Author: admin
ಜನರು ಗೌರವದಿಂದ ಬದುಕಬೇಕಾದರೆ ಬಿಜೆಪಿ ಗೆಲ್ಲಬೇಕು- ರಾಜೇಶ್ ನಾಯ್ಕ್ ಬಂಟ್ವಾಳ: ಅಭಿವೃದ್ಧಿ ಎಂಬುದು ನಿಂತನೀರಲ್ಲ, ಹರಿಯುವ ನೀರು, ಅಭಿವೃದ್ಧಿ ಜೊತೆಗೆ ಸಂಸ್ಕೃತಿ ,ರಾಷ್ಟ್ರೀಯತೆಯನ್ನು ಉಳಿಸಿ, ಕ್ಷೇತ್ರದ ಪ್ರತಿಯೊಂದು ಮತದಾರರು , ಕಾರ್ಯಕರ್ತರು ಗೌರವದಿಂದ ಬದುಕಬೇಕಾದರೆ ಬಂಟ್ವಾಳ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಬೇಕು ಎಂದು ಅಭ್ಯರ್ಥಿ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು.ಅವರು ಸರಪಾಡಿ ಗ್ರಾಮದ ಶಕ್ತಿ ಕೇಂದ್ರದಲ್ಲಿ ಕಾರ್ಯಕರ್ತರನ್ನು ಭೇಟಿ ಮಾಡಿ, ಪ್ರಮುಖ ಮನೆಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದರು. Advertisement ಕೃಷಿ ಮತ್ತು ಋಷಿ ಸಂಸ್ಕೃತಿ ಉಳಿಯಬೇಕಾಗಿದೆ.ನಯಪೈಸೆ ಖರ್ಚು ಇಲ್ಲದ ಗ್ಯಾರಂಟಿ ಕಾರ್ಡ್ ಉಪಯೋಗಕ್ಕೆ ಬಾರದ ಡಮ್ಮಿ ಕಾರ್ಡ್ ಇದಾಗಿದ್ದು, ಸುಳ್ಳು ಭರವಸೆ ಮೂಲಕ ಗೆಲ್ಲುವ ಯೋಚನೆಯಲ್ಲಿದೆ, ಬಂಟ್ವಾಳ ಕ್ಷೇತ್ರದ ಜನ ಬುದ್ಧಿವಂತರಾಗಿದ್ದು, ಕಾಂಗ್ರೆಸ್ ನ ಪೊಳ್ಳು ಭರವೆಸೆಗಳಿಗೆ ಮರುಳಾಗುವುದಿಲ್ಲ,ಕಾಂಗ್ರೆಸ್ ಗೆ ಅವಕಾಶ ನೀಡುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಕ್ಷೇತ್ರದ ಜನತೆ ನೀಡಿದ ಒಂದು ಮತದಿಂದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ, ಗೋಹತ್ಯೆ ನಿಷೇಧ, ಕಾಶ್ಮೀರದಲ್ಲಿ ಆರ್ಟಿಕಲ್ಸ್ 370 ರದ್ದು ಮಾಡಲು ಸಾಧ್ಯವಾಯಿತು ಎಂಬುದನ್ನು…
ಬಂಟ್ವಾಳ: ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಇದ್ದ ಸೌಹಾರ್ದತೆಯ ವಾತವರಣ ಮತ್ತೆ ರಾಜ್ಯದಲ್ಲಿ ಸೃಷ್ಟಿಯಾಗಲಿದೆ, ಯಾರೂ ಉತ್ತಮ ಆಡಳಿತ ನೀಡಿದ್ದಾರೆ, ಯಾರೂ ಪೊಳ್ಳು ಭರವಸೆಗಳನ್ನು ನೀಡಿ ಯಾಮಾರಿಸಿದ್ದಾರೆ ಎನ್ನುವ ತಿಳಿವಳಿಕೆ ಜನರಿಗೆ ಬಂದಿದೆ. ಆದ್ದರಿಂದ ಈ ಭಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದರಲ್ಲಿ ಸಂಶಯ ಇಲ್ಲ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಹೇಳಿದರು. ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿ ಜನರನ್ನು ಭಾವನಾತ್ಮಕವಾಗಿ ಕುಕೃತ್ಯಕ್ಕೆ ಪ್ರೇರೆಪಿಸುವಂತಹ, ಜನರು ಸಾಮರಾಸ್ಯದಲ್ಲಿ ಬದುಕುವುದಕ್ಕೆ ತೊಡಕಾಗುವಂತಹ ಭಯದ ವಾತವರಣ ಇದೆ. ಭಾರತ ವಿಶ್ವಗುರು ಆಗಬೇಕಾದರೆ ದೇಶದಲ್ಲಿರುವ ಎಲ್ಲಾ ಜನರು ಸಹೋದರತ್ವದಲ್ಲಿ ಬದುಕುವುದು ಅಗತ್ಯ, ಆದರೆ ದೇಶದ ಪ್ರಸ್ತುತ ಪರಿಸ್ಥಿತಿ ತುಂಬಾ ವ್ಯತಿರಿಕ್ತವಾಗಿದೆ ಎಂದರು. Advertisement ಭ್ರಷ್ಟಾಚಾರ ರಹಿತ ಆಡಳಿತ ನೀಡಿ ಬಡವರಿಗಾಗಿ ಕಾಂಗ್ರೆಸ್ ಗ್ಯಾರಂಟಿ ಭರವಸೆ ನೀಡುತ್ತಿದೆ,ಸಿದ್ಧರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಶೇ.೯೫ ಭರವಸೆಗಳು ಈಡೇರಿದೆ, ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಕೂಡಲೇ ಪ್ರಥಮ ಕ್ಯಾಬಿನೆಟ್ ಮೀಟಿಂಗಲ್ಲಿಯೇ ಜನರಿಗೆ ನೀಡಿದ ಗ್ಯಾರಂಟಿಗಳಿಗೆ…
ಬಂಟ್ವಾಳ : ರಮಾನಾಥ ರೈಯವರ ದಕ್ಷ ನಾಯಕತ್ವ ಮೆಚ್ಚಿ ಕಾಂಗ್ರೆಸ್ ಸೇರ್ಪಡೆ ಬಂಟ್ವಾಳ : ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ. ರಮಾನಾಥ ರೈಯವರ ದಕ್ಷತೆಯ ನಾಯಕತ್ವವನ್ನು ಮೆಚ್ಚಿ ಸಮಾಜ ಸೇವಕರು, ಸಾಮಾಜಿಕ ಚಿಂತಕರುಗಳಾದ ಗುಬ್ಯಮೇಗಿನ ಗುತ್ತಿನ ಶ್ರೀಧರ ಕೆ. ಶೆಟ್ಟಿ ಮತ್ತು ಪಟ್ಲಗುತ್ತಿನ ದಾಮೋದರ ಶೆಟ್ಟಿ ಕಾಂಗ್ರೆಸ್ ಸೇರ್ಪಡೆಯಾದರು.ರಮಾನಾಥ ರೈ ಅವರ ಸಮ್ಮುಖದಲ್ಲಿ ಬಿ.ಸಿ.ರೋಡ್ ನಲ್ಲಿರುವ ಪಕ್ಷದ ಚುನಾವಣಾ ಕಚೇರಿಯಲ್ಲಿ ಶ್ರೀಧರ ಶೆಟ್ಟಿ ಮತ್ತು ದಾಮೋದರ ಶೆಟ್ಟಿ ಕಾಂಗ್ರೆಸ್ ಸೇರ್ಪಡೆಗೊಂಡರು.ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ರಮಾನಾಥ ರೈಯವರನ್ನು ಮತ್ತೊಮ್ಮೆ ಗೆಲ್ಲಿಸಬೇಕು ಎಂಬ ಉದ್ದೇಶವಿದೆ. ಕ್ಷೇತ್ರದ ಜನತೆಯ ಮನವೊಲಿಸಿ ರೈಯವರ ವಿಜಯ ಪತಾಕೆ ಮತ್ತೊಮ್ಮೆ ಹಾರುವಂತೆ ಮಾಡಬೇಕು ಎಂದು ಶ್ರೀಧರ ಶೆಟ್ಟಿ ಹೇಳಿದರು. ರೈಗಳು ಅಧಿಕಾರದಲ್ಲಿದ್ದಾಗ ಸಾಕಷ್ಟು ಪ್ರಗತಿ ಕಾರ್ಯಗಳನ್ನು ಮಾಡಿದ್ದಾರೆ. ಕ್ಷೇತ್ರಕ್ಕಾಗಿ ಅವರ ಕೊಡುಗೆಗಳನ್ನು ಸ್ಮರಿಸಿಕೊಂಡು ಜನತೆ ಮತದಾನ ಮಾಡಬೇಕು. ಅವರಂತಹ ದೂರದೃಷ್ಟಿಯುಳ್ಳ ನಾಯಕರು ನಮಗೆ ನಾಯಕರಾದರೆ ಮಾತ್ರ ಕ್ಷೇತ್ರದ ಅಭಿವೃದ್ಧಿ ಸಾಧ್ಯ ಎಂದು ದಾಮೋದರ…
ಸಿದ್ಧಕಟ್ಟೆಯಲ್ಲಿ ಬಿಜೆಪಿಯ ಬೃಹತ್ ರೋಡ್ ಶೋ ಬಂಟ್ವಾಳ: ಸಿದ್ದಕಟ್ಟೆ ಚಚ್೯ ಬಳಿಯಿಂದ ಪೇಟೆಯವರೆಗೆ ಬಂಟ್ವಾಳ ಬಿಜೆಪಿ ಅಭ್ಯರ್ಥಿ,ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರು ಬುಧವಾರ ಸಂಜೆ ಬೃಹತ್ ರೋಡ್ ಶೋ ನಡೆಸಿ ಮತಯಾಚನೆಗೈದರು.ಸಹಸ್ರಾರು ಕಾರ್ಯಕರ್ತರೊಂದಿಗೆ ಸಿದ್ದಕಟ್ಟೆಯ ಹೆದ್ದಾರಿಯಲ್ಲಿನ ಪ್ರತಿ ಮಳಿಗೆಗಳು,ರಿಕ್ಷಾಚಾಲಕರು,ಸಾರ್ವಜನಿಕರನ್ನು ಭೇಟಿಯಾಗಿ ಮತಯಾಚಿಸಿದರು.ಬಂಟ್ವಾಳ ಮಂಡಲ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ,ಪ್ರ.ಕಾರ್ಯಡೊಂಬಯ ಅರಳ,ರವೀಶ್ ಶೆಟ್ಟಿ,ಕೇರಳರಾಜ್ಯದ ಬಿಜೆಪಿ ಖಜಾಂಚಿ ಕೃಷ್ಣದಾಸ್,ಪಾಲಕ್ಕಾಡು ಬಿಜೆಪಿ ಜಿಲ್ಲಾಧ್ಯಕ್ಷ ಹರಿದಾಸ್,ಕಿಯೋನಿಕ್ಸ್ ನಿಗಮದ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ,ಪ್ರಭಾರಿ ರವಿಶಂಕರ್ ಮಿಜಾರ್,ಸಂಗಬೆಟ್ಟು ಗ್ರಾ.ಪಂ.ಅಧ್ಯಕ್ಷಸತೀಶ್ ಪೂಜಾರಿ ಅಳಕೆ, ಕುಕ್ಕಿಪಾಡಿಗ್ರಾ.ಪಂ.ಅಧ್ಯಕ್ಷೆ ಸುಜಾತಪಕ್ಷದ ಪ್ರಮುಖರಾದ ದೇವದಾಸ ಶೆಟ್ಟಿ, ಸುಲೋಚನಾ ಜಿ.ಕೆ.ಭಟ್,ಮಾಧವ ಮಾವೆ,ಪ್ರಭಾಕರ ಪ್ರಭು,ಪುರುಷೋತ್ತಮ ಶೆಟ್ಟಿ ವಾಮದಪದವು,ರಮಾನಾಥ ರಾಯಿ, ಉಮೇಶ್ ಗೌಡ,ರಂಜಿತ್ ಮೈರ,ರತ್ನಕುಮಾರ ಚೌಟ,ಹರೀಶ್ ಆಚಾರ್ಯ, ಮಂದಾರತಿ ಶೆಟ್ಟಿ,ಸಂದೇಶ್ ಶೆಟ್ಟಿ,ದೇವರಾಜ್ ಸಾಲಿಯಾನ್,ರಾಜೇಶ್ ಶೆಟ್ಟಿ,ಸುನೀಲ್ ಶೆಟ್ಟಿಗಾರ್,ಸುರೇಶ್ ಕುಲಾಲ್,ವಿಶ್ವನಾಥ ಶೆಟ್ಟಿಗಾರ್,ಮಾಧವ ಶೆಟ್ಟಿಗಾರ್,ಮೋನಪ್ಪ ದೇವಸ್ಯ,ಪುರುಷೋತ್ತಮ ಸಾಲಿಯಾನ್ ನರಿಕೊಂಬು,ಭೋಜ ಶೆಟ್ಟಿಗಾರ್, ಯಶೋಧರ ಕರ್ಬೆಟ್ಟು,ದೇವಪ್ಪ ಗೌಡ,ಅಮ್ಮು ಕೋಟ್ಯಾನ್,ಓಬಯ್ಯ ಗೌಡ,ತೇಜಸ್ ಪೂಜಾರಿ,ನವೀನ್ ಪೂಜಾರಿ,ಸುರೇಶ್ ಅಂಚನ್,ಶೇಖರ ಶೆಟ್ಟಿ ಬದ್ಯಾರ್,ರತ್ನಾಕರ ಮದಂಗೋಡಿ,ಲಿಂಗಪ್ಪ ಪೂಜಾರಿ,ಸಂಜೀವ ಶೆಟ್ಟಿಮದಂಗೋಡಿ,ರಶ್ಮಿತ್ ಶೆಟ್ಟಿ,ದಿನೇಶ್ ಸುವರ್ಣ ರಾಯಿ, ವೀರೇಂದ್ರ…
ಧರ್ಮಾಧಿಕಾರಿಗಳ ಆಶೀರ್ವಾದ ಪಡೆದ ರಾಜೇಶ್ ನಾಯ್ಕ್ ಬಂಟ್ವಾಳ: ಬೆಳ್ತಂಗಡಿ ತಾಲೂಕಿನ ಲಾಯಿಲದ ವೆಂಕಟರಮಣ ದೇವಸ್ಥಾನಕ್ಕೆ ಬಂಟ್ವಾಳ ಕ್ಷೇತ್ರ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಭೇಟಿ ನೀಡಿ ಕಾಶಿಮಠಾಧಿಪತಿ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ಆಶೀರ್ವಾದ ಪಡೆದರು. ಬಳಿಕ ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಧರ್ಮಾಧಿಕಾರಿ ಡಾ. ಡಿ. ವಿರೇಂದ್ರ ಹೆಗ್ಗಡೆಯವರೊಂದಿಗೆ ಮಾತುಕತೆ ನಡೆಸಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಬಂಟ್ವಾಳ ಪುರಸಭಾ ಸದಸ್ಯ ಎ.ಗೋವಿಂದ ಪ್ರಭು , ಬಿಜೆಪಿ ಬಂಟ್ವಾಳ ಕ್ಷೇತ್ರ ಸಮಿತಿ ಅಧ್ಯಕ್ಷ ದೇವಪ್ಪ ಪೂಜಾರಿ, ಬಿಜೆಪಿ ಪ್ರಮುಖರಾದ ಉದಯಕುಮಾರ್ ರಾವ್ ಮತ್ತಿತರರು ಉಪಸ್ಥಿತರಿದ್ದರು. Advertisement Advertisement
https://youtu.be/T1qMZBQI-Sc ಅಂಗನವಾಡಿ ಕಾರ್ಯಕರ್ತೆಯ ಅಮಾನತು ಆದೇಶ ಹಿಂಪಡೆಯಲು ವಾರದ ಗಡುವು ಬಂಟ್ವಾಳ: ಬಿಎಲ್ಒ ಆಗಿ ಕಾರ್ಯ ನಿರ್ವಹಿಸಿಲ್ಲ ಎಂಬ ಕಾರಣಕ್ಕೆ ಬಂಟ್ವಾಳತಾಲೂಕಿನ ನಾವೂರು ಗ್ರಾಮದ ಫರ್ಲಾ ಅಂಗನವಾಡಿ ಕಾರ್ಯಕರ್ತೆ ಲತಾ ಅವರನ್ನು ಹುದ್ದೆಯಿಂದ ಅಮಾನತು ಮಾಡಿ ಜಿಲ್ಲಾಧಿಕಾರಿಯವರು ಹೊರಡಿಸಿರುವ ಆದೇಶವನ್ನು ರದ್ದು ಪಡಿಸಿ ಅವರನ್ನು ಮತ್ತೆ ಹುದ್ದೆಯಲ್ಲಿ ಮುಂದುವರಿಸಲು ಅವಕಾಶ ಕಲ್ಪಿಸಲು ಬಂಟ್ವಾಳ ತಾಲೂಕು ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘ ವಾರದ ಗಡುವು ನೀಡಿದೆ.ಅಂಗನವಾಡಿ ಕಾರ್ಯಕರ್ತೆ ಲತಾ ಅವರಿಗೆ ಉದೇಶಪೂರ್ವಕವಾಗಿ ಆಗಿರುವ ಅನ್ಯಾಯದ ವಿರುದ್ದ ರಾಜ್ಯ ಹಾಗೂ ಜಿಲ್ಲಾ ಸಂಘಟನೆಯೂ ಬೆಂಬಲ ವ್ಯಕ್ಯಪಡಿಸಿದ್ದು ಜಿಲ್ಲಾಧಿಕಾರಿಯವರು ಈ ಬಗ್ಗೆ ಪರಿಶೀಲನೆ ನಡೆಸಿ ಒಂದು ವಾರದೊಳಗಾಗಿ ಅಮಾನತು ಆದೇಶವನ್ನು ಹಿಂಪಡೆಯದೇ ಇದ್ದಲ್ಲಿ ರಾಜ್ಯದಲ್ಲಿ ಬಿಎಲ್ಓ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಬಿಎಲ್ಓ ಹುದ್ದೆಗೆ ಸಾಮೂಹಿಕ ರಾಜಿನಾಮೆ ನೀಡುವುದಾಗಿ ಎಚ್ಚರಿಸಿದ್ದಾರೆ. ಸೋಮವಾರ ಬಿ.ಸಿ.ರೋಡಿನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಸಂಘದ ಅಧ್ಯಕ್ಷೆ ವಿಜಯವಾಣಿ ಶೆಟ್ಟಿ ಅವರು ಮಾಹಿತಿ ನೀಡಿ ಲತಾ ಅವರು ಬಿಎಲ್ ಒ…
ಬಂಟ್ವಾಳ ಕ್ಷೇತ್ರವನ್ನು ಗೆಲ್ಲುವ ವಾತವರಣ ಹಾಗೂ ಅವಕಾಶ ಕಾಂಗ್ರೆಸ್ಗೆ ಇದೆ – ಅಶ್ವನಿ ಕುಮಾರ್ ರೈ ಬಂಟ್ವಾಳ: ನಮ್ಮ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟ ಆಗಬೇಕಾದರೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕು ಎಂದು ನ್ಯಾಯವಾದಿ, ಕೆಪಿಸಿಸಿ ಮಾಜಿ ಸದಸ್ಯ ಅಶ್ವನಿ ಕುಮಾರ್ ರೈ ಹೇಳಿದರು.ಬಂಟ್ವಾಳದ ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸುಳ್ಳು ಪ್ರಚಾರ ಮಾಡಿ ಅಧಿಕಾರಕ್ಕೆ ಬರುವ ಬಿಜೆಪಿಯ ಪ್ರಯತ್ನಕ್ಕೆ ತಿಲಂಜಲಿ ನೀಡ ಬೇಕು, ಜನರು ಯಾವಾಗಲೂ ಮೂರ್ಖರಾಗುವುದಿಲ್ಲ ಎಂದ ಅವರು ಕಾಂಗ್ರೆಸ್ ತಾನು ನೀಡಿದ ಭರವಸೆಯಿಂದ ಎಂದೂ ಹಿಂದೆ ಸರಿದಿಲ್ಲ, ಆರ್ಥಿಕತೆಯನ್ನು ಹೇಗೆ ನಿರ್ವಹಣೆ ಮಾಡಬೇಕು ಎನ್ನುವುದು ಕಾಂಗ್ರೆಸ್ಗೆ ತಿಳಿದಿದೆ. ಪ್ರಸ್ತುತ ಬಂಟ್ವಾಳ ಕ್ಷೇತ್ರವನ್ನು ಗೆಲ್ಲುವ ವಾತವರಣ ಹಾಗೂ ಅವಕಾಶ ಕಾಂಗ್ರೆಸ್ ಪಕ್ಷಕ್ಕೆ ಇದ್ದು ಜನತೆ ಆಶೀರ್ವಾದ ಮಾಡುತ್ತಾರೆ ಎಂದು ತಿಳಿಸಿದರು. Advertisement ಮಾಜಿ ಸಚಿವ ಬಿ.ರಮಾನಾಥ ರೈ ತನ್ನನ್ನು ಆಯ್ಕೆ ಮಾಡಿದ ಮತದಾರರಿಗೋಸ್ಕರ ಸಾಕಷ್ಟು ಕೆಲಸಗಳನ್ನು ಮಾಡಿದ್ದು ಬಂಟ್ವಾಳದ ಸರ್ವಾಂಗೀಣ ಅಭಿವೃದ್ಧಿಗೆ ಕಾರಣರಾಗಿದ್ದಾರೆ.…
ಬ್ರಹ್ಮಕಲಶೋತ್ಸವಕ್ಕೆ ಸಜ್ಜಾಗುತ್ತಿದೆಬಂಟ್ವಾಳ ತಾಲೂಕಿನ ಏಕೈಕ ಆಲಡೆಸಿರಿಗುಂಡದಪಾಡಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನ
ಬ್ರಹ್ಮಕಲಶೋತ್ಸವಕ್ಕೆ ಸಜ್ಜಾಗುತ್ತಿದೆಬಂಟ್ವಾಳ ತಾಲೂಕಿನ ಏಕೈಕ ಆಲಡೆಸಿರಿಗುಂಡದಪಾಡಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನ ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮೂಡುಪಡುಕೋಡಿ ಗ್ರಾಮದ ಪ್ರಕೃತಿ ರಮಣೀಯ ಸುಂದರ ಪರಿಸರದಲ್ಲಿರುವ ಸಿರಿಗುಂಡದಪಾಡಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನವು ಬ್ರಹ್ಮಕಲಶೋತ್ಸವಕ್ಕೆ ಸಜ್ಜಾಗುತ್ತಿದ್ದು ಊರಪರವೂರ ಭಕ್ತ ಜನತೆ ಹಾಗೂ ಕುಮಾರ-ಸಿರಿ ಆರಾಧಕರ ವಲಯದಲ್ಲಿ ಸಂಭ್ರಮದ ವಾತಾವರಣ ಸೃಷ್ಠಿಯಾಗಿದೆ. 2023ರ ಎಪ್ರಿಲ್ 27ರಿಂದ 29ರ ತನಕ ಬ್ರಹ್ಮಕಲಶೋತ್ಸವವು ವಿವಿಧ ವೈಧಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅರ್ಥಪೂರ್ಣವಾಗಿ ಸಂಪನ್ನಗೊಳ್ಳಲಿದ್ದು ಇದಕ್ಕಾಗಿ ವ್ಯಾಪಕ ಸಿದ್ಧತೆ ನಡೆಯುತ್ತಿದೆ. ಅಭಿವೃದ್ಧಿ ಯೋಜನೆಗಳು: ಬ್ರಹ್ಮಕಲಶೋತ್ಸವದ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ಶ್ರೀ ನಾಗದೇವರು, ಶ್ರೀ ರಕ್ತೇಶ್ವರೀ, ಶ್ರೀ ನಂದಿಗೋಣ, ಕುಮಾರ, ಸಿರಿ, ಅಬ್ಬಗ-ದಾರಗ ಶಕ್ತಿಗಳಿಗೆ ನೂತನ ಸಾನ್ನಿಧ್ಯಗಳ ಪುನರ್ ನಿರ್ಮಾಣ, ಸುತ್ತುಪೌಳಿ-ಮುಖಮಂಟಪ-ಪ್ರವೇಶ ಧ್ವಾರ-ಮೇಲ್ಛಾವಣಿ-ಶೌಚಾಲಯ-ಕಚೇರಿ ಮತ್ತು ಪಾಕಸಾಲೆಗಳ ನಿರ್ಮಾಣ, ಅಂಗಣಕ್ಕೆ ಗ್ರಾನೈಟ್ ಅಳವಡಿಕೆ ಸಹಿತ ಸುಮಾರು 25ಲಕ್ಷ ರೂಪಾಯಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳು ಅನುಷ್ಠಾನಗೊಳ್ಳುತ್ತಿದೆ. ಜೀಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವದ ಯಶಸ್ವಿಗಾಗಿ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಶ್ರಮದಾನದ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.…
ಬಂಟ್ವಾಳ ತಾಲೂಕು ಬಂಟರ ಸಂಘದ ವಾರ್ಷಿಕೋತ್ಸವ ಬಂಟ್ವಾಳ: ಬಂಟ ಸಮಾಜದ ಸಂಪ್ರದಾಯವನ್ನು ಉಳಿಸಿಕೊಂಡು ಹೋಗುವ ಕಾರ್ಯ ಅತಿ ಅಗತ್ಯವಾಗಿದ್ದು, ಗುತ್ತು ಮನೆತನದ ಗೌರವವನ್ನು ಉಳಿಸಿಕೊಂಡು ಬರುವ ಜವಾಬ್ದಾರಿ ಇದೆ. ಜಾಗತಿಕ ಬಂಟರ ಸಂಘದ ವತಿಯಿಂದ ಮನೆ ಕೊಡುವ ಕಾರ್ಯ, ಮಕ್ಕಳ ಶಿಕ್ಷಣ, ಆರೋಗ್ಯ, ವಿವಾಹಕ್ಕೆ ನೆರವು ನೀಡುವ ಕಾರ್ಯ ನಡೆಯುತ್ತಿದೆ ಎಂದು ಜಾಗತಿಕ ಬಂಟರ ಸಂಘದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಹೇಳಿದರು. Space for advertisement ಅವರು ತುಂಬೆ ವಳವೂರಿನ ಬಂಟವಾಳದ ಬಂಟರ ಭವನದಲ್ಲಿ ನಡೆದ ಬಂಟ್ವಾಳ ತಾಲೂಕು ಬಂಟರ ಸಂಘದ ವಾರ್ಷಿಕೋತ್ಸವದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಬಂಟ್ವಾಳ ಬಂಟರ ಭವನ ನಮ್ಮ ದೊಡ್ಡ ಶಕ್ತಿಯಾಗಿ ಕಂಗೊಳಿಸುತ್ತಿದೆ ಎಂದರು.ಅಧ್ಯಕ್ಷತೆ ವಹಿಸಿದ್ದ ಬೆಂಗಳೂರಿನ ಉದ್ಯಮಿ ಏರ್ಯ ಬಾಲಕೃಷ್ಣ ಹೆಗ್ಡೆ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ಅರಿಯುವ ಕಾರ್ಯ ಮುಖ್ಯವಾಗಿದ್ದು, ಮಕ್ಕಳಿಗೆ ಅದನ್ನು ಕಲಿಸುವ ಕಾರ್ಯ ಅತಿ ಅಗತ್ಯ ಎಂದರು. ಬಂಟ್ವಾಳ ತಾಲೂಕು ಬಂಟರ ಸಂಘದ ವಾರ್ಷಿಕೋತ್ಸವ ಹುಬ್ಬಳ್ಳಿ…
ಬೆಂಜನಪದವು ಶ್ರೀ ಭದ್ರಕಾಳಿ ದೇವಸ್ಥಾನದಲ್ಲಿ ಮೇ.20 ರಿಂದ 25 ರವರೆಗೆ ನಡೆಯಲಿರುವ ಪುನರ್ ಪ್ರತಿಷ್ಠಾ ಬ್ರಹ್ಮಕಲಶದ ಕಾರ್ಯಾಲಯ ಉದ್ಘಾಟನೆ ಹಾಗೂ ಬ್ರಹ್ಮಕಲಶದ ಆಮಂತ್ರಣಪತ್ರ ಬಿಡುಗಡೆ ಬಂಟ್ವಾಳ: ಭಕ್ತರಿದ್ದರೆ ಮಾತ್ರ ದೇವರು, ಗುರುಹಿರಿಯರ ಆಶೀರ್ವಾದವಿದ್ದಾಗ ಮಾತ್ರ ದೇವರು ಒಲಿಯುತ್ತಾರೆ ಎಂದು ಮಾಣಿಲ ಶ್ರೀಧಾಮದ ಶ್ರೀಮೋಹನದಾಸ ಪರಮಹಂಸ ಸ್ವಾಮೀಜಿ ನುಡಿದರು.ಬಂಟ್ವಾಳ ತಾಲೂಕಿನ ಬೆಂಜನಪದವು ಶ್ರೀ ಭದ್ರಕಾಳಿ ದೇವಸ್ಥಾನದಲ್ಲಿ ಮೇ.20 ರಿಂದ 25ರವರೆಗೆ ನಡೆಯಲಿರುವ ಪುನರ್ ಪ್ರತಿಷ್ಟಾ ಬ್ರಹ್ಮಕಲಶದ ಪ್ರಯುಕ್ತ ಭಾನುವಾರ ದೇವಳದ ವಠಾರದಲ್ಲಿ ಕಾರ್ಯಾಲಯವನ್ನು ಉದ್ಘಾಟಿಸಿ ಬಳಿಕ ಬ್ರಹ್ಮಕಲಶದ ಆಮಂತ್ರಣಪತ್ರ ಬಿಡುಗಡೆಗೊಳಿಸಿ ಶ್ರೀಗಳು ಆಶೀರ್ವಚನ ನೀಡಿದರು. Advertisement ಮಧ್ಯಮ ವರ್ಗ ಮತ್ತು ಬಡವರೇ ಪ್ರಸಕ್ತ ದಿನಗಳಲ್ಲಿ ದೇವಸ್ಥಾನ, ದೈವಸ್ಥಾನಗಳ ಪುನರ್ ನಿರ್ಮಾಣದಲ್ಲಿ ಮುಂಚೂಣಿಯಲ್ಲಿದ್ದು, ತುಳುನಾಡಿನಲ್ಲಿ ಅಜೀರ್ಣಾವಸ್ಥೆಯಲ್ಲಿದ್ದ ದೇವಸ್ಥಾನಗಳು ಹೆಚ್ಚು, ಹೆಚ್ಚು ಬ್ರಹ್ಮಕಲಶೋತ್ಸವಗಳು ನಡೆಯುತ್ತಿರುವುದು ಉತ್ತಮ ಬೆಳವಣಿಗೆ ಎಂದ ಶ್ರೀಗಳು ಭದ್ರಕಾಳಿ ದೇವಿ ಕರುಣಾಮಯಿಯಾಗಿದ್ದು ಇಲ್ಲಿನ ಬ್ರಹ್ಮಕಲಶವವು ಕೂಡ ಅತ್ಯಂತ ಯಶಸ್ವಿಯಾಗಿ ನಡೆಯಲಿದೆ ಎಂದರು. ಪುನರ್ನಿರ್ಮಾಣ ಸಮಿತಿ ಪ್ರಧಾನ ಸಂಚಾಲಕ ತೇವು ತಾರನಾಥ ಕೊಟ್ಟಾರಿ ಅವರು…








