಣೆ ಪ್ರಕ್ರಿಯೆಯ ಬಗ್ಗೆ ತಿಳಿದುಕೊಂಡರು. ಈ ಸಂದರ್ಭದಲ್ಲಿ ಶಾಲಾ ಮುಖ್ಯಮಂತ್ರಿಯಾಗಿ ಸಿಯಾಬುದ್ದೀನ್ ತಾಳಿತ್ತನೂಜಿ ಹಾಗೂ ಉಪ ಮುಖ್ಯಮಂತ್ರಿಯಾಗಿ ಅನ್ಸಿರಾ ನಾರ್ಶ ಆಯ್ಕೆಗೊಂಡರು.ಶಾಲಾ ಮುಖ್ಯ ಶಿಕ್ಷಕಿ ಲತಾ ಮಂಗಳೂರು ಇವರು ಪ್ರಮಾಣ ವಚನ ಬೋಧಿಸಿದರು. ಸಮಾಜ ವಿಜ್ಞಾನ ಸಂಘದ ನೋಡಲ್ ಸರೋಜಮ್ಮ ಬಿ.ಸಿ.ರೋಡ್ ರವರು ಚುನಾವಣೆ ಪ್ರಕ್ರಿಯೆ ನಡೆಸಿಕೊಟ್ಟರು. ಸಹಶಿಕ್ಷಕರಾದ ಅಬ್ದುಲ್ ರಫೀಕ್ ಉಪ್ಪಿನಂಗಡಿ , ಗೋಪಾಲಕೃಷ್ಣ ನೇರಳಕಟ್ಟೆ , ಶರತ್ ಕುಮಾರ್ ಚೌಟ ದೇವಸ್ಯ, ಶುಭ ಮೊಡಂಕಾಪು , ಭಾರತಿ ಸಿ ಕೈರಂಗಳ , ಅನಿಲ್ ಕುಮಾರ್ ಕಲ್ಲಡ್ಕ ಸಹಕರಿಸಿದರು. 2023 – 24 ನೇ ಸಾಲಿನ ಮಂತ್ರಿಮಂಡಲಕ್ಕೆ ಸ್ಪೀಕರ್ – ನಿಹಾಲ್ ಬೋಳಂತೂರು , ವಿರೋಧ ಪಕ್ಷದ ನಾಯಕಿ -ರಾಯಿಸಾ ತಾಳಿತ್ತನೂಜಿ…

Read More

ಅಂತರರಾಷ್ಟ್ರೀಯ ಮಟ್ಟದ ಸಿಲಂಬಂ ಸ್ಪರ್ಧೆಯಲ್ಲಿ ವೆನಿಲ್ಲಾ ಮಣಿಕಂಠಗೆ ಚಿನ್ನದ ಪದಕ ಬಂಟ್ವಾಳ: ಇತ್ತೀಚೆಗೆ ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆದ ಅಂತಾರಾಷ್ಟ್ರೀಯ ಮಟ್ಟದ ಸಿಲಂಬಂ ಸ್ಪರ್ಧೆಯಲ್ಲಿ ಡಬಲ್ ಸ್ಟಿಕ್ ಹಾಗು ವಾಲ್ ವೇಚೂ ವಿಭಾಗದಲ್ಲಿ ವೆನಿಲ್ಲಾ ಮಣಿಕಂಠ ಇವರು ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಾರೆ.ಈ ಸ್ಪರ್ಧಾ ಕೂಟದಲ್ಲಿ ಸ್ವಿಟ್ಜರ್ಲ್ಯಾಂಡ್, ದುಬೈ, ಸಿಂಗಾಪುರ, ಶ್ರೀಲಂಕಾ ಸೇರಿದಂತೆ ಒಟ್ಟು 10 ರಾಷ್ಟ್ರಗಳ ಪರಿಣಿತ ಮಾರ್ಷಲ್ ಆರ್ಟ್ ಕ್ರೀಡಾಪಟುಗಳು ಪಾಲ್ಗೊಂಡಿದ್ದರು. ಈ ಪೈಕಿ ಭಾರತವನ್ನು ಪ್ರತಿನಿಧಿಸಿದ್ದ ವೆನಿಲ್ಲಾ ಮಣಿಕಂಠ ಡಬಲ್ ಸ್ಟಿಕ್ ಹಾಗು ವಾಲ್ ವೇಚೂ ವಿಭಾಗದಲ್ಲಿ ಪ್ರಥಮ ಸ್ಥಾನಿಯಾಗಿ ಚಿನ್ನದ ಪದಕ ಗೆದ್ದುಕೊಂಡು ದೇಶಕ್ಕೆ ಕೀರ್ತಿ ತಂದಿದ್ದಾರೆ. ಮುಡಿಪು ನವಗ್ರಾಮ ಸೈಟ್ ನ ದಿ.ನೀಲಕಂಠ ಹಾಗು ಸುಮತಿ ದಂಪತಿಗಳ ಪುತ್ರಿಯಾದ ವೆನಿಲ್ಲಾ ಮಣಿಕಂಠ ಬಾಲ್ಯದಿಂದಲೂ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದು ಕರಾಟೆ, ಜೂಡೋ, ಸಿಲಂಬಂ, ಸ್ಕೇಟಿಂಗ್ ಮೊದಲಾದ ಮಾರ್ಷಲ್ ಆರ್ಟ್‌ನಲ್ಲಿ ಪರಿಣತಿಯನ್ನು ಪಡೆದುಕೊಂಡಿದ್ದಲ್ಲದೇ ಹಲವಾರು ಸ್ಪರ್ಧೆಗಳಲ್ಲಿ ಭಾಗವಹಿಸಿ ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಾರೆ. ತನ್ನ ಪ್ರೌಢಶಿಕ್ಷಣವನ್ನು ಕಲ್ಲಡ್ಕದ ಶ್ರೀ ರಾಮ ಪ್ರೌಢ ಶಾಲೆಯಲ್ಲಿ…

Read More

ಲೋಕೋಪಯೋಗಿ ಇಲಾಖೆಯ ಸಹಾಯಕ ಇಂಜಿನಿಯರ್ ಅಮೃತ್‌ಕುಮಾರ್ ಸಿ.ಆರ್ ಗೆ ಬೀಳ್ಕೊಡುಗೆ ಬಂಟ್ವಾಳ : ಲೋಕೋಪಯೋಗಿ ಇಲಾಖೆಯಲ್ಲಿ ಸುಮಾರು 19 ವರ್ಷ ಸರಕಾರಿ ಸೇವೆ ಸಲ್ಲಿಸಿ ಇದೀಗ ಬಂಟ್ವಾಳ ಲೋಕೋಪಯೋಗಿ ಉಪವಿಭಾಗದಲ್ಲಿ ನಿವೃತ್ತಿ ಹೊಂದಿರುವ ಸಹಾಯಕ ಇಂಜಿನಿಯರ್ ಅಮೃತ್‌ಕುಮಾರ್ ಸಿ.ಆರ್ ರವರ ಬೀಳ್ಕೊಡುಗೆ ಸಮಾರಂಭವು ಬಂಟ್ವಾಳದ ಲೋಕೋಪಯೋಗಿ ಉಪವಿಭಾಗದ ಸಭಾಂಣದಲ್ಲಿ ಜರಗಿತು. Advertisement ಲೋಕೋಪಯೋಗಿ ಇಲಾಖೆಯ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಜೈಪ್ರಕಾಶ್‌ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪಿ.ಆರ್.ಇ.ಡಿ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ತಾರನಾಥ ಸಾಲಿಯಾನ್, ಕುಡಿಯುವ ನೀರು ಹಾಗೂ ನೈರ್ಮಲ್ಯ ಉಪವಿಭಾಗದ ಸಹಾಯಕಕಾರ್ಯ ನಿರ್ವಾಹಕ ಅಭಿಯಂತರರಾದ ಜಿ.ಕೆ.ನಾಕ್, ಸಹಾಯಕ ಅಭಿಯಂತರುಗಳಾದ ಪ್ರೀತಂ, ಮನೋಜ್, ವಿವೇಕಾನಂದರೆಡ್ಡಿ , ಅಮೃತ್‌ಕುಮಾರ್‌ರ ಪತ್ನಿ ಕಲೈವಾಣಿ , ಪಿ.ಆರ್.ಇ.ಡಿ ಉಪವಿಭಾಗ ಅಭಿಯಂತರರಾದ ಕೃಷ್ಣ, ಜಗದೀಶ, ಕುಶಕುಮಾರ್, ನಾಗೇಶ್, ಲೋಕೋಪಯೋಗಿ ಕಚೇರಿ ಸಿಬ್ಬಂದಿಗಳು ಮತ್ತು ಗುತ್ತಿಗೆದಾರರು ಉಪಸ್ಥಿತರಿದ್ದರು.ಅರುಣ್‌ಪ್ರಕಾಶ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಮನೋಜ್ ವಂದಿಸಿದರು. Advertisement

Read More

ಪಾಣೆಮಂಗಳೂರಿನಲ್ಲಿ ರೈತ ಸಂಘದ ಸಭೆ ಬಂಟ್ವಾಳ: ಪಾಣೆಮಂಗಳೂರಿನ ಬಂಗ್ಲೆಗುಡ್ಡೆ ಶ್ರೀ ಕಲ್ಲುರ್ಟಿ- ಕಲ್ಕುಡ ದೈವಸ್ಥಾನದ ಸಭಾಂಗಣದಲ್ಲಿ ರೈತ ಸಂಘದ ಸಭೆ ಬಂಟ್ವಾಳ ತಾಲೂಕುಸಮಿತಿ ಅಧ್ಯಕ್ಷ ಎಂ. ಸುಬ್ರಹ್ಮಣ್ಯ ಭಟ್ ಅಧ್ಯಕ್ಷತೆಯಲ್ಲಿ ಜರುಗಿತು. ರೈತರ ಕುಮ್ಕಿ ಹಕ್ಕು, ರಾಜ ಕಾಲುವೆ ಒತ್ತುವರಿ ತೆರವು, ರೈತರ ಹಾಲಿನ ಪ್ರೋತ್ಸಾಹಧನ ಬಾಕಿ ಪಾವತಿ, ನಿಯಮಿತವಾಗಿ ಜಿಲ್ಲಾ ಹಾಗೂ ತಾಲೂಕ ಮಟ್ಟದಲ್ಲಿ ರೈತರ ಕುಂದು ಕೊರತೆ ಸಭೆ ಈ ಎಲ್ಲ ವಿಚಾರಗಳ ಬಗ್ಗೆ ಕರ್ನಾಟಕ ವಿಧಾನಸಭಾ ಸಭಾಪತಿ ಯು.ಟಿ.ಖಾದರ್ ಅವರನ್ನು ರೈತರ ನಿಯೋಗ ಶೀಘ್ರವೇ ಭೇಟಿಯಾಗಿ ಚರ್ಚಿಸಲು ತೀರ್ಮಾನ ತೆಗೆದುಕೊಳ್ಳಲಾಯಿತು. Advertisement Advertisement ಕರ್ನಾಟಕ ರಾಜ್ಯ ರೈತ ಸಂಘ ರಾಜ್ಯ ಕಾರ್ಯದರ್ಶಿ ಮನೋಹರ ಶೆಟ್ಟಿ ನಡಿಕಂಬಳ ಗುತ್ತು, ತಾಲೂಕು ಕಾರ್ಯದರ್ಶಿ ಸುದೇಶ್ ಮಯ್ಯ, ಸದಸ್ಯರಾದ ದಿಲೀಪ್ ರೈ, ಭೋಜ, ಲಕ್ಷ್ಮ, ಸುದೇಶ ಶೆಟ್ಟಿ. ಸೋಮನಾಥ ಭಂಡಾರಿ. ಮೊದಲಾದವರು ಉಪಸ್ಥಿತರಿದ್ದರು.

Read More

ಜೂ.7: ನವೀಕೃತಗೊಂಡ ವಾತ್ಸಲ್ಯ ಮನೆ ಹಸ್ತಾಂತರ, ಗೃಹಪ್ರವೇಶ ಬಂಟ್ವಾಳ: ತಾಲೂಕಿನ ದಾಸಕೋಡಿಯ ನೆಲ್ಲಿ ಎಂಬಲ್ಲಿ ವಾಸವಿರುವ ಗೀತಾ ರವೀಂದ್ರ ಪೂಜಾರಿ ಎಂಬವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಾತ್ಸಲ್ಯ ಮನೆ ನಿರ್ಮಾಣ ಯೋಜನೆಯಡಿಯಲ್ಲಿ ಮನೆ ದುರಸ್ತಿಗೊಳಿಸಲಾಗಿದ್ದು ಸುಂದರ ಗೊಂಡಿರುವ ಮನೆಯ ಗೃಹಪ್ರವೇಶ ನಾಳೆ (ಜೂ.7) ನಡೆಯಲಿದೆ. ಜೂ.7: ನವೀಕೃತಗೊಂಡ ವಾತ್ಸಲ್ಯ ಮನೆ ಹಸ್ತಾಂತರ, ಗೃಹಪ್ರವೇಶ ಗೀತಾ ರವೀಂದ್ರ ಪೂಜಾರಿಯವರು ತಾಯಿ ಮತ್ತು ತಮ್ಮನೊಂದಿಗೆ ಬಡತನದ ಜೀವನ ನಡೆಸುತ್ತಿದ್ದು ತಾಯಿ ಮತ್ತು ತಮ್ಮನ ಮರಣ ನಂತರ ನಿರ್ವಹಣೆ ಇಲ್ಲದೆ ಜೀರ್ಣಾವಸ್ಥೆಗೆ ತಲುಪಿದ್ದ ಮನೆಯಲ್ಲಿ ವಾಸವಿರಲು ಸಾಧ್ಯವಾಗದೆ ತನ್ನ ಇಬ್ಬರು ಚಿಕ್ಕ ಮಕ್ಕಳೊಂದಿಗೆ ಹಲವಾರು ವರುಷ ಬಾಡಿಗೆ ಮನೆಯಲ್ಲಿ ಜೀವನ ಸಾಗಿಸುತ್ತಿದ್ದರು. ತನ್ನ ಕಷ್ಟ ಜೀವನದ ವಿಚಾರದೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಿಗೆ ಸಹಾಯ ಕೋರಿ ಮನವಿಯನ್ನು ಸಲ್ಲಿಸಿದರು. ಇದಕ್ಕೆ ಸ್ಪಂಧಿಸಿದ ಧರ್ಮಾಧಿಕಾರಿಗಳು ವಾತ್ಸಲ್ಯ ಮನೆ ನಿರ್ಮಾಣ ಯೋಜನೆಯಡಿಯಲ್ಲಿ ಮನೆ ದುರಸ್ತಿಗೆ ಆರ್ಥಿಕ ಸಹಕಾರ ಮಂಜೂರುಗೊಳಿಸಿದರು. Advertisement ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ…

Read More

ಶಾಂತಾ ಪುತ್ತೂರುರವರಿಗೆ ಕನ್ನಡ ಶ್ರೀ ರಾಜ್ಯ ಪ್ರಶಸ್ತಿ ಕಾಸರಗೋಡು: ಕೇರಳ ರಾಜ್ಯದ ಕಾಸರಗೋಡಿನ ನುಳ್ಳಿಪ್ಪಾಡಿಯ ಸೀತಮ್ಮ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯದ ನೇತೃತ್ವದಲ್ಲಿ ಕಥಾಬಿಂದು ಪ್ರಕಾಶನ ,ಪಾಂಗೋಡು ದುರ್ಗಾ ಪರಮೇಶ್ವರೀ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಸಾಂಸ್ಕೃತಿಕ ಘಟಕ ಮತ್ತು ಕರ್ನಾಟಕ ಇತಿಹಾಸ ಅಕಾಡೆಮಿ ಕಾಸರಗೋಡು ಜಿಲ್ಲಾಘಟಕದ ಸಹಯೋಗದಲ್ಲಿ ಕನ್ನಡ ಭವನದಲ್ಲಿ ಆಯೋಜಿಸಿದ ಕಾಸರಗೋಡು ಕನ್ನಡ ಭವನ ಕನ್ನಡ ಸಂಸ್ಕೃತಿ ಉತ್ಸವ ದಲ್ಲಿ ಬೊಳುವಾರು ನಿವಾಸಿ ಸರಕಾರಿ ಪ್ರೌಢಶಾಲೆ ಕಬಕದ ಶಿಕ್ಷಕಿ ಶಾಂತಾ ಪುತ್ತೂರುರವರನ್ನು ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ಕನ್ನಡ ಶ್ರೀ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. Space for advertisement ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಶ್ರೀಮದ್ ಎಡನೀರು ಮಹಾಸಂಸ್ಥಾನ ದವರು ಕನ್ನಡ ಭವನ ಕನ್ನಡ ಸಂಸ್ಕೃತಿ ಉತ್ಸವ ಉದ್ಘಾಟಿಸಿ ಆಶೀರ್ವಚನ ನೀಡಿದರು.ಕನ್ನಡ ಭವನದ ಸ್ಥಾಪಕಾಧ್ಯಕ್ಷರಾದ ವಾಮನರಾವ್ ಬೇಕಲ್ ಅಧ್ಯಕ್ಷ ತೆ ವಹಿಸಿದ್ದರು.ಕಥಾಬಿಂದು ಪ್ರಕಾಶನದ ಪಿ.ವಿ.ಪ್ರದೀಪ್ ಕುಮಾರ್ ಸಾಹಿತಿ ಡಾ.ರಮಾನಂದ ಬನಾರಿ ,ಜಯಾನಂದ ಪೆರಾಜೆ,ಶ್ರೀ ಕೃಷ್ಣ ಯ್ಯ ಅನಂತಪುರ,…

Read More

ವಿದ್ಯುತ್ ದರ ಏರಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ ಬಂಟ್ವಾಳ: ವಿದ್ಯುತ್ ದರವನ್ನು ರಾಜ್ಯ ಸರಕಾರಹೆಚ್ಚಿಸಿರುವು ನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿಯ ಬಂಟ್ವಾಳ ಮಂಡಲ ವತಿಯಿಂದ ಬಿ.ಸಿ.ರೋಡ್ ನ ಫ್ಲೈಓವರ್ ಬಳಿ ಸೋಮವಾರ ಬೆಳಗ್ಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಉಪಸ್ಥಿತಿಯಲ್ಲಿ ಪ್ರತಿಭಟನೆ ನಡೆಯಿತು. Advertisement ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ, ಹರಿಕೃಷ್ಣ ಬಂಟ್ವಾಳ ಮಾತನಾಡಿ ಕಾಂಗ್ರೆಸ್ ತನ್ನ ಗ್ಯಾರಂಟಿ ಘೋಷಣೆ ಮೂಲಕ ಅಧಿಕಾರಕ್ಕೆ ಬಂದಿದ್ದು, ಇದು ರಾಜ್ಯದ ಹಿತಾಸಕ್ತಿಗೆ ಮಾರಕವಾಗಿದೆ. ಇನ್ನು ಒಂದು ವರ್ಷದೊಳಗೆ ಕಾಂಗ್ರೆಸ್ ಪಕ್ಷವನ್ನೂ ಗ್ಯಾರಂಟಿ ದಿವಾಳಿ ಮಾಡುವುದರೊಂದಿಗೆ ರಾಜ್ಯವನ್ನು ಪಾಕಿಸ್ತಾನ, ವೆಜೆಜುವೆಲಾ ಮಾದರಿ ಆರ್ಥಿಕ ದಿವಾಳಿತನಕ್ಕೆ ಕೊಂಡೊಯ್ಯುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.ಬಿಜೆಪಿ ರಾಜ್ಯ ವಕ್ತಾರ ವಿಕಾಸ್ ಪುತ್ತೂರು ಮಾತನಾಡಿ, ಪಂಚ ಗ್ಯಾರಂಟಿಗಳು ಅನುಷ್ಠಾನಕ್ಕೆ ಯೋಗ್ಯವಾದುದಲ್ಲ, ವಿದ್ಯುತ್ ಉಚಿತ ಎಂದು ಒಂದೆಡೆ ಹೇಳಿ, ಮತ್ತೊಂದೆಡೆಯಿಂದ ದರ ಏರಿಕೆ ಮಾಡುತ್ತಿದೆ. ನಿರುದ್ಯೋಗಿಗಳ ಭತ್ತೆಗೆ ಈಗ ಕಂಡೀಶನ್ ಹಾಕಲಾಗುತ್ತಿದೆ, ಸರಕಾರ ಊಸರವಳ್ಳಿಯಂತೆ ಬಣ್ಣ ಬದಲಾಯಿಸುತ್ತಿದೆ…

Read More

ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನದ ಆಶ್ರಯದಲ್ಲಿ ಕೇಂದ್ರ ಸರ್ಕಾರದ ನಿಕ್ಷಯ್ ಮಿತ್ರ ಯೋಜನೆಯಡಿ ಕ್ಷಯ ರೋಗಿಗಳಿಗೆ ದವಸ ಧಾನ್ಯ ವಿತರಣಾ ಕಾರ್ಯಕ್ರಮ ಫರಂಗಿಪೇಟೆಯ ಸೇವಾಂಜಲಿ ಸಭಾಂಗಣದಲ್ಲಿ ಸೋಮವಾರ ನಡೆಯಿತು. Advertisement ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಬೋಳಾರ ಉಮಾಪರಮೇಶ್ವರಿ ಭಜನಾ ಮಂದಿರದ ಅಧ್ಯಕ್ಷ, ಉದ್ಯಮಿ ಸೀತಾರಾಮ ಎ. ಆಹಾರ ಧಾನ್ಯ ವಿತರಿಸಿ ಮಾತನಾಡಿ ಸೇವಾಂಜಲಿ ಪ್ರತಿಷ್ಠಾನದ ಮೂಲಕ ಕೃಷ್ಣಕುಮಾರ್ ಪೂಂಜ ಅವರು ಮಾಡುವ ಸೇವೆ ಅಪೂರ್ವವಾದುದು. ಶಿಕ್ಷಣ, ಆರೋಗ್ಯ ಮತ್ತಿತರ ಸೌಲಭ್ಯಗಳು ಅರ್ಹ ಜನರಿಗೆ ತಲುಪಲು ಅವರು ಅಹರ್ನಿಶಿಯಾಗಿ ದುಡಿಯುತ್ತಿದ್ದಾರೆ. ಜಾತಿ ಮತದ ಭೇದವಿಲ್ಲದೆ ಬಡವರಿಗಾಗಿ ತುಡಿಯುವ ವ್ಯಕ್ತಿತ್ವ ಕೃಷ್ಣಕುಮಾರ್ ಪೂಂಜರದ್ದು ಎಂದು ತಿಳಿಸಿದರು. ಸೇವಾಂಜಲಿ ಸಂಸ್ಥೆ ಮಾಡುವ ಸೇವಾ ಕಾರ್ಯಗಳಿಗೆ ನಾವು ಸಹಕಾರ ನೀಡಿದಾಗ ಇನ್ನಷ್ಟು ಹೆಚ್ಚಿನ ಫಲಾನುಭವಿಗಳನ್ನು ತಲುಪಲು ಸಾಧ್ಯವಿದೆ, ಪೌಷ್ಟಿಕಾಹಾರ ಸೇವೆನೆಯ ಮೂಲಕ ಕ್ಷಯ ರೋಗ ನಿರ್ಮೂಲನೆ ಸಾಧ್ಯವಿದ್ದು ಕ್ಷಯ ರೋಗಿಗಳು ಇದನ್ನು ಗಮನದಲ್ಲಿಟ್ಟುಕೊಂಡು ಬೇಗ ಗುಣಮುಖರಾಗಿ ಎಂದು ತಿಳಿಸಿದರು. Advertisement ಮನೋವೈದ್ಯ ಡಾ. ರವೀಶ್ ತುಂಗ ಮಾತನಾಡಿ ಕ್ಷಯ…

Read More

ನನ್ನ ಲೈಪ್- ನನ್ನ ಸ್ವಚ್ಛನಗರ ಕಾರ್ಯಕ್ರಮದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ ಬಂಟ್ವಾಳ: ಇಲ್ಲಿನ ಪುರಸಭೆಯ ವತಿಯಿಂದ ನನ್ನ ಲೈಪ್- ನನ್ನ ಸ್ವಚ್ಛನಗರ ಕಾರ್ಯಕ್ರಮದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ ಬಿ.ಸಿ.ರೋಡಿನ ಕೈಕಂಬ ಬಳಿಕ ಪರ್ಲಿಯಾ ಹಾಗೂ ಕೊಡಂಗೆ ಬಳಿ ನಡೆಯಿತು. ನನ್ನ ಲೈಪ್- ನನ್ನ ಸ್ವಚ್ಛನಗರ ಕಾರ್ಯಕ್ರಮದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ ಮಂಗಳೂರು ನಗರ ಯೋಜನಾ ಕೋಶದ ಯೋಜನಾ ನಿರ್ದೇಶಕ ಅಭಿದ್ ಗದ್ಯಾಲ್ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಪುರಸಭೆ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೋ, ಆರೋಗ್ಯ ನಿರೀಕ್ಷಕ ರತ್ನ ಪ್ರಸಾದ್, ಪ್ರಮುಖರಾದ ವಸಂತಿ ಗಂಗಾಧರ್, ಎ. ದಾಮೋದರ ಸಂಚಯಗಿರಿ, ಮಚ್ಚೇಂದ್ರ ಸಾಲ್ಯಾನ್, ಕಿಶೋರ್ ಆಚಾರ್ಯ ಪುರಸಭೆಯ ಸಿಬ್ಬಂದಿಗಳು, ಪೌರ ಕಾರ್ಮಿಕರು ಹಾಗೂ ಸ್ಥಳೀಯರು ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. Advertisement Advertisement

Read More