Author: admin

ಕನ್ಯಾನ, ಕರೋಪಾಡಿ ಗ್ರಾಮದಲ್ಲಿ ರಾಜೇಶ್ ನಾಯ್ಕ್ ಮತಯಾಚನೆ ಬಂಟ್ವಾಳ: ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಅವರು ಕರೋಪಾಡಿ ಮತ್ತು ಕನ್ಯಾನ ಗ್ರಾಮದಲ್ಲಿ ಮತಯಾಚನೆ ನಡೆಸಿದರು.ಹಿಂದೂ ಧರ್ಮದ ರಕ್ಷಣೆಯ ಜವಬ್ದಾರಿ ಹೊಂದಿರುವ ಸಂಘಟನೆಯಲ್ಲಿ ಒಂದಾದ ಭಜರಂಗದಳದ ನಿಷೇಧ ಮಾಡಲು ಹೊರಟಿರುವ ಕಾಂಗ್ರೆಸ್ ನ ಮನಸ್ಥಿತಿಯನ್ನು ನಾವು ಆಲೋಚಿಬೇಕಾದ ಕಾಲಘಟ್ಟದಲ್ಲಿ ಇದ್ದೇವೆ ಎಂದು ತಿಳಿಸಿದರು.ನಿರಂತರವಾಗಿ ಹಿಂದೂ ಧರ್ಮದ ಮೇಲೆ ದಾಳಿ ಮಾಡುತ್ತಾ ಬಂದಿರುವ ಕಾಂಗ್ರೆಸ್ ನ ಅಸಲಿ ಬುದ್ದಿ ಬಹಿರಂಗಗೊಂಡಿದೆ. ಗೋಕಳ್ಳತನ , ಅತ್ಯಾಚಾರ, ಮತಾಂತರ, ಭಯೋತ್ಪಾದಕ ಸಂಘಟನೆಗಳಿಗೆ ಬೆಂಬಲ ನೀಡುತ್ತಿರುವ ಬಂದಿರುವ ಕಾಂಗ್ರೆಸ್ ಗೆ ಈ ಬಾರಿ ಕರ್ನಾಟಕದ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ತಿಳಿಸಿದರು.ಬಂಟ್ವಾಳದ ದ್ವೇಷದ ರಾಜಕಾರಣಕ್ಕೆ ಮತದಾರರು ಪಾಠ ಕಲಿಸಿ ಬಿಜೆಪಿಯನ್ನು ಗೆಲ್ಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. Advertisement ಸದಸ್ಯರಾದ ರಘನಾಥ ಶೆಟ್ಟಿ ಪಟ್ಲ, ರಘುರಾಮ ಶೆಟ್ಟಿ, ಧರ್ಣಮ್ಮ ,ಜೆ.ಪಿ.ಗೌಡ,ಮನೋಜ್ ಬನಾರಿ, ಪ್ರಮುಖರಾದ ಯೋಗೀಶ್ ಕುಳ,ಶಿವಪ್ರಸಾದ್ ಶೆಟ್ಟಿ , ವಿನೋದ್ ಶೆಟ್ಟಿ ,ಹರೀಶ್ ಬೇಡಗುಡ್ಡೆ,ಉದಯರಮಣ ಭಟ್,ಕುಮಾರ್…

Read More

ಬಡವರಿಗೆ ಅಚ್ಛೇ ದಿನ್ ಬಂದಿಲ್ಲ : ರಮಾನಾಥ ರೈ ಬಂಟ್ವಾಳ : ಅಂಬಾನಿ, ಅದಾನಿಯಂತಹ ಶ್ರೀಮಂತರಿಗೆ ಅಚ್ಛೇದಿನ್ ಬಂದಿದೆಯೇ ಹೊರತು, ಬಡವರಿಗೆ ಅಚ್ಛೇದಿನ್ ಬಂದಿಲ್ಲ ಎಂದು ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು. ಅವರು ಕಕ್ಯಪದವಿನಲ್ಲಿ ನಡೆದ ಪ್ರಚಾರಸಭೆಯಲ್ಲಿ ಮಾತನಾಡಿದರು. ಕಾಂಗ್ರೆಸ್ ಗ್ಯಾರಂಟಿಗಳನ್ನು ಬಿಜೆಪಿಗರು ಲೇವಡಿ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಸರಕಾರ ಉಚಿತ ಅಕ್ಕಿ ಕೊಟ್ಟಾಗ ಇಂತಹುದೇ ಮಾತುಗಳನ್ನಾಡುತ್ತಿದ್ದರು. ಜನರನ್ನು ಸೋಮಾರಿಗಳನ್ನಾಗಿ ಮಾಡುತ್ತಿದ್ದಾರೆ ಎನ್ನಲಾಗಿತ್ತು. ಆದರೆ ಕೇಂದ್ರದಲ್ಲಿ ಬಿಜೆಪಿ ಸರಕಾರ ಬಂದಾಗ, ಈ ಅಕ್ಕಿಯಲ್ಲಿ ಕೇಂದ್ರದ ಪಾಲಿದೆ ಎನ್ನುತ್ತಿದ್ದರು ಎಂದು ರೈ ಸ್ಮರಿಸಿದರು.ಕಾಂಗ್ರೆಸ್ ಗ್ಯಾರಂಟಿಗಳು ಬೋಗಸ್ ಎಂದು ಬಿಜೆಪಿಯವರು ಅಪಪ್ರಚಾರ ನಡೆಸುತ್ತಿದ್ದಾರೆ. ಕಾಂಗ್ರೆಸ್ ಈ ಹಿಂದೆ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸಿದೆ. ಬಡವರಿಗೆ ಏಳು ಕೆಜಿ ಅಕ್ಕಿ ಕೊಟ್ಟದ್ದು ಕಾಂಗ್ರೆಸ್. ರೈತರಿಗೆ ಉಚಿತ ವಿದ್ಯುತ್ ಅನ್ನು ಈಗಾಗಲೇ ನೀಡಲಾಗುತ್ತಿದೆ. Advertisement ಇವತ್ತು ರೈತರು ಉಚಿತವಾಗಿ ವಿದ್ಯುತ್ ಪಡೆದು ಹಲವು ಪಂಪ್ ಗಳನ್ನು ಅಳವಡಿಸಿ ತಮ್ಮ ತೋಟಗಳಿಗೆ ನೀರು ಹರಿಸುತ್ತಿದ್ದಾರೆ ಎಂದರೆ…

Read More

ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಯ ದಶಮಾನೋತ್ಸವ ಸಮಾರಂಭ ಬಂಟ್ವಾಳ: ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಯ ದಶಮಾನೋತ್ಸವ ಸಮಾರಂಭವು ಆಸ್ಪತ್ರೆಯ ಆವರಣದಲ್ಲಿ ನೆರವೇರಿತು.ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಬಿ?ಪ್ ರೈ| ರೆ| ಡಾ| ಪೀಟರ್ ಪಾವ್ಲ್ ಸಲ್ಡಾನ್ಹಾ ಮಾತನಾಡಿ, ಆರೋಗ್ಯ ಸೇವೆಯನ್ನು ಪ್ರಮುಖ ಉದ್ದೇಶವನ್ನಾಗಿಸಿ ಬೆಳೆದು ಬಂದಿರುವ ಫಾದರ್ ಮುಲ್ಲರ್ ವೈದ್ಯಕೀಯ ಸಂಸ್ಥೆಗಳು ನಗುಮೊಗದ ಸ್ವಾಗತದೊಂದಿಗೆ ರೋಗಿಗಳ ಆರೈಕೆಯನ್ನು ಮಾಡಿದ್ದು, ಇಲ್ಲಿನ ವೈದ್ಯರು, ಸಿಬಂದಿಯ ಸೇವೆ ದೇವರ ಪ್ರೀತಿಗೆ ಪಾತ್ರವಾಗಿದೆ. ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಗುಣಮಟ್ಟದ ಸೇವೆ ನೀಡುವುದಕ್ಕೆ ಆಡಳಿತ ಮಂಡಳಿ ಸೇರಿದಂತೆ ಎಲ್ಲರೂ ಕಠಿನ ಶ್ರಮ ಪಡುತ್ತಿದ್ದು, ನಿಮ್ಮ ಶ್ರಮಕ್ಕೆ ಪ್ರತಿಫಲ ಇದ್ದೇ ಇರುತ್ತದೆ ಎಂದರು.ಫಾದರ್ ಮುಲ್ಲರ್ ಸೇವಾ ಸಂಸ್ಥೆಗಳ ನಿರ್ದೇಶಕ ವಂ.ರಿಚರ್ಡ್ ಅಲೋಶಿಯಸ್ ಕುವೆಲ್ಲೋ ಮಾತನಾಡಿ, ವಿಶೇ? ವಿನ್ಯಾಸದಿಂದ ಬಿಎ ಗ್ರೂಪ್‌ನವರು ರೂಪಿಸಿದ ಆಸ್ಪತ್ರೆಯನ್ನು ಫಾದರ್ ಮುಲ್ಲರ್ ಸಂಸ್ಥೆಯು ಮುನ್ನಡೆಸಿ ಪ್ರಸ್ತುತ ಆರೋಗ್ಯ ಸೇವಾ ಕ್ಷೇತ್ರದಲ್ಲಿ ಉನ್ನತ ಸ್ಥಾನಕ್ಕೆ ತಂದು ನಿಲ್ಲಿಸಿದೆ. ಗ್ರಾಮೀಣ ಭಾಗದ ಜನತೆಯ ಜತೆಗೆ ಸ್ಥಳೀಯ ಪಂಚಾಯತ್…

Read More

ದಿ. ಡೊಂಬಯ ಮೂಲ್ಯ ಸ್ಮರಣಾರ್ಥ ಆಶ್ರಮವಾಸಿಗಳಿಗೆ ನೆರವು, ನುಡಿನಮನ ಬಂಟ್ವಾಳ: ಇತ್ತೀಚೆಗೆ ಅಪಘಾತದಲ್ಲಿ ನಿಧನರಾದ ದಿ.ಡೊಂಬಯ್ಯ ಮೂಲ್ಯರ ಸ್ಮರಣಾರ್ಥ ಅವರ ಆತ್ಮ ಸದ್ಗತಿ ಗಾಗಿ ಕರ್ನಾಟಕ ರಾಜ್ಯ ಕುಲಾಲ ಕುಂಬಾರ ಯುವ ವೇದಿಕೆ ಮತ್ತು ಮಹಿಳಾ ಒಕ್ಕೂಟ ಬಂಟ್ವಾಳ ವಿಧಾನಸಭಾ ಕ್ಷೇತ್ರದ ವತಿಯಿಂದ ನುಡಿ ನಮನ ಮತ್ತು ಅನ್ನದಾನ ಕಾರ್ಯಕ್ರಮವು ವೇಣೂರು ಗುಂಡೂರಿನ ಶ್ರೀ ಗುರು ಚೈತನ್ಯ ಸೇವಾಶ್ರಮದಲ್ಲಿ ನಡೆಯಿತು. Advertisement ಈ ಸಂದರ್ಭ ಸಂಘಟನೆಯ ಪ್ರಮುಖರಾದ ಸುಕುಮಾರ್ ಬಂಟ್ವಾಳ, ಶೇಷಪ್ಪ ಮೂಲ್ಯ, ವಿಠಲ ಪಲ್ಲಿಕಂಡ, ಕಿಶೋರ್ ಬಂಗೇರ, ಪುನೀತ್ ಕಾಮಾಜೆ, ಕಾರ್ತಿಕ್ ಮಯ್ಯರಬೈಲು, ಸಂತೋಷ್ ಭಂಡಾರಿಬೆಟ್ಟು, ಪ್ರದೀಪ್ ಪಲ್ಲಮಜಲು, ನಿಶಾಲ್ ಕುಲಾಲ್, ಸೌಮ್ಯ ಸುಕುಮಾರ್ , ಪದ್ಮನಾಭ ನಾವೂರ ಹಾಗೂ ತುಂಬೆ ಕುಲಾಲ ಸೇವಾ ಸಂಘದ ಸ್ಥಾಪಕ ಅಧ್ಯಕ್ಷರಾದ ನೀಲಪ್ಪ ಸಾಲಿಯಾನ್, ದಿ.ಡೊಂಬಯ್ಯ ಮುಲ್ಯರ ಮನೆಯವರದ ಶಶಿಧರ್ ಸಾಲಿಯಾನ್, ಸುಜಿತ್ ಕುಮಾರ್, ಅಕ್ಷತಾ,ಮನ್ವಿತಾ, ರತನ್, ಉಪಸ್ಥಿತರಿದ್ದರು,ಸೇವಾಶ್ರಮ ದ ಹೊನ್ನಯ ಕಾಟಿಪಲ್ಲ ದಿವಂಗತರ ಆತ್ಮ ಸದ್ಗತಿಗಾಗಿ ಶ್ರೀ ಗುರುರಾಯರಲ್ಲಿ ಪ್ರಾರ್ಥಿಸಿದರು. ನಿತೀಶ್…

Read More

https://youtu.be/HQ7IFqkUTzw ಬಂಟ್ಬಾಳ: ಪಾರ್ಸೆಲ್ ನೆಪದಲ್ಲಿ ಮನೆಗೆ ಬಂದ ವ್ಯಕ್ತಿಯೊಬ್ಬ ಮಹಿಳೆಯ ಕತ್ತಿನಿಂದ‌ ಕರಿಮಣಿ ಸರ ಕದ್ದು ಪರಾರಿಯಾದ ಘಟನೆ ಬಂಟ್ವಾಳದ ರಾಯರ ಚಾವಡಿ ಎಂಬಲ್ಲಿ ನಡೆದಿದೆ.‌ ಇಲ್ಲಿನ‌ ನಿವಾಸಿ ಇಂದಿರಾ ಕರಿಮಣಿ ಸರ ಕಳೆದುಕೊಂಡವರು. Advertisement ಭಾನುವಾರ ಮಧ್ಯಾಹ್ನದ ವೇಳಗೆ ಮನೆ‌ ಬಳಿಗೆ ಬಂದ ಕಳ್ಳ ಪಾರ್ಸೆಲ್ ನೀಡುವ ನೆಪದಲ್ಲಿ ಮಹಿಳೆಯ ಸಮೀಪಕ್ಕೆ ಬಂದು ಸುಮಾರು 4 ಪವನಿನ ಕರಿಮಣಿ ಸರ ಎಗರಿಸಿ ಸ್ಥಳದಿಂದ ಓಡಿ ಹೋಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳ್ಳ ಸರ ಎಗರಿಸಿ ಓಡುವ ದೃಶ್ಯ ಎದುರಿನ ಮನೆಯ ಸಿಸಿ ಟಿವಿಯಲ್ಲಿ ದಾಖಲಾಗಿದೆ.‌ Advertisement

Read More

ಜಾತಿ, ಧರ್ಮದ ನಡುವೆ ವಿಷಬೀಜ ಬಿತ್ತಿ ಸುಳ್ಳು ಹಬ್ಬಿಸುವ ಬಿಜೆಪಿಗೆ ತಕ್ಕ ಪಾಠ ಕಲಿಸಿ : ರಮಾನಾಥ ರೈ ಬಂಟ್ವಾಳ : ಸಮಾಜದಲ್ಲಿ ಜಾತಿ, ಧರ್ಮಗಳ ನಡುವೆ ವಿಷಬೀಜ ಬಿತ್ತಿ ದ್ವೇಷ ರಾಜಕಾರಣ ಮಾಡುವ ಬಿಜೆಪಿಗೆ ಈ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿ ಎಂದು ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ.ರಮಾನಾಥ ರೈ ಕರೆ ನೀಡಿದರು. ಅವರು ಬಿ.ಸಿ.ರೋಡ್ ಪರ್ಲಿಯಾದಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಮಾತನಾಡಿದರು.ಕಳೆದ ಐದು ವರ್ಷದಲ್ಲಿ ಬಂಟ್ವಾಳ ಶಾಂತವಾಗಿದೆ ಎಂದು ಬಿಜೆಪಿಗರು ಹೇಳುತ್ತಿದ್ದಾರೆ. ಆದರೆ, ಕಾಂಗ್ರೆಸ್ ಅವಧಿಯಲ್ಲಿ ಬಂಟ್ವಾಳದ ನೆಮ್ಮದಿ ಕೆಡಿಸಿದವರೇ ಬಿಜೆಪಿಯವರು. ನಮ್ಮ ಅವಧಿಯಲ್ಲಿ ಚುನಾವಣೆಗೂ ಆರು ತಿಂಗಳಿರುವಾಗ ಗಲಭೆಗಳ ಸಂಚು ರೂಪಿಸಿ ಸಮಾಜದಲ್ಲಿ ಅಶಾಂತಿಯನ್ನು ಸೃಷ್ಟಿಸಿದ್ದರು. ಕೊಲೆ ಪ್ರಕರಣವೊಂದನ್ನು ಕಾಂಗ್ರೆಸ್ ನಾಯಕರ ತಲೆಗೆ ಕಟ್ಟಲು ನೋಡಿದ್ದರು. ಆದರೆ, ನಾಲ್ಕೇ ದಿನದಲ್ಲಿ ಆರೋಪಿಗಳು ಪತ್ತೆಯಾದಾಗ ಅವರು ಬಿಜೆಪಿ ಕಾರ್ಯಕರ್ತರಾಗಿದ್ದುದು ಜಗಜ್ಜಾಹೀರಾಗಿತ್ತು ಎಂದು ಅವರು ಸ್ಮರಿಸಿದರು. Space for advertisement ಕಳೆದ ಐದು ವರ್ಷದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ…

Read More

80 ವರ್ಷ ಮೇಲ್ಪಟ್ಟವರಿಗೆ ಮತದಾನ ಬಂಟ್ವಾಳ : ಎಂಭತ್ತು ವರ್ಷ ಮೇಲ್ಪಟ್ಟ ಹಾಗೂ ವಿಕಲಚೇತನ ಮತದಾರರಿಗೆ ಮನೆಯಲ್ಲೇ ಮತದಾನ ಮಾಡುವ ಚುನಾವಣಾ ಆಯೋಗದ ನಿರ್ದೇಶನದಂತೆ ಬಂಟ್ವಾಳ ವಿಧಾನಸಭಾ ಕ್ಷೇತ್ರದ ೨೫ ಸೆಕ್ಟರ್ ವ್ಯಾಪ್ತಿಯಲ್ಲಿ ಅಂಚೆ ಮತದಾನ ತಂಡಗಳು ಸೋಮವಾರ ಬೆಳಿಗ್ಗೆ ಮತದಾರರ ಮನೆಗಳಿಗೆ ತೆರಳಿದವು.ಓರ್ವ ಮೈಕ್ರೋ ವೀಕ್ಷಕರು, ಇಬ್ಬರು ಪೋಲಿಂಗ್ ಅಧಿಕಾರಿಗಳು, ಓರ್ವ ವೀಡಿಯೋ ಗ್ರಾಫರ್, ಹಾಗೂ ಪೊಲೀಸ್ ಸಿಬ್ಬಂದಿ ಸೇರಿದಂತೆ ಐದು ಮಂದಿ ಸಿಬ್ಬಂದಿಗಳ ತಂಡವುಪ್ರತಿ ಅರ್ಹ ಮತದಾದರರ ಮನೆಗೆ ತೆರಳಿ ಮನೆಯಿಂದಲೇ ಮತದಾನ ಮಾಡಿಸಲಾಯಿತು. Advertisement ಬಂಟ್ವಾಳ ವ್ಯಾಪ್ತಿಯಲ್ಲಿ ಚುನಾವಣಾ ತಂಡಗಳನ್ನು ಅಗತ್ಯ ನಿರ್ದೇಶನ ನೀಡಿ ಬೆಳಿಗ್ಗೆ ಮನೆಮನೆಗಳಿಗೆ ಕಳುಹಿಸಿಕೊಡಲಾಯಿತು. ಈ ಸಂದರ್ಭದಲ್ಲಿ ಚುನಾವಣಾ ಅಧಿಕಾರಿ ಆಬಿದ್ ಗದ್ಯಾಲ್, ಸಹಾಯಕ ಚುನಾವಣಾ ಅಧಿಕಾರಿ ಎಂ.ಬಿ.ಕೂಡಲಿಗಿ, ನೋಡಲ್ ಅಧಿಕಾರಿ ಸುನಿತಾ ಕುಮಾರಿ, ಮಾಸ್ಟರ್ ಟ್ರೈನರ್ ಅಬ್ದುಲ್ ರಝಾಕ್, ಉಪತಹಶೀಲ್ದಾರ್‌ಗಳಾದ ನವೀನ್ ಕುಮಾರ್, ರಾಜೇಶ್ ನಾಯ್ಕ್ , ನರೇಂದ್ರ ನಾಥ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು 80 ವರ್ಷ ಮೇಲ್ಪಟ್ಟವರಿಗೆ ಮತದಾನ Advertisement

Read More

ಕಾಂಗ್ರೆಸ್ಸಿನ ಪ್ರಜಾಧ್ವನಿ ಕೇಳುತ್ತಿಲ್ಲ, ಕುಕ್ಕರ್ ಧ್ವನಿ ಮಾತ್ರ ಕೇಳುತ್ತಿದೆ: ಕೆ. ಹರಿಕೃಷ್ಣ ಬಂಟ್ವಾಳ್ ಬಂಟ್ವಾಳ: ಉಚಿತ ಕೊಡುಗೆಯಿಂದ ಸ್ವಾಭಿಮಾನಿ ಭಾರತ ಕಟ್ಟಲು ಸಾಧ್ಯವಿಲ್ಲ. ಇದರಿಂದ ಶ್ರೀಲಂಕಾ ಪಾಕಿಸ್ತಾನದ ಪರಿಸ್ಥಿತಿ ಕರ್ನಾಟಕಕ್ಕೂ ಬರಲು ಸಾಧ್ಯವಿದೆ. ಬಿಜೆಪಿ ಬಂಟ್ವಾಳವನ್ನು ಜಿಲ್ಲೆಯ ಮಾದರಿ ಕ್ಷೇತ್ರವನ್ನಾಗಿ ಮಾಡಿದೆ, ಇಲ್ಲಿ ಕಾಂಗ್ರೆಸ್‌ನ ಪ್ರಜಾಧ್ವನಿ ಕೇಳುತ್ತಿಲ್ಲ, ಬದಲಾಗಿ ಕುಕ್ಕರ್ ಧ್ವನಿ ಮಾತ್ರ ಕೇಳುತ್ತಿದೆ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕೆ. ಹರಿಕೃಷ್ಣ ಬಂಟ್ವಾಳ್ ಆರೋಪಿಸಿದರು. Advertisement ಬಿ.ಸಿ.ರೋಡಿನ ಬಿಜೆಪಿ ಕಚೇರಿಯಲ್ಲಿ ಸೋಮವಾರ ಕರೆದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ.ರಮಾನಾಥ ರೈ ಅವರ ಆರೋಪಗಳಿಗೆ ಪ್ರತಿಕ್ರಿಯಿಸಿದ ಅವರು ಕಾಂಗ್ರೆಸ್ ಅಧಿಕಾರವಧಿಯಲ್ಲಿ ಶಾಂತಿ ಕದಡಿವರು ಬಿಜೆಪಿಯವರಲ್ಲ, ಕಾಂಗ್ರೆಸ್ಸಿಗರು ಹಾಗೂ ರಮನಾಥ ರೈಯವರ ರಾಜಕೀಯ ಚಿಂತನೆಯ ಪ್ರಭಾವದಿಂದಾಗಿ ಗಲಭೆಗಳು ಉಂಟಾಗಿದೆ. ಕೋಮುಗಲಭೆ, ಗೋಹತ್ಯೆ, ಹಿಂದೂ ಮುಸ್ಲಿಂ ಘರ್ಷಣೆ, ಹಿಂದೂ ಯುವಕರ ಮೇಲೆ ಕೇಸ್, ಜನಾರ್ದನ ಪೂಜಾರಿಯವರನ್ನು ನಿಂದಿಸಿ, ಅವರಲ್ಲಿ ಕಣ್ಣೀರಾಕಿಸಿದ ಹಿಂದಿನ ಹಸ್ತ ಯಾವುದು? ಎಂದು ಪ್ರಶ್ನಿಸಿದರು. ನಿಮಗೆ…

Read More

ಮಹಾ ಸಂಪರ್ಕ ಅಭಿಯಾನದಲ್ಲಿ ತೊಡಗಿಸಿ ಕೊಂಡವರಿಗೆ ಅಭಿನಂದನೆ ಸಲ್ಲಿಸಿದ ದೇವಪ್ಪ ಪೂಜಾರಿ ಬಂಟ್ವಾಳ: ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಸೂಚನೆಯನ್ವಯ 59 ಗ್ರಾಮದ 249 ಬೂತುಗಳಲ್ಲಿ ಎಲ್ಲಾ ಮನೆ ಮನೆ ಸಂಪರ್ಕ ಮಾಡುವ ಮಹಾ ಸಂಪರ್ಕ ಅಭಿಯಾನ ವು ಅತ್ಯಂತ ಯಶಸ್ವಿ ಆಗಿದ್ದು ಇದಕ್ಕಾಗಿ ಪಕ್ಷದ ಎಲ್ಲಾ ಕಾರ್ಯಕರ್ತರಿಗೆ ಕ್ಷೇತ್ರ ಸಮಿತಿ ಅಧ್ಯಕ್ಷ ದೇವಪ್ಪ ಪೂಜಾರಿಯವರು ಅಭಿನಂದನೆ ಸಲ್ಲಿಸಿದ್ದಾರೆ.ಮಹಾಸಂಪರ್ಕದ ದಿನ ಕಾರ್ಯಕರ್ತರು ಪ್ರತೀ ಮತಕಟ್ಟೆಗಳಲ್ಲಿ ಒಟ್ಟು ಸೇರಿ , ಸೂಕ್ತ ಯೋಜನೆಯೊಡನೆ ಮನೆ- ಮನೆ ಪ್ರಚಾರವನ್ನು ಹಮ್ಮಿಕೊಂಡಿದ್ದಾರೆ. Advertisement Advertisement ಎರಡನೆಯ ಬಾರಿ ಮನೆ ಸಂಪರ್ಕಿಸುವ ಕಾರ್ಯದಲ್ಲಿ ಪಕ್ಷದ ಅಭ್ಯರ್ಥಿಯಾದ ರಾಜೇಶ್ ನಾಯ್ಕ್ ರವರು ಬಡಗಬೆಳ್ಳೂರು, ಪಾಣೆಮಂಗಳೂರು, ನರಿಕೊಂಬು ಗ್ರಾಮದ ಬೂತಿನಲ್ಲಿ ಮನೆ ಸಂಪರ್ಕ ಮಾಡಿದ್ದಾರೆ.ಮಾಜಿ ಶಾಸಕರಾದ ಎ ರುಕ್ಮಯ ಪೂಜಾರಿ, ಪದ್ಮನಾಭ ಕೊಟ್ಟಾರಿ ಮತ್ತು ಹರಿಕ್ರಷ್ಣ ಬಂಟ್ವಾಳ ಪಕ್ಷದ ಜವಾಬ್ದಾರಿ ಇರುವ ಎಲ್ಲಾ ಪ್ರಮುಖರು ತಮ್ಮ ತಮ್ಮ ಬೂತಿನಲ್ಲಿ ಮನೆ ಸಂಪರ್ಕದಲ್ಲಿ ತೊಡಗಿಸಿಕೊಂಡಿದ್ದರು ಎಂದು ತಿಳಿಸಿದರು. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಕಾರ್ಯಕರ್ತರು…

Read More

ಮಹಾ ಸಂಪರ್ಕ ಅಭಿಯಾನ ಯಶಸ್ಸು: ರಾಜೇಶ್ ನಾಯ್ಕ್ ಬಂಟ್ವಾಳ: ವಿಧಾನ ಸಭಾ ಕ್ಷೇತ್ರಲ್ಲಿ ನಡೆದ ಮಹಾಅಭಿಯಾನ ಕಾರ್ಯಕ್ರಮ ಅಭೂತಪೂರ್ವ ಯಶಸ್ಸು ಕಂಡಿದೆ ಎಂದು ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ತಿಳಿಸಿದರು.ಬಂಟ್ವಾಳ ವಿಧಾನಸಭಾ ಕ್ಷೇತ್ರದ ಎಲ್ಲಾ ಮನೆ ಮನೆ ಸಂಪರ್ಕ ಮಾಡುವ ಮಹಾ ಸಂಪರ್ಕ ಅಭಿಯಾನ ವನ್ನು ಏಪ್ರಿಲ್ ಭಾನುವಾರದಂದು ಹಮ್ಮಿಕೊಂಡಿದ್ದು ಪಕ್ಷದ ಜವಾಬ್ದಾರಿ ಇರುವ ಪ್ರಮುಖರು ಹಾಗೂ ಕಾರ್ಯಕರ್ತರು ಪ್ರತೀ ಮತಕಟ್ಟೆಗಳಲ್ಲಿ ಒಟ್ಟು ಸೇರಿ , ಸೂಕ್ತ ಯೋಜನೆಯೊಡನೆ ಮನೆ- ಮನೆ ಪ್ರಚಾರವನ್ನು 249 ಬೂತುಗಳಲ್ಲಿ ಯಶಸ್ವಿಗೊಳಿಸಿದ್ದಕ್ಕಾಗಿ ಕ್ಷೇತ್ರದ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದರು. Advertisement ಬಂಟ್ವಾಳ ಮಂಡಲದಲ್ಲಿ ಯಶಸ್ವಿಯಾಗಿ ಮಾಡಲು ಜಿಲ್ಲಾ ಕ್ಷೇತ್ರ ಮಟ್ಟದ ಪ್ರಮುಖರು ಮಹಾಶಕ್ತಿ ಕೇಂದ್ರ ಶಕ್ತಿ ಕೇಂದ್ರದ ಪ್ರಮುಖರು ಹಾಗೂ ಬೂತು ಸಮಿತಿಯ ಸದಸ್ಯರು ಸಕ್ರಿಯವಾಗಿ ಭಾಗವಹಿಸುವ ಮೂಲಕ ಯಶಸ್ವಿ ಮಾಡಿದ್ದಾರೆ. ಮುಂಬರುವ ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ 150+ ವಿಧಾನಸಭಾ ಕ್ಷೇತ್ರಗಳನ್ನು ಗೆಲ್ಲುವ ಸಲುವಾಗಿ ಬೂತು ಕಾರ್ಯಕರ್ತರಿಂದ ರಾಷ್ಟ್ರೀಯ ನಾಯಕರವರೆಗೆ ಎಲ್ಲರೂ ಸಕ್ರಿಯವಾಗಿ ಭಾಗವಹಿಸಿ ಯಶಸ್ವಿಯಾಗಿಸಿದ್ದಾರೆ…

Read More