Author: admin

ಸಂಚಯಗಿರಿಯಲ್ಲಿ ಅನಾವರಣಗೊಂಡಿತು ಪುಟ್ಟ ಪ್ರತಿಭೆ-2023 ಕಾರ್ಯಕ್ರಮ, ನಾಗರಿಕ ಕ್ರಿಯಾ ಸಮಿತಿಯಿಂದ ಆಯೋಜನೆ ಬಂಟ್ವಾಳ: ನಾಗರಿಕ ಕ್ರಿಯಾ ಸಮಿತಿ ಸಂಚಯಗಿರಿ ಇದರ ಆಶ್ರಯದಲ್ಲಿ ಟೈನಿ ಟ್ಯಾಲೆಂಟ್ (ಪುಟ್ಟ ಪ್ರತಿಭೆ)- 2023 ಕಾರ್ಯಕ್ರಮ ಸಂಚಯಗಿರಿಯ ನರಸಿಂಹ ರಾಜ ಹೊಳ್ಳ ಅವರ ಮನೆಯ ಆವರಣದಲ್ಲಿ ಭಾನುವಾರ ನಡೆಯಿತು.ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಡಾ. ತುಕರಾಂ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭಅವರು ಮಾತನಾಡಿ ಹಿರಿಯರ ನಿರಂತರ ಪರಿಶ್ರಮದಿಂದ ಸಂಚಯಗಿರಿ ಎನ್ನುವ ಸುಂದರ ಪರಿಸರ ಮೂಡಿ ಬಂದಿದೆ. ಆರೋಗ್ಯಕರ ಆಲೋಚನೆಯಿಂಂದಾಗಿ ಸಾಮಾನ್ಯ ವ್ಯಕ್ತಿಯಾಗಿದ್ದ ಸುರೇಶ್ ಬಂಗೇರ ಅಸಾಮಾನ್ಯ ವ್ಯಕ್ತಿಯಾಗಿ ಮೂಡಿ ಬಂದಿದ್ದಾರೆ. ನಿಷ್ಕಲ್ಮಶವಾದ ಮುಗ್ದ ಮನಸ್ಸಿನ ಮಕ್ಕಳಿಗೆ ಆರೋಗ್ಯಕರ ವಾತವರಣ ನಿರ್ಮಿಸಿ ಅವರ ಪ್ರತಿಭೆಗೆ ಪೂರಕವಾದ ವ್ಯವಸ್ಥೆ ಕಲ್ಪಿಸುವಂತಹ ಈ ಕಾರ್ಯಕ್ರಮ ಅತ್ಯದ್ಭುತ ಚಿಂತನೆಯಾಗಿದೆ ಎಂದರು. ಬದುಕು ನಮ್ಮ ಕಣ್ಣ ಮುಂದೆಯೇ ಇದೆ, ಆದ್ದರಿಂದ ಕ್ರಿಯಾಶೀಲರಾಗಿ ಒಂದು ಕ್ಷಣವನ್ನು ವ್ಯರ್ಥ ಮಾಡದೆ ಬದುಕು ರೂಪಿಸಬೇಕು ಎಂದು ಮಕ್ಕಳಿಗೆ ಕಿವಿಮಾತು ಹೇಳಿದರು. Advertisement ಮುಖ್ಯ ಅತಿಥಿ…

Read More

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ : ಸಾಮೂಹಿಕ ವಿವಾಹ ನಿಶ್ಚಿತಾರ್ಥ ಬಂಟ್ವಾಳ: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ ವತಿಯಿಂದ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ಎ.೩೦ರಂದು ನಡೆಯಲಿರುವ ೧೫ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭಕ್ಕೆ ಪೂರ್ವಭಾವಿಯಾಗಿ ವಿವಾಹದ ಸಾಮೂಹಿಕ ನಿಶ್ಚಿತಾರ್ಥ ಕಾರ್ಯಕ್ರಮ ಪುಂಜಾಲಕಟ್ಟೆ ಬಂಗ್ಲೆಮೈದಾನದ ಸಭಾಂಗಣದಲ್ಲಿ ರವಿವಾರ ನಡೆಯಿತು. Advertisement ಲಾಲ ಶ್ರೀ ರಾಘವೇಂದ್ರ ಪ್ರತಿಷ್ಠಾನದ ಕೋಶಾಽಕಾರಿ ವಸಂತ ಸುವರ್ಣ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ದುಂದು ವೆಚ್ಚದ ವಿವಾಹಗಳ ಬದಲಾಗಿ ಸಾಮೂಹಿಕ ವಿವಾಹ ಉತ್ತಮ ಕಾರ್ಯವಾಗಿದೆ. ದೀನ ದಲಿತರ ಬದುಕಿಗೆ ಶಕ್ತಿ ತುಂಬುವ ಇಂತಹ ಕಾರ್ಯಕ್ರಮ ಗಳನ್ನು ನಡೆಸುವ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಅಭಿನಂದಾರ್ಹರು ಎಂದು ಹೇಳಿದರು. ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ : ಸಾಮೂಹಿಕ ವಿವಾಹ ನಿಶ್ಚಿತಾರ್ಥ ಮುತ್ತೂರು ಶ್ರೀ ಸತ್ಯಸಾರಮಾನಿ ದೈವಸ್ಥಾನದ ಅರ್ಚಕ ಹರಿಯಪ್ಪ ಅವರು ಮಾತನಾಡಿ,ಭಾರತೀಯ ವಿವಾಹ ಪದ್ಧತಿ ಕುಟುಂಬ ಜೀವನದ ಭದ್ರ ಬುನಾದಿಯಾಗಿದೆ. ಇದು ಕುಟುಂಬದ ಹಾಗೂ ಸಮಾಜದ ನೆಮ್ಮದಿಯ ಸುವ್ಯವಸ್ಥೆಯಾಗಿದೆ ಎಂದರು.ಶ್ರೀ ಕ್ಷೇ.ಧ.ಗ್ರಾ.ಯೋಜನೆ…

Read More

ಬಂಟ್ವಾಳ: ಬೇಸಿಗೆ ಕಾಲದ ಮಹೋನ್ನತ ಮಾರಾಟದಂಗವಾಗಿ ಇಲ್ಲಿನ ಬಸ್ತಿ ಪಡ್ಪುವಿನಲ್ಲಿರುವ ಗೃಹಪಯೋಗಿ ವಸ್ತುಗಳ ಬೃಹತ್ ಮಾರಾಟ ಮಳಿಗೆ ಭದ್ರ ಹೋಂ ಅಪ್ಲೈಯೆನ್ಸಸ್ನಲ್ಲಿ ಹವಾನಿಯಂತ್ರಕ(ಎಸಿ), ಕೂಲರ್, ಸೀಲಿಂಗ್ ಫ್ಯಾನ್, ಟೇಬಲ್ ಫ್ಯಾನ್ ಗಳ ವಿಶೇಷ ಮಾರಾಟ ಆರಂಭ ಗೊಂಡಿದೆ.ಈ ಎಲ್ಲಾ ವಸ್ತುಗಳ ಖರೀದಿಯ ಮೇಲೆ ಆಕರ್ಷಕ ಗಿಫ್ಟ್ ಗಳು ಲಭ್ಯವಿದೆ.‌ ಗ್ರಾಹಕರಿಗೆ ಶೂನ್ಯ ಬಡ್ಡಿ ದರದಲ್ಲಿ ಮಾಸಿಕ ಕಂತಿನ ವ್ಯವಸ್ಥೆಯೂ ಇದೆ. ಗೃಹಪಯೋಗಿ ವಸ್ತುಗಳ ವಿಶಾಲವಾದ ಡಿಸ್ಪ್ಲೆ ಇಲ್ಲಿದ್ದು ಗ್ರಾಹಕರು ಸದುಪಯೋಗ ಪಡೆದುಕೊಳ್ಳುವಂತೆ ಸಂಸ್ಥೆಯ ಪ್ರಕಟಣೆ ತಿಳಿಸಿದೆ. Advertisement Advertisement

Read More

ಬಂಟ್ವಾಳ: ಸೂರಿಲ್ಲದೆ ಬಳಲುವ ಬಂಟ ಸಮುದಾಯಕ್ಕೆ ಆಸರೆಯಾಗುವಲ್ಲಿ ಇಂಟೆರ್ ನ್ಯಾಷನಲ್ ಬಂಟ್ಸ್ ವೆಲ್ ಫೇರ್ ಟ್ರಸ್ಟ್ (ರಿ) ಅವಿರತ ಶ್ರಮಿಸುತ್ತಿದೆ . ಫರಂಗಿಪೇಟೆ ವಲಯದ ಮನವಿಗೆ ಒಂದು ವರ್ಷದಲ್ಲಿ ಇನ್ನೊಂದು ಮನೆ ನಿರ್ಮಿಸಿ ಕೊಡುತ್ತೇವೆ ಎಂದು ಇಂಟರ್ ನ್ಯಾಷನಲ್ ಬಂಟ್ಸ್ ವೆಲ್ ಫೇರ್ ಟ್ರಸ್ಟ್ ನ ಸ್ಥಾಪಕ ಅಧ್ಯಕ್ಷ ಎ. ಸದಾನಂದ ಶೆಟ್ಟಿ ಹೇಳಿದರು.ಫರಂಗಿಪೇಟೆ ವಲಯ ಬಂಟರ ಸಂಘ ದ ಮನವಿ ಮೇರೆಗೆ ಇಂಟರ್ ನ್ಯಾಷನಲ್ ಬಂಟ್ಸ್ ವೆಲ್ ಫೇರ್ ಟ್ರಸ್ಟ್ (ರಿ) ವತಿಯಿಂದ 6 ಲಕ್ಷ ವೆಚ್ಚದ ಸದಾಶ್ರಯ ಮನೆಯನ್ನು ಕೊಟ್ಟಿಂಜ ಸುಗುಣ ಉಮೇಶ್ ಶೆಟ್ಟಿ ಯವರಿಗೆ ಹಸ್ತಾಂತರಿಸಿ ಮಾತನಾಡಿದರು. Advertisement ಈ ಸಂದರ್ಭ ದಲ್ಲಿ ಬಂಟ್ವಾಳ ತಾಲೂಕು ಬಂಟರ ಸಂಘದ ಅಧ್ಯಕ್ಷರಾದ ಚಂದ್ರಹಾಸ್ ಡಿ ಶೆಟ್ಟಿ , ಇಂಟೆರ್ ನ್ಯಾಷನಲ್ ಬಂಟ್ಸ್ ವೆಲ್ ಫೇರ್ ಟ್ರಸ್ಟ್ (ರಿ ) ನ ಉಪಾಧ್ಯಕ್ಷರಾದ ಸುರೇಶ್ಚಂದ್ರ ಶೆಟ್ಟಿ , ಕಾರ್ಯದರ್ಶಿ ರಾಜ್ ಗೋಪಾಲ ರೈ , ಯುವ ವಿಭಾಗದ ಗೌರವಾಧ್ಯಕ್ಷ ರಾದ…

Read More

ಬಂಟ್ವಾಳ: ಇಲ್ಲಿನ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಸಲ್ಲಿಕೆಯಾಗಿದ್ದ 8 ನಾಮಪತ್ರಗಳ ಪೈಕಿ 2 ನಾಮಪತ್ರ ತಿರಸ್ಕೃತ ಗೊಂಡಿದೆ.ಚುನಾವಣಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಾಮಪತ್ರ ಪರಿಶೀಲನೆ ನಡೆದಿದ್ದು ಈ ಸಂದರ್ಭ ಉತ್ತಮ ಪ್ರಜಾಕೀಯ ಪಕ್ಷದ ಅನೀಶ್ ಶೆಟ್ಟಿಯವರು 10 ಸೂಚಕರ ಬದಲಾಗಿ ಕೇವಲ 7 ಸೂಚಕರನ್ನು ಮಾತ್ರ ನೀಡಿದ್ದಾರೆ, ಪಕ್ಷೇತರ ಅಭ್ಯರ್ಥಿ ಬಿ.ಟಿ.ಕುಮಾರ್ ರವರು ನಾಮಪತ್ರ ಪೂರ್ಣವಾಗಿ ತುಂಬಿಸಿಲ್ಲ, ಠೇವಣಿ ಪಾವತಿಸಿಲ್ಲ, ಸೂಚಕರನ್ನು ನೀಡಿಲ್ಲ, ನಮೂನೆ 26 ತುಂಬಿಲ್ಲದ ಕಾರಣ ಈ ಎರಡು ನಾಮಪತ್ರಗಳು ತಿರಸ್ಕೃತಗೊಂಡಿವೆ. ಉಳಿದಂತೆ Advertisement ಭಾರತೀಯ ಜನತಾ ಪಾರ್ಟಿಯ ರಾಜೇಶ್ ನಾಯ್ಕ್ ಯು, ಸೋಶಿಯಲ್ ಡೆಮೋಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದ ಎಂ.ಇಲಿಯಾಸ್, ಸೋಶಿಯಲ್ ಡೆಮೋಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ದ (ಪಕ್ಷೇತರ ಅಭ್ಯರ್ಥಿ) ಅಬ್ದುಲ್ ಮಜೀದ್ ಖಾನ್, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ರಮಾನಾಥ ರೈ, ಜಾತ್ಯಾತೀತ ಜನತಾ ದಳದ ಪ್ರಕಾಶ್ ರಫಾಯಲ್ ಗೋಮ್ಸ್, ಆಮ್ ಆದ್ಮಿ ಪಕ್ಷದ ಪುರುಷೋತ್ತಮ ರವರ ನಾಮಪತ್ರ ಅಂಗೀಕೃತವಾಗಿದೆ. Advertisement

Read More

ಕಾರ್ಮೆಲ್ ಸಂಯುಕ್ತ ಪದವಿ ಪೂರ್ವ ಕಾಲೇಜಿಗೆ ಶೇ.99.72 ಫಲಿತಾಂಶ ಬಂಟ್ವಾಳ: ಮೊಡಂಕಾಪುವಿನ ಕಾರ್ಮೆಲ್ ಸಂಯುಕ್ತ ಪದವಿ ಪೂರ್ವ ಕಾಲೇಜು ಇಲ್ಲಿ ಈ ಭಾರಿ ದ್ವಿತೀಯ ಪಿಯುಸಿ ಪರೀಕ್ಷೆಗೆ 358 ವಿದ್ಯಾರ್ಥಿಗಳು ಹಾಜರಾಗಿದ್ದು 115ಮಂದಿ ವಿಶಿಷ್ಟ ಶ್ರೇಣಿ, 215 ಮಂದಿ ಪ್ರಥಮ ಶ್ರೇಣಿ, 26 ಮಂದಿ ದ್ವಿತೀಯ ಶ್ರೇಣಿ ಹಾಗೂ ಒರ್ವ ತೃತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿ ಒಟ್ಟು 99.72 ಶೇ. ಫಲಿತಾಂಶ ದಾಖಲಾಗಿದೆ. Advertisement ಕಲಾ ವಿಭಾಗದಲ್ಲಿ ಶೇ. 100, ವಾಣಿಜ್ಯ ವಿಭಾಗದಲ್ಲಿ ಶೇ. 99.5, ವಿಜ್ಞಾನ ವಿಭಾಗದಲ್ಲಿ ಶೇ. 100 ಫಲಿತಾಂಶ ಬಂದಿದೆ.ಕಲಾ ವಿಭಾಗದಲ್ಲಿ ಸಾಕ್ಷಿ ಆನಂದ ಸಾಲ್ಯಾನ್ 560 ಅಂಕ, ವಾಣಿಜ್ಯ ವಿಭಾಗದಲ್ಲಿ ಗೌತಮಿ 586 ಅಂಕ, ವಿಜ್ಞಾನ ವಿಭಾಗದಲ್ಲಿ ಸಮಂತಾ ಅಥೆನಾ ಡಿಸೋಜಾ 584 ಅಂಕ ಪಡೆದು ಕಾಲೇಜಿಗೆ ಪ್ರಥಮ ಸ್ಥಾನಿಗಳಾಗಿದ್ದಾರೆ. Advertisement

Read More

ಬೆಂಗಳೂರು: 2022-23ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಯ ಫಲಿತಾಂಶವು ಪ್ರಕಟವಾಗಿದೆ. 2022-23ನೆ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಮಾ.9ರಿಂದ 29ರವರೆಗೆ ನಡೆಸಲಾಗಿತ್ತು. ಒಟ್ಟು ದ್ವಿತೀಯ ಪಿಯುಸಿಯಲ್ಲಿ 7.27 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದರು. ಇದೀಗ ಉತ್ತರ ಪತ್ರಿಕೆ ಮೌಲ್ಯಮಾಪನವೂ ಮುಗಿದಿದ್ದು, ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಶೇ 74.64 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಲ್ಲಿ 61.22 ಶೇ ವಿದ್ಯಾರ್ಥಿಗಳು, ವಿಜ್ಞಾನ ವಿಭಾಗದಲ್ಲಿ ಶೇ.85.71 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ ಶೇ.75.89 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. Advertisement ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ಉಡುಪಿ ದ್ವಿತೀಯ, ಕೊಡಗು ತೃತೀಯ ಮತ್ತು ಉತ್ತರ ಕನ್ನಡ ನಾಲ್ಕನೇ ಸ್ಥಾನ ಪಡೆದಿದೆ. ಯಾದಗಿರಿ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ. Advertisement ಫಲಿತಾಂಶವನ್ನು ಈ ಲಿಂಕ್‌ ನಲ್ಲಿ ವೀಕ್ಷಿಸಬಹುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಎಂದು ತಿಳಿಸಿದೆ. ದ್ವಿತೀಯ ಪಿಯುಸಿ ಫಲಿತಾಂಶ ಪರಿಶೀಲಿಸುವುದು ಹೇಗೆ?…

Read More

ಅನಂತಾಡಿ ಗ್ರಾಮದಲ್ಲಿ ರಾಜೇಶ್ ನಾಯ್ಕ್ ಮತಯಾಚನೆ ಬಂಟ್ವಾಳ: ಕ್ಷೇತ್ರದ ಜನರ ಪ್ರತಿಯೊಂದು ಸಮಸ್ಯೆಗಳಿಗೆ ನಿರಂತರವಾಗಿ ಸ್ಪಂದಿಸುವುದರ ಜೊತೆಗೆ ಸರಕಾರದಿಂದ ಸಿಗುವ ಯೋಜನೆಗಳನ್ನು ಅನುಷ್ಠಾನಕ್ಕೆ ತರುವ ಕೆಲಸವನ್ನು ಬದ್ಧತೆಯಿಂದ ಮಾಡಿದ್ದು, ಶಾಂತಿ ಮತ್ತು ಅಭಿವೃದ್ಧಿಗೆ ಹೆಚ್ಚಿನ ಅಧ್ಯತೆ ನೀಡಿದ್ದೇನೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಿಳಿಸಿದರು.ಅವರು ಅನಂತಾಡಿ ಗ್ರಾಮದ ವಿವಿಧ ಭಾಗಗಳಿಗೆ ಸಂಚರಿಸಿ,ಪ್ರಮುಖ ಮನೆಗಳಿಗೆ ಬೇಟಿ ನೀಡಿ ಮತಯಾಚನೆ ಮಾಡಿದರು. Advertisement ಬಿಜೆಪಿ ಆಡಳಿತಕ್ಕೆ ಬರುವ ಮೊದಲು ರಾಜ್ಯದಲ್ಲಿ ಮತ್ತು ಬಂಟ್ವಾಳ ಕ್ಷೇತ್ರದ ಸ್ಥಿತಿಗತಿಯ ಬಗ್ಗೆ ಎಲ್ಲರಿಗೂ ತಿಳಿದಿರುವಂತ ವಿಚಾರ, ಆದರೆ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕದ ದಿನಗಳನ್ನು ಅವಲೋಕನ ಮಾಡಬೇಕಾದ ಕಾಲಘಟ್ಟದಲ್ಲಿ ನಾವಿದ್ದೇವೆ ಎಂದು ಅವರು ತಿಳಿಸಿದರು. ಇದರ ಜೊತೆಯಲ್ಲಿ ಪ್ರತಿ ಮನೆಯ ತಾಯಂದಿರಿಗೆ ನೆಮ್ಮದಿಯಿಂದ ಜೀವನ ಮಾಡುವಂತಾಗಲು , ರಾಜ್ಯದಲ್ಲಿ ಮತ್ತು ಬಂಟ್ವಾಳ ಕ್ಷೇತ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕು ಎಂದು ಅವರು ತಿಳಿಸಿದರು. ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಮಾಧವ ಮಾವೆ ಮಾತನಾಡಿ, ಧರ್ಮ ಉಳಿಯಬೇಕು, ನ್ಯಾಯ ಸಿಗಬೇಕು…

Read More

ಬಂಟ್ವಾಳ: ಮನೆಯೊಂದರ ಮಹಡಿ ಮೇಲೆ ಪೈಪ್‌ಲೈನ್ ಅಳವಡಿಕೆ ಕಾರ್ಯ ನಿರ್ವಹಿಸುತ್ತಿದ್ದ ಕಾರ್ಮಿಕರೋರ್ವರು ಆಯತಪ್ಪಿ ಕೆಳಕ್ಕೆ ಬಿದ್ದು ಮೃತಪಟ್ಟ ಘಟನೆ ಗುರುವಾರ ಕುಕ್ಕಿಪಾಡಿ ಗ್ರಾ.ಪಂ.ವ್ಯಾಪ್ತಿಯ ಮಾಡಮೆ ಎಂಬಲ್ಲಿ ಸಂಭವಿಸಿದೆ.ಸಿದ್ದಕಟ್ಟೆ ದೇವಸ ನಿವಾಸಿ ಬಾಲಕೃಷ್ಣ ಆಚಾರ್ಯ ಅವರ ಪುತ್ರ ದುರ್ಗಾಪ್ರಸಾದ್(32)ಅವರು ಮೃತಪಟ್ಟವರಾಗಿದ್ದಾರೆ. ಅವರು ಮಾಡಮೆಯ ತೋಮಸ್ ಲೋಬೋ ಅವರ ಮನೆಯ ನೀರಿನ ಟ್ಯಾಂಕ್‌ಗಾಗಿ ಮಧ್ಯಾಹ್ನ ಪೈಪ್‌ಲೈನ್ ಅಳವಡಿಸುತ್ತಿದ್ದಾಗ ಆಕಸ್ಮಿಕವಾಗಿ ಕೆಳಕ್ಕೆ ಬಿದ್ದಿದ್ದು, ಅವರ ತಲೆಗೆ ಗಂಭೀರ ಏಟಾಗಿತ್ತು. ತತ್‌ಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದರು.ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. Advertisement ದುರ್ಗಾಪ್ರಸಾದ್ ಅವರು ಬಾಲಕೃಷ್ಣ ದಂಪತಿಯ ಆರು ಮಂದಿ ಮಕ್ಕಳಲ್ಲಿ ಇಬ್ಬರು ಪುತ್ರರಲ್ಲಿ ಹಿರಿಯವನಾಗಿದ್ದು, ಮನೆಗೆ ಆಧಾರವಾಗಿದ್ದರು.ಅವಿವಾಹಿತರಾಗಿದ್ದ ಅವರು ಬಿಜೆಪಿ ಹಾಗೂ ಬಜರಂಗದಳ ಕಾರ್ಯಕರ್ತರಾಗಿದ್ದರು. Advertisement

Read More

ಬಂಟ್ವಾಳ: ಕ್ರಾಂಗ್ರೆಸ್ ಪಕ್ಷದ ಅಭ್ಯರ್ಥಿ, ಮಾಜಿ ಸಚಿವ ಬಿ.ರಮನಾಥ ರೈ ಅವರು ಗುರುವಾರ ನಾಮಪತ್ರ ಸಲ್ಲಿಸಿದರು. ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನ, ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬ ದೇವಸ್ಥಾನ ಹಾಗೂ ಬಂಟ್ವಾಳದ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಮೊಡಂಕಾಪು ಚರ್ಚ್, ಮಿತ್ತಬೈಲು ಮೊಯ್ಯುದ್ದೀನ್ ಜುಮ್ಮಾಮಸೀದಿ, ಕೆಳಗಿನ ಪೇಟೆ ಜುಮ್ಮಾ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದ ಸಭಾಂಗಣದ ಬಳಿಯಿಂದ ಸಹಸ್ರ ಸಂಖ್ಯೆಯಲ್ಲಿ ಪಕ್ಷದ ಬೆಂಬಲಿಗರು, ಕಾರ್ಯಕರ್ತರು ಹಾಗೂ ಅಭಿಮಾನಿಗಳೊಂದಿಗೆ ಮೆರವಣಿಗೆಯಲ್ಲಿ ಆಗಮಿಸಿ ಬಿ.ಸಿ.ರೋಡಿನ ತಾಲೂಕು ಆಡಳಿತ ಸೌಧದಲ್ಲಿರುವ ಚುನಾವಣಾಧಿಕಾರಿ ಅಭಿದ್ ಗಡ್ಯಾಲ್ ಅವರಿಗೆ ತನ್ನ ಉಮೇದುವಾರಿಕೆ ಸಲ್ಲಿಸಿದರು. ಸಹಸ್ರಾರು ಸಂಖ್ಯೆಯಲ್ಲಿ ಜೊತೆಯಾದ ಕಾರ್ಯಕರ್ತರು:ಮಾಜಿ ಸಚಿವ ಬಿ.ರಮನಾಥ ರೈ ನಾಮಪತ್ರ ಸಲ್ಲಿಕೆಯ ವೇಳೆ ಸಹಸ್ರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಪಕ್ಷದ ಧ್ವಜ ಹಿಡಿದು ಕೊಂಡು ಮೆರವಣಿಗೆಯಲ್ಲಿ ಹೆಜ್ಜೆಹಾಕಿದರು. ಬಂಟ್ವಾಳದ ರಥಬೀದಿಯಲ್ಲಿ ಆರಂಭಗೊಂಡ ಮೆರವಣಿಗೆ ಬಿ.ಸಿ.ರೋಡಿನ ಮುಖ್ಯ ರಸ್ತೆಯಲ್ಲಿ ಆಗಮಿಸಿ ರಕ್ತೇಶ್ವರೀ ದೇವಸ್ಥಾನದ ಬಳಿ ಸಮಾಪನಗೊಂಡಿತು.…

Read More