Author: admin
ಮೇ.7 : ಟಿವಿಎಸ್ ರೋನಿನ್ ದ್ವಿಚಕ್ರ ವಾಹನ ಮಾರುಕಟ್ಟೆಗೆ ಬಿಡುಗಡೆ ಬಂಟ್ವಾಳ: ಬಿ.ಸಿ. ರೋಡ್ನಲ್ಲಿ ಕಾರ್ಯಾಚರಿಸುತ್ತಿರುವ ಸೋನಾ ಟಿವಿಎಸ್ ಶೋರೂಂನಲ್ಲಿ ಅತ್ಯಾಧುನಿಕ ಶೈಲಿಯ ಟಿವಿಎಸ್ ರೋನಿನ್ ದ್ವಿಚಕ್ರ ವಾಹನ ಮೇ 7ರಂದು ಭಾನುವಾರ ಮಾರುಕಟ್ಟೆಗೆ ಬಿಡುಗಡೆಗೊಳ್ಳಲಿದೆ.ಪ್ರತಿಷ್ಠಿತ ಟಿವಿಎಸ್ ಕಂಪೆನಿಯ ದ್ವಿಚಕ್ರ ವಾಹನಗಳು ವಿವಿಧ ವಿನ್ಯಾಸ ಮತ್ತು ಆತ್ಯಾಕರ್ಷಕ ಶೈಲಿ ಹಾಗೂ ದ್ವಿಚಕ್ರ ಪ್ರಿಯರ ಮೆಚ್ಚುಗೆಗೆ ಪಾತ್ರವಾಗಿದೆ. ಇದೀಗ ಬಿ.ಸಿ ರೋಡ್ನಲ್ಲಿರುವ ಸೋನಾ ಟಿವಿಎಸ್ ಶೋರೂಂನಲ್ಲಿ ಟಿವಿಎಸ್ ರೋನಿನ್ ದ್ವಿಚಕ್ರ ವಾಹನ ಮೇ 7ರಂದು ಬಿಡುಗಡೆಗೊಳ್ಳಲಿದೆ. Advertisement ಪ್ರಥಮ ಗ್ರಾಹಕರಿಗೆ ಬಿಎಚ್ಬಿ ಸಂಸ್ಥೆಯ ಮಾಲೀಕರಾದ ಮೊಹಮ್ಮದ್ ಸಾದಿಕ್ ರವರು ಕೀ ಯನ್ನು ಹಸ್ತಾಂತರ ಮಾಡಲಿದ್ದಾರೆ. ಅಂಜು ಹೋಮ್ ಇಂಡಸ್ಟ್ರೀಸ್ನ ಮಾಲಕರಾದ ಮಹಮ್ಮದ್ ಫಾರೂಕ್ ಅವರು ಟಿವಿಎಸ್ ರೋನಿನ್ನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಲಿದ್ದಾರೆ. ಬಿ.ಸಿ ರೋಡ್ನ ಸೋನಾ ಟಿವಿಎಸ್ ಶೋರೂಂ ಶುಭಾರಂಭದ ಪ್ರಯುಕ್ತ ನಿಮಗಾಗಿ ಒಂದು ಕೊಳ್ಳಿರಿ, ನಿಮ್ಮವರಿಗಾಗಿ ಒಂದು ಗೆಲ್ಲಿರಿ ಎಂಬ ಲಕ್ಕಿ ಕೂಪನ್ನ್ನ ಆಯೋಜಿಸಿದ್ದು, ಇದರ ಡ್ರಾ ಕಾರ್ಯಕ್ರಮವು ನಾಳೆ ಶೋರೂಂನಲ್ಲಿ ಗಣ್ಯರ…
ಬಂಟ್ವಾಳ: ಈ ವಿಧಾನಸಭಾ ಕ್ಷೇತ್ರದಲ್ಲಿ ಶಾಂತಿ ಸೌಹಾರ್ದತೆ ನೆಲಸಬೇಕಾದರೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲ್ಲಬೇಕು ಎಂದು ಮಾಜಿ ಶಾಸಕ ಕೆ.ಎಂ.ಇಬ್ರಾಹಿಂ ಶುಂಠಿಕೊಪ್ಪ ತಿಳಿಸಿದರು. ಅವರು ಬಿ.ಸಿ.ರೋಡಿನಲ್ಲಿ ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಬಂಟ್ವಾಳದಲ್ಲಿ ಶಾಂತಿ ನೆಲೆಸಬೇಕಾದರೆ ಕಾಂಗ್ರೆಸ್ ಗೆಲ್ಲಬೇಕು ರಮನಾಥ ರೈ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ೯ನೇ ಬಾರಿಗೆ ಸ್ಪರ್ಧಿಸುತ್ತಿದ್ದಾರೆ, ಅವರು ಮಾತ್ರ ಈ ತಾಲೂಕಿನ ನಿವಾಸಿಯಾಗಿದ್ದಾರೆ ಉಳಿದ ಅಭ್ಯರ್ಥಿಗಳು ಹೊರಗಿನವರು. ಈ ಕ್ಷೇತ್ರದ ಜನರ ನಾಡಿ ಮಿಡಿತ ಅವರಿಗೆ ತಿಳಿದ್ದಿದ್ದು ಸುಮಾರು 40 ವರ್ಷಗಳಿಂದ ಜನರ ಸೇವೆ ಮಾಡುತ್ತಿದ್ದಾರೆ. ಕಳೆದ ಬಾರಿ ಯಾವುದೋ ಕಾರಣಕ್ಕೆ ಸೋತಿದ್ದರು, ಆದರೆ ಈ ಬಾರಿ ಬಹುಮತದಿಂದ ಅವರನ್ನು ಗೆಲ್ಲಿಸುವಂತೆ ಮತದಾರರಲ್ಲಿ ವಿನಂತಿಸಿದರು. Advertisement Advertisement ಸುದ್ದಿಗೋಷ್ಟಿಯಲ್ಲಿ ಕೆಪಿಸಿಸಿ ಸದಸ್ಯ ಪಿಯೂಸ್ಎಲ್.ರೋಡ್ರಿಗಸ್, ಪ್ರಮುಖರಾದ ಬಿ. ಮೋಹನ್, ಪರಮೇಶ್ವರ ಮೂಲ್ಯ, ಅಬ್ಬಾಸ್ ಅಲಿ, ಜಯಂತಿ ವಿ. ಪೂಜಾರಿ, ಲೋಲಾಕ್ಷ ಶೆಟ್ಟಿ, ನಾರಾಯಣ ನಾಯ್ಕ,ಜೋಸ್ಪಿನ್ ಡಿಸೋಜಾ, ಜೆಸಿಂತಾ ಡಿಸೋಜಾ, ಶಬೀರ್ ಸಿದ್ದಕಟ್ಟೆ ಉಪಸ್ಥಿತರಿದ್ದರು.
ಬಂಟ್ವಾಳ: ಬಡವರು ಹಾಗೂ ಮಧ್ಯಮ ವರ್ಗದ ಜನರ ಅಭಿವೃದ್ದಿಗಾಗಿ ಬಿ. ರಮಾನಾಥ ರೈಯವರು ಅಧಿಕಾರಕ್ಕೆ ಬರಬೇಕು, ಆದ್ದರಿಂದ ಮತದಾರರು ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಜಯಂತಿ ವಿ. ಪೂಜಾರಿ ಮನವಿ ಮಾಡಿದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಮಹಿಳಾ ಕಲ್ಯಾಣ ಕಾರ್ಯಕ್ರಮಗಳು ಜಾರಿ: ಜಯಂತಿ ವಿ. ಪೂಜಾರಿ ಬಿ.ಸಿ.ರೋಡಿನಲ್ಲಿರುವ ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು.ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಪ್ರತಿ ಮನೆಯ ಯಜಮಾನಿಗೆ ತಿಂಗಳಿಗೆ ರೂ. ೨ ಸಾವಿರ ನೀಡುವ ಗೃಹಲಕ್ಷ್ಮಿ ಯೋಜನೆ, ಯುವಕರಿಗೆ ಯುವನಿಧಿ ಪದವೀಧರ ನಿರುದ್ಯೋಗಿಗಳಿಗೆ 3 ಸಾವಿರ ರೂ. ಡಿಪ್ಲೊಮಾದಾರರಿಗೆ 15೦೦ ರೂ. ನಿರುದ್ಯೋಗ ಭತ್ಯೆ,ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್, ಮನೆಯ ಪ್ರತಿ ಸದಸ್ಯರಿಗೆ ತಲಾ 10 ಕೆ.ಜಿ. ಅಕ್ಕಿ, ಮಹಿಳೆಯರಿಗೆ ಉಚಿತ ಸರಕಾರಿ ಬಸ್ ಪ್ರಯಾಣ, ವಿಧವಾ ಪಿಂಚಣಿ ರೂ. 2500ಕ್ಕೆ ಹೆಚ್ಚಳ, ದುಡಿಯುವ ಮಹಿಳೆಯರಿಗಾಗಿ 100 ಹಾಸ್ಟೆಲ್ಗಳ…
ಬಂಟ್ವಾಳ: ಇಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ದ.ಕ. ಜಿಲ್ಲೆಯ ಬಂಟ್ವಾಳದಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಪರ ಬೃಹತ್ ರೋಡ್ ಶೋ ನಡೆಸಲಿದ್ದು,ಈ ಸಂದರ್ಭ ರಸ್ತೆ ಸಂಚಾರಕ್ಕೆ ಅಡಚಣೆಯಾಗುವ ಸಾಧ್ಯತೆ ಇರುವುದರಿಂದ ಪರ್ಯಾಯ ಮಾರ್ಗವಾಗಿ ವಾಹನಗಳು ಸಂಚರಿಸಲು ಮಾರ್ಗ ಬದಲಾವಣೆ ಮಾಡಿ ಆದೇಶಿಸಲಾಗಿದೆ Advertisement ಯೋಗಿ ಆದಿತ್ಯನಾಥ್ ಅವರು ಆಗಮಿಸುವ ಹೆಲಿಪ್ಯಾಡ್ ಸ್ಥಳ ಬದಲಾವಣೆಯಾಗಿದ್ದು, ಅವರು ಬಂಟ್ವಾಳ ತಾಲೂಕು ಶಾಂತ ಜಿ ಮೇಲಾಂಟ ಇವರ ಬಸ್ತಿಪಡು ಮೈದಾನದಲ್ಲಿರುವ ಹೆಲಿಪ್ಯಾಡ್ ನಲ್ಲಿ ಇಳಿಯಲಿರುವುದರಿಂದ ಮತ್ತು ಕಾರ್ಯಕ್ರಮಕ್ಕೆ ಅತ್ಯಧಿಕ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಲಿದ್ದು, ಜನ ಸಂದಣಿಯಾಗಿ ರಸ್ತೆ ಸಂಚಾರಕ್ಕೆ ಅಡಚಣೆಯಾಗುವ ಸಾಧ್ಯತೆ ಇರುವುದರಿಂದ ಮಧ್ಯಾಹ್ನ 12.00 ಗಂಟೆಯಿಂದ ರಾತ್ರಿ 8.00 ಗಂಟೆಯವರೆಗೆ ಪರ್ಯಾಯ ಮಾರ್ಗವಾಗಿ ವಾಹನಗಳು ಸಂಚರಿಸಲು ಮಾರ್ಗ ಬದಲಾವಣೆ ಮಾಡಲಾಗಿದೆ. Advertisement
ಅಪಪ್ರಚಾರ, ಕೋಮು ಭಾವನೆ ಕೆರಳಿಸುವುದೇ ಬಿಜೆಪಿ ಬಂಡವಾಳ : ರಮಾನಾಥ ರೈ ಬಂಟ್ವಾಳ : ಅಪಪ್ರಚಾರ, ಸುಳ್ಳು ಮತ್ತು ಕೋಮು ಭಾವನೆಯನ್ನು ಕೆರಳಿಸುವುದೇ ಬಿಜೆಪಿ ಬಂಡವಾಳ. ಬಿಜೆಪಿ ಸರಕಾರ ಸಂಪೂರ್ಣ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿದ್ದು, ಇವರ ಅವಧಿಯಲ್ಲಿ ಅಭಿವೃದ್ಧಿ ಶೂನ್ಯ. ಹೀಗಾಗಿ, ಸುಳ್ಳು ವದಂತಿಗಳ ಮೂಲಕವೇ ಚುನಾವಣೆ ಎದುರಿಸಲು ಅವರು ಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು. ಅವರು ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಏಮಾಜೆ ಹಾಗೂ ನೇರಳಕಟ್ಟೆಯಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಅವರು ಮಾತನಾಡಿದರು.ನನ್ನ ಶಾಸಕ, ಸಚಿವ ಸ್ಥಾನದ ಅವಧಿಯಲ್ಲಿ ಕ್ಷೇತ್ರಕ್ಕೆ ೫,೦೦೦ ಕೋಟಿಗೂ ಅಧಿಕ ಅನುದಾನ ತಂದು ಕ್ಷೇತ್ರದಾದ್ಯಂತ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದೆ. ಬಂಟ್ವಾಳದಲ್ಲಿ ಏನಾದರೂ ಸರಕಾರಿ ಯೋಜನೆಗಳು ಕಾರ್ಯಗತವಾಗಿದ್ದರೆ ಅದು ನನ್ನ ಅವಧಿಯಲ್ಲಿ ಜಾರಿಯಾಗಿರುವಂತದ್ದು. ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನನ್ನ ಅವಧಿಯಲ್ಲಾಗಿದ್ದರೂ, ಅಪಪ್ರಚಾರದಿಂದ ನನ್ನನ್ನು ಸೋಲಿಸಲಾಗಿದೆ. ಸೋತ ಬಗ್ಗೆ ಬೇಸರವಿಲ್ಲ, ಅಪಪ್ರಚಾರ, ಸುಳ್ಳು, ವದಂತಿಗಳನ್ನು ಹರಡುವ ಮೂಲಕ, ವೈಯಕ್ತಿಕ ತೇಜೋವಧೆಯ ಮೂಲಕ ಸೋಲಿಸಿದ…
ಜಾತ್ಯಾತೀತ ಪಕ್ಷಗಳಿಗೆ ನಮ್ಮ ಬೆಂಬಲ: ಪ್ರೇಮನಾಥ ಶೆಟ್ಟಿ ಬಂಟ್ವಾಳ: ರೈತ ಪರ ನಿರ್ಧಾರ ತೆಗೆದುಕೊಳ್ಳುವ ಸಂವೇದನಾ ಶೀಲ ಸರಕಾರ ಬೇಕು ಆದ್ದರಿಂದ ಜಾತ್ಯಾತೀತ ಪಕ್ಷಗಳಿಗೆ ನಮ್ಮ ಬೆಂಬಲ ಎಂದು ರೈತ ಸಂಘದ ಬಂಟ್ವಾಳ ತಾಲೂಕು ಸಮಿತಿ ಅಧ್ಯಕ್ಷ ಪ್ರೇಮನಾಥ ಶೆಟ್ಟಿ ಹೇಳಿದರು. Advertisement Advertisement ಅವರು ಬಿ.ಸಿ.ರೋಡಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಬಡವರು, ರೈತರು, ಕಾರ್ಮಿಕರ ಬೇಡಿಕೆಗಳಿಗೆ ಈ ಹಿಂದಿನ ಸರಕಾರ ಕಿವಿಗೊಡಲಿಲ್ಲ. ರೈತರ ಆದಾಯ ದುಪ್ಪಟ್ಟ ಮಾಡುವುದಾಗಿ ಹೇಳಿ ವಂಚಿಸಿದ್ದಾರೆ ಎಂದು ಆರೋಪಿಸಿದರು. ಬಿಜೆಪಿ ಸರಕಾರ ಕಿಸನ್ ಸಮ್ಮಾನ್ ಅನ್ನು ರೈತರಿಗೆ ನೀಡಿದರೆ ಇತ್ತ ರಸಗೊಬ್ಬರಗಳ ಬೆಲೆ ಏರಿಕೆ ಮಾಡಿದೆ. ಈ ಹಿಂದೆ ಅಧಿಕಾರದಲ್ಲಿದ್ದ ಕಾಂಗ್ರೆಸ್ ಹಾಗು ಜೆಡಿಎಸ್ ಸರಕಾರ ರೈತರ ಸಾಲ ಮನ್ನ ಮಾಡಿದೆ ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು. ಸುದ್ದಿಗೋಷ್ಟಿಯಲ್ಲಿ ಸಿಪಿಐಎಂಎಲ್ ಮುಖಂಡ ರಾಮಣ್ಣ ವಿಟ್ಲ, ಬಿ.ಕೆ.ಸಾಹುಲ್ ಹಮೀದ್, ತುಳಸಿದಾಸ್, ಉಪಸ್ಥಿತರಿದ್ದರು.
ಸೇವಾಂಜಲಿಯಲ್ಲಿ ಕ್ಷಯರೋಗಿಗಳಿಗೆ ಆಹಾರದ ಕಿಟ್ ವಿತರಣೆ ಬಂಟ್ವಾಳ: ಫರಂಗಿಪೇಟೆಯ ಸೇವಾಂಜಲಿ ಪ್ರತಿಷ್ಠಾನದ ವತಿಯಿಂದ ಕೇಂದ್ರ ಸರ್ಕಾರದ ನಿಕ್ಷಯ್ ಮಿತ್ರ ಯೋಜನೆಯಡಿ ಕ್ಷಯ ರೋಗಿಗಳಿಗೆ ಆಹಾರ ಧವಸ ಧಾನ್ಯ ವಿತರಣ ಕಾರ್ಯಕ್ರಮ ಫರಂಗಿಪೇಟೆಯ ಸೇವಾಂಜಲಿ ಸಭಾಗೃಹದಲ್ಲಿ ಶುಕ್ರವಾರ ನಡೆಯಿತು.ನಿಟ್ಟೆ ವಿವಿಯ ಉಪ ಕುಲಪತಿ ಡಾ. ಸತೀಶ್ ಭಂಡಾರಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಪ್ರಧಾನಿ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಾರೆ. ಆದರೆ ಅದನ್ನು ಅನುಷ್ಠಾನ ಮಾಡಲು ಸೇವಾಸಕ್ತರು ಸೇಕು. ಅಂತಹ ಕೆಲಸವನ್ನು ಸೇವಾಂಜಲಿ ಪ್ರತಿಷ್ಠಾನ ನಿರಂತರವಾಗಿ ಮಾಡಿಕೊಂಡು ಬರುತ್ತಿರುವುದು ಅಭಿನಂದನೀಯ ಎಂದರು. ಕ್ಷಯ ಅತ್ಯಂತ ಹಳೆಯ ರೋಗ, ಕ್ಷಯ ರೋಗಿಗಳಿಗೆ ಔಷಧಿಯ ಜೊತೆಗೆ ಪೋಷಕಾಂಶಯುಕ್ತ ಆಹಾರವು ಅಗತ್ಯ. ಆದ್ದರಿಂದ ಇಲ್ಲಿ ನೀಡುವ ಆಹಾರ ಧವಸ ಧಾನ್ಯವನ್ನು ಸೇವಿಸಿ ಆರೋಗ್ಯವನ್ನು ಉತ್ತಮ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು. Advertisement Advertisement ಈ ಸಂದರ್ಭ ಪ್ರಮುಖರಾದ ಬಿ. ನಾರಾಯಣ ಮೇರಮಜಲು, ಕೇಶವ ದೋಟ ಮೇರಮಜಲು, ಕುಚ್ಚೂರು ಸಂತೋಷ್ ಆಳ್ವ, ಕಿಶೋರ್ ಸುಜೀರು ವೇದಿಕೆಯಲ್ಲಿದ್ದರು. ಅರುಣ್ ಕುಮಾರ್…
ಚುನಾವಣಾ ಪ್ರಚಾರ ವೇಳೆ ಕುಸಿದು ಬಿದ್ದು ಸಾವು ಪುಂಜಾಲಕಟ್ಟೆ: ಮನೆ, ಮನೆ ಚುನಾವಣಾ ಪ್ರಚಾರಕ್ಕೆಂದು ತೆರಳಿದ್ದ ಬಿಜೆಪಿ ಕಾರ್ಯಕರ್ತರೋರ್ವರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಶುಕ್ರವಾರ ಬಂಟ್ವಾಳ ತಾಲೂಕಿನ ಕಾವಳ ಮೂಡೂರು ಗ್ರಾಮದ ಕಲಾಯಿ ಎಂಬಲ್ಲಿ ಸಂಭವಿಸಿದೆ.ವೃತ್ತಿ ಯಲ್ಲಿ ಛಾಯಾಗ್ರಾಹಕ ರಾಗಿರುವ ಇಲ್ಲಿನ ನಿವಾಸಿ ಪ್ರವೀಣ್ ನಾಯಕ್( 45) ಮೃತ ಪಟ್ಟವರಾಗಿದ್ದಾರೆ.ಪ್ರವೀಣ್ ಮತ್ತು ತಂಡ ಅವರ ನಿವಾಸದ ಪರಿಸರದಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ರಾಜೇಶ್ ನಾಯ್ಕ್ ಅವರ ಪರ ಮನೆ ಮನೆಗೆ ತೆರಳಿ ಮತಯಾಚನೆ ನಡೆಸುತ್ತಿದ್ದಾಗ ಮಧ್ಯಾಹ್ನ ಸುಮಾರು 1.30 ಘಂಟೆಯ ಹೊತ್ತಿಗೆ ಎದೆನೋವೆಂದು ಕುಸಿದು ಬಿದ್ದಿದ್ದರು.ತತ್ ಕ್ಷಣ ಅವರನ್ನು ಪುಂಜಾಲಕಟ್ಟೆ ಪ್ರಾ.ಆ.ಕೇಂದ್ರಕ್ಕೆ ಸಾಗಿಸಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದರು. Advertisement ಮೃತರು ಪತ್ನಿ, ಪುತ್ರ,ಹಾಗೂ ಪುತ್ರಿಯನ್ನು ಅಗಲಿದ್ದಾರೆ.ಮುಲ್ಕಾಜೆ ಮಾಡದಲ್ಲಿ ಪ್ರವೀಣ್ ಡಿಜಿಟಲ್ ಸ್ಟುಡಿಯೋ ನಡೆಸುತ್ತಿದ್ದ ಅವರು ಸೌಮ್ಯ ವ್ಯಕ್ತಿ ತ್ವದಿಂದ ಜನಾನುರಾಗಿಯಾಗಿದ್ದರು. Advertisement
ಜಾತ್ಯತೀತ ಪಕ್ಷಗಳು ಜೊತೆಯಾಗಿ ಕೋಮುಪಕ್ಷಗಳನ್ನು ಸೋಲಿಸಬೇಕು: ಚಂದ್ರಶೇಖರ ಪೂಜಾರಿ ಬಂಟ್ವಾಳ: ಕೋಮು ಪಕ್ಷಗಳಾದ ಎಸ್ ಡಿ ಪಿ ಐ ಮತ್ತು ಬಿಜೆಪಿಗೆ ಮತ ಹಾಕಬಾರದು. ಧರ್ಮದ ಹೆಸರಿನಲ್ಲಿ ಮತ ಯಾಚನೆ ರಾಜಕೀಯ ನಡೆಯಬಾರದು,ಬಿಜೆಪಿ ಜಾತಿ ಧರ್ಮದ ಹೆಸರಿನಲ್ಲಿ ಮತಯಾಚನೆ ನಡೆಸುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ನ್ಯಾಯವಾದಿ ಚಂದ್ರಶೇಖರ್ ಪೂಜಾರಿ ಆರೋಪಿಸಿದರು.ಅವರು ಬಿ.ಸಿ.ರೋಡಿನ ಕಾಂಗ್ರೆಸ್ ಪಕ್ಷದ ಚುನಾವಣಾ ಕಚೇರಿಯಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. Advertisement ಜಾತ್ಯಾತೀತ ಪಕ್ಷಗಳು ಒಟ್ಟಾಗಿ ಕೋಮುವಾದಿ ಬಿಜೆಪಿ ಪಕ್ಷವನ್ನು ಸೋಲಿಸಬೇಕು ಎಂದು ಅವರು ಮತದಾರರಿಗೆ ಮನವಿ ಮಾಡಿದ್ದು,ಕೋಮುವಾದಿ ಪಕ್ಷಗಳಾದ ಬಿಜೆಪಿ ಮತ್ತು ಎಸ್.ಡಿ.ಪಿ. ಈ ಎರಡು ಪಕ್ಷಕ್ಕೆ ಮತ ಹಾಕಿದರೆ ಕೊeಮು ಶಕ್ತಿಗಳೇ ಪ್ರಬಲವಾಗುವುದು ಎಂದರು.135 ವರ್ಷಗಳಿಂದ ದೇಶದಲ್ಲಿ ಅಭಿವೃದ್ಧಿ ಮೂಲಕ ಜನಮನ್ನಣೆ ಗಳಿಸಿರುವ ಕಾಂಗ್ರೇಸ್ ಪಕ್ಷ ಮಾತ್ರ ಜನರ ಕಷ್ಟ ಕಾರ್ಪಣ್ಯಗಳಿಗೆ ಸ್ಪಂದಿಸುವ ತಾಕತ್ತು ಇದೆ ಎಂದು ಅವರು ತಿಳಿಸಿದರು. Advertisement ಕಣ್ಣಿಗೆ ಕಾಣುವ ದೇವತಾ ಮನುಷ್ಯ, ಜನಸೇವೆ ಮಾಡುವ ಅಭಿವೃದ್ಧಿಯ ಹರಿಕಾರ ಬಿ.…
ಸಾಮೂಹಿಕವಾಗಿ ಸಹಸ್ರನಾಮ ಅರ್ಚನೆ Advertisement Advertisement ಬಂಟ್ವಾಳ: ಕೂಟ ಮಹಾ ಜಗತು ಬಂಟ್ವಾಳ ಇದರ ವತಿಯಿಂದ ನರಸಿಂಹ ಜಯಂತಿ ಅಂಗವಾಗಿ ಬಂಟ್ವಾಳ ಮಹಾಲಿಂಗೇಶ್ವರ ದೇವಸ್ಥಾನ ದ ಮಾಂಗಲ್ಯ ಕಲ್ಯಾಣ ಮಂಟಪದಲ್ಲಿ ಸಾಮೂಹಿಕವಾಗಿ ಸಹಸ್ರನಾಮ ಅರ್ಚನೆ, ಅಷ್ಟೋತ್ತರ ಶತನಾಮ ಅರ್ಚನೆ, ಬಂಟ್ವಾಳ ಅಂಗಸಂಸ್ಥೆ ಅಧ್ಯಕ್ಷ ಜಗದೀಶ ಹೊಳ್ಳ ಎಂ ನೇತೃತ್ವದಲ್ಲಿ ನಡೆಯು. ಸಜೀಪ ಮಾಗಣೆ ತಂತ್ರಿ ಎಂ.ಸುಬ್ರಹ್ಮಣ್ಯ ಭಟ್, ದೇವಸ್ಥಾನದ ಪ್ರಧಾನ ಅರ್ಚಕ ಅನಂತ ಭಟ್, ಗಂಗಾಧರ ಕಾರಂತ ಪದಾಧಿಕಾರಿಗಳಾದ ಕೆ ಗಣಪತಿ ಸೋಮಯಾಜಿ. ನರೇಶ್ ಹೊಳ್ಳ ಡಾ. ಎನ್ ಸೋಮಶೇಖರ ಮಯ್ಯ. ನ್ಯಾಯವಾದಿಗಳಾದ ನಾರಾಯಣ ಸೋಮಯಾಜಿ, ಸುರೇಶ್ ಹೊಳ್ಳ. ರಾಮಚಂದ್ರಮಯ್ಯ. ಶಂಕರ ನಾರಾಯಣರಾವ್. ಮೊದಲಾದವರು ಉಪಸ್ಥಿತರಿದ್ದರು.








