Author: admin

ಜನಸೇವೆಗಾಗಿ ಬದುಕಿದವನು ನಾನು, ಶಾಸಕ, ಸಚಿವನಾದರೂ ಬಂಗಲೆ ಕಟ್ಟಿಲ್ಲ: ರಮಾನಾಥ ರೈ ಬಂಟ್ವಾಳ : ರಾಜ ವ್ಯಾಪಾರಿಯಾದರೆ ಪ್ರಜೆಗಳು ಭಿಕಾರಿಗಳಾಗುತ್ತಾರೆ ಎಂಬ ಮಾತಿದೆ. ಅದೇ ರೀತಿ ಇವತ್ತು ಉದ್ಯಮಿಗಳು ಜನಪ್ರತಿನಿಧಿಗಳಾಗುತ್ತಿರುವುದರಿಂದ ಅವರು ಎಲ್ಲವನ್ನೂ ಲಾಭದ ಸೃಷ್ಟಿಯಿಂದ ನೋಡುತ್ತಿದ್ದಾರೆ. ಜನಸೇವೆಗಿಂತ ಭ್ರಷ್ಟಾಚಾರ ಎಸಗುವುದಕ್ಕೆ ಅವರು ಹೆಚ್ಚು ಆದ್ಯತೆ ನೀಡುತ್ತಿದ್ದಾರೆ. ಇದು ಜನತೆಯನ್ನು ತೀರಾ ಸಂಕಷ್ಟಕ್ಕೀಡು ಮಾಡಿದೆ. ಆದರೆ ನಾನು ಜನಸೇವೆಗಾಗಿಯೇ ಬದುಕಿದವನು. ಶಾಸಕ, ಸಚಿವನಾದರೂ ನಗರಗಳಲ್ಲಿ ದೊಡ್ಡ ಬಂಗಲೆ ಕಟ್ಟಿಲ್ಲ. ನನ್ನ ಹಿರಿಯರು ಕೊಟ್ಟ ಮನೆಯಲ್ಲೇ ವಾಸಿಸುತ್ತಿದ್ದೇನೆ ಮತ್ತು ಅಲ್ಲಿಂದಲೇ ಜನಸೇವೆ ಮಾಡುತ್ತಿದ್ದೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು. ಅವರು ನಾವೂರ ಗ್ರಾಮದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು. Advertisement ಬಿಜೆಪಿ ಆಡಳಿತದಲ್ಲಿ ಪ್ರತಿಯೊಂದು ವಿಚಾರಕ್ಕೂ ಭ್ರಷ್ಟಾಚಾರ ನಡೆದಿರುವ ಬಗ್ಗೆ ಅವರ ಪಕ್ಷಗಳ ಮುಖಂಡರುಗಳೇ ಆಪಾದಿಸಿದ್ದಾರೆ. ಇಂತಹ ಭ್ರಷ್ಟ ಸರಕಾರ ಕಿತ್ತೆಸೆಯದೆ ಜನರಿಗೆ ನೆಮ್ಮದಿಯ ಜೀವನ ಮರಳಲು ಸಾಧ್ಯವಿಲ್ಲ ಎಂದು ಅವರು ಅಭಿಪ್ರಾಯ ಪಟ್ಟರು.ನನ್ನ…

Read More

ಸಮಾನ ಮನಸ್ಕರು ಒಂದಾಗಿ ಬಿಜೆಪಿ ಸೋಲಿಸಬೇಕು: ರಮಾನಾಥ ರೈ ಬಂಟ್ವಾಳ : ಮತೀಯವಾದಿ, ಫ್ಯಾಸಿಸ್ಟರಿಂದ ದೇಶಕ್ಕೆ ಅಪಾಯವಿದೆ. ಒಂದೇ ದೇಶ, ಒಂದೇ ಪಕ್ಷ, ಒಂದೇ ನಾಯಕತ್ವ ಎಂಬರ್ಥದಲ್ಲಿ ಬಿಜೆಪಿಗರು ಮಾತನಾಡುತ್ತಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ಮುನ್ಸೂಚನೆಯಾಗಿದೆ. ಹೀಗಾಗಿ ಸಮಾನ ಮನಸ್ಕರು ಒಂದಾಗಿ ಚುನಾವಣೆ ಎದುರಿಸಬೇಕು ಎಂದು ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು. ಅವರು ಬಂಟ್ವಾಳದಲ್ಲಿ ನಡೆದ ಸಿಪಿಐ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದರು. Advertisement ಎಡಪಂಥಿಯ ಚಿಂತನೆಗಳು ಹಾಗೂ ಕಾಂಗ್ರೆಸ್ ಸಿದ್ಧಾಂತಕ್ಕೂ ಸಾಕಷ್ಟು ಸಾಮ್ಯತೆಯಿದೆ. ಕಾಂಗ್ರೆಸ್ ಹಾಗೂ ಎಡಪಂಥಿಯ ಪಕ್ಷಗಳು ಜೊತೆಗೂಡಿ ಸರಕಾರ ನಡೆಸಿದ ಇತಿಹಾಸವೂ ಇದೆ. ರಮಾನಾಥ ರೈ ಅವರು ಬಂಟ್ವಾಳ ವಿಧಾನಸಭಾ ಕ್ಷೇತ್ರವನ್ನು ರಾಜ್ಯದಲ್ಲೇ ಮಾದರಿ ಕ್ಷೇತ್ರವನ್ನಾಗಿ ಮಾಡಿದ್ದಾರೆ. ಅವರನ್ನು ಗೆಲ್ಲಿಸುವ ಹೊಣೆ ನಮ್ಮ ಮೇಲೂ ಇದೆ. ಹೀಗಾಗಿ, ಈ ಚುನಾವಣೆಯಲ್ಲಿ ಬಂಟ್ವಾಳದಲ್ಲಿ ಸಿಪಿಐ ಕಾಂಗ್ರೆಸ್ ಅನ್ನು ಬೆಂಬಲಿಸಲಿದೆ ಎಂದು ಸಿಪಿಐ ತಾಲೂಕು ಕಾರ್ಯದರ್ಶಿ ಸುರೇಶ್ ಕುಮಾರ್ ಹೇಳಿದರು. Advertisement ಸಿಪಿಐ ಜಿಲ್ಲಾ ಕಾರ್ಯದರ್ಶಿ…

Read More

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ಉಚಿತ ಸಾಮೂಹಿಕ ವಿವಾಹ , ಸ್ವಸ್ತಿ ಸಿರಿ ಪ್ರಶಸ್ತಿ ಪ್ರದಾನ ಬಂಟ್ವಾಳ: ಪುಂಜಾಲಕಟ್ಟೆಯ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 39ನೇ ಸಂಭ್ರಮಾಚರಣೆಯ ಪ್ರಯುಕ್ತ 15ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ರವಿವಾರ ಇಲ್ಲಿನ ಬಂಗ್ಲೆ ಮೈದಾನದಲ್ಲಿ ಜರಗಿತು.ಬೆಳಗ್ಗೆ ಪುಂಜಾಲಕಟ್ಟೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ದ.ಕ.ಜಿಲ್ಲಾ ಬಿಜೆಪಿ ಯುವಮೋರ್ಚಾ ಪ್ರ.ಕಾರ್ಯದರ್ಶಿ ಸುದರ್ಶನ್ ಬಜ ಅವರು ದಿಬ್ಬಣ ಮೆರವಣಿಗೆಯನ್ನು ಉದ್ಘಾಟಿಸಿದರು. ಬಳಿಕ ಮದುವೆ ಮಂಟಪದವರೆಗೆ ವಧು-ವರರ ದಿಬ್ಬಣ ಮೆರವಣಿಗೆ ನಡೆಯಿತು. ಸಭಾಂಗಣದಲ್ಲಿ ವಧು, ವರರನ್ನು ಸಾಂಪ್ರಾದಾಯಿಕವಾಗಿ ಎದುರುಗೊಳ್ಳಲಾಯಿತು. ಕೃಷ್ಣ ಭಟ್ ಕಾರ್ಕಳ ಅವರ ಪೌರೋಹಿತ್ಯದಲ್ಲಿ , ಮಧ್ಯಾಹ್ನ 11.22ರ ಶುಭ ಮುಹೂರ್ತದಲ್ಲಿ 9 ಜೋಡಿ ವಧು-ವರರಿಗೆ ಸಾಂಪ್ರದಾಯಿಕ, ಶಾಸ್ತ್ರೊಕ್ತವಾಗಿ ಸಾಮೂಹಿಕ ವಿವಾಹ ನಡೆಯಿತು. ಬಳಿಕ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ನವದೆಹಲಿ ಅನಾರೋಖ್ ಪ್ರೈ.ಲಿ.ನ ವೈಸ್ ಚೆಯರ್ ಮೆನ್ ಸಂತೋಷ್ ಜೆ.ಪಿ. ಅವರು ಉದ್ಘಾಟಿಸಿ ಮಾತನಾಡಿ, ಸಮಾಜ ಸೇವೆ ಎನ್ನುವುದು ದೇವರ ಸೇವೆ ಮಾಡಿದಂತೆ.…

Read More

ಯಕ್ಷಗಾನದ ವೇಷಕ್ಕೆ ಅವಮಾನ ಖಂಡನೀಯ: ಅಶೋಕ್ ಶೆಟ್ಟಿ ಸರಪಾಡಿ ಬಂಟ್ವಾಳ: ಬಿ.ಸಿ.ರೋಡಿನಲ್ಲಿ ನಡೆದ ಮತದಾನದ ಜಾಗೃತಿ ಜಾಥವನ್ನು ಜನಸಾಮಾನ್ಯರ ಗಮನ ಸೆಳೆಯಲು ಯಕ್ಷಗಾನದ ವೇಷವನ್ನು ಶಿಷ್ಟಚಾರ ಬಿಟ್ಟು ಈ ರೀತಿ ಅಪಮಾನಿಸಿದ್ದು ಖಂಡನಾರ್ಹ ಎಂದು ಬಿಜೆಪಿ ಕಲೆ ಮತ್ತು ಸಾಂಸ್ಕೃತಿಕ ಪ್ರಕೋಷ್ಠದ ದ.ಕ. ಜಿಲ್ಲಾ ಸಂಚಾಲಕ ಅಶೋಕ್ ಶೆಟ್ಟಿ ಸರಪಾಡಿ ಖಂಡಿಸಿದ್ದಾರೆ. Advertisement Advertisement ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು ಕಸ ಸಾಗಾಟದ ಗಾಡಿಯಲ್ಲಿ ರಾಜ ಗೌರವಾದರದ ಯಕ್ಷಗಾನ ವೇಷವನ್ನು ಕಸವೆಂದು ಅಧಿಕಾರಿಗಳು ಭಾವಿಸಿದಂತಿದೆ, ಕೂಡಲೇ ಆಯೋಜಕರು ಕಲಾ ವಲಯದ ಕ್ಷಮಾಯಾಚನೆ ಕೇಳಬೇಕು. ತಪ್ಪಿದರೆ ಇದರ ವಿರುದ್ಧ ಪ್ರತಿಭಟನೆ ಅನಿವಾರ್ಯ ಎಂದು ಎಚ್ಚರಿಸಿರುವ ಅವರು ಸಾವಿರಾರು ಮಂದಿ ಕಲಾವಿದರು ಚುನಾವಣಾ ಬಹಿಷ್ಕಾರಕ್ಕೆ ಕರೆ ಕೊಡುವುದಕ್ಕೆ ಮೊದಲು ತಕ್ಷಣ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.

Read More

ಬಂಟ್ವಾಳ: ಚುನಾವಣಾ ಆಯೋಗ, ದ.ಕ. ಜಿಲ್ಲಾ ಸ್ವೀಪ್ ಸಮಿತಿ ಇದರ ಆಶ್ರಯದಲ್ಲಿ ತಾಲೂಕು ಆಡಳಿತ ಬಂಟ್ವಾಳ, ತಾಲೂಕು ಕಚೇರಿ ಬಂಟ್ವಾಳ, ಪುರಸಭೆ ಬಂಟ್ವಾಳ, ಕಾರ್ಮೆಲ್ ಕಾಲೇಜು ಮೊಡಂಕಾಪು ಇದರ ಸಹಯೋಗದಲ್ಲಿ ಮತದಾನ ಜಾಗೃತಿ ಜಾಥಕ್ಕೆ ಬಿ.ಸಿ.ರೋಡಿ ಕೈಕಂಬದ ಪೊಳಲಿ ದ್ವಾರದ ಬಳಿ ಚಾಲನೆ ನೀಡಲಾಯಿತು.ಜಾಗೃತಿ ಜಾಥವನ್ನು ದ.ಕ. ಜಿ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಕುಮಾರ್ ಉದ್ಘಾಟಿಸಿದರು. ಅವರು ಮಾತನಾಡಿ ನನ್ನ ಒಂದು ಮತದಾನದಿಂದ ಏನು ಆಗುವುದಿಲ್ಲ ಎನ್ನುವ ಮನೋಭಾವ ಬಿಟ್ಟು ಪ್ರತಿಯೊಬ್ಬರು ಮತದಾನ ಮಾಡಬೇಕು ಎಂದರು. ಬಂಟ್ವಾಳದಲ್ಲಿ ಮತದಾನ ಜಾಗೃತಿ ಜಾಥ, ಯಕ್ಷಗಾನದ ಮೂಲಕ ಮತದಾನ ಜಾಗೃತಿ ಚುನಾವಣಾ ಆಯೋಗದ ನಿರ್ದೇಶನದಂತೆ ನಮ್ಮ ನಡೆ ಮತದಾನದ ಕಡೆ ಎನ್ನುವ ದಿನಾಚರಣೆಯನ್ನು ಕರ್ನಾಟಕ ರಾಜ್ಯದ್ಯಂತ ಆಚರಿಸಲಿದ್ದೇವೆ, ಎಲ್ಲಾ ಮತಗಟ್ಟೆ ಅಧಿಕಾರಿಗಳು ಮತಗಟ್ಟೆ ಕೇಂದ್ರಗಳಲ್ಲಿ ಕುಳಿತು ಜನರಿಗೆ ಅರಿವು ಮೂಡಿಸುವ ಕಾರ್ಯ ಮಾಡಲಿದ್ದಾರೆ. ವಿಶೇಷವಾಗಿ ಕಲಾವಿದರ ಮೂಲಕ ಜನರ ಮನಸ್ಸನ್ನು ಸೆಳೆಯುವ ಕಾರ್ಯಕ್ರಮ ಮಾಡಲಾಗುತ್ತಿದೆ ಎಂದರು.ಬಂಟ್ವಾಳ ವಿಧಾನಸಭಾ ಕ್ಷೇತ್ರ ಚುನಾವಣಾಧಿಕಾರಿ ಅಭಿದ್ ಗದ್ಯಾಲ್ ಮಾತನಾಡಿದರು.…

Read More

ಕಾಂಗ್ರೆಸ್ ಅವಧಿಯಲ್ಲಿ ಬಂಟ್ವಾಳದಲ್ಲಿ ಶಾಂತಿ ಕದಡಿದವರು ಬಿಜೆಪಿಗರು : ರಮಾನಾಥ ರೈ ಬಂಟ್ವಾಳ : ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಬಂಟ್ವಾಳದಲ್ಲಿ ಶಾಂತಿ ಕದಡಿದವರು ಬಿಜೆಪಿಗರು. ಆದರೆ, ಈಗ ಬಂಟ್ವಾಳದಲ್ಲಿ ಶಾಂತಿಯಿದೆ, ಕಾಂಗ್ರೆಸ್ ಬಂದರೆ ಮತ್ತೆ ಶಾಂತಿ ಕದಡುತ್ತದೆ ಎಂದು ಸುಳ್ಳು ಹಬ್ಬಿಸುತ್ತಿದ್ದಾರೆ. ಕಾಂಗ್ರೆಸ್ ಅವಧಿಯಲ್ಲಿ ಶಾಂತಿ ಕದಡಿದವರು ಯಾರು ಎಂಬುದು ಜನತೆಗೆ ಸ್ಪಷ್ಟವಾಗಿ ತಿಳಿದಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು. ಬಂಟ್ವಾಳ ಕಸಬಾದ ನೇರಂಬೋಳ್, ಕೊಂಗ್ರಬೆಟ್ಟು, ಕೆಳಗಿನ ಪೇಟೆಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಗಳಲ್ಲಿ ಅವರು ಮಾತನಾಡಿದರು. Advertisement ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ಸಾಕಷ್ಟು ಅನುದಾನ ತಂದು ಅಭಿವೃದ್ಧಿ ಪಡಿಸಿರುವುದು ನಿಮಗೆ ತಿಳಿದಿದೆ. ನಾನು ಅಭಿವೃದ್ಧಿ ರಾಜಕಾರಣದಲ್ಲಿ ಆಸಕ್ತಿ ಹೊಂದಿದ್ದೇನೆಯೇ ಹೊರತು, ದ್ವೇಷದ ರಾಜಕಾರಣದಲ್ಲಿ ಆಸಕ್ತಿ ಹೊಂದಿಲ್ಲ ಎಂದು ಅವರು ತಿಳಿಸಿದರು.ಬಂಟ್ವಾಳದಲ್ಲಿ ಮಿನಿ ವಿಧಾನ ಸೌಧ, ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣ, ಅಂಬೇಡ್ಕರ್ ಭವನ, ನಿರೀಕ್ಷಣ ಮಂದಿರ, ಉದ್ಯಾನವನ ಮುಂತಾದ ಹಲವು ಅಭಿವೃದ್ಧಿ…

Read More

ಬಂಟ್ವಾಳ ಕ್ಷೇತ್ರದಲ್ಲಿ ಆಗಿರುವಂತಹ ಅಭಿವೃದ್ದಿ ಕಾರ್ಯ ಬಿಜೆಪಿ ಗೆಲುವಿಗೆ ಪೂರಕ: ಅಣ್ಣಾಮಲೈ ಬಂಟ್ವಾಳ: ಬಂಟ್ವಾಳ ಕ್ಷೇತ್ರದಲ್ಲಿ ಆಗಿರುವಂತಹ ಅಭಿವೃದ್ದಿ ಕಾರ್ಯ, ಕಾನೂನು ಸುವ್ಯವಸ್ಥೆ, ಬಂಟ್ವಾಳದ ಬಗೆಗಿನ ದೂರದೃಷ್ಟಿ ಯೋಜನೆಗಳು ಎಲ್ಲವೂ ಬಂಟ್ವಾಳದ ಗೆಲುವಿಗೆ ಪೂರಕವಾಗಿದೆ. ಬಂಟ್ವಾಳ ಕ್ಷೇತ್ರದಲ್ಲಿ ಆಗಿರುವಂತಹ ಅಭಿವೃದ್ದಿ ಕೆಲಸಗಳನ್ನು ಕಂಡು ಇಲ್ಲಿನ ಎಲ್ಲಾ ಜನರೂ ಬಿಜೆಪಿಯನ್ನು, ಬಿಜೆಪಿಯ ಶಾಸಕರನ್ನು ಒಪ್ಪಿಕೊಂಡಿದ್ದಾರೆ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಹೇಳಿದರು. Advertisement ಅವರು ಶನಿವಾರ ಬಿ.ಸಿ.ರೋಡಿನಲ್ಲಿ ಬಿಜೆಪಿ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ಬಿಜೆಪಿ ಡಬ್ಬಲ್ ಇಂಜಿನ್ ಸರಕಾರವಾಗಿ ಮುಂದುವರೆಯುತ್ತಿದ್ದರೆ ಕಾಂಗ್ರೆಸ್ ಪಕ್ಷ ರಿವರ್ಸ್ ಗೇರ್‌ನಲ್ಲಿ ಚಲಿಸುತ್ತಿದೆ. ಪ್ರಸ್ತುತ ಕರಾವಳಿಯಲ್ಲಿ ಪಿಎಫ್‌ಐ ಸಂಘಟನೆ ಅಸ್ಥಿತ್ವದಲ್ಲಿ ಇಲ್ಲ, ಪಿಎಫ್‌ಐಯ ಬಿ ಟೀಮ್ ಆಗಿ ಎಸ್‌ಡಿಪಿಐ ಇದ್ದು ಕಾಂಗ್ರೆಸ್ ಅವರೊಂದಿಗೆ ಆಂತರಿಕ ಹೊಂದಣಿಕೆ ಮಾಡಿಕೊಂಡು ಕಾರ್ಯ ನಿರ್ವಹಿಸುತ್ತಿದೆ ಇದನ್ನು ಜನ ನೋಡುತ್ತಿದ್ದಾರೆ. ಕರಾವಳಿಯಲ್ಲಿ ಮತ್ತೆ ಭಯೋತ್ಪಾದನೆ ಹುಟ್ಟ ಬೇಕಾ, ಹಿಂದು ಯುವಕರನ್ನು ಟಾರ್ಗೆಟ್ ಮಾಡಿ ಹತ್ಯೆ ಮಾಡ ಬೇಕಾ, ಜಿಲ್ಲೆಯಲ್ಲಿ…

Read More

ವೈಯಕ್ತಿಕ ಸಮಸ್ಯೆಗಳನ್ನು ಮರೆತು ಪಕ್ಷಕ್ಕಾಗಿ ಒಂದಾಗಿ: ರಾಜೇಶ್ ನಾಯ್ಕ್ ಬಂಟ್ವಾಳ: ವೈಯಕ್ತಿಕ ವಿಚಾರಗಳು ಏನಿದ್ದರೂ ಎಲ್ಲವನ್ನು ಬದಿಗಿಟ್ಟು, ಕಾರ್ಯಕರ್ತರು ಚುನಾವಣಾ ದಿನದವರೆಗೆ ನಿದ್ರಿಸದೆ ಕಾಲಿಗೆ ಚಕ್ರಕಟ್ಟಿದಂತೆ ನಿರಂತರವಾಗಿ ಮತದಾರರ ಬಳಿಗೆ ತೆರಳಿ ಪ್ರತಿ ಮನೆಯನ್ನು ಸಂಪರ್ಕ ಮಾಡಿ, ಬಂಟ್ವಾಳದಲ್ಲಿ ಗೆಲುವಿನ ವಿಜಯದ ಪತಾಕೆ ಹಾರಿಸಬೇಕು ಎಂದು ಬಂಟ್ವಾಳ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ತಿಳಿಸಿದರು.ಅವರು ಪಂಜಿಕಲ್ಲು ಗ್ರಾಮದಲ್ಲಿ ಮತದಾರರ ಮನೆಬಾಗಿಲಿಗೆ ತೆರಳಿ ಮತಯಾಚನೆ ನಡೆಸಿ ಮಾತನಾಡಿದರು. ವೈಯಕ್ತಿಕ ಸಮಸ್ಯೆಗಳನ್ನು ಮರೆತು ಪಕ್ಷಕ್ಕಾಗಿ ಒಂದಾಗಿ: ರಾಜೇಶ್ ನಾಯ್ಕ್ ಕಾರ್ಯಕರ್ತರು ನಮ್ಮ ನಮ್ಮ ಬೂತ್ ನ್ನು ಗೆಲ್ಲಲು ಪ್ರಯತ್ನ ಮಾಡಿದಾಗ ಬಂಟ್ವಾಳ ಕ್ಷೇತ್ರದಲ್ಲಿ ಬಿಜೆಪಿಗೆ ಗೆಲುವು ನಿಶ್ಚಿತ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.ಬಿಜೆಪಿ ಗೆದ್ದರೆ ಸಾಮಾನ್ಯ ಕಾರ್ಯಕರ್ತ ಗೆದ್ದಂತೆ, ಕಾರ್ಯಕರ್ತನ ಗೆಲುವಿಗಾಗಿ ಜೊತೆಯಾಗಿ ಕೆಲಸ ಮಾಡಬೇಕು ಎಂದು ಅವರು ತಿಳಿಸಿದರು.ಕೇಂದ್ರ ಮತ್ತು ರಾಜ್ಯ ಸರಕಾರದ ಡಬ್ಬಲ್ ಇಂಜಿನ್ ಸರಕಾರದ ಫಲವಾಗಿ ಬಂಟ್ವಾಳ ಕ್ಷೇತ್ರದಲ್ಲಿ 2ಸಾವಿರಕ್ಕಿಂತಲೂ ಅಧಿಕ ಅನುದಾನಗಳ ಮೂಲಕ ಸರ್ವವ್ಯಾಪಿ ಸರ್ವಸ್ಪರ್ಷಿಯಾದ ಅಭಿವೃದ್ಧಿಗೆ ಕೊಡುಗೆ…

Read More

5000 ಕೋಟಿ ಅನುದಾನದಲ್ಲಿ ಕ್ಷೇತ್ರ ಅಭಿವೃದ್ಧಿ ಪಡಿಸಿದ ತೃಪ್ತಿಯಿದೆ : ರಮಾನಾಥ ರೈ ಬಂಟ್ವಾಳ : ನನ್ನ ಅಧಿಕಾರಾವಧಿಯಲ್ಲಿ 5000 ಕೋಟಿ ರೂ. ಅನುದಾನದಲ್ಲಿ ಕ್ಷೇತ್ರ ಅಭಿವೃದ್ಧಿ ಪಡಿಸಿದ ತೃಪ್ತಿಯಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು. ಅವರು ರಾಯಿ ಗ್ರಾಮದ ಪಡ್ರಾಯಿ ಮತ್ತು ಅಣ್ಣಳಿಕೆಯಲ್ಲಿ ನಡೆದ ಚುನಾವಣೆ ಪ್ರಚಾರ ಸಭೆಗಳಲ್ಲಿ ಮಾತನಾಡಿದರು.ಬಂಟ್ವಾಳದಲ್ಲಿ ಶಾಂತಿಯಿದೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮತ್ತೆ ಶಾಂತಿ ಕದಡುತ್ತದೆ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ಕಾಂಗ್ರೆಸ್ ಅವಧಿಯಲ್ಲಿ ಶಾಂತಿ ಕದಡಿದ್ದು ಯಾರು ಎಂಬುದು ಜನತೆಗೆ ತಿಳಿದಿದೆ. ಕೆಲವು ಪ್ರಕರಣಗಳು ನಡೆದಿದ್ದರೆ ಅದರಲ್ಲಿ ಯಾವುದೇ ಪ್ರಕರಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಹೆಸರಿಲ್ಲ. ಕಾಂಗ್ರೆಸ್ ವಿರುದ್ಧ ಅಪಪ್ರಚಾರಗಳನ್ನು ಮಾಡಿ ಕಳೆದ ಬಾರಿ ನನ್ನನ್ನು ಸೋಲಿಸಲಾಗಿದೆ ಎಂದು ಅವರು ತಿಳಿಸಿದರು. Advertisement ಇಡೀ ರಾಜ್ಯದಲ್ಲೇ ಮಾದರಿ ಕ್ಷೇತ್ರವನ್ನಾಗಿ ಬಂಟ್ವಾಳ ವಿಧಾನಸಭಾ ಕ್ಷೇತ್ರವನ್ನು ರೂಪಿಸಿರುವ ರಮಾನಾಥ ರೈ ಅವರಿಗೆ ಮತ್ತೊಂದು ಅವಕಾಶ ನೀಡುವಂತೆ ಇದೇ ವೇಳೆ ಮಾತನಾಡಿದ ಕೆಪಿಸಿಸಿ ಮುಖಂಡ…

Read More

ಬಂಟ್ವಾಳ ಕ್ಷೇತ್ರದಲ್ಲಿ ಕೋಟ್ಯಾಂತರ ರೂಪಾಯಿ ಅವ್ಯವಹಾರ: ಪದ್ಮನಾಭ ಸಾಮಂತ್ ಆರೋಪ ಬಂಟ್ವಾಳ: ಕಳೆದ ಬಿಜೆಪಿ ಸರಕಾರದ ಅವಧಿಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಕೋಟ್ಯಾಂತರ ರೂಪಾಯಿಯ ಅವ್ಯವಹಾರ ನಡೆದಿದ್ದು ಈ ಬಗ್ಗೆ ದಾಖಲೆ ಸಹಿತ ಸಾಮಾಜಿಕ ಜಾಲಾತಾಣದಲ್ಲಿ ಪ್ರಚಾರ ಪಡಿಸಿದಾಗ ಅದನ್ನು ಸಹಿಸದ ಬಿಜೆಪಿಗರು ಹಾಗೂ ನಿಕಟಪೂರ್ವ ಶಾಸಕರು ಇದು ಸುಳ್ಳು ಸುದ್ದಿಯೆಂದು ಹಬ್ಬಿಸುತ್ತಿದ್ದಾರೆ. ಭ್ರಷ್ಟಾಚಾರದ ಬಗ್ಗೆ ಮಾತನಾಡಿದರೆ ಕೇಸು ದಾಖಲಿಸುತ್ತಾರೆ ಎಂದು ಕಾಂಗ್ರೆಸ್ ಹಿಂದುಳಿದವರ್ಗಗಳ ಜಿಲ್ಲಾ ಉಪಾಧ್ಯಕ್ಷ, ಸಾಮಾಜಿಕ ಜಾಲಾತಾಣದ ಮುಖಂಡ ಪದ್ಮನಾಭ ಸಾಮಂತ್ ಆರೋಪಿಸಿದರು. Advertisement ಅವರು ಬಿ.ಸಿ.ರೋಡಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಕಾರಂಬಡೆ ಬಳಿ ಕಾಡಬೆಟ್ಟು – ದರ್ಬಳಿಕೆ ರಸ್ತೆಯಲ್ಲಿ ಅವ್ಯವಹಾರ ನಡೆದಿದೆ, ಕಾರಂಬಡೆ ದೇವಸ್ಥಾನಕ್ಕೆ ಸಾರ್ವಜನಿಕ ಶೌಚಾಲಯ ನಿರ್ಮಿಸಿರುವುದಾಗಿ ಹೇಳಿದ್ದಾರೆ ಆದರೆ ಅಲ್ಲಿ ಯಾವುದೇ ಸಾರ್ವಜನಿಕ ಶೌಚಾಲಯ ಇಲ್ಲ, ಕಡೇಶಿವಾಲಯಯ ದೇವಸ್ಥಾನ ಬಳಿ ನದಿಗೆ ಸಣ್ಣ ಸಣ್ಣ ಕಲ್ಲು ತುಂಡುಗಳನ್ನು ಹಾಕಿ ತಡೆಗೋಡೆ ನಿರ್ಮಿಸಿ ಹಣ ಗುಳು ಮಾಡಲಾಗಿದೆ, ಅದು ಈಗಾಲೇ ಉದುರಿ ಬೀಳುತ್ತದೆ ಮುಂದೆ ಮಳೆಗಾಲದಲ್ಲಿ…

Read More