Author: admin
ಅಕ್ರಮ ಮರಳು ದಂಧೆಕೋರರು ನನ್ನ ಸೋಲಿಗೆ ಶ್ರಮಿಸಿದ್ದಾರೆ: ಬಿ. ರಮನಾಥ ರೈ ಬಂಟ್ವಾಳ: ಅಕ್ರಮ ಮರಳುದಂಧೆಕೋರರ ಹಣ ಈ ಚುನಾವಣೆಯಲ್ಲಿ ನನ್ನ ಸೋಲಿಗೆ ಹೆಚ್ಚಿನ ಪ್ರಭಾವ ಬೀರಿದೆ, ನಾನು ಗೆದ್ದಲ್ಲಿ ಬಿಜೆಪಿವರಿಗೆ ಅಕ್ರಮ ಮರಳುಗಾರಿಕೆ ಕಡಿವಾಣ ಬೀಳುತ್ತದೆ ಎನ್ನುವ ಭಯದಲ್ಲಿ ಈ ಬಾರಿಯ ಚುನಾವಣೆಯಲ್ಲಿ ಮರಳು ಮಾಫಿಯದವರು ಹಣ ಹಂಚಿದ್ದಾರೆ, ಹಣ ಬಲದ ಎದುರು ನನಗೆ ಸೋಲಾಯಿತು ಎಂದು ಮಾಜಿ ಸಚಿವ ಬಿ. ರಮನಾಥ ರೈ ಅಳಲು ತೋಡಿಕೊಂಡಿದ್ದಾರೆ.ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಕರೆದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು. Advertisement ಬಂಟ್ವಾಳ ಶಾಸಕರು ಕೃಷಿಕ ಎಂದು ಹೇಳಿಕೊಂಡರೂ ವಾಸ್ತವದಲ್ಲಿ ದೊಡ್ಡ ವ್ಯಾಪಾರಿಗಳಾಗಿದ್ದು ಅಕ್ರಮ ವ್ಯವಹಾರದಲ್ಲಿ ತೊಡಗಿದ್ದಾರೆ. ಸಿಮೆಂಟ್ ಉತ್ಪಾದನೆಗೆ ಬಾಕ್ಸೈಟ್ ನ್ನು ಸರಬರಾಜು ಮಾಡುವ ವ್ಯವಹಾರ ಅವರಿಗಿದೆ. ಕೃಷಿ ಹಾಗೂ ಸಮಾಜಸೇವೆ ನನ್ನ ಉದ್ಯೋಗ. ನಾನು ಎಲ್ಲಿಂದಲೋ ಬಂದು ಚುನಾವಣೆಗೆ ನಿಂತಿಲ್ಲ ಎಂದು ತಿಳಿಸಿದರು. ನಾನು ಚುನಾವಣಾ ರಾಜಕೀಯಕ್ಕೆ ಮಾತ್ರ ನಿವೃತ್ತಿ ಘೋಷಿಸಿದ್ದು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡು ಪಕ್ಷದ ನಾಯಕರು…
ಬಂಟ್ವಾಳ: ಪುತ್ತೂರು ಹಿಂದೂ ಕಾರ್ಯಕರ್ತರ ಮೇಲಿನ ಪೊಲೀಸ್ ದೌರ್ಜನ್ಯವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಖಂಡಿಸಿದ್ದಾರೆ.ಕಾನೂನು ಮೀರಿ ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಘಟನೆಯ ಬಗ್ಗೆ ಸೂಕ್ತ ತನಿಖೆ ನಡೆಸಿ ಅವರ ಮೇಲೆ ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದಾರೆ.ಈಗಾಗಲೇ ಯುವಕರ ಮೇಲೆ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲಾಧಿಕಾರಿಗಳು ಓರ್ವ ಎಸೈ ಹಾಗೂ ಪೊಲೀಸ ನ್ನು ಸಸ್ಪಂಡ್ ಮಾಡಿದ್ದಾರೆ, ಆದರೆ ಕೇವಲ ಸಸ್ಪಂಡ್ ಮಾಡಿದರೆ ಸಾಲದು ಘಟನೆಯ ಬಗ್ಗೆ ಸೂಕ್ತ ತನಿಖೆ ನಡೆಸಿ ಅವರ ಮೇಲೆ ಕ್ರಮ ಕೈಗೊಳ್ಳಲು ಅವರು ಒತ್ತಾಯಿಸಿದ್ದಾರೆ.ಇಂತಹ ಪೋಲೀಸ್ ದೌರ್ಜನ್ಯ ಘಟನೆಗಳು ನಡೆಯಬಾರದು ಎಂದು ತಿಳಿಸಿರುವ ಅವರು ಹಿಂದೂ ಕಾರ್ಯಕರ್ತರ ಜೊತೆಗೆ ಯಾವತ್ತು ನಾವಿದ್ದೇವೆ ,ಯಾವುದೇ ಭಯಬೇಡ ಎಂದು ಅವರು ಭರವಸೆ ನೀಡಿದ್ದಾರೆ. Advertisement Advertisement
ಬಂಟ್ವಾಳ: ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಸ್ವಚ್ಚ ಭಾರತ್ ಮಿಷನ್-2.೦ ಯೋಜನೆಯಡಿ ಸ್ಥಳೀಯ ಮಟ್ಟದಲ್ಲಿ ಪರಿಣಾಮ ಬೀರುವ ಅಭಿಯಾನವನ್ನು ಪ್ರಾರಂಭಿಸಿದ್ದು, ನವೀಕರಿಸಿ ಮರು ಬಳಸ ಬಹುದಾದಂತಹ ವಸ್ತುಗಳ ಉತ್ಪಾದನೆಯನ್ನು ಕಡಿಮೆ ಗೊಳಿಸಲು ಮತ್ತು ಸುಸ್ಥಿರ ಜೀವನ ಪದ್ಧತಿಗಳನ್ನು ಅಳವಡಿಸಿಕೊಳ್ಳುವ ಮೂಲಕ ಪರಿಸರವನ್ನು ರಕ್ಷಿಸುವ ಪ್ರಮುಖ ಉದ್ದೇಶದಿಂದ ನನ್ನ ಜೀವನ ನನ್ನ ಸ್ವಚ್ಛ ನಗರ ಯೋಜನೆಯ ಕಾರ್ಯಕ್ರಮದಡಿ ಕಡಿಮೆಗೊಳಿಸುವುದು, ಮರುಬಳಕೆ ಮತ್ತು ಪುನರ್ಬಳಕೆ ಕೇಂದ್ರಗಳನ್ನು ಬಂಟ್ವಾಳ ಪುರಸಭಾ ವ್ಯಾಪ್ತಿಗಳಲ್ಲಿ ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಒಣ ತ್ಯಾಜ್ಯ ಸಂಗ್ರಹಣಾ ಕೇಂದ್ರ ಅಥವಾ ಗುರುತಿಸಿರುವ ನಗರದ ಪ್ರಮುಖ ಸ್ಥಳಗಳಲ್ಲಿ ವಸ್ತು ಮರು ಪಡೆಯುವ ಸೌಲಭ್ಯಕೇಂದ್ರಗಳನ್ನುನ ಆರಂಭಿಸಿದೆ. Advertisement Advertisement ಕಡಿಮೆಗೊಳಿಸುವುದು, ಮರುಬಳಕೆ ಮತ್ತು ಪುನರ್ಬಳಕೆ ಕೇಂದ್ರಗಳಾಗಿ ಬಳಸಿ, ನನ್ನಜೀವನ ನನ್ನ ಸ್ವಚ್ಚನಗರ ಯೋಜನೆಯನ್ನು ಪರಿಣಾಮಕಾರಿಯಾಗಿ ಹಮ್ಮಿಕೊಳ್ಳಲು ಬಂಟ್ವಾಳ ಪುರಸಭೆಯು ತೀರ್ಮಾನಿಸಿದ್ದು ದಿನಾಂಕ 20.5.2023 ರಿಂದ 05.06.2023 ರವರೆಗೆ ಬಡ್ಡಕಟ್ಟೆ ವೈಕುಂಠ ಬಾಳಿಗ ವಾಣಿಜ್ಯಸಂಕೀರ್ಣ, ಬಿ.ಸಿ.ರೋಡ್ ಬಸ್ ನಿಲ್ದಾಣ ಬಳಿ, ಪಾಣೆಮಂಗಳೂರು ಮಾರುಕಟ್ಟೆ ಬಳಿಈ ಕೆಳಕಂಡ…
ಬಂಟ್ವಾಳ: ಸಂಘಟನೆಯ ಮೂಲ ಉದ್ದೇಶವೇ ಮಕ್ಕಳಲ್ಲಿ ನೈತಿಕತೆಯ ಜಾಗೃತಿ ಮೂಡಿಸುವುದು. ಮಕ್ಕಳು ಶಾಲೆಯ ಶಿಕ್ಷಣವನ್ನು ಪಡೆದು ಶೈಕ್ಷಣಿಕವಾಗಿ ಅಭಿವೃದ್ಧಿಯನ್ನು ಹೊಂದುತ್ತಾರೆ ಅದೇ ರೀತಿ ಸಂಸ್ಕಾರ ಶಿಕ್ಷಣ ಮಾನಸಿಕತೆ ಮತ್ತು ಬೌದ್ಧಿಕತೆಯ ಬೆಳವಣಿಗೆಯನ್ನು ಮಾಡಬೇಕು. ಆ ಮೂಲಕ ಆಧಾತ್ಮಿಕತೆಯ ಬೆಳವಣಿಗೆ, ಧಾರ್ಮಿಕ ಮನೋಭಾವದ ಅಭಿವೃದ್ಧಿಯಾಗಬೇಕು ಎಂದು ಸಂಸ್ಕಾರ ಭಾರತಿ ದ.ಕ. ಜಿಲ್ಲಾಧ್ಯಕ್ಷ ತಾರನಾಥ ಕೊಟ್ಟಾರಿ ಹೇಳಿದರು.ಪುದು ಗ್ರಾಮದ ನಾಣ್ಯದ ನಾಗರಕ್ತೇಶ್ವರಿ ಕ್ಷೇತ್ರದಲ್ಲಿ ಸಂಸ್ಕಾರ ಭಾರತಿ ದ.ಕ. ಜಿಲ್ಲೆ ಇದರ ಬಂಟ್ವಾಳ ಘಟಕದ ವತಿಯಿಂದ ತೃಷಾ ಶೆಟ್ಟಿ ನಿರ್ದೇಶನದಲ್ಲಿ ನಡೆದ ಐದು ದಿನಗಳ ಸಂಸ್ಕಾರ ಸೌರಭ ಮಕ್ಕಳ ಬೇಸಿಗೆ ಹಬ್ಬದ ಸಮಾರೋಪ ಕಾರ್ಯಕ್ರಮದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವೇದಿಕೆಯಲ್ಲಿ ರಾಧಾಸುರಭಿ ಗೋ ಮಂದಿರದ ಸಂಸ್ಥಾಪಕ ಭಕ್ತಿ ಭೂಷಣ ಪ್ರಭೂಜಿ, ಸಂಸ್ಕಾರ ಭಾರತಿಯ ಮಲ್ಲಿಕಾ ಶೆಟ್ಟಿ, ಪುದು ಪಂಚಾಯತಿ ಸದಸ್ಯ ಮನೋಜ್ ಆಚಾರ್ಯ ನಾಣ್ಯ, ಉಮಾ ಚಂದ್ರಶೇಖರ ಉಪಸ್ಥಿತರಿದ್ದರು.ಬೇಸಿಗೆ ಶಿಬಿರ ವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ ತೃಷಾ ಶೆಟ್ಟಿ ಹಾಗು ಭಕ್ತಿ ಭೂಷಣ ಪ್ರಭೂಜಿ ಯವರನ್ನು…
ವಗ್ಗ ಕುಲಾಲ ಸಮಾಜ ಸೇವಾ ಸಂಘದಿಂದ ವೀರನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ದೇಣಿಗೆ ಹಸ್ತಾಂತರ ಬಂಟ್ವಾಳ: ತಾಲೂಕಿನ ವಗ್ಗ ಕುಲಾಲ ಸಮಾಜ ಸೇವಾ ಸಂಘದಿಂದ ಕುಲಾಲ ಸಮಾಜದ ಆಡಳಿತವಿರುವ ಕುಲಶೇಖರ ವೀರನಾರಾಯಣ ದೇವಸ್ಥಾನದಲ್ಲಿ ಮೇ 14ರಂದು ಆರಂಭಗೊಂಡು 24ರ ವರೆಗೆ ನಡೆಯುತ್ತಿರುವ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ದೇಣಿಗೆ ಮತ್ತು 95 ತಾಮ್ರ ಕಲಶ ಸೇವೆಯ ಬಾಬ್ತು ಒಟ್ಟು ರೂ. 2,87,739 ಹಣವನ್ನು ಜಿಲ್ಲಾ ಮಾತೃ ಸಂಘದ ಬ್ರಹ್ಮಕಲಶೋತ್ಸವ ಸಮಿತಿಗೆ ಹಸ್ತಾಂತರಿಸಲಾಯಿತು. Advertisement Advertisement ವಗ್ಗ ವಲಯಕ್ಕೆ ಸಂಬಂದಿಸಿದ ಕುಲಾಲ ಸಮಾಜ ಬಾಂಧವರ ೪೧೦ ಮನೆಗಳಿಗೆ ಸಂಘದ ಪದಾಧಿಕಾರಿಗಳು ಭೇಟಿ ನೀಡಿ ಬ್ರಹ್ಮಕಲಶೋತ್ಸವದ ಆಮಂತ್ರಣ ನೀಡಿದ ಸಂದರ್ಭ ದೇಣಿಗೆಯನ್ನು ಸಂಗ್ರಹಿಸಲಾಯಿತು. ಕುಲಶೇಖರ ಕ್ಷೇತ್ರಕ್ಕೆ ಹಸ್ತಾಂತರಿಸುವ ಸಂದರ್ಭ ವಗ್ಗ ಕುಲಾಲ ಸಂಘದ ಅಧ್ಯಕ್ಷ ಪುರುಷೋತ್ತಮ ಕುಲಾಲ್ ಹೇರೊಟ್ಟು, ಉಪಾಧ್ಯಕ್ಷ ಗೋಪಾಲ್ ಸಾಲ್ಯಾನ್ ಕಟ್ಲೋಡಿ ಮತ್ತು ಕಾರ್ಯದರ್ಶಿ ಚಂದು ಕುಲಾಲ್ ವಗ್ಗ, ಸದಸ್ಯರಾದ ಸತೀಶ್ ಮಧ್ವ, ವಿಜಯ್ ಪಣೆಕಲ, ಜಯಂತ ಬಂಗೇರ ಉಗ್ಗಬೆಟ್ಟು, ಕೃಷ್ಣ ಕುಲಾಲ್, ಚಂದ್ರಹಾಸ್…
ಬಿ. ಜನಾರ್ದನ ಪೂಜಾರಿಯನ್ನು ಭೇಟಿಯಾದ ಯು.ಟಿ. ಖಾದರ್, ಸರ್ವರನ್ನು ಜೊತೆಯಾಗಿ ಕರೆದೊಯ್ಯುವಂತೆ ಖಾದರ್ಗೆ ಪೂಜಾರಿ ಸಲಹೆ ಬಂಟ್ವಾಳ: ಮಂಗಳೂರು ಶಾಸಕ ಯು.ಟಿ. ಖಾದರ್ ಅವರು ಬುಧವಾರ ಸಂಜೆ ಬಂಟ್ವಾಳದಲ್ಲಿ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿಯವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿ ಆಶೀರ್ವಾದ ಪಡೆದರು.ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಜನಾರ್ದನ ಪೂಜಾರಿಯವರು ನಮ್ಮ ಪಕ್ಷದ ಹಿರಿಯ ನಾಯಕರು. ತನ್ನ ವಿದ್ಯಾರ್ಥಿ ಜೀವನದಲ್ಲಿ ರಾಜಕೀಯ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ಬಿ. ಜನಾರ್ದನ ಪೂಜಾರಿಯವರು ಮಾರ್ಗದರ್ಶನ ಮಾಡಿದ್ದರು. ಅವರ ಕಠಿಣ ಪರಿಶ್ರಮ, ಪ್ರಾಮಾಣಿಕತೆ, ಸಾಮಾಜಿಕ ಬದ್ದತೆ ನನ್ನ ರಾಜಕೀಯ ಜೀವನದಲ್ಲಿ ದೊಡ್ಡ ಮಟ್ಟದ ಪರಿಣಾಮವನ್ನು ಬೀರಿದೆ ಎಂದರು. ನಾಮಪತ್ರ ಸಲ್ಲಿಸುವ ಮೊದಲು ಅವರ ಆಶೀರ್ವಾದ ಪಡೆದುಕೊಂಡಿದ್ದೆ ಇದೀಗ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕವೂ ಅವರ ಆಶೀರ್ವಾದ ಪಡೆದುಕೊಂಡಿದ್ದೇನೆ. ಕಾಂಗ್ರೆಸ್ನ ಎಲ್ಲಾ ಕಾರ್ಯಕರ್ತರನ್ನು ಒಂದು ಕುಟುಂಬದ ರೀತಿಯಲ್ಲಿ ನೋಡಿಕೊಂಡು ಸರ್ವರನ್ನು ಜೊತೆಯಾಗಿ ಕರೆದೊಯ್ಯುವಂತೆ ಅವರು ಸಲಹೆ ನೀಡಿದ್ದು ಅದನ್ನು ಸ್ವೀಕರಿಸಿ ಪಕ್ಷವನ್ನು ಬಲಿಷ್ಠಗೊಳಿಸಿ, ಪಕ್ಷ ಕಾರ್ಯಕ್ರಮವನ್ನು ಜನರಿಗೆ…
ಬಂಟ್ವಾಳ: ಮಾರಾಟಕ್ಕಲದ ಸಿಮೆಂಟ್ಗಳನ್ನು ಬಿಜೆಪಿ ಮುಖಂಡನ ಮನೆಯಲ್ಲಿ ಅಕ್ರಮವಾಗಿ ದಾಸ್ತನಿರಿಸಿದ್ದಲ್ಲದೆ ಇದೇ ಸಿಮೆಂಟ್ ಬಳಸಿ ಎರಡು ಮನೆಗಳನ್ನು ನಿರ್ಮಿಸಿರುವ ಬಗ್ಗೆ ಸೂಕ್ತ ಕಾನೂನು ತನಿಖೆ ಆಗಬೇಕೆಂದು ರಾಜೀವ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಗದೀಶ್ ಕೊಯಿಲ ಆಗ್ರಹಿಸಿದ್ದಾರೆ. Advertisement ಬಿ.ಸಿ. ರೋಡಿನ ಪ್ರೆಸ್ಕ್ಲಬ್ನಲ್ಲಿ ಅವರು ಈ ಬಗ್ಗೆ ಸುದ್ದಿಗೋಷ್ಟಿ ನಡೆಸಿ ಮಾತನಾಡಿ ಇತ್ತೀಚೆಗೆ ಬಿ. ಮೂಡ ಗ್ರಾಮದ ಪಲ್ಲಮಜಲು ಎಂಬಲ್ಲಿ ಖಾಸಗಿ ವ್ಯಕ್ತಿಯ ಮನೆ ನಿರ್ಮಾಣದ ಸಂದರ್ಬ ತಹಶೀಲ್ದಾರ್ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿ 21 ಗೋಣಿ ಸಿಮೆಂಟ್ ಅನ್ನು ವಶಕ್ಕೆ ಪಡೆದುಕೊಂಡಿದೆ. ಈ ನಿರ್ಮಾಣ ಹಂತದಲ್ಲಿರುವ ಕಟ್ಟಡವು ಬಂಟ್ವಾಳ ಬಿಜೆಪಿ ಮುಖಂಡನ ಸಂಬಂಧಿಯ ಮನೆಯಾಗಿದೆ. ಇದೇ ಸಂದರ್ಭ ಅರಳದಲ್ಲಿರುವ ಬಿಜೆಪಿ ಮುಖಂಡನ ಮನೆಗೆ ದಾಳಿ ಮಾಡಿದಾಗ ನಿರ್ಮಾಣ ಹಂತದಲ್ಲಿರುವ ಮನೆಯಲ್ಲೂ 30 ಗೋಣಿ ಸಿಮೆಂಟ್ ಚೀಲಗಳು ಸಿಕ್ಕಿದ್ದು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದರು. ಈ ವೇಳೆ ಖಾಸಗಿ ಕಟ್ಟಡ ನಿರ್ಮಾಣಕ್ಕೆ ಬಳಕೆ ಮಾಡಿದ ಸಿಮೆಂಟ್ನ ಖಾಲಿ…
ಬಂಟ್ವಾಳ: ಬಂಟ್ವಾಳ ತಾ. ಕುಡಂಬೆಟ್ಟು ಗ್ರಾಮದ ಉರುಡಾಯಿ ಶ್ರೀ ಮುಖ್ಯಪ್ರಾಣ ಸ್ವಾಮಿ ದೇವಸ್ಥಾನ ಸುಮಾರು 1.50 ಕೋ.ರೂ.ವೆಚ್ಚದಲ್ಲಿ ಶಿಲಾಮಯವಾಗಿ ಪುನರ್ ನಿರ್ಮಾಣಗೊಂಡಿದ್ದು, ಉಡುಪಿ ಸೋದೆ ವಾದಿರಾಜ ಮಠ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ವೇ.ಮೂ.ನಡ್ವಂತಾಡಿ ಬಾಲಕೃಷ್ಣ ಪಾಂಗಣ್ಣಾಯ ಅವರ ಪೌರೋಹಿತ್ಯದಲ್ಲಿ ಮೇ 20ರಿಂದ ಮೇ 22ರವರೆಗೆವ ಶ್ರೀ ಮುಖ್ಯಪ್ರಾಣ ದೇವರ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ನಡೆಯಲಿದೆ.ಶ್ರೀ ಕ್ಷೇತ್ರದ ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಎಂ.ತುಂಗಪ್ಪ ಬಂಗೇರ ಅವರು ಮಂಗಳವಾರ ಶ್ರೀ ಕ್ಷೇತ್ರದಲ್ಲಿ ಕರೆದ ಪತ್ರಿಕಾ ಗೋಷ್ಠಿಯಲ್ಲಿ ವಿವರ ನೀಡಿದರು.ಕ್ಷೇತ್ರದ ಹಿನ್ನೆಲೆ: ತುಳುನಾಡಿನ, ಪ್ರಕೃತಿಯ ರಮಣೀಯ ಮಡಿಲಲ್ಲಿ, ಸುಮಾರು ಐದು ಶತಮಾನಗಳಿಂದ ಮೂಲ ಕುಂಞ ಕಾಯರ ವಂಶಸ್ಥರಿಂದ ಪೂಜಿಸಿಕೊಂಡು ಬಂದಿರುವ ಉರಾಡಾಯಿ ಶ್ರೀ ಮುಖ್ಯಪ್ರಾಣ ಸ್ವಾಮಿಯ ಸನ್ನಿಧಿಯು ಭಕ್ತರ ಪಾಲಿಗೆ ನಿಜಕ್ಕೂ ಅಭಯದಾಯಕ, ಈ ಪುಣ್ಯಕ್ಷೇತ್ರವು ವಗ್ಗ, ಕಾಡಬೆಟ್ಟು ರಸ್ತೆಯಿಂದ ಸುಮಾರು 3.7 ಕಿ.ಮೀ ದೂರದಲ್ಲಿ, ವಾಮದಪದವಿನಿಂದ 3 ಕಿ.ಮೀ ದೂರದಲ್ಲಿದೆ. ಊರ ಪರವೂರ ಭಕ್ತರೆಲ್ಲರೂ…
ಬಂಟ್ವಾಳ: ಧಾರ್ಮಿಕದತ್ತಿ ಇಲಾಖೆಯ ವ್ಯಾಪ್ತಿಗೊಳಪಟ್ಟ ಜಿಲ್ಲೆಯ ಕಾರಣಿಕ ದೈವ ಕ್ಷೇತ್ರ ಸಜೀಪಮೂಡ ಗ್ರಾಮದ ಪಣೋಲಿಬೈಲು ಶ್ರೀ ಕಲ್ಲುರ್ಟಿ ಕ್ಷೇತ್ರದಲ್ಲಿ ಅಮಾವಾಸ್ಯೆಯ ಪ್ರಯುಕ್ತ ಮೇ. 19 ಶುಕ್ರವಾರದಂದು ಅಗೇಲು ಹಾಗೂ ಕೋಲ ಸೇವೆ ಇರುವುದಿಲ್ಲ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ. Advertisement Advertisement
ಬಂಟ್ವಾಳ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜನ ಶಿಕ್ಷಣ ಟ್ರಸ್ಟ್ನ ಸಹಭಾಗಿತ್ವದಲ್ಲಿ, ಬಂಟ್ವಾಳ ತಾಲೂಕು ಕೇಂದ್ರದಲ್ಲಿ ನಡೆಯುತ್ತಿರುವ ಸಾಂತ್ವನ ಕೇಂದ್ರದಲ್ಲಿ ತೆರವಾಗಿರುವ ಸಮಾಜ ಕಾರ್ಯಕರ್ತರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸಮಾಜ ಕಾರ್ಯ ಅಥವಾ ಮನಶಾಸ್ತ್ರದಲ್ಲಿ ಪದವಿ ವಿದ್ಯಾರ್ಹತೆ ಹೊಂದಿದ್ದು 22 ರಿಂದ 25 ವರ್ಷದೊಳಗಿನ ಕಂಪ್ಯೂಟರ್ ಜ್ಞಾನ ಹೊಂದಿರುವ ಗೌರವಧನದ ಆಧಾರದಲ್ಲಿ ಕೆಲಸ ಮಾಡಲು ಇಚ್ಚಿಸುವ ಸೇವಾಸಕ್ತ ಮತ್ತು ಕ್ಷೇತ್ರ ಅನುಭವ ಹೊಂದಿರುವ ಬಂಟ್ವಾಳ ತಾಲೂಕು ವ್ಯಾಪ್ತಿಯೊಳಗಿನ ಮಹಿಳಾ ಅಭ್ಯರ್ಥಿಗಳು 25.05.2023 ರೊಳಗೆ ನಿರ್ದಿಷ್ಟ ಅರ್ಜಿ ನಮೂನೆಯನ್ನು ಸಾಂತ್ವನ ಕೇಂದ್ರದಿಂದ ಪಡೆದು ಈ ಕೆಳಗಿನ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದು. ನಿರ್ದೇಶಕರು, ಜನ ಶಿಕ್ಷಣ ಟ್ರಸ್ಟ್, ಸಾಂತ್ವನ ಕೇಂದ್ರ, ಸ್ತ್ರೀ ಶಕ್ತಿ ಭವನ, ತಾಲೂಕು ಪಂಚಾಯತ್ ರಸ್ತೆ, ಬಿ.ಸಿ. ರೋಡ್, Email: santhwanabantwal089@gmail.com ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ : 8255- 233089, 9449642137ನ್ನು ಸಂಪರ್ಕಿಸಬಹುದು. Advertisement Advertisement








