Author: admin

ಲಯನ್ಸ್ ಕ್ಲಬ್ ಬಂಟ್ವಾಳದ ನೂತನ ಲಯನ್ಸ್ ಸಭಾಭವನ ಉದ್ಘಾಟನೆ, ಕ್ಲಬ್‌ನ ಸುವರ್ಣ ಸಂಭ್ರಮಾಚರಣೆ ಬಂಟ್ವಾಳ: ಲಯನ್ಸ್ ಕ್ಲಬ್ ಬಂಟ್ವಾಳದ ವತಿಯಿಂದ ನಿರ್ಮಾಣಗೊಂಡ ಸಂಸ್ಥೆಯ ಸುವರ್ಣಮಹೋತ್ಸವದ ಯೋಜನೆಯಾದ ಲಯನ್ಸ್ ಸಭಾಭವನದ ಉದ್ಘಾಟನಾ ಸಮಾರಂಭ ಬಿ.ಸಿ.ರೋಡಿನಲ್ಲಿ ವಿಜ್ರಂಭಣೆಯಿಂದ ನಡೆಯಿತು. Advertisement ಲಯನ್ಸ್‌ನ ಅಂತರಾಷ್ಟ್ರೀಯ ನಿರ್ದೇಶಕ ಕೆ. ವಂಶೀಧರ್ ಬಾಬು ನೂತನ ಸಭಾಭವನವನ್ನು ಉದ್ಘಾಟಿಸಿದರು. ಅವರು ಮಾತನಾಡಿ ನೂತನ ಭವನದಿಂದ ಬಾಡಿಗೆ ರೂಪದಲ್ಲಿ ಬರುವ ಹಣವನ್ನು ಸಂಸ್ಥೆಯ ಸೇವಾ ಟ್ರಸ್ಟ್ ವತಿಯಿಂದ ನಡೆಯುವ ವಿಶೇಷ ಚೇತನ ಮಕ್ಕಳ ಫಿಸಿಯೋಥೆರಪಿ ಕೇಂದ್ರದ ಚಟುವಟಿಕೆಗಳಿಗೆ ಬಳಸುವ ಕ್ಲಬ್‌ನ ಬದ್ದತೆಯನ್ನು ಅಭಿನಂದಿಸುವುದಾಗಿ ತಿಳಿಸಿದರು. ಬಂಟ್ವಾಳ ಕ್ಲಬ್ ತನ್ನ ಸೇವಾ ಚಟುವಟಿಕೆಗಳ ಮೂಲಕ ಮಾಧರಿ ಕ್ಲಬ್ ಆಗಿ ಗುರುತಿಸಿದೆ ಎಂದು ಶ್ಲಾಘಿಸಿದ ಅವರು ಸ್ಫಾಪಕ ಸದಸ್ಯರನ್ನು ಅಭಿನಂದಿಸುವುದಾಗಿ ತಿಳಿಸಿದರು.ಪೂರ್ವ ಅಂತರಾಷ್ಟ್ರೀಯ ನಿರ್ದೇಶಕ ವಿ.ವಿ. ಕೃಷ್ಣ ರೆಡ್ಡಿ ಹಾಗೂ ಜಿಲ್ಲಾ ಗವರ್ನರ್ ಎಸ್. ಸಂಜಿತ್ ಶೆಟ್ಟಿ ಶುಭ ಕೋರಿದರು. ಬಂಟ್ವಾಳ ಲಯನ್ಸ್ ಕ್ಲಬ್ ಅಧ್ಯಕ್ಷ ಉಮೇಶ್ ಆಚಾರ್ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ…

Read More

ಬಂಟ್ವಾಳ: ಲಿವರ್ ಸಮಸ್ಯೆಯ ಹಿನ್ನೆಲೆಯಲ್ಲಿ ಮೂರು ದಿನಗಳಿಂದ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.ಮಣಿನಾಲ್ಕೂರು ಗ್ರಾಮದ ನೇಲ್ಯಪಲ್ಕೆ ನಿವಾಸಿ ರೂಪೇಶ್ ಯಾನೆ ನಿತಿನ್ ಪೂಜಾರಿ(30) ಮೃತಪಟ್ಟ ಯುವಕ.‌ ಅವರಿಗೆ ಹೊಟ್ಟೆ ನೋವು ಉಲ್ಬಣಗೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಖಾಸಗಿ ಬಸ್ಸು ಚಾಲಕರಾಗಿ ದುಡಿಯುತ್ತಿದ್ದ ರೂಪೇಶ್ ಅವರು ಅವಿವಾಹಿತರಾಗಿದ್ದರು. ಬಜರಂಗ ದಳ ಸೇರಿದಂತೆ ಇತರ ಸಾಮಾಜಿಕ ಸಂಘಟನೆಗಳಲ್ಲಿ ಸಕ್ರೀಯರಾಗಿದ್ದರು. Advertisement Advertisement

Read More

ಕಾರ್ಯಕರ್ತರ ಶ್ರಮ ಗೆಲುವಿಗೆ ಪೂರಕ: ರಾಜೇಶ್ ನಾಯ್ಕ್ ಬಂಟ್ವಾಳ: ನನ್ನ ಪಕ್ಷದ ಕಾರ್ಯಕರ್ತರು ಅತ್ಯಂತ ಶ್ರದ್ಧೆ ಹಾಗೂ ನಿಷ್ಠೆಯಿಂದ ದುಡಿದಿರುವುದೇ ನನ್ನ ಗೆಲುವಿಗೆ ಪೂರಕವಾದ ಅಂಶವಾಗಿದೆ. ಕಳೆದ ಐದು ವರ್ಷದ ಅಧಕಾರವಧಿಯಲ್ಲಿ ಮಾಡಿದ ಅಭಿವೃದ್ದಿ ಕಾರ್ಯ ಹಾಗೂ ಈ ಭಾಗದಲ್ಲಿ ಶಾಂತಿ ಸೌಹಾರ್ದತೆ ನೆಲೆ ನಿಂತಿರುವುದರಿಂದ ಜನರು ಒಲವು ತೋರಿಸಿ ಗೆಲುವು ತಂದು ಕೊಟ್ಟಿದ್ದಾರೆ ಎಂದು ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಹೇಳಿದರು.ಅವರು ಶನಿವಾರ ಸಂಜೆ ಬಿ.ಸಿ.ರೋಡಿನಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಭಾಗವಹಿಸಿ ಬಳಿಕ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು. ವಿರೋಧ ಪಕ್ಷದಲ್ಲಿದ್ದುಕೊಂಡು ನಮ್ಮ ಕೆಲಸವನ್ನು ನಿಷ್ಠೆಯಿಂದ ಮಾಡುತ್ತೇವೆ ಅದರ ಜೊತೆ ಜೊತೆಗೆ ಅವಕಾಶ ಸಿಕ್ಕಾಗಲೆಲ್ಲ ಕ್ಷೇತ್ರದ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತೇವೆ. ವಿರೋಧ ಪಕ್ಷದಲ್ಲಿದ್ದುಕೊಂಡು ಕಳೆದ ವರ್ಷದಷ್ಟೇ ಅನುದಾನ ತಂದು ಕೆಲಸ ಮಾಡಲು ಸಾಧ್ಯವೋ ಎನ್ನುವುದು ಗೊತ್ತಿಲ್ಲ, ಆದರೆ ಕ್ಷೇತ್ರದ ಅಭಿವೃದ್ದಿಗಾಗಿ ನಾನು ಸಂಪೂರ್ಣ ಪ್ರಯತ್ನ ಪಡುತ್ತೇನೆ ಎಂದು ತಿಳಿಸಿದರು. Advertisement Advertisement ಭವಿಷ್ಯದ ಬಂಟ್ವಾಳದ ಬಗ್ಗೆ…

Read More

ಬಂಟ್ವಾಳದಲ್ಲಿ ಗೆಲುವಿನ ನಗೆ ಬೀರಿದ ರಾಜೇಶ್ ನಾಯ್ಕ್ ಬಂಟ್ವಾಳ: ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿಯ ರಾಜೇಶ್ ನಾಯ್ಕ್ ಹಾಗೂ ಕಾಂಗ್ರೆಸ್‌ನ ಬಿ. ರಮನಾಥ ರೈ ಮಧ್ಯೆ ನಡೆದ ಪ್ರಬಲ ಸ್ಪರ್ಧೆಯಲ್ಲಿ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರು ೮೨೮೨ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಆರಂಭಿಕ ಹಂತದ ಅಂಚೆ ಮತದಾನದಲ್ಲಿ ಮಾತ್ರ ರಮಾನಾಥ ರೈ ಮುನ್ನಡೆಯನ್ನು ಸಾಧಿಸಿದ್ದರೆ, ಬಳಿಕ ರಾಜೇಶ್ ನಾಯ್ಕ ಅವರು ಕೊನೆಯ ಹಂತದವರೆಗೂ ಮುನ್ನಡೆಯನ್ನು ಸಾಧಿಸಿ ಗೆಲುವಿನ ನಗೆ ಬೀರಿದ್ದಾರೆ. ಆ ಮೂಲಕ ಎರಡನೇ ಬಾರಿಗೆ ವಿಧಾನಸಭೆಯನ್ನು ಪ್ರವೇಶಿಸಿದ್ದಾರೆ.ಒಟ್ಟು ಚಲಾಯಿತ ಮತಗಳು ೧,೮೩,೪೨೮, ರಾಜೇಶ್ ನಾಕ್ ೯೩,೩೨೪( ಬಿಜೆಪಿ), ರಮಾನಾಥ ರೈ(ಕಾಂಗ್ರೆಸ್) ೮೫,೦೪೨. ಪ್ರಕಾಶ್ ಗೋಮ್ಸ್ (ಜೆಡಿಎಸ್) ೪೫೪, ಪುರುಷೋತ್ತಮ ಕೋಲ್ಪೆ (ಆಮ್ ಆದ್ಮಿ) ೪೯೫, ಇಲಿಯಾಸ್ ಮಹಮ್ಮದ್ ತುಂಬೆ (ಎಸ್.ಡಿ.ಪಿಐ) ೫೪೩೬, ನೋಟಾ ೮೨೧ ಗಮನಿಸಬೇಕಾದ ಅಂಶವಾಗಿದೆ. ಹಾಲಿ ಶಾಸಕ ರಾಜೇಶ್ ನಾಯ್ಕ ಅವರ ಗೆಲುವಿನ ಅಂತರ ೮೨೮೨ ಅಗಿದ್ದು, ಶೇಕಡಾವಾರು ೫೦.೨೯ ಮತಗಳಿಸಿ ಜಯ ಸಾಧಿಸಿದ್ದಾರೆ.ಮಾಜಿ ಸಚಿವ…

Read More

ಮೇ.15: ಲಯನ್ಸ್ ಸಭಾಭವನ ಉದ್ಘಾಟನೆ, ಸುವರ್ಣ ಮಹೋತ್ಸವ ಸಂಭ್ರಮಾಚರಣೆ ಬಂಟ್ವಾಳ: ಇಲ್ಲಿನ ಲಯನ್ಸ್ ಕ್ಲಬ್ ಬಂಟ್ವಾಳದ ವತಿಯಿಂದ ನಿರ್ಮಾಣಗೊಂಡ ಸಂಸ್ಥೆಯ ಸುವರ್ಣಮಹೋತ್ಸವದ ಯೋಜನೆಯಾದ ಲಯನ್ಸ್ ಸಭಾಭವನದ ಉದ್ಘಾಟನಾ ಸಮಾರಂಭ ಮೇ.15ರಂದು ಸೋಮವಾರ ನಡೆಯಲಿದೆ ಎಂದು ಸುವರ್ಣ ಮಹೋತ್ಸವ ಸಮಿತಿಯ ಅಧ್ಯಕ್ಷ ಶ್ರೀನಿವಾಸ ಪೂಜಾರಿ ಮೆಲ್ಕಾರ್ ತಿಳಿಸಿದರು.ಅವರು ಸುದ್ದಿಗೋಷ್ಟಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ ಲಯನ್ಸ್‌ನ ಅಂತರಾಷ್ಟ್ರೀಯ ನಿರ್ದೇಶಕ ಕೆ. ವಂಶೀಧರ್ ಬಾಬು ನೂತನ ಸಭಾಭವನ ಉದ್ಘಾಟಿಸುವರು, ಕ್ಲಬ್ ಅಧ್ಯಕ್ಷ ಉಮೇಶ್ ಆಚಾರ್ ಅಧ್ಯಕ್ಷತೆ ವಹಿಸುವರು, ಮುಖ್ಯ ಅತಿಥಿಗಳಾಗಿ ಅಂತರಾಷ್ಟ್ರೀಯ ಪೂರ್ವ ನಿರ್ದೇಶಕ ವಿ.ವಿ. ಕೃಷ್ಣ ರೆಡ್ಡಿ, ಮಲ್ಟಿಪಲ್ ಕೌನ್ಸಿಲ್ ಅಧ್ಯಕ್ಷ ವಸಂತ ಕುಮಾರ್ ಶೆಟ್ಟಿ, ಜಿಲ್ಲಾ ಗವರ್ನರ್ ಸಂಜಿತ್ ಶೆಟ್ಟಿ ಭಾಗವಹಿಸುವರು. ಅಭ್ಯಾಗತರಾಗಿ ಚುನಾಯಿತ ಜಿಲ್ಲಾ ಗವರ್ನರ್ ಡಾ. ಮೆಲ್ವಿನ್ ಡಿಸೋಜಾ, ಚುನಾಯಿತ ಪ್ರಥಮ ಉಪಗವರ್ನರ್ ಬಿ.ಎಂ. ಭಾರತಿ, ಚುನಾಯಿತ ದ್ವಿತೀಯ ಉಪಗವರ್ನರ್ ಅರವಿಂದ ಶೆಣೈ, ಲಯನ್ಸ್ ಕ್ಲಬ್ ಬಂಟ್ವಾಳದ ಸ್ಥಾಪಕಾಧ್ಯಕ್ಷ ಡಾ. ಬಿ. ವಸಂತ ಬಾಳಿಗ ಭಾಗವಹಿಸುವರು ಎಂದು ತಿಳಿಸಿದರು.…

Read More

ರೋಟರಿ ಕ್ಲಬ್ ಬಂಟ್ವಾಳದಿಂದ ವಿವಿಧ ಶಾಶ್ವತ ಯೋಜನೆಗಳ ಉದ್ಘಾಟನೆ ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳದ ವತಿಯಿಂದ ನಿರ್ಮಾಣಗೊಂಡ ಎರಡು ಶಾಶ್ವತ ಯೋಜನೆಗಳು ಹಾಗೂ ಒಂದು ಬಸ್ಸು ತಂಗುದಾಣದ ಉದ್ಘಾಟನಾ ಕಾರ್ಯಕ್ರಮ ಶುಕ್ರವಾರ ನಡೆಯಿತು.ನರಿಕೊಂಬು ಗ್ರಾಮದ ಪಂಚಾಯತಿ ಕಚೇರಿ ಬಳಿ ನಿರ್ಮಾಣಗೊಂಡ ಎಸ್ ಎಸ್ ಕಾರಂತ್ ರೋಟರಿ ಬಸ್ಸು ನಿಲ್ದಾಣ, ಪಾಣೆಮಂಗಳೂರಿನ ಶ್ರೀ ಶಾರಾದಾ ಪ್ರೌಢಶಾಲೆಯಲ್ಲಿ ನಿರ್ಮಾಣಗೊಂಡ ವಿಜ್ಞಾನ ಪ್ರಯೋಗಾಲಯ ಹಾಗೂ ಪೆರ್ನೆ ಶ್ರೀ ರಾಮಚಂದ್ರ ವಿದ್ಯಾಲಯದಲ್ಲಿ ನಿರ್ಮಾಣಗೊಂಡ ಜ್ಞಾನ ಸೌರಭ ಗ್ರಂಥಾಲಯವನ್ನು ರೋಟರಿ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್ ಉದ್ಘಾಟಿಸಿದರು. Advertisement ಈ ಸಂದರ್ಭ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ನಮ್ಮ ಜೀವನ ಇನ್ನೊಬ್ಬರಿಗಾಗಿ ಮುಡಿಪಾಗಿಟ್ಟಾಗ ಅದು ಸಾರ್ಥಕವಾಗುತುದೆ. ಪ್ರಕೃತಿ ಇಂದು ಎಲ್ಲವನ್ನು ಬೇರೆಯವರಿಗಾಗಿ ನೀಡುತ್ತದೆ. ಅದಕ್ಕೆ ಅದು ನಮಗೆ ಪೂಜನೀಯವಾಗಿದೆ. ಸಂಪತ್ತು ನಮ್ಮಲ್ಲಿ ಇರುವುದು ಮುಖ್ಯವಲ್ಲ, ಸಂಪತ್ತಿನ ಅರಿವು ಮುಖ್ಯ. ಬದುಕಿಗಾಗಿ ಸಂಪತ್ತು ಇರಬೇಕೆ ಹೊರತು ಸಂಪತ್ತಿಗಾಗಿ ಬದುಕಿರಬಾರದು. ಸಮಾಜಕ್ಕಾಗಿ ಎಲ್ಲವನ್ನು ತ್ಯಾಗ ಮಾಡಿದವರ ನೆನೆಪು ಸದಾ ಸ್ಮರಣೀಯವಾಗಿರುತ್ತದೆ.…

Read More

ಮಂಗಳೂರು: ದ.ಕ. ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಆಡಳಿತದಲ್ಲಿರುವ ಇತಿಹಾಸ ಪ್ರಸಿದ್ಧ ಕುಲಾಲ ಸಮುದಾಯದ ಕುಲದೇವರಾದ ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನವು ಶಿಲಾಮಯವಾಗಿ ರೂ. ಹತ್ತು ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಳ್ಳುತ್ತಿದ್ದು, ಮೇ 14ರಿಂದ 25ವರೆಗೆ ಪುನರ್ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವವು ಬಹಳ ವಿಜೃಂಭನಣೆಯಿಂದ ಜರಗಲಿದೆ ಎಂದು ದ.ಕ. ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಅಧ್ಯಕ್ಷ, ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷ ಮಯೂರ್ ಉಳ್ಳಾಲ್ ತಿಳಿಸಿದರು. ಅವರು ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ಮೇ 14ರಿಂದ 25ವರೆಗೆ ಜರಗಲಿರುವ ಪುನರ್ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವದ ಬಗ್ಗೆ ದೇವಸ್ಥಾನದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.ವಿಷ್ಣುಸ್ವರೂಪಿ ಶ್ರೀ ವೀರನಾರಾಯಣ ದೇವರ ಸಾನಿಧ್ಯವು ದಕ್ಷಿಣ ಭಾರತದಲ್ಲಿಯೇ ಅತ್ಯಂತ ವಿರಳವಾಗಿರುವ ದೇವಸ್ಥಾನ. ದ.ಕ. ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘ ಮಂಗಳೂರು ಇದರ ಆಡಳಿತ ಸಮಿತಿ, ಸೇವಾ ಟ್ರಸ್ಟ್, ಜೀರ್ಣೋದ್ಧಾರ ಸಮಿತಿ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಜೊತೆಯಾಗಿ ಶ್ರೀ ದೇವಸ್ಥಾನದ ಜೀರ್ಣೋದ್ದಾರದಲ್ಲಿ ಸಕ್ರೀಯವಾಗಿ…

Read More

ಬಂಟ್ವಾಳ: ಇಲ್ಲಿನ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು ಶೇ.80.27 ಮತದಾನವಾಗಿದೆ. 2,28,377 ಮತದಾರರ ಪೈಕಿ, 183326 ಮಂದಿ ಮತಚಲಾಯಿಸಿದ್ದಾರೆ. 116,144 ಮಹಿಳೆಯರ ಪೈಕಿ 93679 ಮಂದಿ ಮತ ಚಲಾಯಿಸಿದರೆ, 112229 ಪುರುಷರ ಪೈಕಿ 89646 ಮಂದಿ ಮತ ಚಲಾಯಿಸಿದ್ದಾರೆ. Advertisement Advertisement

Read More

ಬಂಟ್ವಾಳ: ವಿಧಾನಸಭಾ ಚುನಾವಣೆಯ ಮತದಾನ ಆರಂಭಗೊಂಡಿದ್ದು ಬಂಟ್ಚಾಳ ವಿಧಾನಸಭಾ ಕ್ಷೇತ್ರದಲ್ಲಿ ಬಿರುಸಿನ ಮತದಾನ ಆರಂಭಗೊಂಡಿದೆ. ಬೆಳಗ್ಗಿನಿಂದಲೇ ಜನರು ಮತಗಟ್ಟೆಗೆ ಆಗಮಿಸಿ ಉತ್ಸಾಹದಿಂದ ತಮ್ಮ ಹಕ್ಕು ಚಲಾಯಿಸಿದರು.ಮಾಜಿ ಶಾಸಕ ರಾಜೇಶ್ ನಾಯ್ಕ್ ಎಡಪದವಿನ ಮತಗಟ್ಟೆಯಲ್ಲಿ ಮತಚಲಾಯಿಸಿದರು. ಮಾಜಿ ಸಚಿವ ಬಿ.ರಮಾನಾಥ ರೈ ತೊಡಂಬಿಲ ಸೆಕ್ರೆಡ್ ಹಾರ್ಟ್ ಅನುದಾನಿತ ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸದರು. ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಎಸ್ ವಿ ಎಸ್ ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಇದೇ ಮತಗಟ್ಟೆಯಲ್ಲಿ ಕಿಯೋನಿಕ್ಸ್ ನಿಕಟಪೂರ್ವ ಅಧ್ಯಕ್ಷ ಕೆ. ಹರಿಕೃಷ್ಣ ಬಂಟ್ವಾಳ ಮತಚಲಾಯಿಸಿದರು.

Read More

ಬಂಟ್ವಾಳ: ವಿಧಾನ ಸಭಾ ಚುನಾವಣೆಗೆ ಬಂಟ್ವಾಳ ತಾಲೂಕು ಸನ್ನದ್ಧಗೊಂಡಿದ್ದು ತಾಲೂಕಾಡಳಿತ ಸಕಲ ಸಿದ್ದತೆಗಳನ್ನು ನಡೆಸಿದೆ. ಶಾಂತಿಯುತ ಮತದಾನ ನಡೆಸುವ ದೃಷ್ಟಿಯಿಂದ ಚುನಾವಣಾ ಆಯೋಗ ಎಲ್ಲಾ ಮತಗಟ್ಟೆಗಳ ಮೇಲೆ ಹದ್ದಿನ ಕಣ್ಣಿಟ್ಟಿದೆ. ರಾತ್ರಿ ಹಗಲ್ಲೆನ್ನದೆ ಅಧಿಕಾರಿಗಳು ಚುನಾವಣಾ ಕರ್ತವ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಮೊಡಂಕಾಪಿನ ಇನ್ಫೆಂಟ್ ಜೀಸಸ್ ಶಾಲೆಯಿಂದ ಚುನಾವಣಾ ಸಿಬ್ಬಂದಿಗಳನ್ನು ಆಯಾ ಮತಗಟ್ಟೆ ಕೇಂದ್ರಗಳಿಗೆ ಮಂಗಳವಾರ ಬೆಳಿಗ್ಗೆ ಕಳುಹಿಸಿ ಕೊಡಲಾಗಿದ್ದು ಚುನಾವಣಾ ಪ್ರಕ್ರಿಯೆಯನ್ನು ಯಶಸ್ವಿಯಾಗಿ ನಡೆಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಿಬ್ಬಂದಿ ನಿಯೋಜನೆ:ಬಂಟ್ವಾಳ ವಿಧಾನ ಸಭಾ ಕ್ಷೇತ್ರದಲ್ಲಿ 249 ಮತಗಟ್ಟೆಗಳಿದ್ದು, ಪ್ರತೀ ಮತಗಟ್ಟೆಗೆ 4 ಮತಗಟ್ಟೆ ಅಧಿಕಾರಿಗಳು, 1 ಗ್ರೂಪ್ ಡಿ, 1 ಪೊಲೀಸ್ ಹಾಗೂ 1200 ಕ್ಕಿಂತ ಹೆಚ್ಚು ಮತದಾರರಿರುವ ಮತಗಟ್ಟೆಗಳಿಗೆ 1 ಹೆಚ್ಚುವರಿ ಅಧಿಕಾರಿಗಳನ್ನು ನೇಮಕಾತಿ ಮಾಡಲಾಗಿದೆ. 25 ಸೆಕ್ಟರ್ ಅಧಿಕಾರಿಗಳು ಮಸ್ಟರಿಂಗ್ ಕಾರ್ಯವನ್ನು ನಡೆಸಿಕೊಟ್ಟರು. ಗ್ರೂಪ್ ಡಿ ಮತ್ತು ಪೊಲೀಸ್ ಸಿಬ್ಬಂದಿಗಳನ್ನೂ ಒಳಗೊಂಡಂತೆ ಸುಮಾರು 1572 ಮಂದಿ ಚುನಾವಣಾ ಕರ್ತವ್ಯಕ್ಕಾಗಿ 25 ಬಸ್ ಗಳು, 26 ಮ್ಯಾಕ್ಸಿ ಕ್ಯಾಬ್, 22…

Read More