Author: admin

ಬಂಟ್ವಾಳ ವಿಧಾನಸಭಾ ಕ್ಷೇತ್ರದಿಂದ ಒಟ್ಟು 8 ನಾಮಪತ್ರ ಸಲ್ಲಿಕೆ ಬಂಟ್ವಾಳ: ವಿಧಾನಸಭೆಯ ಬಂಟ್ವಾಳ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಕೆಯ ಕೊನೆಯ ದಿನವಾದ ಏ.20ರ ಗುರುವಾರ ಒಟ್ಟು 5 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಒಟ್ಟು 8 ನಾಮಪತ್ರಗಳು ಸಲ್ಲಿಕೆಯಾದಂತಾಗಿದೆ. ಇದುವರೆಗೆ ಬಿಜೆಪಿಯ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಎಸ್.ಡಿ.ಪಿ.ಐ.ನಿಂದ ಇಲ್ಯಾಸ್ ತುಂಬೆ, ಮಜೀದ್ ಅವರು ನಾಮಪತ್ರ ಸಲ್ಲಿಸಿದ್ದರು. ಇದೀಗ ಗುರುವಾರ ಒಂದೇ ದಿನ 5 ನಾಮಪತ್ರಗಳು ಸಲ್ಲಿಕೆಯಾಗಿವೆ. ಕಾಂಗ್ರೆಸ್ ನಿಂದ ಬಿ.ರಮಾನಾಥ ರೈ, Advertisement ಜಾತ್ಯತೀತ ಜನತಾದಳದಿಂದ ಪ್ರಕಾಶ್ ರಫಾಯಲ್ ಗೋಮ್ಸ್, ಆಮ್ ಆದ್ಮಿ ಪಾರ್ಟಿಯಿಂದ ಪುರುಷೋತ್ತಮ, ಉತ್ತಮ ಪ್ರಜಾಕೀಯ ಪಕ್ಷದಿಂದ ಅನೀಶ್ ಶೆಟ್ಟಿ, ಪಕ್ಷೇತರ ಅಭ್ಯರ್ಥಿಯಾಗಿ ಬಿ.ಟಿ.ಕುಮಾರ್ ನಾಮಪತ್ರ ಸಲ್ಲಿಸಿರುತ್ತಾರೆ ಎಂದು ಚುನಾವಣಾದಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ. Advertisement

Read More

ಬಂಟ್ವಾಳ: ನೇತ್ರಾವತಿ ನದಿಗೆ ಆಕಸ್ಮಿಕವಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬರಿಮಾರು ಗ್ರಾಮದಲ್ಲಿ ಬುಧವಾರ ಸಂಜೆ ನಡೆದಿದೆ. ಮೃತಪಟ್ಟವರನ್ನು ರಾಮಕ್ಕು ಎಂದು ಗುರುತಿಸಲಾಗಿದೆ. ಬಟ್ಟೆ ತೊಳೆಯಲು ಹೋದ ಸಂದರ್ಭ ಈ ದುರ್ಘಟನೆ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. Advertisement Advertisement

Read More

ಜನಾರ್ಧನ ಪೂಜಾರಿ ಭೇಟಿಯಾಗಿ ಆಶೀರ್ವಾದ ಪಡೆದ ರಮಾನಾಥ ರೈ ಬಂಟ್ವಾಳ : ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿರುವ ಮಾಜಿ ಸಚಿವ ಬಿ. ರಮಾನಾಥ ರೈ ಅವರು ಬುಧವಾರ ಕಾಂಗ್ರೆಸ್ ನ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಜನಾರ್ಧನ ಪೂಜಾರಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಅಲ್ಲದೆ, ಹಿರಿಯ ನಾಯಕನ ಆರೋಗ್ಯ, ಯೋಗಕ್ಷೇಮದ ಬಗ್ಗೆ ವಿಚಾರಿಸಿದರು. ಜನಾರ್ಧನ ಪೂಜಾರಿ ಭೇಟಿಯಾಗಿ ಆಶೀರ್ವಾದ ಪಡೆದ ರಮಾನಾಥ ರೈ ಗುರುವಾರ ಬೆಳಿಗ್ಗೆ 9 ಗಂಟೆಗೆ ಬಂಟ್ವಾಳ ಶ್ರೀ ವೆಂಕಟರಮಣ ದೇವಸ್ಥಾನದ ಬಳಿಯಿಂದ ಅಪಾರ ಬೆಂಬಲಿಗರೊಂದಿಗೆ ಮೆರವಣಿಗೆ ಹೊರಟು, ಮಧ್ಯಾಹ್ನ 12:35ಕ್ಕೆ ಮಿನಿವಿಧಾನಸೌಧದಲ್ಲಿ ರಮಾನಾಥ ರೈ ನಾಮಪತ್ರ ಸಲ್ಲಿಸಲಿದ್ದಾರೆ. Advertisement ಈ ಹಿನ್ನೆಲೆಯಲ್ಲಿ ಬುಧವಾರ ಬೆಳಿಗ್ಗೆ ಜನಾರ್ಧನ ಪೂಜಾರಿ ಅವರ ಬಂಟ್ವಾಳದ ನಿವಾಸಕ್ಕೆ ಭೇಟಿ ನೀಡಿ ಅವರು ಮಾತುಕತೆ ನಡೆಸಿದರು.ಬೆಲೆ ಏರಿಕೆಯಿಂದ ಜನ ತತ್ತರಿಸಿದ್ದಾರೆ. ಇಂತಹ ವಿಷಯಗಳ ಬಗ್ಗೆ ಬಲವಾಗಿ ಮಾತನಾಡುವವರು ಯಾರೂ ಇಲ್ಲ. ಅದಕ್ಕೋಸ್ಕರವಾದರೂ ರಮಾನಾಥ…

Read More

ಸಾಹಿತ್ಯದಿಂದ ಸಂಸ್ಕಾರ ಸಾಧ್ಯ : ಶ್ರೀಕಲಾ ಕಾರಂತ್ ಸಾಲೆತ್ತೂರು : ಸಂಸ್ಕಾರದ ಬೆಳವಣಿಗೆಯಲ್ಲಿ ಸಾಹಿತ್ಯದ ಪಾತ್ರ ಮಹತ್ತರವಾದದ್ದು. ಉತ್ತಮ ಸಾಹಿತ್ಯದಿಂದ ಸಂಸ್ಕಾರ ಸಾಧ್ಯ. ಹಾಗಾಗಿ ಮಕ್ಕಳ ಸಾಹಿತ್ಯದ ಮೂಲಕ ಮಕ್ಕಳನ್ನು ಸಂಸ್ಕಾರವಂತರನ್ನಾಗಿಸಬಹುದು ಎಂದು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ಬಂಟ್ಟಾಳ ತಾಲೂಕು ಘಟಕ ಅಧ್ಯಕ್ಷೆ ಶ್ರೀಕಲಾ ಕಾರಂತ ಅಳಿಕೆ ಅಭಿಪ್ರಾಯಪಟ್ಟರು. ಸಾಹಿತ್ಯದಿಂದ ಸಂಸ್ಕಾರ ಸಾಧ್ಯ : ಶ್ರೀಕಲಾ ಕಾರಂತ್ ನವಚೇತನ ಯುವಕ ಮಂಡಲ ಸಾಲೆತ್ತೂರು ಸಂಸ್ಕಾರ ಭಾರತೀ ಬಂಟ್ಟಾಳ ತಾಲೂಕು ಘಟಕದ ವತಿಯಿಂದ ಜರುಗಿದ ಸಂಸ್ಕಾರ ಸೌರಭ ಮಕ್ಕಳ ಶಿಬಿರದಲ್ಲಿ ಮಾತನಾಡಿದರು. Advertisement ಸಮಾರಂಭದ ಉದ್ಘಾಟನೆಯನ್ನು ಸವಿತಾ ಶೆಟ್ಟಿ ಪುಂಚಿಲ ನೆರವೇರಿಸಿದರು. ಬಂಟ್ಟಾಳ ತಾಲೂಕು ಉಪಾಧ್ಯಕ್ಷೆ ಡಾ| ವಾರಿಜ ನಿರ್ಬೈಲ್ ಶುಭ ಹಾರೈಸಿದರು. ಮಕ್ಕಳಿಗೆ ವಿವಿಧ ಕ್ರಿಯಾತ್ಮಕ ಚಟುವಟಿಕೆಗಳ ಮೂಲಕ ಸಂಸ್ಕಾರ ಸಾಹಿತ್ಯದ ಅಗತ್ಯತೆಯನ್ನು ಸಾಹಿತಿ ಹಾಗೂ ರಾಜ್ಯ ಸಂಪನ್ಮೂಲ ವ್ಯಕ್ತಿ ಗೋಪಾಲಕೃಷ್ಣ ನೇರಳಕಟ್ಟೆ ವಿವರಿಸಿದರು. ಕಥನ ಕಾವ್ಯ ರಚನೆಯ ಬಗ್ಗೆ ಸಾಹಿತಿ ಹಾಗೂ ಸಂಪನ್ಮೂಲ ವ್ಯಕ್ತಿಗಳಾದ ಜಯರಾಮ ಪಡ್ರೆಯವರು…

Read More

ಯಕ್ಷಧ್ರುವ ಪಟ್ಲ ಫೌಂಡೇಶನ್: ಸರಪಾಡಿ ಘಟಕ ವಾರ್ಷಿಕೋತ್ಸವ, ಯಕ್ಷಗಾನ ಸಾಧಕರಿಗೆ ಸನ್ಮಾನ ಬಂಟ್ವಾಳ: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ , ಸರಪಾಡಿ ಘಟಕ ಸಮಿತಿಯ ವತಿಯಿಂದ 6ನೇ ವಾರ್ಷಿಕೋತ್ಸವ ಕಾರ್ಯಕ್ರಮ ಎ.18ರಂದು ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನದ ವಠಾರದಲ್ಲಿ ನಡೆಯಿತು.ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಸ್ಥಾಪಕಾಧ್ಯಕ್ಷ, ಭಾಗವತ ಸತೀಶ್ ಶೆಟ್ಟಿ ಪಟ್ಲ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಯಕ್ಷಗಾನ ಕಲಾವಿದರ ಬೆಳವಣಿಗೆಗೆ ಸರಪಾಡಿಯ ಕೊಡುಗೆ ಮಹತ್ತರವಾಗಿದೆ. ಕಲಾಭಿಮಾನಿಗಳ ಪ್ರೀತಿ, ಪ್ರೋತ್ಸಾಹದಿಂದ ಯಕ್ಷಗಾನ ಬೆಳೆಯಲು ಸಾಧ್ಯವಾಗಿದೆ ಎಂದರು. ಯಕ್ಷಧ್ರುವ ಪಟ್ಲ ಫೌಂಡೇಶನ್: ಸರಪಾಡಿ ಘಟಕ ವಾರ್ಷಿಕೋತ್ಸವ, ಯಕ್ಷಗಾನ ಸಾಧಕರಿಗೆ ಸನ್ಮಾನ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಯಕ್ಷಗಾನ ಕಲಾವಿದ ಸರಪಾಡಿ ಅಶೋಕ ಶೆಟ್ಟಿ ಅವರು ಮಾತನಾಡಿ, ಸತೀಶ್ ಶೆಟ್ಟಿ ಪಟ್ಲ ಅವರ ನೇತೃತ್ವದಲ್ಲಿ ಯಕ್ಷಗಾನ ಕಲಾವಿದರಿಗೆ ಭರವಸೆಯ ಬೆಳಕು ನೀಡಿ ಮುನ್ನಡೆಸುವ ಕಾರ್ಯ ಮಾಡುತ್ತಿರುವ ಯಕ್ಷಧ್ರುವ ಪಟ್ಲ ಫೌಂಡೇಶನ್ ಕಾರ್ಯ ಮಾದರಿಯಾಗಿದೆ ಎಂದರು. Advertisement ಈ ಸಂದರ್ಭದಲ್ಲಿ ಯಕ್ಷಗಾನ ಸಾಧಕರಾದ ಸರಪಾಡಿ…

Read More

ಪಂಪ್‌ಗೆ ವಿದ್ಯುತ್ ಸಂಪರ್ಕ ಕಡಿತ, ತಹಶೀಲ್ದಾರ್‌ಗೆ ರೈತರ ನಿಯೋಗದಿಂದ ಮನವಿ ಬಂಟ್ವಾಳ: ನದಿ ತೀರದಲ್ಲಿರುವ ರೈತರಿಗೆ ಪೂರ್ವ ಮಾಹಿತಿ ನೀಡದೆ ಪಂಪ್‌ಸೆಟ್‌ನ ವಿದ್ಯುತ್ ಸಂಪರ್ಕ ಕಡಿತಗೊಳಿಸಿರುವ ರೈತ ವಿರೋಧಿ ಆದೇಶವನ್ನು ಹಿಂಪಡೆಯುವಂತೆ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಎಂ. ತುಂಗಪ್ಪ ಬಂಗೇರ ನೇತೃತ್ವದಲ್ಲಿ ರೈತರ ನಿಯೋಗ ಬಂಟ್ವಾಳ ತಹಶೀಲ್ದಾರರಿಗೆ ಬುಧವಾರ ಮನವಿ ಸಲ್ಲಿಸಿತು.ಮಂಗಳೂರಿನ ಜನರಿಗೆ ಕುಡಿಯುವ ನೀರಿನ ಕೊರತೆ ನೆಪದಲ್ಲಿ ಯಾವುದೇ ಮುನ್ಸೂಚನೆ ನೀಡದೆ ವಿದ್ಯುತ್ ಕಂಬದಿಂದಲೇ ಸಂಪರ್ಕ ಕಡಿತಗೊಳಿಸಿ ರೈತರನ್ನು ಸರ್ವನಾಶ ಮಾಡುವ ಆದೇಶವನ್ನು ಜಿಲ್ಲಾಡಳಿತ ನೀಡಿದೆ. ಜಿಲ್ಲಾಡಳಿತದ ಈ ಕಠೋರ ಕ್ರಮದಿಂದ ಕೃಷಿಯನ್ನೇ ನಂಬಿ ಬದುಕುತ್ತಿರುವ ರೈತರು ಆರ್ಥಿಕ ಸಂಕಷ್ಟಕ್ಕೀಡಾಗಿದ್ದು ತಕ್ಷಣವೇ ರೈತರಿಗೆ ಪರ್ಯಾಯ ವ್ಯವಸ್ಥೆ ಮಾಡಬೇಕು ಅಥವಾ ಕಡಿತಗೊಳಿಸಿರುವ ವಿದ್ಯುತ್ ಸಂಪರ್ಕವನ್ನು ಮರಳಿ ನೀಡುವಂತೆ ಮನವಿಯಲ್ಲಿ ಒತ್ತಾಯಿಸಿದರು. Advertisement ಈ ಸಂದರ್ಭ ಬಂಟ್ವಾಳ ತಾಲೂಕು ರೈತ ಸಂಘ ಹಸಿರು ಸೇನೆಯ ಅಧ್ಯಕ್ಷ ಎಂ. ಸುಬ್ರಹ್ಮಣ್ಯ ಭಟ್, ಪಾಣೆ ಮಂಗಳೂರು ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಜಯಶಂಕರ…

Read More

ಕಳೆದ ಚುನಾವಣೆಯಲ್ಲಿ ನಾನು ಕೆಲಸ ಮಾಡದೆ ಸೋತಿಲ್ಲ, ಅಪಪ್ರಚಾರದಿಂದ ಸೋಲಿಸಿದ್ದಾರೆ- ಬಿ. ರಮಾನಾಥ ರೈ ಬಂಟ್ವಾಳ: ಎ.20 ರಂದು ಗುರುವಾರ ಮಧ್ಯಾಹ್ನ 12.35ಕ್ಕೆ ನಾಮಪತ್ರ ಸಲ್ಲಿಸುವುದಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ, ಮಾಜಿ ಸಚಿವ ಬಿ.ರಮಾನಾಥ ರೈ ತಿಳಿಸಿದರು.ಪಕ್ಷದ ಚುನಾವಣಾ ಕಚೇರಿಯಲ್ಲಿ ಸೋಮವಾರ ಕರೆದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು. ಬಂಟ್ವಾಳದ ಶ್ರೀ ವೆಂಕಟರಮಣ ದೇವಾಸ್ಥಾನದಲ್ಲಿ ಪೂಜೆ ಸಲ್ಲಿಸಿ ಬಳಿಕ ಮೆರವಣಿಗೆ ಮೂಲಕ ಬಂದು ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದರು. ಈ ಸಂದರ್ಭ ಪಕ್ಷದ ಕಾರ್ಯಕರ್ತರು, ಹಿತೈಷಿಗಳು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅವರು ಮನವಿ ಮಾಡಿದರು.ಕಳೆದ ಚುನಾವಣೆಯಲ್ಲಿ ನಾನು ಕೆಲಸ ಮಾಡದೆ ಸೋತಿಲ್ಲ, ವ್ಯಾಪಕ ಅಪಪ್ರಚಾರದಿಂದಾಗಿ ಸೋತಿದ್ದೇನೆ, ಸೋಲಿಗೆ ಬೇಸರವಿಲ್ಲ, ಸೋಲಿಸಿದ ರೀತಿಗೆ ಬೇಸರವಿದೆ ಎಂದ ಅವರು ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ತನ್ನ ಶಾಸಕ ಅವಧಿಯಲ್ಲಿ ಮಂಜೂರಾದ ಅನೇಕ ಅಭಿವೃದ್ದಿ ಕಾಮಗಾರಿಗಳು ಅರ್ಧದಲ್ಲೇ ಬಾಕಿ ಉಳಿದಿದ್ದು ಅವುಗಳನ್ನು ಪೂರ್ಣಗೊಳಿಸುವ ಕಾರ್ಯ ಆಗಬೇಕಿದೆ. ಜನರು ಮತ್ತೊಮ್ಮೆ ಆಶೀರ್ವಾದ ಮಾಡುವಂತೆ ಅವರು ಮನವಿ ಮಾಡಿದರು.…

Read More

https://youtu.be/B47LMB10Iis ಬಂಟ್ವಾಳ: ರೋಷನ್ ಬೊನಿಫಾಸ್ ಮಾರ್ಟಿಸ್ ಸಾರಥ್ಯದಲ್ಲಿ ವಾರಪತ್ರಿಕೆಯಾದ ‘’ಕರಾವಳಿ ಸುದ್ದಿ’’ಯ ಮೊದಲ ಸಂಚಿಕೆಯನ್ನು ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ ಅವರು ಏ.17ರಂದು ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ನಡೆದ ಸರಳ ಸಮಾರಂಭದಲ್ಲಿ ಬಿಡುಗಡೆಗೊಳಿಸಿದರು.ಈ ಸಂದರ್ಭ ಶುಭ ಹಾರೈಸಿದ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಮೌನೇಶ ವಿಶ್ವಕರ್ಮ, ಪತ್ರಿಕೆ ವಿಶ್ವಾಸಾರ್ಹ ಸುದ್ದಿಗಳನ್ನು ನೀಡುವ ಮೂಲಕ ಕರಾವಳಿಯಾದ್ಯಂತ ತಲುಪಲಿ ಎಂದು ಶುಭ ಹಾರೈಸಿದರು.ಸಂಪಾದಕ ರೋಷನ್ ಬೊನಿಫಾಸ್ ಮಾರ್ಟಿಸ್ ಮಾತನಾಡಿ, ಸಾಮಾಜಿಕ ಜಾಲತಾಣದ ಈ ಕಾಲದಲ್ಲೂ ನಾವು ಮುದ್ರಣ ಮಾಧ್ಯಮವನ್ನು ಆರಂಭಿಸಿದ್ದು, ಸವಾಲಾಗಿದ್ದರೂ, ಸಮರ್ಥ ಲೇಖಕರಿಂದ ಬರೆಹಗಳು, ವರದಿಗಳ ಮೂಲಕ ಜನರಿಗೆ ಬೇಕಾದ ವಿಚಾರಗಳನ್ನು ತಲುಪಿಸುವ ಪ್ರಯತ್ನ ಮಾಡುತ್ತೇವೆ ಎಂದರು. ಪತ್ರಿಕೆಯ ಸಾರ್ವಜನಿಕ ಸಂಪರ್ಕಾಧಿಕಾರಿ, ಕಲಾವಿದ ಚೇತನ್ ರೈ ಮಾಣಿ ಮಾತನಾಡಿ, ಪತ್ರಿಕೆ ಬೆಳೆದುಬಂದ ಹಾದಿಯ ಕುರಿತು ವಿವರಿಸಿದರು. ಉಪಸಂಪಾದಕಿ ಅನಿತಾ ರೋಷನ್ ಮಾರ್ಟಿಸ್ ವಂದಿಸಿದರು. Advertisement

Read More

ಉರುಡಾಯಿ ಶ್ರೀ ಮುಖ್ಯಪ್ರಾಣ ದೇವಸ್ಥಾನ: ಬ್ರಹ್ಮಕಲಶೋತ್ಸವ ಆಮಂತ್ರಣಪತ್ರ ಬಿಡುಗಡೆ ಕಾರ್ಯಕ್ರಮ ಬಂಟ್ವಾಳ: ಕುಡಂಬೆಟ್ಟು ಗ್ರಾಮದ ಉರುಡಾಯಿ ಶ್ರೀ ಮುಖ್ಯಪ್ರಾಣ ದೇವಸ್ಥಾನ ಶಿಲಾಮಯವಾಗಿ ಪುನರ್ ನಿರ್ಮಾಣಗೊಂಡಿದ್ದು, ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ರವಿವಾರ ನಡೆಯಿತು.ಶ್ರೀ ಕ್ಷೇತ್ರ ಕಾರಿಂಜದ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಪಿ.ಜಿನರಾಜ ಆರಿಗ ಪಚ್ಚಾಜೆಗುತ್ತು ಅವರು ಆಮಂತ್ರಣ ಪತ್ರ ಬಿಡುಗಡೆಗೊಳಿಸಿ ಮಾತನಾಡಿ,ದೇವಸ್ಥಾನದ ಪುಣ್ಯಕಾರ್ಯದಲ್ಲಿ ಊರವರೆಲ್ಲರೂ ಭಾಗಿಗಳಾಗಿ ಯಶಸ್ವಿಗೊಳಿಸಬೇಕು ಎಂದರು.ಕಾರ್ಯಕ್ರಮ ವನ್ನು ಉದ್ಘಾಟಿಸಿ ಮಾತನಾಡಿದ ಜಿ.ಪಂ.ಮಾಜಿ ಸದಸ್ಯ, ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಎಂ.ತುಂಗಪ್ಪ ಬಂಗೇರ ಅವರು ಮಾತನಾಡಿ, ದೇವಸ್ಥಾನ ಪುನರ್‌ನಿರ್ಮಾಣ ಕಾರ್ಯ ನಮಗೊದಗಿದ ಯೋಗ ಭಾಗ್ಯ. ದೇವರಿಗೆ ಸಮರ್ಪಣೆ ಮಾಡಿದಾಗ ಮಾನವ ಜನ್ಮ ಸಾರ್ಥಕವಾಗುವುದು ಎಂದು ಹೇಳಿದರು. ಮೇ 20 ರಿಂದ ಮೇ 22 ರವರೆಗೆ ಬ್ರಹ್ಮಕಲಶೋತ್ಸವ ನಡೆಯಲಿದೆ ಎಂದು ಮಾಹಿತಿ ನೀಡಿದರು. Advertisement ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಅಮ್ಮು ರೈ ಹರ್ಕಾಡಿ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ಭಟ್ ವಾಮದಪದವು, ಕಾರ್ಯಾಧ್ಯಕ್ಷರಾದ ಪ್ರಮೋದ್ ಕುಮಾರ್ ರೈ ಕಾಡಬೆಟ್ಟು, ವೀರೇಂದ್ರ…

Read More

ಮತದಾನ ಕರ್ತವ್ಯ ನಿರ್ವಹಣೆ ಬಗ್ಗೆ ಅಧಿಕಾರಿಗಳಿಗೆ ತರಬೇತಿ ಬಂಟ್ವಾಳ: ಮತದಾನದ ಕರ್ತವ್ಯ ನಿರ್ವಹಣೆ ಬಗ್ಗೆ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ 187 ಪ್ರಿಸೈಡಿಂಗ್ ಅಧಿಕಾರಿಗಳು ಮತ್ತು 304 ಸಹಾಯಕ ಪ್ರಿಸೈಡಿಂಗ್ ಅಧಿಕಾರಿಗಳೂ ಸೇರಿದಂತೆ ಒಟ್ಟು 491 ಅಧಿಕಾರಿಗಳಿಗೆ ಮೊದಲ ಹಂತದ ತರಬೇತಿಯು ಮೊಡಂಕಾಪಿನ ಇನ್ಫೆಂಟ್ ಜೀಸಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು.22 ಜನ ಸೆಕ್ಟರ್ ಅಧಿಕಾರಿಗಳು ತರಬೇತಿ ನೀಡಿದರು. ಮಾಸ್ಟರ್ ಟ್ರೈನರ್ ಗಳಾದ ಅಬ್ದುಲ್ ರಝಾಕ್, ಉದಯ ಕುಮಾರ್ ಮತ್ತು ಸನತ್ ರಾಮ್ ಮಾರ್ಗದರ್ಶನ ಮಾಡಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಜಿಲ್ಲಾ ಮಟ್ಟದ ತರಬೇತಿ ನೋಡಲ್ ಅಧಿಕಾರಿ, ಜಿಲ್ಲಾಧಿಕಾರಿಗಳ ತಾಂತ್ರಿಕ ಸಹಾಯಕರು ಹಾಗೂ ಪದನಿಮಿತ್ತ ಭೂದಾಖಲೆಗಳ ನಿರ್ದೇಶಕರಾದ ನಿರಂಜನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚುನಾವಣಾಧಿಕಾರಿ ಅಬಿದ್ ಗದ್ಯಾಲ್, ಸಹಾಯಕ ಚುನಾವಣಾಧಿಕಾರಿ ಎಸ್.ಬಿ.ಕೂಡಲಗಿ, ಗ್ರೇಡ್ 2 ತಹಶೀಲ್ದಾರ್ ದಯಾನಂದ ಕೆ.ಎಸ್., ಭೂ ದಾಖಲೆಗಳ ಸಹಾಯಕ ನಿರ್ದೇಶಕರಾದ ಮಧು ಎಂ., ಚುನಾವಣಾ ಉಪತಹಶೀಲ್ದಾರ್ ನವೀನ್ ಕುಮಾರ್ ಬೆಂಜನಪದವು, ಉಪತಹಶೀಲ್ದಾರ್ ಗಳಾದ…

Read More