Author: admin

ಬಂಟ್ವಾಳ: ವರ್ತಕರ ವಿವಿಧೋದ್ದೇಶ ಸಹಕಾರಿ ಸಂಘ ನಿಯಮಿತ ಇದರ 13ನೇ ಪೆರ್ನೆ ಶಾಖೆಯ ಉದ್ಘಾಟನಾ ಸಮಾರಂಭ ಬಂಟ್ವಾಳ: ಇಲ್ಲಿನ ಬಂಟ್ವಾಳ ವರ್ತಕರ ವಿವಿಧೋದ್ದೇಶ ಸಹಕಾರಿ ಸಂಘ ನಿಯಮಿತ ಇದರ 13ನೇ ಪೆರ್ನೆ ಶಾಖೆಯ ಉದ್ಘಾಟನಾ ಸಮಾರಂಭ ಪೆರ್ನೆಯ ಚಂದ್ರ ಆರ್ಕೆಡ್ ನಲ್ಲಿ ಶುಭಾರಂಭ ಗೊಂಡಿತು. Advertisement ಮಾಜಿ ಸಚಿವ ಬಿ. ರಮಾನಾಥ ರೈ ನೂತನ ಶಾಖೆ ಉದ್ಘಾಟಿಸಿದರು. ಅವರು ಮಾತನಾಡಿ ಸಹಕಾರಿ ಕ್ಷೇತ್ರವು ಜನರಿಗೆ ಸಹಾಯ ಮಾಡಲು ವಿಪುಲವಾದ ಅವಕಾಶವಿರುವ ಕ್ಷೇತ್ರವಾಗಿದೆ ಎಂದರು. ಸಹಕಾರಿ ಕ್ಷೇತ್ರದಲ್ಲಿ ಸಾಕಷ್ಟು ಪೈಪೋಟಿ ಇದ್ದರು ಕೂಡ ಹೆಚ್ಚು ಸಾಧನೆ ಮಾಡಿದ ಸಹಕಾರಿ ಸಂಘಗಳು ಇದೆ. ಸಾಲ ಪಡೆದು ಕ್ಲಪ್ತ ಸಮಯದಲ್ಲಿ ಮರುಪಾವತಿ ಮಾಡಿದಾಗ ಸಹಕಾರಿ ಸಂಘಗಳು ಬಲಿಷ್ಠವಾಗಿ ಬೆಳೆಯಲು ಸಾಧ್ಯ ಎಂದು ತಿಳಿಸಿದರು. Advertisement ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ದೀಪ ಪ್ರಜ್ವಲಿಸಿಆಶೀರ್ವಚನ ನೀಡಿ ಮತೀಯವಾದ ಬಿಟ್ಟು ಎಲ್ಲರೂ ಸಾಮರಸ್ಯದಿಂದ ಬದುಕಬೇಕು ಎಂದರು. ಗ್ರಾಮೀಣ ಭಾಗದಲ್ಲಿ ಸಹಕಾರಿ ಸಂಘಗಳು ಜನರ ಆರ್ಥಿಕ ಸಂಕಷ್ಟಕ್ಕೆ…

Read More

ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಇದರ ಆಶ್ರಯದಲ್ಲಿ ಕೆ.ಎಸ್. ಹೆಗ್ಡೆ ಆಸ್ಪತ್ರೆ ದೇರಳಕಟ್ಟೆ ಇವರ ಸಹಕಾರದೊಂದಿಗೆಗೆ 122 ನೇ ರಕ್ತದಾನ ಶಿಬಿರ ಭಾನುವಾರ ಫರಂಗಿಪೇಟೆಯ ಸೇವಾಂಜಲಿ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕ ಎಂ. ವೈ. ಉದಯರವಿ ಭಾಗವಹಿಸಿ ಸ್ವಯಂ ರಕ್ತದಾನ ಮಾಡುವ ಮೂಲಕ ಶಿಬಿರ ಉದ್ಘಾಟಿಸಿದರು. ಅವರು ಮಾತನಾಡಿ ತುರ್ತು ಸಂದರ್ಭದಲ್ಲಿ ನಮ್ಮ ಬಂಧುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗ ರಕ್ತದ ಮಹತ್ವ ಏನು ಎನ್ನುವುದು ಎಲ್ಲರಿಗೂ ಅರಿವಾಗುತ್ತದೆ. ಆದ್ದರಿಂದ ಎಲ್ಲರೂ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ರಕ್ತದ ಕೊರತೆಯನ್ನು ನೀಗಿಸಬಹುದು ಜೊತೆಗೆ ಓರ್ವ ವ್ಯಕ್ತಿಯ ಪ್ರಾಣವನ್ನು ರಕ್ಷಿಸಬಹುದಾಗಿದೆ ಎಂದರು. ಸೇವಾಂಜಲಿ ಆರೋಗ್ಯ ಕೇಂದ್ರದ ವೈದ್ಯ ಡಾ. ಚೇತನ್ ಮಾತನಾಡಿ ರಕ್ತಕ್ಕೆ ರಕ್ತವೇ ಪರ್ಯಾಯವಾಗಿದ್ದು ಅದನ್ನು ರಕ್ತದಾನದ ಮೂಲಕವೇ ಪಡೆಯಬೇಕಾಗಿದೆ. ಆದ್ದರಿಂದ ಆರೋಗ್ಯವಂತರು ನಿಯಮಿತವಾಗಿ ರಕ್ತದಾನ ಮಾಡುವುದರಿಂದ ರೋಗಿಯ ಪ್ರಾಣ ಉಳಿಸುವುದರ ಜೊತೆಗೆ ತಮ್ಮ ಆರೋಗ್ಯವನ್ನು ವೃದ್ದಿಸಿಕೊಳ್ಳಬಹುದಾಗಿದೆ ಎಂದರು. Advertisement Advertisement ದೇರಳಕಟ್ಟೆ ಕೆ.…

Read More

ಬಂಟ್ವಾಳ : ಜಮೀಯ್ಯತುಲ್ ಫಲಾಹ್ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಬಂಟ್ವಾಳ : ಜಮೀಯ್ಯತುಲ್ ಫಲಾಹ್ ಬಂಟ್ವಾಳ ತಾಲೂಕು ಘಟಕದ ವತಿಯಿಂದ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳನ್ನು ಪಡೆದ ತಾಲೂಕಿನ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಪೈಲಟ್ ಹನಿಯಾ ಹನೀಫ್ ಬ್ಯಾರಿ ಅವರಿಗೆ ಸನ್ಮಾನ ಕಾರ್ಯಕ್ರಮವು ಮೆಲ್ಕಾರ್ ಬಿರ್ವ ಸೆಂಟರ್ ನಲ್ಲಿ ಶುಕ್ರವಾರ ನಡೆಯಿತು. Advertisement ಸನ್ಮಾನವನ್ನು ಸ್ವೀಕರಿಸಿದ ಕಮರ್ಷಿಯಲ್ ಪೈಲಟ್ ಕ್ಯಾಪ್ಟನ್ ಹನಿಯಾ ಹನೀಫ್ ಬ್ಯಾರಿ ಮಾತನಾಡಿ ವಿದ್ಯಾರ್ಥಿಗಳು ಇಚ್ಚಾಶಕ್ತಿ ಹಾಗೂ ನಿರ್ದಿಷ್ಟ ಗುರಿಯೊಂದಿಗೆ ಶಿಕ್ಷಣವನ್ನು ಮುಂದುವರಿಸಿದರೆ ಉನ್ನತ ಸ್ಥಾನವನ್ನು ಪಡೆಯಲು ಸಾಧ್ಯ ಎಂದು ಅಭಿಪ್ರಾಯ ಪಟ್ಟರು.ಘಟಕಾದ್ಯಕ್ಷ ರಶೀದ್ ವಿಟ್ಲ ಅಧ್ಯಕ್ಷತೆ ವಹಿಸಿದ್ದರು. ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಎನ್ನಾರೈ ಸದಸ್ಯ ಶೌಕತ್ ಅಲಿ ಬಂಟ್ವಾಳ, ಉದ್ಯಮಿಗಳಾದ ಉಮ್ಮರ್ ಹಾಜಿ ರಾಜ್ ಕಮಲ್, ವಿ.ಎಚ್.ಅಶ್ರಫ್ ವಿಟ್ಲ ಅತಿಥಿಗಳಾಗಿ ಭಾಗವಹಿಸಿದ್ದರು. Advertisement ಎಸ್ಸೆಸ್ಸೆಲ್ಸಿಯಲ್ಲಿ ಅತ್ಯಧಿಕ ಅಂಕಗಳನ್ನು ಪಡೆದ ತಾಲೂಕಿನ ವಿದ್ಯಾರ್ಥಿಗಳಾದ ಮುಹಮ್ಮದ್ ಮುಸ್ತಫಾ, ಫಾತಿಮತ್ ಶಮಾ, ನಫೀಸತ್ ಮುಫೀಝಾ,…

Read More

ಬಂಟ್ವಾಳ: ವಕೀಲರ ಸಂಘ (ರಿ ) ಬಂಟ್ವಾಳ ಇದರ 2023-25 ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಸ್ಪರ್ಶ ಕಲಾ ಮಂದಿರ ಬಿ.ಸಿ. ರೋಡ್ ನಲ್ಲಿ ಇಂದು ಮದ್ಯಾಹ್ನ 12.30ಕ್ಕೆ ನಡೆಯಿತು. 2023-25 ನೇ ಸಾಲಿನ ನೂತನ ಅಧ್ಯಕ್ಷರಾಗಿ ಶ್ರೀಯುತ ರಿಚರ್ಡ್ ಕೊಸ್ತಾ ಎಂ, ಉಪಾಧ್ಯಕ್ಷರಾಗಿ ರಾಜೇಶ್ ಬೊಳ್ಳುಕಲ್ಲು, ಪ್ರಧಾನ ಕಾರ್ಯದರ್ಶಿಯಾಗಿ ಚಂದ್ರಶೇಖರ ಡಿ ಬೈರಿಕಟ್ಟೆ, ಜೊತೆ ಕಾರ್ಯದರ್ಶಿಯಾಗಿ ಸುನಿತಾ ಕೆ ಕೆ, ಕೋಶಾಧಿಕಾರಿಯಾಗಿ ಶ್ರೀಮತಿ ನಿರ್ಮಲ ಶೆಟ್ಟಿಯವರು ಪ್ರಮಾಣವಚನ ಸ್ವೀಕರಿಸಿದರು. ಪದಗ್ರಹಣ ಕಾರ್ಯಕ್ರಮವನ್ನು ದೀಪಬೆಳಗಿಸುವುದರ ಮುಖಾoತರ ಅಂಕೋಲದ ಹಿರಿಯ ಸಿವಿಲ್ ನ್ಯಾಯಾಧಿಶರಾದ ಗೌರವಾನ್ವಿತ ಶ್ರೀ ಮನೋಹರ ಎಂ ಅವರು ಚಾಲನೆ ನೀಡಿ ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ನೀಡಿ ಶುಭಹಾರೈಸಿದರು. Advertisement Advertisement ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬಂಟ್ವಾಳದ ಹಿರಿಯ ಸಿವಿಲ್ ನ್ಯಾಯಾಧಿಶರಾದ ಶ್ರೀಮತಿ ಭಾಗ್ಯಮ್ಮ, ಪ್ರಧಾನ ಸಿವಿಲ್ ನ್ಯಾಯಾಧಿಶರಾದ ಚಂದ್ರಶೇಖರ ಎಲ್ಲಪ್ಪ ತಳವಾರ ಮತ್ತು ಹೆಚ್ಚುವರಿ ಸಿವಿಲ್ ನ್ಯಾಯಾಧಿಶರಾದ ಕೃಷ್ಣಮೂರ್ತಿ ಯನ್ ಅವರು ಭಾಗವಹಿಸಿದ್ದರು.ವಕೀಲರ ಸಂಘ (ರಿ) ಬಂಟ್ವಾಳದ…

Read More

ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಇದರ ಆಶ್ರಯದಲ್ಲಿ ಕೆ.‌ಎಸ್. ಹೆಗ್ಡೆ ಆಸ್ಪತ್ರೆ ದೇರಳಕಟ್ಟೆ ಇವರ ಸಹಕಾರದೊಂದಿಗೆಗೆ 122 ನೇ ರಕ್ತದಾನ ಶಿಬಿರ ಜೂ.4 ರಂದು ಭಾನುವಾರ ಫರಂಗಿಪೇಟೆಯ ಸೇವಾಂಜಲಿ ಸಭಾಂಗಣದಲ್ಲಿ ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿದೆ. ಶಿಬಿರದಲ್ಲಿ ಮುಖ್ಯ ಅತಿಥಿಯಾಗಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕ ಎಂ. ವೈ.‌ ಉದಯರವಿ ಭಾಗವಹಿಸಲಿದ್ದಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಶಿಬಿರದಲ್ಲಿ ಪಾಲ್ಗೊಂಡು ರಕ್ತದಾನ ಮಾಡುವಂತೆ ಪ್ರಕಟಣೆ ತಿಳಿಸಿದೆ. Advertisement Advertisement ಜೂ.5: ಆಹಾರ ದವಸಧಾನ್ಯ ವಿತರಣೆ:ಕೇಂದ್ರ ಸರ್ಕಾರದ ನಿಕ್ಷಯ್ ಮಿತ್ರ ಯೋಜನೆಯಡಿ ಕ್ಷಯ ರೋಗಿಗಳಿಗೆ ಆಹಾರ ಹಾಗೂ ಧವಸ ಧಾನ್ಯ ವಿತರಣೆ ಕಾರ್ಯಕ್ರಮ ಸೇವಾಂಜಲಿ ಸಭಾಂಗಣದಲ್ಲಿ ಜೂ.5 ರಂದು ಸೋಮವಾರ ನಡೆಯಲಿದೆ. ಶಾಸಕ ರಾಜೇಶ್ ನಾಯ್ಕ್, ಉದ್ಯಮಿ ಭುವನೇಶ್ ಪಚ್ಷಿನಡ್ಕ ಮೊದಲಾದ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣ ಕುಮಾರ್ ಪೂಂಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಬಂಟ್ವಾಳ: ತಾಲೂಕಿನ ಚುನಾವಣೆ ಶಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಎನ್. ನಾರಾಯಣ ಗೌಡ ಅವರು ವಯೋನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಅವರಿಗೆ ಬುಧವಾರ ತಾಲೂಕು ಆಡಳಿತ ಸೌಧದಲ್ಲಿ ಗೌರವಾಭಿನಂದನೆ ಸಲ್ಲಿಸಲಾಯಿತು. ಬಿ.ಸಿ. ರೋಡಿನಲ್ಲಿರುವ ತಾಲೂಕು ಆಡಳಿತ ಸೌಧದಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ತಹಶೀಲ್ದಾರ್ ಎಸ್. ಬಿ ಕೂಡಲಗಿ ಅವರು ಸರಳ ವ್ಯಕ್ತಿತ್ವದ, ನೇರ ನಡೆ ನುಡಿಯ ನಾರಾಯಣ ಗೌಡರು ಚುನಾವಣೆಯ ವಿಷಯ ನಿರ್ವಾಹಕರಾಗಿ ಸಮರ್ಥವಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಇವರ ಮುಂದಿನ ಜೀವನ ಸುಖಮಯವಾಗಿರಲಿ ಎಂದು ಶುಭ ಹಾರೈಸಿದರು.ಸನ್ಮಾನ ಸ್ವೀಕರಿಸಿ ಮಾತನಾಡಿದ ಎನ್ ನಾರಾಯಣ ಗೌಡ ಅವರು ಕರ್ತವ್ಯ ನಿರ್ವಹಣೆಯಲ್ಲಿ ಸಹಕಾರ ನೀಡಿದ ಎಲ್ಲಾ ಅಧಿಕಾರಿಗಳಿಗೆ ಮತ್ತು ಸಹೋದ್ಯೋಗಿಗಳಿಗೆ ಧನ್ಯವಾದ ಸಲ್ಲಿಸಿದರು. Advertisement ಸಹೋದ್ಯೋಗಿಗಳು, ಗ್ರಾಮ ಆಡಳಿತ ಆಧಿಕಾರಿಗಳು, ಕಚೇರಿ ಸಿಬ್ಬಂದಿಗಳು, ಗ್ರಾಮ ಸಹಾಯಕರು ನಾರಾಯಣ ಗೌಡ ಅವರಿಗೆ ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಉಪತಹಸೀಲ್ದಾರ್ ನರೇಂದ್ರನಾಥ ಮಿತ್ತೂರು,ವಿಜಯ್ ವಿಕ್ರಮ್, ದಿವಾಕರ ಮುಗುಳಿಯ ಕಂದಾಯ ನಿರೀಕ್ಷಕರಾದ ವಿಜಯ್ ಆರ್,…

Read More

ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾರಂಭದ ಸಂಭ್ರಮ ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ 2023-24ನೇ ಶೈಕ್ಷಣಿಕ ವರ್ಷದ ಶಾಲಾರಂಭವನ್ನು ಸಂಸ್ಥೆಯ ಸಂಸ್ಥಾಪಕ, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಭಾರತಮಾತೆಗೆ ದೀಪ ಬೆಳಗಿಸಿ ಪುಷ್ಪಾರ್ಚನೆ ಮಾಡುವ ಮೂಲಕ ಮಾಡಲಾಯಿತು. Advertisement ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಮಾತಾನಾಡಿ ಶ್ರೀರಾಮ ಸಂಸ್ಥೆಯು ಕಲಿಕೆ, ಆಚಾರ- ವಿಚಾರ, ಸಂಸ್ಕೃತಿ, ಜೀವನ ಮೌಲ್ಯಗಳನ್ನು ಕಲಿಸುವ ಮೂಲಕ ಭಿನ್ನವಾದ ಶಿಕ್ಷಣ ಪದ್ಧತಿಯನ್ನು ಹೊಂದಿದೆ. ಮಾತೃದೇವೋಭವ, ಪಿತೃದೇವೋಭವ, ಅತಿಥಿ ದೇವೋಭವ ಹಾಗೂ ಗುರುದೇವೋಭವ ಎನ್ನುವ ನಾಲ್ಕು ನಿಯಮಗಳನ್ನು ಪಾಲಿಸುತ್ತಾ, ತಂದೆ, ತಾಯಿ ಪ್ರತ್ಯಕ್ಷ ದೇವರಿದ್ದಂತೆ, ಹಾಗಾಗಿ ದಿನನಿತ್ಯ ಶಾಲೆಗೆ ಬರುವ ಮುನ್ನ ತಂದೆ ತಾಯಿಗೆ ನಮಸ್ಕರಿಸಿ ಬರುವಂತೆ ಕಿವಿ ಮಾತು ಹೇಳಿದರು. ಹಾಗೆಯೇ ಮುಂದಿನ ವಿದ್ಯಾರ್ಥಿ ಜೀವನ ಉತ್ತಮವಾಗಿರಲಿ, ಉಜ್ವಲವಾಗಿರಲಿ ಎಂದು ಶುಭ ಹಾರೈಸಿದರು.ಕಾರ್ಯಕ್ರಮದಲ್ಲಿ ನೂತನವಾಗಿ ಸೇರ್ಪಡೆಯಾದ ಪುಟಾಣಿಗಳಿಗೆ ಸಂಸ್ಥೆಯ ಹಿರಿಯರು ತಿಲಕಧಾರಣೆ ಮಾಡಿ ಆಶೀರ್ವದಿಸಿದರು. Advertisement ನಂತರ ಶಿಕ್ಷಕರು…

Read More

ಮಹಿಳೆಯರಿಗೆ ಉಚಿತ ಹೊಲಿಗೆ ತರಬೇತಿ ಕಾರ್ಯಗಾರ ಬಂಟ್ವಾಳ: ಸಮನ್ವಯ ಸಂಸ್ಥೆ ಮಂಗಳೂರು ಇದರ ಆಶ್ರಯದಲ್ಲಿ ಮಹಿಳೆಯರಿಗೆ 6 ತಿಂಗಳ ಉಚಿತ ಹೊಲಿಗೆ ತರಬೇತಿಯನ್ನು ಮೈಂದಾಳದಲ್ಲಿ ನಡೆಯಿತು.ಫರ್ಲಾ ಚರ್ಚ್ ನ ಧರ್ಮಗುರು ವಂ.ಸುನೀಲ್ ಮಿರಾಂದಾರವರು ಉದ್ಘಾಟಿಸಿ ಮಾತನಾಡಿ ಮಹಿಳೆ ಸಬಲೆಯಾದರೆ , ಕುಟುಂಬ ಮತ್ತು ಸಮಾಜ ಅಭಿವೃದ್ಧಿಯಾಗುತ್ತದೆ ಎಂದರು. Advertisement ಸಂಸ್ಥೆಯ ನಿರ್ದೇಶಕರಾದ ವಂ. ಡಾ ರೊನಾಲ್ಡ್ ಕುಟಿನ್ಹೊರವರು ಸಂಸ್ಥೆಯ ಹಾಗೂ ತರಬೇತಿಯ ಬಗ್ಗೆ ಮಾಹಿತಿ ನೀಡಿ ಶುಭ ಹಾರೈಸಿದರು. ವೇದಿಕೆಯಲ್ಲಿ ನವೀನ್ ಮಿನೇಜಸ್, ಹಿಲ್ಡಾ ಪಿರೇರಾ, ಹೊಲಿಗೆ ಶಿಕ್ಷಕಿ ವಿನಯ ಹಾಗೂ ಐರಿನ್ ಡಿಸೋಜ ಉಪಸ್ಥಿತರಿದ್ದರು. ಜೋಯ್ಸ್ ಡಿಸೋಜರವರು ಸ್ವಾಗತಿಸಿ, ಐರಿನ್ ಡಿಸೋಜ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Read More

ಪುತ್ತೂರು: ಸವಿತಾ ಸೌಹಾರ್ದ ಸಹಕಾರಿ ನಿಯಮಿತ ಇದರ ನೂತನ ಪುತ್ತೂರು ಶಾಖೆ ಹಾಗೂ ಸೌಂದರ್ಯ ವರ್ಧಕ ಉತ್ಪನ್ನಗಳ ಮಾರಾಟ ಮಳಿಗೆಯು ಪುತ್ತೂರಿನ ಮುಖ್ಯ ರಸ್ತೆಯಲ್ಲಿರುವ ಶಿವ ಆರ್ಕೇಡ್‌ನಲ್ಲಿ ಮಂಗಳವಾರ ಶುಭಾರಂಭಗೊಂಡಿತು. Advertisement ನೂತನ ಶಾಖೆಯನ್ನು ಸರಸ್ವತಿ ಕ್ರೆಡಿಟ್ ಸೌಹಾರ್ದಸಹಕಾರಿ ನಿ. ಅಧ್ಯಕ್ಷ ಎಸ್. ಆರ್ ಸತಿಶ್ಚಂದ್ರ ಉದ್ಘಾಟಿಸಿದರು. ಅವರು ಮಾತನಾಡಿ ಎಲ್ಲಾ ಸದಸ್ಯರಿಗೆ ಏಕ ರೂಪದಲ್ಲಿ ಲಾಭಾಂಶ ಹಂಚುವ ವ್ಯವಸ್ಥೆ ಸಹಕಾರಿ ಸಂಘಗಳಲ್ಲಿ ಮಾತ್ರ ಇದೆ. ಇದು ಸಮಾಜದ ಆಸ್ತಿ, ಎಲ್ಲರೂ ಜೊತೆಯಾಗಿ ಬೆಳೆಯುವ ಸಾಧನ. ಪಾರದರ್ಶಕವಾಗಿ ಕೆಲಸ ಮಾಡುವ ವ್ಯವಸ್ಥೆಯಾಗಿದೆ ಎಂದರು. ನಾವು ಬೆಳೆದಿದ್ದೇವೆ, ಇನ್ನೂ ಬೆಳೆಯಬೇಕಾಗಿದೆ. ಇದರ ಜೊತೆಗೆ ಸಮಾಜವನ್ನು ಬೆಳೆಸಬೇಕಾಗಿದೆ. ದೇಶ ಅಭಿವೃದ್ಧಿ ಕಾಣಲು ಸಹಕಾರಿ ಕ್ಷೇತ್ರದ ಕೊಡುಗೆ ಅಪಾರ ಇದೆ ಎಂದ ಅವರು ಸವಿತಾ ಸೌಹಾರ್ದ ಸಹಕಾರಿ ಸಂಘ ಹೆಚ್ಚು ಅಭಿವೃದ್ಧಿ ಕಾಣಲಿ ಎಂದು ಆಶಿಸಿದರು. ಎಸ್‌ಸಿಡಿಸಿಸಿ ಬ್ಯಾಂಕ್ ನಿವೃತ್ತ ಡಿಜಿಎಂ ಉಗ್ಗಪ್ಪ ಶೆಟ್ಟಿ ಮಾರಾಟ ಮಳಿಗೆಯನ್ನು ಉದ್ಘಾಟಿಸಿದರು. ಅವರು ಮಾತನಾಡಿ ಸಹಕಾರಿ ಸಂಘಗಳು ಕೇವಲ…

Read More

ಜನಾರ್ದನ ಪೂಜಾರಿಯನ್ನು ಭೇಟಿಯಾದ ಯು.ಟಿ. ಖಾದರ್ ಬಂಟ್ಚಾಳ:: ಮಂಗಳೂರು ಶಾಸಕ, ವಿಧಾನಸಭೆಯ ನೂತನ ಸಭಾಪತಿ ಯು.ಟಿ.ಖಾದರ್ ಅವರು ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಅವರ ಬಂಟ್ವಾಳದ ಬಸ್ತಿಪಡ್ಪುವಿನಲ್ಲಿರುವ ಮನೆಗೆ ಭೇಟಿ ನೀಡಿ ಆಶೀರ್ವಾದ ಪಡೆದರು.ಸ್ಪೀಕರ್ ಹುದ್ದೆಗೆ ಖಾದರ್ ಸೂಕ್ತ ವ್ಯಕ್ತಿಯಾಗಿದ್ದು, ಅವರ ಭಾಷಣವನ್ನು ಪೂರ್ತಿ ಕೇಳಿದ್ದೇನೆ. ಚೆನ್ನಾಗಿ ನಿಭಾಯಿಸಿದ್ದಾರೆ ಎಂದು ಪೂಜಾರಿ ಬೆನ್ನು ತಟ್ಟಿದರು.ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಖಾದರ್, ಜನಾರ್ದನ ಪೂಜಾರಿ ಹಾಗೂ ಹಿರಿಯರ ಸಲಹೆ ಸೂಚನೆಗಳನ್ನು ಪಾಲಿಸಿಕೊಂಡು, ಹಿರಿಯರಾದ ವೈಕುಂಠ ಬಾಳಿಗಾ ಮತ್ತು ಕೆ.ಎಸ್.ಹೆಗ್ಡೆ ಅವರು ಹಾಕಿಕೊಟ್ಟ ಮೇಲ್ಪಂಕ್ತಿಯನ್ನು ಅನುಸರಿಸಿಕೊಂಡು ಜಿಲ್ಲೆಯ ಹಾಗೂ ಕ್ಷೇತ್ರದ ಮತದಾರರ ಗೌರವವನ್ನು ಉಳಿಸುವ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು. Advertisement ಪ್ರಮುಖರಾದ ಈಶ್ವರ್ ಉಳ್ಳಾಲ್, ಮಹಮದ್ ಮೋನು ,ಸದಾಶಿವ ಉಳ್ಳಾಲ್, ದೀಪಕ್ ಪಿಲಾರ್ , ಹಾಶೀರ್ ಪೆರಿಮಾರ್,ದಿನೇಶ್ ಪೂಜಾರಿ, ಪುರುಷೋತ್ತಮ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು Advertisement

Read More